ದಿನದ ಸುದ್ದಿ
ಗೌರಿ ಹತ್ಯೆ ನಂತರ ಮುಂದಿನ ಟಾರ್ಗೆಟ್ ನರೇಂದ್ರ ನಾಯಕ್?
ಸುದ್ದಿದಿನ ಡೆಸ್ಕ್: ಚಿಂತಕ ಹಾಗೂ ಮೂಢ ನಂಬಿಕೆಗಳ ವಿರೋಧಿ ಮಂಗಳೂರು ಮೂಲದ ಪ್ರೊಫೆಸರ್ ನರೇಂದ್ರ ನಾಯಕ್ ಅವರನ್ನು ಹತ್ಯೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿದ್ದಾರೆ ಎಂಬ ವರದಿಗಳು ಕೇಳಬರುತ್ತಿವೆ.
ದೇವರ ಹೆಸರ ನಡೆಯುವ ಕಂದಾಚಾರಗಳ ವಿರೋಧಿಯಾದ ನಾಯಕ್ ಅವರು ನರೇಂದ್ರ ದಾಬೋಲ್ಕರ್, ಪ್ರೊ. ಎಂ ಎಂ ಕಲ್ಬುರ್ಗಿ ಅವರನ್ನು ಕೊಂದ ಆರೋಪಿಗಳ ಹತ್ಯೆ ನಂತರ ಇಂಟರ್ನೆಟ್ನಲ್ಲಿ ಬಿಡುಗಡೆಯಾಗಿದ್ದ ಹಿಟ್ಲಿಸ್ಟ್ನಲ್ಲಿ ನಾಯಕ್ ಅವರು ಏಳನೇ ಸ್ಥಾನ ಪಡೆದಿದ್ದರು.
ದುಷ್ಕರ್ಮಿಗಳು ನಾಯಕ್ ಅವರ ಹತ್ಯೆಗೆ ಮೂರ್ನಾಲ್ಕು ಬಾರಿ ಪ್ರಯತ್ನ ಪಟ್ಟಿದ್ದಾರೆ ಎನ್ನಲಾಗಿದ್ದು, ಇತ್ತೀಚೆಗೆ ಗುಂಪೊಂದು ನಾಯಕ್ ಅವರ ಮನೆಯೊಳಗೆ ನುಗ್ಗಲು ಪ್ರಯತ್ನಿಸಿದೆ ಎಂಬುದು ಸಿಸಿ ಕ್ಯಾಮೆರಾ ಫುಟೇಜ್ಗಳಿಂದ ತಿಳಿದುಬಂದಿದೆ.
ಪ್ರಕರಣದಿಂದ ಎಚ್ಚೆತ್ತಿರುವ ಪೊಲೀಸ್ ಇಲಾಖೆಯು ನಾಯಕ್ ಅವರಿಗೆ ನೀಡಿದ್ದ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಿದೆ. ಕಳೆದ ಎರಡು ವರ್ಷಗಳಿಂದ ನಾಯಕ್ ಅವರು ಪೊಲೀಸ್ ಭದ್ರತೆಯಲಿದ್ದಾರೆ.
ನಾಯಕ್ ಅವರು ಹಿಂದೂ ಹಾಗೂ ಮುಸ್ಲಿಂ ಮುಖಂಡರ ವಿರೋಧವನ್ನು ಮೊದಲಿನಿಂದಲೂ ಕಟ್ಟಿಕೊಂಡಿದ್ದಾರೆ ಈ ಹಿಂದೆ ಹೈಕೋರ್ಟ್ ಮಂಗಳೂರು ಬಂದರಿನಲ್ಲಿ ಮಸೀದಿಯೊಂದಕ್ಕೆ ಜಾಗ ನೀಡಿದರ ವಿರುದ್ಧ ಕೋರ್ಟ್ನಲ್ಲಿ ಸ್ಟೇ ತಂದಿದ್ದರು.
ಮೂಢ ನಂಬಿಕೆ ವಿರೋಧಿ ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿಯೊಬ್ಬರನ್ನು ಅತಿಥಿಯಾಗಿ ಕರೆಸಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗಂಡಿದ್ದ ಯುವಕನೊಬ್ಬ ದೆವ್ವ ಇದೆಯಾ ಎಂದು ನಾಯಕ್ ಅವರನ್ನು ಕೇಳಿದ್ದ ಇಲ್ಲ ಎಂದಿದ್ದಕ್ಕೆ, ವೇದಿಕೆ ಕೆಳಗೆ ದೆವ್ವ ಹಿಡಿದಂತೆ ಮೇಲೆ ಕೆಳಗೆ ಹಾರಿ ಸೌಂಡ್ ಸಿಸ್ಟಂ ಹಾಳು ಮಾಡುತ್ತಿದ್ದ. ಅವನ ಕಪಾಳಕ್ಕೆ ಬಲವಾಗಿ ಬಾರಿಸಿದಾಗ ಅವ ಸರಿಹೋದ ಎನ್ನಲಾಗಿದೆ. ಕೆಲವುದಿನಗಳ ನಂತರ ಬಂದ ಯುವಕರ ತಂಡವೊಂದು ನಾಯಕ್ ಅವರನ್ನು ದೇವರಿದ್ದಾನೆ ಎಂದು ಒಪ್ಪಿಕೊಳ್ಳುವಂತೆ ಬಲವಂತ ಮಾಡಿ, ಹಲ್ಲೆಗೆ ಮುಂದಾದರು ಎನ್ನಲಾಗಿದೆ.

