Connect with us

ದಿನದ ಸುದ್ದಿ

ದೆಹಲಿ ಗಡಿಗಳು ಯುದ್ಧದ ಗಡಿಗಳಾಗಿ ಪರಿವರ್ತನೆಯಾಗಿವೆ : ಸಿರಿಮನೆ ನಾಗರಾಜು

Published

on

ಸುದ್ದಿದಿನ,ದೆಹಲಿ: ‘ಭಾರತದ ಇತಿಹಾಸದಲ್ಲಿ ಹಿಂದೆದೂ ನಡೆಯದ ಸುಧೀರ್ಘ ಹೋರಾಟ ಇದಾಗಿದೆ. ದೀರ್ಘಕಾಲ ಅಂದರೆ ವರ್ಷಗಟ್ಟಲೆ ಹೋರಾಟ ನಡೆಸಲು ರೈತರು ತಯಾರಿ ನಡೆಸಿದ್ದಾರೆ. ಒಕ್ಕೂಟ ಸರ್ಕಾರ ಇಡೀ ದೇಶದ ಜನತೆ ಮೇಲೆ ಯುದ್ಧ ಸಾರಿದೆ. ಸರ್ಕಾರ ಗಡಿ ರಕ್ಷಣಾ ಪಡೆಗಳನ್ನು ನಿಲ್ಲಿಸಿದ್ದಾರೆ. ರೈತರು ಹೋರಾಟ ನಡೆಸುತ್ತಿರುವ ಗಡಿಗಳು ಯುದ್ಧದ ಗಡಿಗಳಾಗಿ ಪರಿವರ್ತನೆಯಾಗಿದೆ’ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಭಾಗವಹಿಸಿ ಹಲವು ದಿನಗಳ ಕಾಲ ಹೋರಾಟದಲ್ಲಿ ತೊಡಗಿಕೊಂಡಿದ್ದ ರಾಜ್ಯದ ಯುವ ಹೋರಾಟಗಾರ ತಂಡ ಇಂದು ರೈತ ಕಾರ್ಮಿಕರ ಐಕ್ಯತೆ ಚಿರಾಯುವಾಗಲಿ, ರೈತ ಹೋರಾಟಕ್ಕೆ ಜಯವಾಗಲಿ ಘೋಷಣೆ ಕೂಗುತ್ತಾ ಬೆಂಗಳೂರಿಗೆ ಬಂದಿಳಿದರು.

‘ಉತ್ತರ ಪ್ರದೇಶಗಳ ಹಳ್ಳಿ ಹಳ್ಳಿ ಗಳಲ್ಲಿ ಕಿಸಾನ್‌ ಮಹಾಪಂಚಾಯತ್‌ಗಳು ನಡೆಯುತ್ತಿವೆ. ಕರ್ನಾಟಕದಲ್ಲಿಯೂ ಕಿಸಾನ್‌ ಮಹಾಪಂಚಾಯತ್‌ಗಳು ನಡೆಯುತ್ತಿದ್ದು, ರೈತ ಮುಖಂಡರು ಕರ್ನಾಟಕಕ್ಕೂ ಬರಲಿದ್ದಾರೆ. ಸಂಯುಕ್ತ ರೈತ ಹೋರಾಟ ಸಮಿತಿಯಿಂದ ಕರ್ನಾಟಕದಲ್ಲಿ ತಾಲ್ಲೂಕು ಮಟ್ಟದಲ್ಲಿ ಕಿಸಾನ್‌ ಪಂಚಾಯತ್‌ಗಳು ನಡೆಯಲಿವೆ’ ಎಂದರು.

ಇದನ್ನೂ ಓದಿ | ಅಧಿಕಾರಿಗಳ ನಿರ್ಲಕ್ಷ್ಯ; ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲೇ ಓಪನ್ ಆಗಿದೆ ಡ್ರೈನೇಜ್ , ಆಪಾಯ ಕಟ್ಟಿಟ್ಟ ಬುತ್ತಿ..!

