ದಿನದ ಸುದ್ದಿ
ಹಸುರು ಹೋಗಿ ಕೆಂಪಾಗುವವರೆಗೆ ಕಾಯಬಾರದು ಬನ್ನಿ !
- ನಾಗೇಶ್ ಹೆಗಡೆ
ಐತಿಹಾಸಿಕ ರೈತ ಜಾಥಾಕ್ಕೆ ಇಲ್ಲಿವೆ ದೊಡ್ಡ ಕಾರಣಗಳು
ಹಿಂದೆಂದೂ ಕಂಡಿರದಷ್ಟುದೊಡ್ಡ ಸಂಖ್ಯೆಯಲ್ಲಿ ನಾಳೆ ರೈತರು ಮುನ್ನೆಲೆಗೆ ಬರಲಿದ್ದಾರೆ. ಹೊಟ್ಟೆಗೆ ಹಿಟ್ಟು/ಅನ್ನ ತಿನ್ನುವವರೆಲ್ಲ ಜಾತಿ/ಧರ್ಮ/ರಾಜಕೀಯ ಪಕ್ಷಭೇದ ಮರೆತು ರೈತರನ್ನು ಬೆಂಬಲಿಸಬೇಕು. ಏಕೆ ಬೆಂಬಲಿಸಬೇಕು ಎಂಬುದಕ್ಕೆ ಮುಖ್ಯ ಕಾರಣಗಳು ಇಂತಿವೆ:
1. ಎಲ್ಲ ಸುಧಾರಿತ ದೇಶಗಳಲ್ಲೂ ರೈತರ ಶ್ರಮಕ್ಕೆ ಸಬ್ಸಿಡಿ ನೀಡಲಾಗುತ್ತದೆ. ಅಮೆರಿಕದಲ್ಲಿ ರೈತರ ಉತ್ಪಾದನಾ ವೆಚ್ಚದ ಶೇ 12ರಷ್ಟು, ಐರೋಪ್ಯ ಸಂಘದವರು ಶೇ. 20ರಷ್ಟು ಮತ್ತು ಜಪಾನ್, ದ.ಕೊರಿಯಾ, ನಾರ್ವೆ, ಐಸ್ಲಾಂಡ್ ದೇಶಗಳಲ್ಲಿ ಶೇಕಡಾ 40-60ರಷ್ಟು ಸಬ್ಸಿಡಿ ನೀಡಿವೆ (2019ರಲ್ಲಿ). ಆದರೆ ಭಾರತ ದೇಶದಲ್ಲಿ ಶೂನ್ಯಕ್ಕಿಂತ ಶೇ 5ರಷ್ಟು ಕೆಳಗೆ! ಅಂದರೆ ರೈತರೇ ಬಳಕೆದಾರರಿಗೆ ಶೇಕಡಾ 5ರಷ್ಟು ಸಬ್ಸಿಡಿ ಕೊಡುತ್ತಾರೆ. ಜಗತ್ತಿನ ಅತಿ ಬಡ ಕೃಷಿಕರ ಬೆವರಿನ ದುಡಿಮೆಯ ಫಲ ಪಡೆಯುವ ನಾವು ಅದರ ಮೌಲ್ಯದಲ್ಲೂ ವಿನಾಯ್ತಿ ಕೇಳುತ್ತೇವೆ. ಅಷ್ಟೇ ಅಲ್ಲ;
2. ಅನುಕೂಲಸ್ಥ ದೇಶಗಳು ಹೊಸ ಹೊಸ ಮಾರ್ಗಗಳ ಮೂಲಕ ರೈತರಿಗೆ ಇನ್ನಷ್ಟು ವಿನಾಯ್ತಿ ಕೊಡುವ ಯೋಜನೆ ಹಾಕಿವೆ. ಅಂದರೆ ಉತ್ಪಾದನೆಗೆ ಅಷ್ಟೇ ಅಲ್ಲ; ಭೂಮಿಯ ಒಟ್ಟಾರೆ ಒಳಿತಿಗೆ (ಭೂತಾಪವನ್ನು ಕಡಿಮೆ ಮಾಡುವತ್ತ ರೈತರು ನೀಡುವ ಕೊಡುಗೆಗೆ) ಬೆಲೆ ಕಟ್ಟಿ ಅದಕ್ಕೂ ಪರಿಹಾರ ನೀಡತೊಡಗಿವೆ. ಅದನ್ನ ಪರಿಸರ ಕಲ್ಯಾಣ ಕೊಡುಗೆ ಎಂದು ಹೆಸರಿಸಿ ರೈತರ ಕೈಗೆ ಇನ್ನೂ ತುಸು ಹಣ ಸೇರುವಂತೆ ಮಾಡುತ್ತಿದ್ದಾರೆ.
3. ಸುಧಾರಿತ ದೇಶಗಳ ಆ ಅನುಕೂಲಸ್ಥ ರೈತರೊಂದಿಗೆ ನಮ್ಮ ಬಹುತೇಕ ಬಡ, ಹಿಂದುಳಿದ, ಅನಕ್ಷರಸ್ಥ ಕೃಷಿಕರು ಪೈಪೋಟಿ ಮಾಡಬೇಕು. ವಿಶೇಷವಾಗಿ ಬರ, ನೆರೆ ಹಾವಳಿಗೆ ತುತ್ತಾಗಿ ಯಾವುದೇ ಫಸಲಿನ ಬೆಲೆ (ಉದಾ ಈರುಳ್ಳಿಯ ಬೆಲೆ) ಜಾಸ್ತಿಯಾದಾಗ ಅದನ್ನು ತಗ್ಗಿಸಲೆಂದು ಸರಕಾರ ವಿದೇಶದಿಂದ ಅದನ್ನು ಆಮದು ಮಾಡಿಕೊಳ್ಳುತ್ತದೆ. ಮಳೆಯಲ್ಲಿ ನೆನೆದ ಈರುಳ್ಳಿಯನ್ನು ರೈತ ಮಹಿಳೆ ಕಷ್ಟಪಟ್ಟು ಹೆಕ್ಕಿ ಹೇಗೋ ಒಣಗಿಸಿ ಮಾರುಕಟ್ಟೆಗೆ ಸಾಗಿಸಿ, ತುಸು ಜಾಸ್ತಿ ಬೆಲೆ ಕೇಳಿದರೆ “ಇಲ್ಲ! ಈಜಿಪ್ತಿನಿಂದ ಈರುಳ್ಳಿ ಕಮ್ಮಿ ಬೆಲೆಗೆ ಬಂದಿದೆ, ನಿಮ್ಮದು ಬೇಡ” ಎನ್ನುತ್ತಾರೆ ವರ್ತಕರು.
4. ಈ ಕಾರಣಕ್ಕಾಗಿಯೇ ರೈತರು ತಮ್ಮ ಫಸಲಿಗೆ ಕನಿಷ್ಟ ಬೆಂಬಲ ಬೆಲೆಯನ್ನಾದರೂ (ಕಬೆಂಬೆ) ಕೊಡಿ ಎಂದು ಕೇಳುತ್ತಿದ್ದಾರೆ. ಅಂಥ 22 ಬೆಳೆಗಳಿಗೆ ಕಬೆಂಬೆ ಇದೆ ಹೌದು; ಆದರೆ ಅಕ್ಕಿ-ಗೋಧಿ ಬಿಟ್ಟರೆ ಇನ್ನುಳಿದವು ಹೆಸರಿಗಷ್ಟೆ. ಸರಕಾರ ಅವನ್ನು ಖರೀದಿ ಮಾಡುವುದಿಲ್ಲ. ಸರಕಾರದ್ದೇ ದಾಖಲೆಗಳ ಪ್ರಕಾರ ಹತ್ತು ಬೆಳೆಗಳ ಶೇ 70ರಷ್ಟು ಭಾಗ ಕಬೆಂಬೆಗಿಂತ ಕಡಿಮೆ ದರದಲ್ಲಿ ಮಾರಾಟವಾಗಿವೆ. ಅಕ್ಕಿ-ಗೋಧಿಗಿದ್ದ ಕಬೆಂಬೆಯನ್ನೂ ಸರಕಾರ ಹಿಂತೆಗೆದುಕೊಂಡೀತೆಂದು ಪಂಜಾಬ್ ರೈತರು ಭೀತರಾಗಿದ್ದಾರೆ.
5. ಕೃಷಿಯ ಕೂಲಿ ವೆಚ್ಚ, ಒಳಸುರಿಗಳ ಬೆಲೆ ವರ್ಷವರ್ಷಕ್ಕೂ ಹೆಚ್ಚುತ್ತಿದೆ. ಜೊತೆಗೆ ಹವಾಗುಣ ಸಂಕಷ್ಟಗಳಿಂದಾಗಿ ರೈತನ ಬೆಳೆ ಪ್ರಮಾಣ ಅನಿಶ್ಚಿತವಾಗುತ್ತಿದೆ. ಸರಕಾರಿ ನೌಕರರ ಸಂಬಳ ಕಳೆದ ಇಪ್ಪತ್ತು ವರ್ಷಗಳಲ್ಲಿ ಆರು ಪಟ್ಟು ಹೆಚ್ಚಾಗಿದೆ. ರೈತರು ಮಾತ್ರ ಮೇಲೇಳುವ ಬದಲು ನಿಂತಲ್ಲೇ ಕುಸಿಯುತ್ತಿದ್ದಾರೆ.