ದಿನದ ಸುದ್ದಿ
ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್ಗೆ ಭೀಕರವಾಗಿ ಡಿಕ್ಕಿಯಾಗಿದೆ.
http://Visit : www.suddidina.com
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಿನದ ಸುದ್ದಿ
ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.
ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದರು.
http://Visit : www.suddidina.com
ದಾವಣಗೆರೆ ಬಂದ್ ಯಶಸ್ವಿ ಆಗಲಿಲ್ಲ. ಬಂದ್ ಎಂಬಂತ ವಾತಾವರಣವೂ ನಿರ್ಮಾಣ ಆಗಿರಲಿಲ್ಲ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಮಳೆ ಆರಂಭವಾದ ಕಾರಣ ಕಡಿಮೆ ಪ್ರಮಾಣದಲ್ಲಿ ಸೇರಿದ್ದ ರೈತ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಘೋಷಣೆ ಹಾಕಿದರು. ಕೂಡಲೇ ಭದ್ರಾ ಡ್ಯಾಂ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಒತ್ತಾಯಿಸಿದರು.

ದಿನದ ಸುದ್ದಿ
ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ. ಈ ಆರೋಪವು ದೇವಸ್ಥಾನದ ಆಚರಣೆಗಳು, ಜಾತಿ ವ್ಯವಸ್ಥೆ ಹಾಗೂ ವೈಯಕ್ತಿಕ ಆಯ್ಕೆಯ ಹಕ್ಕಿನ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾರ್ಚ್ 15, 2026ರಂದು ವಾಣಿ ಸಮುದಾಯಕ್ಕೆ ಸೇರಿದ ರಾಜನ್ ಅವರ ಮಗಳು ಪೊದುವಾಲ್ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಮದುವೆಗೂ ಮುನ್ನವೇ, 2025ರ ಆಗಸ್ಟ್ನಲ್ಲಿ ನಡೆದ ನಿಶ್ಚಿತಾರ್ಥದ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ರಾಜನ್ ಅವರನ್ನು ಕೆಲಸದಿಂದ ದೂರವಿರಲು ಸೂಚಿಸಿತ್ತು ಎಂದು ಅವರು ಹೇಳಿದ್ದಾರೆ.
ಸುಮಾರು 30 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜನ್, ದೇವಸ್ವಂ ಮಂಡಳಿಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಹಿಂದೆ ಕೆಲಸ ಮುಂದುವರಿಸಲು ಅವಕಾಶ ದೊರೆತಿತ್ತು. ಆದರೆ ಇದೀಗ ಹೊರಡಿಸಿರುವ ಅಮಾನತು ಆದೇಶದಲ್ಲಿ, ಸಮಿತಿ ಸದಸ್ಯರು ಹಾಗೂ ಭಕ್ತರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಮತ್ತು ಪೂರ್ವಜರಿಂದ ಬಂದ ಸಾಂಪ್ರದಾಯಿಕ ಆಚರಣೆಗಳನ್ನು ಉಲ್ಲಂಘಿಸಿರುವುದು ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
http://Visit : www.suddidina.com
ಈ ಆರೋಪಗಳಿಗೆ ಸೂಕ್ತ ಸಾಕ್ಷ್ಯ ನೀಡಲಾಗಿಲ್ಲ. ಹಾಗೂ ತಮ್ಮ ಮಗಳ ಅಂತರ್ಜಾತಿ ವಿವಾಹವೇ ತಮ್ಮ ವಿರುದ್ಧದ ಕ್ರಮಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದ್ದು, ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ನೀಡಿದ್ದಲ್ಲಿ ಅಥವಾ ತಪ್ಪು ಸಾಬೀತಾದಲ್ಲಿ ಕೆಲಸ ತೊರೆಯಲು ನಾನು ಸಿದ್ಧನಿದ್ದೇನೆ ಎಂದು ರಾಜನ್ ಅವರು ತಮ್ಮ ವಾದವನ್ನು ಮಂಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ದೇವಸ್ಥಾನದ ಸಮಿತಿ ಕಾರ್ಯದರ್ಶಿಗಳಾದ ಹರೀಂದ್ರನ್ ಅವರು, ರಾಜನ್ ಮುಂದುವರಿಯುವುದಕ್ಕೆ ಸಮಿತಿಗೆ ಯಾವುದೇ ಆಕ್ಷೇಪವಿಲ್ಲ ಮತ್ತು ಅಂತಿಮ ನಿರ್ಧಾರವನ್ನು ವ್ಯವಸ್ಥಾಪಕ ಟ್ರಸ್ಟಿ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಈ ನಡುವೆ ರಾಜನ್ ಅವರು ತಮಗೆ ಆದ ಅನ್ಯಾಯದ ಕುರಿತು ಮಲಬಾರ್ ದೇವಸ್ವಂ ಮಂಡಳಿ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಶಾಸಕರಾದ ವಿ ಕುಂಞಕೃಷ್ಣನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಮುಂದಿನ ತಿಂಗಳು ದೇವಸ್ವಂ ಮಂಡಳಿಯಲ್ಲೇ ನಡೆಯಲಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ ಒಬ್ಬ ವಯಸ್ಕ ವ್ಯಕ್ತಿಯ ವಿವಾಹದ ಆಯ್ಕೆಗೆ ಆತನ ಪೋಷಕರೇ ಬೆಲೆ ತೆರಬೇಕೇ? ಎಂಬ ಪ್ರಶ್ನೆಯನ್ನು ಈ ಪ್ರಕರಣ ಮತ್ತೆ ಮುನ್ನೆಲೆಗೆ ತಂದಿದೆ.

-
ಅಂತರಂಗ6 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ6 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ4 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ2 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ58 minutes agoಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
-
ದಿನದ ಸುದ್ದಿ51 minutes agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ48 minutes agoಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !



