ದಿನದ ಸುದ್ದಿ
ಅತಿಥಿ ಶಿಕ್ಷಕರ ಪ್ರಕರಣವನ್ನು ಕಾನೂನಾತ್ಮಕವಾಗಿ ಅಂತ್ಯಗೊಳಿಸಲು ಆಗ್ರಹ
ಸುದ್ದಿದಿನ, ದಾವಣಗೆರೆ : ಅತಿಥಿ ಶಿಕ್ಷಕರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ದಿನಾಂಕ : 11.09.2019 ರಂದು ನೀಡಿರುವ ತೀರ್ಪಿನ ಆದೇಶವನ್ನು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪಾಲಿಸಿ ಬೇಕು ಅಥವಾ ಘನ ನ್ಯಾಯಾಲಯಕ್ಕೆ ಶೀಘ್ರ ಲಿಖಿತ ಉತ್ತರ ನೀಡುವ ಮೂಲಕ ಕಾನೂನಿಗೆ ಗೌರವಿಸಿ ಅತಿಥಿ ಶಿಕ್ಷಕರ ಪ್ರಕರಣವನ್ನು ಕಾನೂನಾತ್ಮಕವಾಗಿಯೇ ಅಂತ್ಯಗೊಳಿಸಲಿ ಎಂದು ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ ಆಗ್ರಹಿಸಿದೆ .
ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಆ ವ್ಯಾಪ್ತಿಗೆ ಸೇರಿರುವ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರುಗಳು ದಿನಾಂಕ : 11/09/2019 ರಂದು ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ಅತಿಥಿ ಶಿಕ್ಷಕರರಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿಗೆ ನ್ಯಾಯಾಲಯದ ಮುಂದೆ ತಕ್ಷಣ ಪ್ರತ್ಯುತ್ತರ ನೀಡಿ ಎಲ್ಲಾ ಗೊಂದಲವನ್ನು ಕಾನೂನಾತ್ಮಕವಾಗಿ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಲಿ ಎಂದು ಸಂಘ ಒತ್ತಾಯಿಸಿದೆ.
ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ನೀಡಿದ ಮಧ್ಯಂತರ ಆದೇಶವನ್ನು ಆಯಾ ಶಾಲಾ ಪ್ರಾಂಶುಪಾಲರಿಗೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಹಾಗೂ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೂ ಆಯಾ ಸಂಧರ್ಭದಲ್ಲೇ ಮನವಿ ಪತ್ರದೊಂದಿಗೆ ಸಲ್ಲಿಸಲಾಗಿದೆ. ಅಂತಿಮವಾಗಿ ದಿನಾಂಕ : 11/09/2019 ರಂದು ನೀಡಲಾದ ತೀರ್ಪಿನ ಪ್ರತಿಯನ್ನು ನ್ಯಾಯಾಲಯದ ಆದೇಶದ ಅನ್ವಯ ಹೊಸ REPRESENTATION ನೊಂದಿಗೆ ಮೇಲ್ಕಂಡ ಸದರಿ ಅಧಿಕಾರಿಗಳಿಗೆ ಸಕಾಲದಲ್ಲೇ ಸಲ್ಲಿಸಲಾಗಿದೆ.
ಅಷ್ಟೇ ಅಲ್ಲದೇ ಅಂದಿನ ಮುಖ್ಯಮಂತ್ರಿಗಳಾಗಿದ್ದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ, ಅವರ ಆಪ್ತ ಕಾರ್ಯದರ್ಶಿಯವರಿಗೆ, ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ, ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಶ್ರೀಯುತ ಗೋವಿಂದ ಕಾರಜೋಳ ಅವರು ಮತ್ತು ಅವರ ಆಪ್ತ ಕಾರ್ಯದರ್ಶಿಗಳಿಗೆ , ಅಂದಿನ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರಪ್ಪ ನವರಿಗೆ, ಕಾನೂನು ಸೇವಾ ಪ್ರಾಧಿಕಾರ, ಮಾನವ ಹಕ್ಕುಗಳ ಆಯೋಗ , ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಸರ್ಕಾರ ಹಾಗೂ ಇಲಾಖೆಯ ಗಮನಕ್ಕೆ ತರಲಾಗಿದೆ.
