ದಿನದ ಸುದ್ದಿ
ದೀಪಾವಳಿ ಅಲ್ಲ ‘ದೀಪ ದಾನ ಉತ್ಸವ’ ಆಚರಿಸೋಣ
- ವಿಶ್ವನಾಥ ಎಸ್ ಕರಡಿ
ಬೌದ್ಧರು(ಬಹುಜನರು)ಆಚರಣೆ ಮಾಡಬೇಕಿರುವುದು ದೀಪಾವಳಿ ಹಬ್ಬ ಅಲ್ಲ ಅದರ ಬದಲಾಗಿ ‘ದೀಪ ದಾನ ಉತ್ಸವ’ವನ್ನು ಆಚರಿಸಬೇಕು.
ಈ ದೀಪ ಧಾನ ಉತ್ಸವದ ಹಿನ್ನೆಲೆ ಏನೆಂದರೆ ಕಪಿಲವಸ್ತುವಿನ ರಾಜಕುಮಾರ ಸಿದ್ದಾರ್ಥ ಮನೆಯನ್ನು ಬಿಟ್ಟು ಹೋಗಿ ವೇಸಾಕ ಪೂರ್ಣಿಮೆಯಂದು ಭೋದಿ ಪ್ರಾಪ್ತಿ ಮಾಡಿಕೊಂಡು ಬುದ್ದ ಆಗುತ್ತಾರೆ. ಬುದ್ದ ಆದ ನಂತರ ಅವರು ಮನೆ ಬಿಟ್ಟು ಸತತ 17 ವರುಷಗಳ ನಂತರ ಕಪಿಲವಸ್ತುವಿಗೆ ಬುದ್ಧರಾಗಿ ಬಂದಾಗ ಊರಿನ ತುಂಬಾ ದೀಪಗಳನ್ನು ಪ್ರಜ್ವಲಿಸುವ ಮುಖಾಂತರ ಬುದ್ಧರನ್ನು ಸ್ವಾಗತಿಸುತ್ತಾರೆ.
ಸಾಮ್ರಾಟ ಅಶೋಕನು ಕಳಿಂಗ ಯುದ್ಧದ ನಂತರ ಶಸ್ತ್ರ ತ್ಯಾಗ ಮಾಡಿ ಬೌದ್ದ ಧಮ್ಮಕ್ಕೆ ಶರಣಾಗಿ ಒಂದು ತಿಂಗಳು ಬೌದ್ದ ಸ್ಥಳಗಳಿಗೆ ಭೇಟಿ ಕೊಡುತ್ತಾನೆ. ಈ ಭೇಟಿಯ ನಂತರ ಕಾರ್ತಿಕ ಅಮವಾಸೆಯ ದಿನ ಬುದ್ಧರನ್ನು ಕಪಿಲವಸ್ತುವಿಗೆ ಸ್ವಾಗತಿಸಿದ ದಿನವನ್ನು ಸಾಮ್ರಾಟ ಅಶೋಕನು ‘ದೀಪ ದಾನ ಉತ್ಸವ‘ ಎಂಬ ಆಚರಣೆಯನ್ನು ಮಾಡುತ್ತಾನೆ.
ದೀಪ ಧಾನ ಉತ್ಸವದಲ್ಲಿ ಹೊಸ ಬಟ್ಟೆ ಧರಿಸಿ ಬುದ್ದ, ಧಮ್ಮ, ಸಂಘಕ್ಕೆ ವಂದಿಸಿ ಸಿಹಿ ತಿಂಡಿ ಮಾಡಿ ತಿಂದು ಸ್ನೇಹಿತರು, ಬಂಧುಗಳು ತಂದೆ, ತಾಯಿ, ಮಕ್ಕಳು ಎಲ್ಲರೂ ಜ್ಞಾನದ ಸಂಕೇತವಾಗಿರುವ ದೀಪವನ್ನು ಒಬ್ಬರಿಗೊಬ್ಬರು ವಿನಿಮಯ ಮಾಡಿಕೊಂಡು ಈ ಹಬ್ಬವನ್ನು ಆಚರಿಸಬೇಕು. ಈ ಆಚರಣೆಯ ಉದ್ದೇಶ ಜ್ಞಾನವನ್ನು ವಿನಿಮಯ ಮಾಡಿಕೊಳ್ಳುವುದಾಗಿದೆ.
ಆದರೆ ಇಂದು ದೀಪ ದಾನ ಉತ್ಸವವನ್ನು ವಿಕೃತಗೊಳಿಸಿ ಮನುವಾದಿಗಳು ದೀಪಾವಳಿ ಮಾಡಿದ್ದಾರೆ ಈ ಹಬ್ಬದಲ್ಲಿ ಪಟಾಕಿ ಸಿಡಿಸಿ ಶಬ್ದಮಾಲಿನ್ಯ ಉಂಟುಮಾಡಿ ಲಕ್ಷ್ಮಿ ಪೂಜೆ ಮಾಡುತ್ತಾರೆ ಮತ್ತು ದನ ಪ್ರಾಪ್ತಿಗಾಗಿ ಬೇಡಿಕೊಳ್ಳುತ್ತಾರೆ. ಬುದ್ಧರ ತಾಯಿ ಮಹಾಮಾಯೆಯನ್ನು ಲಕ್ಷ್ಮಿ ದೇವಿಯನ್ನಾಗಿ ವಿಕೃತಿಸಿದ್ದು ಕೂಡ ಇದೆ.
