ಲೈಫ್ ಸ್ಟೈಲ್
ದೀಪಿಕಾ ಪಡುಕೋಣೆಯ ಎರಡೂವರೆ ಲಕ್ಷ ರೂ ಲೆಧರ್ ಪ್ಯಾಂಟ್..!
ಮೊನ್ನೆ ಮೊನ್ನೆ ಅಷ್ಟೇ ಲಂಡನ್ ಗೆ ಹಾರಿದ ನಮ್ಮ ದೀಪು ಬೇಬಿ, ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ತುಂಬಾ ಚರ್ಚೆಗೆ ಗ್ರಾಸವಾಗಿದ್ದಾರೆ. ಈ ಚೆಲುವೆ ಏನು ಮಾಡಿದರೂ ದೊಡ್ಡ ಸುದ್ದಿ ಯಾಗುತ್ತದೆ.ಇನ್ನು ಈಕೆ ಲಂಡನ್ ಗೆ ಹಾರಿದ್ದು ಯಾವುದೇ ಚಿತ್ರ ದ ಶೂಟಿಂಗ್ ಅಥವಾ ಫ್ಯಾಷನ್ ಶೋ ಗಾಗಿ ಅಲ್ಲ! ಪ್ರತಿಷ್ಠಿತ ಮಾಡೆಮ್ ಟಾಸೆಡ್ಸ್ ಮ್ಯೂಸಿಯಂ ಸೇರಲಿದೆ ಈ ಚೆಲುವೆ ಮೇಣದ ಮೂರುತಿ. ಅದರ ಸಿದ್ಧತೆ ಗೆಂದು ಲಂಡನ್ ನಲ್ಲಿ ದೀಪಿಕಾ ಕಾಣಿಸಿಕೊಂಡದ್ದು ಹೀಗೆ.
ಅಂತರಾಷ್ಟ್ರೀಯ ಡಿಸೈನರ್ ವೇರ್ ನಲ್ಲಿ ದೀಪು ಬೇಬಿ ಯ ಫ್ಯಾಷನ್ ಸ್ಪೇಟ್ ಮೆಂಟ್ ಫ್ಯಾಷನ್ ದುನಿಯಾದಲ್ಲಿ ಟಾಕ್ ಆಫ್ ದಿ ಡೇ ಆಗಿದೆ. ಟಾಮ್ ಫಾರ್ಡ್ ಬೂಟ್ಸ್.. ಅಲೆಂಕ್ಸಾಂಡರ್ ಮಾಕ್ ಕ್ವೀನ್ ನ ಲೆಗ್ಗಿಂಗ್ ಪ್ಯಾಂಟ್.. ಬೆಲೆಂಸಿಯಾಗಾ ಕಪ್ಪು ಟೀಶರ್ಟ್ ನಲ್ಲಿ ಲಂಡನ್ ಏರ್ಪೋಟ್ ನಲ್ಲಿ ಕಾಣಿಸಿಕೊಂಡ ಬಾಲಿವುಡ್ ಬ್ಯೂಟಿ…ಯ ಏರ್ಪೋಟ್ ಲುಕ್ ಫ್ಯಾಷನ್ ದೀವಾ ಗಳಲ್ಲಿ ಚರ್ಚೆ ಗೆ ಗ್ರಾಸವಾಗಿದೆ.
ಇದರ ಬೆನ್ನಲ್ಲೀ.. ದೀಪಿಕಾ ತೊಟ್ಟ ಎರಡೂವರೆ ಲಕ್ಷ ಕ್ಕೂ ಅಧಿಕ ಬೆಲೆ ಬಾಳುವ ಬ್ಲಾಕ್ ಲೆಧರ್ ಪ್ಯಾಂಟ್ ಸ್ಟೋರಿ ಇಲ್ಲಿದೆ ನೋಡಿ.ಪ್ರತಿಷ್ಠಿತ ಅಂತರಾಷ್ಟ್ರೀಯ ಬ್ರಾಂಡ್ ಪ್ರೊಂಜಾ ಶೋಲರ್( proenza shouler) ನ ಸುಮಾರು US$3839 ಬಲೆಬಾಳುವ ದುಬಾರಿ ಲೆಧರ್ ಪ್ಯಾಂಟ್ ಫ್ಯಾಷನ್ ದುನಿಯಾದಲ್ಲಿ ಸದ್ದು ಮಾಡುತ್ತಿದೆ.
ದೀಪಿಕಾ ರ ಸ್ಟೈಲಿಶ್ ಲುಕ್ ನ ಕ್ರೆಡಿಟ್ ಅವರ ಸ್ಟಲಿಸ್ಟ್ ಶಲೀನಾ ನಥಾನಿ ಗೆ ಸಲ್ಲುತ್ತದೆ. ಬಿಳಿ ಯ ಕಾಲರ್ ಶರ್ಟ್ ಮತ್ತು ಬೆಲ್ಟೆಡ್ ಬ್ಲಾಕ್ ಲೆಧರ್ ಪ್ಯಾಂಟ್ ನಲ್ಲಿ ಮಿಂಚಿದವು ದೀಪಿಕಾ ಎಂದಿನಂತೆ ತಮ್ಮ ಗುಳಿಕೆನ್ನೆಯ ನಗುವಿನೊಂದಿಗೆ ಕಾಣಿಸಿಕೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ7 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ5 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಮೌಲಾನಾ ಅಜಾದ್ ಮಾದರಿ ಶಾಲೆಗೆ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ
-
ದಿನದ ಸುದ್ದಿ5 days ago
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