Connect with us

ದಿನದ ಸುದ್ದಿ

ಪಿ.ಚನ್ನಮ್ಮ ನಿಧನ

Published

on

ಸುದ್ದಿದಿನ,ಚಿತ್ರದುರ್ಗ : ಸುದ್ದಿಒನ್.ಕಾಂ ನ ಸಂಪಾದಕ ನಾಗೇಂದ್ರ ರೆಡ್ಡಿ ಅವರ ತಾಯಿ‌ ಪಿ. ಚನ್ನಮ್ಮ ಅವರು ಬುಧವಾರ ನಿಧನರಾಗಿದ್ದಾರೆ. ಇವರ ಅಂತಿಮ‌‌ ಸಂಸ್ಕಾರ ಕಾರ್ಯವನ್ನು ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಇಂದು ( ಗುರುವಾರ) ಮಧ್ಯಾಹ್ನ 2 ಗಂಟೆಗೆ ನೆರವೇರಿಸಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಗ್ಗೆ 10ಕ್ಕೆ ಡಾ. ಬಿ.ಆರ್.‌ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಜಯದೇವ ವೃತ್ತ, ಅಶೋಕ ರಸ್ತೆ, ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರು

ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಮಾತನಾಡಿ, ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪು ನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿ ದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.

ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ ರೂ.50000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯಧನವನ್ನು ನೀಡಲಾಗುವುದು.

ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಚ್ ಪ್ರೆಸ್ ಸ್ಪರ್ಧೆ|ಕರ್ನಾಟಕ ತಂಡ ಪ್ರಥಮ ತರಬೇತುದಾರರಾದ ಎಚ್.ದಾದಾಪೀರ್ ಗೆ ಅಭಿನಂದನೆ

Published

on

ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ.

ದಾವಣಗೆರೆಯ ಪೊಲೀಸ್ ಇಲಾಖೆಯ ಹೆಮ್ಮೆಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ಪುರಸ್ಕøತರಾದ ಎಚ್. ದಾದಾಪೀರ್ ಇವರು ಕರ್ನಾಟಕ ರಾಜ್ಯ ತಂಡಕ್ಕೆ ತರಬೇತಿದಾರರಾಗಿದ್ದರು.

ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಹೆಚ್.ದಾದಾಪೀರ್ ಅವರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್ ಆಫ್ ಐರನ್ ಗೇಮ್, ನಗರಸಭೆ ವ್ಯಾಯಾಮ ಶಾಲೆ, ಬೀರೇಶ್ವರ ವ್ಯಾಯಾಮ ಶಾಲೆಗಳ ಎಲ್ಲಾ ಹಿರಿಯ ಮತ್ತು ಕಿರಿಯ ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ21 hours ago

ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ...

ದಿನದ ಸುದ್ದಿ22 hours ago

ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ...

ದಿನದ ಸುದ್ದಿ23 hours ago

ಬೆಂಚ್ ಪ್ರೆಸ್ ಸ್ಪರ್ಧೆ|ಕರ್ನಾಟಕ ತಂಡ ಪ್ರಥಮ ತರಬೇತುದಾರರಾದ ಎಚ್.ದಾದಾಪೀರ್ ಗೆ ಅಭಿನಂದನೆ

ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ. ದಾವಣಗೆರೆಯ ಪೊಲೀಸ್...

ದಿನದ ಸುದ್ದಿ2 days ago

ಆತ್ಮಕತೆ | ಅನಾಗರಿಕ ಆಚರಣೆಯ ವಿರುದ್ಧ

ರುದ್ರಪ್ಪ ಹನಗವಾಡಿ ಸೊರಬ ತಾಲ್ಲೂಕಿನಲ್ಲಿ ಇನ್ನೊಂದು ಮುಖ್ಯ ಘಟನೆಯನ್ನು ಹೇಳಿ ಮುಂದೆ ಹೋಗುತ್ತೇನೆ. ಸೊರಬ ತಾಲ್ಲೂಕಿನಲ್ಲಿ ತಹಸೀಲ್ದಾರರಾಗಿ ರಾಮನಾಥ್ ಎಂಬ ಹಿರಿಯರಿದ್ದರು. ಅವರು ತಾಲ್ಲೂಕಿನಲ್ಲಿ ಎಲ್ಲಾ ಆಡಳಿತ...

ದಿನದ ಸುದ್ದಿ2 days ago

ಕಿಚ್ಚ ಸುದೀಪ್ ತಾಯಿ ನಿಧನ

ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ...

ದಿನದ ಸುದ್ದಿ3 days ago

ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ...

ದಿನದ ಸುದ್ದಿ3 days ago

ವಾಮಾಚಾರಕ್ಕೆ ಬೆಚ್ಚಿಬಿದ್ದ ಕಾಫಿನಾಡು..!

ಸುದ್ದಿದಿನ,ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ....

ದಿನದ ಸುದ್ದಿ3 days ago

ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ

ಸುದ್ದಿದಿನಡೆಸ್ಕ್:ಸತತ ಮಳೆಯಿಂದ, ತೇವಾಂಶ ಹೆಚ್ಚಿ ಹಾವೇರಿ ಜಿಲ್ಲೆಯಾದ್ಯಂತ, ಟೊಮ್ಯಾಟೊ ಬೆಳೆಗೆ ಅಂಗಮಾರಿ ರೋಗ ಬಾಧೆ ಕಾಣಿಸಿಕೊಂಡಿದೆ. ತೋಟಗಾರಿಕೆ ಇಲಾಖೆಯ ಹಾವೇರಿ ಜಿಲ್ಲೆ ಹಿರಿಯ ಸಹಾಯಕ ನಿರ್ದೇಶಕ ನೂರ್...

ದಿನದ ಸುದ್ದಿ4 days ago

ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಮಧ್ಯಾಹ್ನ 3.30 ಕ್ಕೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಸಾಲ ಸೌಲಭ್ಯ...

ದಿನದ ಸುದ್ದಿ4 days ago

ಎಸ್ ಬಿ ಐ ಬ್ಯಾಂಕ್ ನಿರ್ಲಕ್ಷ್ಯ; ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ನ್ಯಾಯಾಲಯ ಆದೇಶ

ಸುದ್ದಿದಿನ,ದಾವಣಗೆರೆ:ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ...

Trending