ಒಟ್ಟಿನಲ್ಲಿ ಬಾಬಾಸಾಹೇಬರು ಹೇಳಿದಂತೆ ಕ್ರಾಂತಿಗೆ ಪ್ರತಿಕ್ರಾಂತಿಯನ್ನು ನಾವು ಸರಿಯಾಗಿ ತಿಳಿದುಕೊಂಡು ನಮ್ಮ ನೈಜ್ಯ ಸಂಸ್ಕೃತಿಯನ್ನು ಆಚರಿಸಿ ಸಂಭ್ರಮಿಸುವ ಅವಶ್ಯಕತೆ ಇದೆ. ಜಂಬೂದ್ವೀಪದ ಸಂಸ್ಕೃತಿಯಲ್ಲಿ ನಾವು ಮಾಡಿರುವ ಕ್ರಾಂತಿಗೆ ಮನು ಸಂತಾನಿಗಳು ಪ್ರತಿಕ್ರಾಂತಿ ಮಾಡಿದ್ದಾರೆ ಆ ಪ್ರತಿಕ್ರಾಂತಿಯ ವೈಭವಿಕೃತ ಹಬ್ಬಗಳನ್ನು ಆಚರಿಸುತ್ತಿದ್ದೇವೆ ಎಂಬುದು ದುಃಖದ ವಿಷಯ. ಅದರಲ್ಲೂ ಬಾಬಾಸಾಹೇಬರ ಹೋರಾಟದ ಬೆವರಿನ ಫಲ ಉಣ್ಣುತ್ತಿರುವ ನೌಕರಸ್ಥರೇ ಇದಕ್ಕೆ ಬೆನ್ನು ಬಿದ್ದಿದ್ದಾರೆ.
ಈ ದೀಪಾವಳಿ ಆಸುಪಾಸು #ಬಲಿಪಾಡ್ಯ ಎಂದು ಕೂಡ ಆಚರಿಸುವುದುಂಟು ಆ ದಿನವನ್ನು ಮೂಲನಿವಾಸಿ ದಾನವ(ದಾನ ನೀಡುವವರು)ರಾಜ ಬಳಿ ಚಕ್ರವರ್ತಿಯನ್ನು ವಾಮನ ಎನ್ನುವ ಬ್ರಾಹ್ಮಣ ಮೋಸದಿಂದ ಕೊಂದ ದಿನವನ್ನೂ ಕೂಡ ಮನು ಸಂತಾನಿಗಳು ಹಬ್ಬವೆಂದು ಆಚರಿಸುವುದುಂಟು. ಬಳಿ ಚಕ್ರವರ್ತಿ ಒಬ್ಬ ದಕ್ಷ ಆಡಳಿತಗಾರ ಹಾಗೂರೈತಾಪಿ ರಾಜ ಆಗಿದ್ದನು.
ಆದರೂ ಅವನನ್ನು ಮೋಸದಿಂದ ಕೊಲ್ಲಲಾಯಿತು ಎಂದು ಹೇಳುವ ಬದಲು ವಾಮನ ಎಂಬುವವ ಮೂರು ಹೆಜ್ಜೆ ಜಾಗ ದಾನ ಬೇಡಿದ ಆಗ ಒಂದು ಹೆಜ್ಜೆ ಭೂಮಿಮೇಲೆ ಇನ್ನೊಂದು ಆಕಾಶಕ್ಕೆ ಮತ್ತೊಂದು ಬಳಿ ಚಕ್ರವರ್ತಿಯ ತಲೆ ಮೇಲೆ ಇಟ್ಟು ಪಾತಾಳಕ್ಕೆ ತಳ್ಳಿದ ಎಂದು ಬುರುಡೆ ಬಿಟ್ಟು ಹಬ್ಬ ಆಚರಿಸುತ್ತಾರೆ. ಪುರಾಣದ ಕಥೆ ಏನೇ ಇರಲಿ ಆದರೆ ಆ ಕಥೆಯಿಂದ ನಮಗೆ ಅವರು ಮೋಸ ಮಾಡಿದ್ದಾರೆ ಮತ್ತು ಈಗಲೂ ಮಾಡುತ್ತಲಿದ್ದಾರೆ ಎಂಬ ವಿಷಯ ಸ್ಪಷ್ಟವಾಗುತ್ತದೆ.
ಒಟ್ಟಿನಲ್ಲಿ ನಾವು ಮನುವಾದಿಗಳು ನಮ್ಮನ್ನು ಮೂರ್ಖರನ್ನಾಗಿಸಲು ಹೆಣೆದಿರುವ ಮೋಸದ ಕಥೆಗಳನ್ನು ನಂಬದೆ ಅವರ ಶ್ರೇಷ್ಠತ್ವ ಸಾರುವ ಅರ್ಥ ಇಲ್ಲದ ವ್ಯರ್ಥ ಹಬ್ಬಗಳನ್ನು ಆಚರಿಸದೆ ನಮ್ಮದೇ ಇತಿಹಾಸ ಇರುವ ನಮ್ಮ ಸಂಸ್ಕೃತಿಯ ಹಬ್ಬಗಳನ್ನು ಆಚರಿಸಿ ನಮ್ಮ ಇತಿಹಾಸ ನೆನಪಿಸಿಕೊಳ್ಳುತ್ತಾ ಮುಂದಿನ ಪೀಳಿಗೆಗೆ ಮಾರ್ಗದರ್ಶನ ಮಾಡುತ್ತಾ ಬುದ್ದ, ಬಸವ, ಅಂಬೇಡ್ಕರರ ಹೋರಾಟದ ರಥವನ್ನು ಗುರಿ ಮುಟ್ಟಿಸುವ ಕಡೆಗೆ ಒಯ್ಯೋಣ ಬನ್ನಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?