ಯುವ ಹೋರಾಟಗಾರ ಸಂತೋಷ್ ಮಾತನಾಡಿ, ’ದೆಹಲಿ ಗಡಿಗಳಲ್ಲಿ ಲಕ್ಷಾಂತರ ರೈತರು ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ಹೋರಾಟ ನಡೆಯುತ್ತಲಿರುವ 4 ಗಡಿಗಳಿಗೂ ನಾವು ಭೇಟಿ ಕೊಟ್ಟಿದ್ದೇವೆ. ಪಂಜಾಬ್‌ ಮತ್ತು ಹರಿಯಾಣ ರಾಜ್ಯದ ರೈತರಿಗೆ ನಾವು ನಿಜಕ್ಕೂ ಧನ್ಯವಾದ ಹೇಳಬೇಕು.

ಏಕೆಂದರೆ ಕೃಷಿ ಕಾಯ್ದೆಗಳು ರೈತ ಸಮುದಾಯಕ್ಕೆ ಹೇಗೆ ಮಾರಕವಾಗಲಿವೆ ಎಂಬುದರ ಬಗ್ಗೆ ಸ್ಪಷ್ಟ ಅರಿವಿಟ್ಟುಕೊಂಡು ಅವರು ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟ ದೇಶದ ಮೂಲೆ ಮೂಲೆಗೂ ತಲುಪಬೇಕು. ಬೆಳೆಗೆ ಕನಿಷ್ಠ ಬೆಂಬಲ ಸಿಗಬೇಕು ಎಂಬುದು ರೈತರ ಒಕ್ಕೊರಲ ಬೇಡಿಕೆಯಾಗಿದೆ. ರೈತ ಹೋರಾಟದಲ್ಲಿ ಯುವ ಜನತೆ ಭಾಗಿಯಾಗುವ ಅಗತ್ಯವಿದೆ’ ಎಂದರು.

ಕೊಡಗಿನ ಯುವ ಹೋರಾಟಗಾರ್ತಿ ಕಾವೇರಿ ಮಾತನಾಡಿ, ‘ಭಾರತೀಯರಾದ ನಾವು ಕರಾಳ ದಿನಗಳಲ್ಲಿ ಬುದುಕು ದೂಡುತ್ತಿದ್ದೇವೆ.. ಇಂತಹ ಸಂದರ್ಭದಲ್ಲಿ ಎಲ್ಲೆಡೆಯೂ ಆತಂಕ ಮನೆ ಮಾಡಿದೆ. ಭಾರತದ ಭವಿಷ್ಯ ಎತ್ತ ಸಾಗುತ್ತಿದೆ ಎಂಬ ಭಯ ಎಲ್ಲರಲ್ಲೂ ಇತ್ತು. ಆದರೆ, ಈಗ ಆಡಳಿತರೂಢ ಸರ್ಕಾರದ ಮೇಲಿನ ಕಿಚ್ಚು ದೇಶದ ತುಂಬೆಲ್ಲ ಹಬ್ಬುತ್ತಿದೆ. ಸದ್ಯ ಭಾರತದಲ್ಲಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದೆ. ಈ ಹೋರಾಟಕ್ಕೆ ರೈತರು ಮಾತ್ರವಲ್ಲ ನಾವೆಲ್ಲರೂ ಕೈಜೋಡಿಸಬೇಕು’ ಎಂದರು.

ಕಳೆದ ಮೂರು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ತೆಲಂಗಾಣ ರಾಜ್ಯಗಳ ವಿವಿಧ ಸಂಘಟನೆಗಳ ಹೋರಾಟಗಾರರ ‘ದಕ್ಷಿಣ ಭಾರತ ನಿಯೋಗ’ ಭಾಗವಹಿಸಿತ್ತು. ಕರ್ನಾಟಕದಿಂದ ಕರ್ನಾಟಕ ಜನಶಕ್ತಿ, ಕರ್ನಾಟಕ ಶ್ರಮಿಕ ಶಕ್ತಿ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಸುಮಾರು 60ಕ್ಕೂ ಹೆಚ್ಚು ಹೋರಾಟಗಾರರು ಒಂಬತ್ತು ದಿನಗಳ ಕಾಲ ಹೋರಾಟದಲ್ಲಿ ಭಾಗವಹಿಸಿದ್ದರು.

ಕೃಪೆ: ಮಾಸ್‌ ಮೀಡಿಯಾ ಫೌಂಡೇಶನ್‌

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending