ದಿನದ ಸುದ್ದಿ
ಅತಿಥಿ ಶಿಕ್ಷಕರ ಪ್ರಕರಣವನ್ನು ಕಾನೂನಾತ್ಮಕವಾಗಿ ಅಂತ್ಯಗೊಳಿಸಲು ಆಗ್ರಹ
ಸುದ್ದಿದಿನ, ದಾವಣಗೆರೆ : ಅತಿಥಿ ಶಿಕ್ಷಕರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ದಿನಾಂಕ : 11.09.2019 ರಂದು ನೀಡಿರುವ ತೀರ್ಪಿನ ಆದೇಶವನ್ನು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪಾಲಿಸಿ ಬೇಕು ಅಥವಾ ಘನ ನ್ಯಾಯಾಲಯಕ್ಕೆ ಶೀಘ್ರ ಲಿಖಿತ ಉತ್ತರ ನೀಡುವ ಮೂಲಕ ಕಾನೂನಿಗೆ ಗೌರವಿಸಿ ಅತಿಥಿ ಶಿಕ್ಷಕರ ಪ್ರಕರಣವನ್ನು ಕಾನೂನಾತ್ಮಕವಾಗಿಯೇ ಅಂತ್ಯಗೊಳಿಸಲಿ ಎಂದು ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ ಆಗ್ರಹಿಸಿದೆ .
ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಆ ವ್ಯಾಪ್ತಿಗೆ ಸೇರಿರುವ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರುಗಳು ದಿನಾಂಕ : 11/09/2019 ರಂದು ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ಅತಿಥಿ ಶಿಕ್ಷಕರರಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿಗೆ ನ್ಯಾಯಾಲಯದ ಮುಂದೆ ತಕ್ಷಣ ಪ್ರತ್ಯುತ್ತರ ನೀಡಿ ಎಲ್ಲಾ ಗೊಂದಲವನ್ನು ಕಾನೂನಾತ್ಮಕವಾಗಿ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಲಿ ಎಂದು ಸಂಘ ಒತ್ತಾಯಿಸಿದೆ.
ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ನೀಡಿದ ಮಧ್ಯಂತರ ಆದೇಶವನ್ನು ಆಯಾ ಶಾಲಾ ಪ್ರಾಂಶುಪಾಲರಿಗೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಹಾಗೂ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೂ ಆಯಾ ಸಂಧರ್ಭದಲ್ಲೇ ಮನವಿ ಪತ್ರದೊಂದಿಗೆ ಸಲ್ಲಿಸಲಾಗಿದೆ. ಅಂತಿಮವಾಗಿ ದಿನಾಂಕ : 11/09/2019 ರಂದು ನೀಡಲಾದ ತೀರ್ಪಿನ ಪ್ರತಿಯನ್ನು ನ್ಯಾಯಾಲಯದ ಆದೇಶದ ಅನ್ವಯ ಹೊಸ REPRESENTATION ನೊಂದಿಗೆ ಮೇಲ್ಕಂಡ ಸದರಿ ಅಧಿಕಾರಿಗಳಿಗೆ ಸಕಾಲದಲ್ಲೇ ಸಲ್ಲಿಸಲಾಗಿದೆ.
ಅಷ್ಟೇ ಅಲ್ಲದೇ ಅಂದಿನ ಮುಖ್ಯಮಂತ್ರಿಗಳಾಗಿದ್ದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ, ಅವರ ಆಪ್ತ ಕಾರ್ಯದರ್ಶಿಯವರಿಗೆ, ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ, ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಶ್ರೀಯುತ ಗೋವಿಂದ ಕಾರಜೋಳ ಅವರು ಮತ್ತು ಅವರ ಆಪ್ತ ಕಾರ್ಯದರ್ಶಿಗಳಿಗೆ , ಅಂದಿನ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರಪ್ಪ ನವರಿಗೆ, ಕಾನೂನು ಸೇವಾ ಪ್ರಾಧಿಕಾರ, ಮಾನವ ಹಕ್ಕುಗಳ ಆಯೋಗ , ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಸರ್ಕಾರ ಹಾಗೂ ಇಲಾಖೆಯ ಗಮನಕ್ಕೆ ತರಲಾಗಿದೆ.