- ಶೀಘ್ರ ಕ್ರಮ ಕೈಗೊಳ್ಳದಿದ್ದರೆ ದಾಖಲೆ ಸಮೇತ ಮನವಿ ಸಲ್ಲಿಕೆ ಇತ್ಯಾದಿ ಮೂಲಕ ಆಯಾ ಸಮಯದಲ್ಲೇ ಗಮನಕ್ಕೆ ತಂದರೂ ಸ್ಪಂದಿಸದೆ ಅಸಡ್ಡೆ ತೋರಿರುವ ರಾಜ್ಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಓಗಳು ಹಾಗೂ ಪ್ರಾಂಶುಪಾಲರು ಸೇರಿದಂತೆ ಪ್ರತಿಯೊಬ್ಬರ ಹೆಸರಿನಲ್ಲಿ ಕಾನೂನು ಉಲ್ಲಂಘನೆಯ ದೂರು ಸಲ್ಲಿಸುವುದು ಅನಿವಾರ್ಯವಾಗುತ್ತದೆ.
| ನಿಂಗಪ್ಪ ಬನ್ನಿಹಟ್ಟಿ , ರಾಜ್ಯಧ್ಯಕ್ಷ, ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಸಂಘ, ದಾವಣಗೆರೆ
ನ್ಯಾಯಾಲಯವು 11.09.2019 ರ ತೀರ್ಪಿನಲ್ಲಿ ಅತಿಥಿ ಶಿಕ್ಷಕರನ್ನು ಅವರು ಕಾರ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲೇ ಮುಂದುವರಿಸಬೇಕು ಹಾಗೂ ಖಾಯಂ ಗೊಳಿಸುವ ಸಂಬಂಧ 6 ವಾರಗಳ ಒಳಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಆದರೆ ಎರಡು ವರ್ಷ ಕಳೆದರೂ ಘನ ನ್ಯಾಯಾಲಯದ ಆದೇಶ ಪಾಲಿಸಿಲ್ಲ. ಸ್ವಲ್ಪವೂ ವಿಳಂಬ ಮಾಡದೆ ಆಯಾ ಸಂಧರ್ಭದಲ್ಲೇ ನಾವು ನ್ಯಾಯಾಲಯದ ಪ್ರಕ್ರಿಯೆಯನ್ನು ಎಲ್ಲರ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದರೂ ನಮ್ಮ ಆ ಮನವಿಗಳನ್ನಾಗಲಿ, ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ತೀರ್ಪಿನ ಪ್ರತಿಯನ್ನು ಇಲ್ಲಿಯವರೆಗೂ ಗಂಭೀರವಾಗಿ ಪರಿಗಣಿಸಿಲ್ಲ . ಅತಿಥಿ ಶಿಕ್ಷಕರಿಗೆ ಸಮರ್ಪಕ ಲಿಖಿತ ಉತ್ತರ ನೀಡದೆ ವಂಚಿಸುತ್ತಲೇ ಬಂದಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ .
- ಇದು ಡಿಜಿಟಲ್ ಯುಗ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಓಗಳು ಹಾಗೂ ಪ್ರಾಂಶುಪಾಲರುಗಳನ್ನು conference ಕಾಲ್ ಮೂಲಕವೋ, zoom / google meeting ಮೂಲಕವೋ ಎಲ್ಲರನ್ನೂ ಒಂದೇ ಬಾರಿಗೆ ಸಂಪರ್ಕಕ್ಕೆ ತೆಗೆದುಕೊಂಡು ಚರ್ಚಿಸಿ ಅತಿಥಿ ಶಿಕ್ಷಕರಿಗೆ ಆಯಾ ಸ್ಥಳದಲ್ಲೇ ಕರ್ತವ್ಯಕ್ಕೆ ಹಾಜರು ಪಡಿಸಿಕೊಳ್ಳುವಂತೆ ಶೀಘ್ರ ನೇರ ಆದೇಶಿಸಿ ಸುತ್ತೋಲೆ ಹೊರಡಿಸಲಿ. ಆ ಮೂಲಕ ನ್ಯಾಯಾಲಯದ ಆದೇಶ ವನ್ನು ಗೌರವಿಸಲಿ.
| ಗಂಗಾಧರ ಬಿ ಎಲ್ ನಿಟ್ಟೂರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಸಂಘ, ದಾವಣಗೆರೆ.