6. ರೈತರು ಅನಿವಾರ್ಯವಾಗಿ ಖಾಸಗಿ ಧನಿಕರಿಂದ ಸಾಲ ಪಡೆಯುತ್ತಾರೆ. ಉದ್ಯಮಿಗಳು ಸರಕಾರಿ ಬ್ಯಾಂಕ್ಗಳಿಂದ ಸಾಲ ಪಡೆದು, ಮರುಪಾವ್ತಿ ಮಾಡಲಾಗದಿದ್ದರೆ ಸರಕಾರ ಅಂಥ ಸಾಲವನ್ನು ರೈಟ್ ಆಫ್ (ಮನ್ನಾ) ಮಾಡಿಬಿಡುತ್ತದೆ. 2019ರಲ್ಲಿ ಉದ್ಯಮಿಗಳು ಪಡೆದ 254 ಸಾವಿರ ಕೋಟಿ ರೂಪಾಯಿಗಳಷ್ಟು ಇಂಥ ಕೆಟ್ಟ ಸಾಲಗಳನ್ನು ಸರಕಾರ ಮನ್ನಾ ಮಾಡಿದೆ.ರೈತರಿಗೆ ಸರಕಾರ ಆಗೊಮ್ಮೆ ಈಗೊಮ್ಮೆ ನೆರವನ್ನು ಘೋಷಿಸುತ್ತದೆ. ಆದರೆ ಅದರ ವೈಖರಿ ಹೇಗಿರುತ್ತದೆ ಎಂದರೆ (ಇಂದಿನ ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ) 2019ರಲ್ಲಿ ಘೋಷಿಸಿದ್ದ ನೆರೆ ಪರಿಹಾರ ಧನದಲ್ಲಿ ಶೇ. 10ಕ್ಕಿಂತ ಕಡಿಮೆ ಹಣವನ್ನು ಸರಕಾರ ಬಿಡುಗಡೆ ಮಾಡಿದೆ. (ಘೋಷಿಸಿದ್ದು 427 ಕೋಟಿ; ಬಿಡುಗಡೆ ಮಾಡಿದ್ದು 41ಕೋಟಿ. ಅದರಲ್ಲೂ ಎಷ್ಟು ಅಂಶ ರೈತರಿಗೆ ತಲುಪಿದೆ ಲೆಕ್ಕಕ್ಕೆ ಸಿಗಲಿಕ್ಕಿಲ್ಲ).
ಇದುವರೆಗಿನ ಎಲ್ಲ ಸರಕಾರಗಳೂ ರೈತರ ಹಿತವನ್ನು ಕಡೆಗಣಿಸಿದ್ದಕ್ಕೇ ಈಗ ಸ್ಫೋಟಕ ಸ್ಥಿತಿ ಬಂದಿದೆ. ದನಿ ಇಲ್ಲದ ಜನರು ಈ ಬಾರಿ ಹೇಗೋ ದೇಶಾದ್ಯಂತ ಒಗ್ಗಟ್ಟಾಗಿ ದನಿ ಎತ್ತಿದ್ದಾರೆ. ಅವರು ಆಹಾರವನ್ನಷ್ಟೇ ಅಲ್ಲ, ತಮ್ಮ ನಿತ್ಯದ ಶ್ರಮದ ಮೂಲಕ ಕ್ಲೈಮೇಟ್ ವಿಪತ್ತುಗಳಿಗೆ ಕೈಲಾದ ಪರಿಹಾರವನ್ನೂ ನಮಗಾಗಿ ಕಲ್ಪಿಸುತ್ತಿದ್ದಾರೆ.
ಅವರ ದನಿಗೆ ನಮ್ಮ ದನಿಯನ್ನೂ ಸೇರಿಸೋಣ ಬನ್ನಿ.
ಅಷ್ಟಾದರೂ ಅನ್ನದ ಋಣ ತೀರಿಸೋಣ. ನಮ್ಮ ಬೆಂಬಲವನ್ನು ತೋರಿಸೋಣ.
(ಈ ಪೋಸ್ಟ್ನ ಮೊದಲರ್ಧದ ಮಾಹಿತಿ ಮೂಲ: ಡೌನ್ ಟು ಅರ್ಥ್ ಪಾಕ್ಷಿಕ 15-31, ಜನವರಿ 2021 ಸುನಿತಾ ನರೇನ್ ಸಂಪಾದಕೀಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ10 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