- ಶೀಘ್ರ ಕ್ರಮ ಕೈಗೊಳ್ಳದಿದ್ದರೆ ದಾಖಲೆ ಸಮೇತ ಮನವಿ ಸಲ್ಲಿಕೆ ಇತ್ಯಾದಿ ಮೂಲಕ ಆಯಾ ಸಮಯದಲ್ಲೇ ಗಮನಕ್ಕೆ ತಂದರೂ ಸ್ಪಂದಿಸದೆ ಅಸಡ್ಡೆ ತೋರಿರುವ ರಾಜ್ಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಓಗಳು ಹಾಗೂ ಪ್ರಾಂಶುಪಾಲರು ಸೇರಿದಂತೆ ಪ್ರತಿಯೊಬ್ಬರ ಹೆಸರಿನಲ್ಲಿ ಕಾನೂನು ಉಲ್ಲಂಘನೆಯ ದೂರು ಸಲ್ಲಿಸುವುದು ಅನಿವಾರ್ಯವಾಗುತ್ತದೆ.
| ನಿಂಗಪ್ಪ ಬನ್ನಿಹಟ್ಟಿ , ರಾಜ್ಯಧ್ಯಕ್ಷ, ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಸಂಘ, ದಾವಣಗೆರೆ
ನ್ಯಾಯಾಲಯವು 11.09.2019 ರ ತೀರ್ಪಿನಲ್ಲಿ ಅತಿಥಿ ಶಿಕ್ಷಕರನ್ನು ಅವರು ಕಾರ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲೇ ಮುಂದುವರಿಸಬೇಕು ಹಾಗೂ ಖಾಯಂ ಗೊಳಿಸುವ ಸಂಬಂಧ 6 ವಾರಗಳ ಒಳಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಆದರೆ ಎರಡು ವರ್ಷ ಕಳೆದರೂ ಘನ ನ್ಯಾಯಾಲಯದ ಆದೇಶ ಪಾಲಿಸಿಲ್ಲ. ಸ್ವಲ್ಪವೂ ವಿಳಂಬ ಮಾಡದೆ ಆಯಾ ಸಂಧರ್ಭದಲ್ಲೇ ನಾವು ನ್ಯಾಯಾಲಯದ ಪ್ರಕ್ರಿಯೆಯನ್ನು ಎಲ್ಲರ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದರೂ ನಮ್ಮ ಆ ಮನವಿಗಳನ್ನಾಗಲಿ, ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ತೀರ್ಪಿನ ಪ್ರತಿಯನ್ನು ಇಲ್ಲಿಯವರೆಗೂ ಗಂಭೀರವಾಗಿ ಪರಿಗಣಿಸಿಲ್ಲ . ಅತಿಥಿ ಶಿಕ್ಷಕರಿಗೆ ಸಮರ್ಪಕ ಲಿಖಿತ ಉತ್ತರ ನೀಡದೆ ವಂಚಿಸುತ್ತಲೇ ಬಂದಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ .
- ಇದು ಡಿಜಿಟಲ್ ಯುಗ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಓಗಳು ಹಾಗೂ ಪ್ರಾಂಶುಪಾಲರುಗಳನ್ನು conference ಕಾಲ್ ಮೂಲಕವೋ, zoom / google meeting ಮೂಲಕವೋ ಎಲ್ಲರನ್ನೂ ಒಂದೇ ಬಾರಿಗೆ ಸಂಪರ್ಕಕ್ಕೆ ತೆಗೆದುಕೊಂಡು ಚರ್ಚಿಸಿ ಅತಿಥಿ ಶಿಕ್ಷಕರಿಗೆ ಆಯಾ ಸ್ಥಳದಲ್ಲೇ ಕರ್ತವ್ಯಕ್ಕೆ ಹಾಜರು ಪಡಿಸಿಕೊಳ್ಳುವಂತೆ ಶೀಘ್ರ ನೇರ ಆದೇಶಿಸಿ ಸುತ್ತೋಲೆ ಹೊರಡಿಸಲಿ. ಆ ಮೂಲಕ ನ್ಯಾಯಾಲಯದ ಆದೇಶ ವನ್ನು ಗೌರವಿಸಲಿ.
| ಗಂಗಾಧರ ಬಿ ಎಲ್ ನಿಟ್ಟೂರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಸಂಘ, ದಾವಣಗೆರೆ.