ನ್ಯಾಯಾಲಯ ತೀರ್ಪು ನೀಡಿಯೇ 2 ವರ್ಷಗಳು ಕಳೆದಿವೆ. ಮಕ್ಕಳಿಗೆ ಅರ್ಥ ಮಾಡಿಸುವ ಸಲುವಾಗಿ ಪಾಠ ಮಾಡುವ ಮುನ್ನವೇ ಹತ್ತಾರು ಬಾರಿ ಓದಿ ನಂತರ ಬೋಧಿಸುವ ಶಿಕ್ಷಕರರಾದ ನಾವಂತೂ ಓದಿ ಮನನ ಮಾಡಿಕೊಂಡಿದ್ದೇವೆ. ಆದರೆ DISSOLVE, DISPOSAL, DISMISS ಎಂಬ ಪದಗಳ ಬಳಸಿ ಅಧಿಕಾರಿಗಳು ಹಾದಿ ತಪ್ಪಿಸಲುತ್ತಿದ್ದಾರೆ ಎಂದಿರುವ ಸಂಘ ಉಚ್ಛ ನ್ಯಾಯಾಲಯದ ತೀರ್ಪನ್ನು ಈಗಲಾದರೂ ಓದಬೇಕಾಗಿ ಹಾಗೂ ಇಲಾಖೆ ವತಿಯಿಂದ ನೇಮಿಸಿಕೊಂಡಿರುವ ವಕೀಲರರೊಂದಿಗೆ ಈಗಲಾದರೂ ಚರ್ಚಿಸಿ ಮಾಹಿತಿ ಪಡೆಯಬೇಕು ಎಂದು ವಿನಂತಿಸಿದೆ.
2 ವರ್ಷದಿಂದ ಬೆಂಗಳೂರಿನ ಕಚೇರಿಗೆ ಅನೇಕ ಬಾರಿ ಹೋಗಿ ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯನಿರ್ವಾಹಕ ನಿರ್ದೇಶಕರ ಛೇಂಬರ್ ಹೊರಗೆ ಸರದಿಯಲ್ಲಿ ನಿಂತು ಕಾದು ಒಳ ಹೋಗಿ ಸಂಪರ್ಕಿಸಿದಾಗ – ” ಹೊರ ಉಳಿದಿರುವ ನಿಮಗೆ ಅನ್ಯಾಯ ಮಾಡುವುದಿಲ್ಲ. ಖಾಲಿ ಇರುವ ಜಾಗ ಹುಡುಕಿಕೊಂಡು ಬನ್ನಿ ” ಎಂದು ಒಂದೇ ಮಾತಲ್ಲಿ ಉತ್ತರಿಸಿ ಬೇರೇನೂ ಮಾತಾಡದೆ ಹೊರಗೆ ಕಳಿಸಿದರು . ಅದೇ ಮಾತನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಎಷ್ಟೋ ಬಾರಿ ಹೇಳಿದರು.
- ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಿ ನಮ್ಮ ಅಳಲನ್ನು ಮುಟ್ಟಿಸಿ ಸರ್ಕಾರ ಆದೇಶ ಹೊರಡಿಸುವಂತೆ ಸಹಕರಿಸಬೇಕು.
|ಮಧುಮತಿ ಎಂ, ಉಪಾಧ್ಯಕ್ಷರು, ರಾಜ್ಯ ಕ್ರೈಸ್ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ದಾವಣಗೆರೆ
ಈ ಮಾತನ್ನು ಕೇಳಲು ನಮಗೆ ತುಂಬಾ ನಾಚಿಕೆ ಎನಿಸಿದೆ. ಪ್ರತಿ ತಿಂಗಳು ಕೂಡ ಮಾಹೆವಾರಿ ತರಿಸಿಕೊಳ್ಳುವ ಅವರಿಗೆ ಇಡೀ ರಾಜ್ಯದ ಎಲ್ಲಾ ಶಾಲೆಗಳ ಮಾಹಿತಿ ಕೂಡ ಲಭ್ಯ ಇರುತ್ತದೆ. ಸಂಬಂಧಿಸಿದ ಕೇಸ್ ವರ್ಕರ್ ಕರೆದು ಕ್ಷಣ ಮಾತ್ರದಲ್ಲಿ ಮಾಹಿತಿ ಪಡೆದು ಅಲ್ಲೇ ಇತ್ಯರ್ಥ ಪಡಿಸಿಕಳಿಸಬಹುದು. ಆದರೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸಲ್ಲದ ಸಬೂಬು ಹೇಳಿ ಯಾಮಾರಿಸಿದ್ದಾರೆ ಎಂದು ಸಂಘ ದೂರಿದೆ. ಸುಮಾರು 400 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. 143 ಅತಿಥಿ ಶಿಕ್ಷಕರಿಗೆ ನ್ಯಾಯಾಲಯ ತೀರ್ಪು ನೀಡಿದೆ. ಸುಮಾರು 235 ಜನ ತೀರ್ಪಿಗಾಗಿ ಕಾಯುತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ7 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ6 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ3 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ3 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