ನ್ಯಾಯಾಲಯ ತೀರ್ಪು ನೀಡಿಯೇ 2 ವರ್ಷಗಳು ಕಳೆದಿವೆ. ಮಕ್ಕಳಿಗೆ ಅರ್ಥ ಮಾಡಿಸುವ ಸಲುವಾಗಿ ಪಾಠ ಮಾಡುವ ಮುನ್ನವೇ ಹತ್ತಾರು ಬಾರಿ ಓದಿ ನಂತರ ಬೋಧಿಸುವ ಶಿಕ್ಷಕರರಾದ ನಾವಂತೂ ಓದಿ ಮನನ ಮಾಡಿಕೊಂಡಿದ್ದೇವೆ. ಆದರೆ DISSOLVE, DISPOSAL, DISMISS ಎಂಬ ಪದಗಳ ಬಳಸಿ ಅಧಿಕಾರಿಗಳು ಹಾದಿ ತಪ್ಪಿಸಲುತ್ತಿದ್ದಾರೆ ಎಂದಿರುವ ಸಂಘ ಉಚ್ಛ ನ್ಯಾಯಾಲಯದ ತೀರ್ಪನ್ನು ಈಗಲಾದರೂ ಓದಬೇಕಾಗಿ ಹಾಗೂ ಇಲಾಖೆ ವತಿಯಿಂದ ನೇಮಿಸಿಕೊಂಡಿರುವ ವಕೀಲರರೊಂದಿಗೆ ಈಗಲಾದರೂ ಚರ್ಚಿಸಿ ಮಾಹಿತಿ ಪಡೆಯಬೇಕು ಎಂದು ವಿನಂತಿಸಿದೆ.
2 ವರ್ಷದಿಂದ ಬೆಂಗಳೂರಿನ ಕಚೇರಿಗೆ ಅನೇಕ ಬಾರಿ ಹೋಗಿ ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯನಿರ್ವಾಹಕ ನಿರ್ದೇಶಕರ ಛೇಂಬರ್ ಹೊರಗೆ ಸರದಿಯಲ್ಲಿ ನಿಂತು ಕಾದು ಒಳ ಹೋಗಿ ಸಂಪರ್ಕಿಸಿದಾಗ – ” ಹೊರ ಉಳಿದಿರುವ ನಿಮಗೆ ಅನ್ಯಾಯ ಮಾಡುವುದಿಲ್ಲ. ಖಾಲಿ ಇರುವ ಜಾಗ ಹುಡುಕಿಕೊಂಡು ಬನ್ನಿ ” ಎಂದು ಒಂದೇ ಮಾತಲ್ಲಿ ಉತ್ತರಿಸಿ ಬೇರೇನೂ ಮಾತಾಡದೆ ಹೊರಗೆ ಕಳಿಸಿದರು . ಅದೇ ಮಾತನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಎಷ್ಟೋ ಬಾರಿ ಹೇಳಿದರು.
- ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಿ ನಮ್ಮ ಅಳಲನ್ನು ಮುಟ್ಟಿಸಿ ಸರ್ಕಾರ ಆದೇಶ ಹೊರಡಿಸುವಂತೆ ಸಹಕರಿಸಬೇಕು.
|ಮಧುಮತಿ ಎಂ, ಉಪಾಧ್ಯಕ್ಷರು, ರಾಜ್ಯ ಕ್ರೈಸ್ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ದಾವಣಗೆರೆ
ಈ ಮಾತನ್ನು ಕೇಳಲು ನಮಗೆ ತುಂಬಾ ನಾಚಿಕೆ ಎನಿಸಿದೆ. ಪ್ರತಿ ತಿಂಗಳು ಕೂಡ ಮಾಹೆವಾರಿ ತರಿಸಿಕೊಳ್ಳುವ ಅವರಿಗೆ ಇಡೀ ರಾಜ್ಯದ ಎಲ್ಲಾ ಶಾಲೆಗಳ ಮಾಹಿತಿ ಕೂಡ ಲಭ್ಯ ಇರುತ್ತದೆ. ಸಂಬಂಧಿಸಿದ ಕೇಸ್ ವರ್ಕರ್ ಕರೆದು ಕ್ಷಣ ಮಾತ್ರದಲ್ಲಿ ಮಾಹಿತಿ ಪಡೆದು ಅಲ್ಲೇ ಇತ್ಯರ್ಥ ಪಡಿಸಿಕಳಿಸಬಹುದು. ಆದರೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸಲ್ಲದ ಸಬೂಬು ಹೇಳಿ ಯಾಮಾರಿಸಿದ್ದಾರೆ ಎಂದು ಸಂಘ ದೂರಿದೆ. ಸುಮಾರು 400 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. 143 ಅತಿಥಿ ಶಿಕ್ಷಕರಿಗೆ ನ್ಯಾಯಾಲಯ ತೀರ್ಪು ನೀಡಿದೆ. ಸುಮಾರು 235 ಜನ ತೀರ್ಪಿಗಾಗಿ ಕಾಯುತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243