ದಿನದ ಸುದ್ದಿ

ಅಥಿತಿ ಉಪನ್ಯಾಸಕರ ಬೇಡಿಕೆಗಳು ; ವರದಿ ನಂತರ ಕ್ರಮ : ಸಚಿವ ಡಾ.ಅಶ್ವಥನಾರಾಯಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಳಗಾವಿ : ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ, ಜೈವಿಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ.ಅಶ್ವಥನಾರಾಯಣ ಅವರು ಅಧಿವೇಶನದಲ್ಲಿ ತಿಳಿಸಿದರು.

ಶುಕ್ರವಾರ ವಿಧಾನ ಸಭೆಯ ಶೂನ್ಯ ವೇಳೆಯಲ್ಲಿ ದೆಹಲಿ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರೆ ಕಾಲಿಕ ಉಪನ್ಯಾಸಕರ ಖಾಯಂ ಮಾಡುವ ಹಾಗೂ ವೇತನ ಹೆಚ್ಚಳ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 430 ಸರ್ಕಾರಿ ಪದವಿ ಕಾಲೇಜಿನಲ್ಲಿ 14564 ಜನ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ಉಪನ್ಯಾಸಕರನ್ನು ಕಾರ್ಯಭಾರ ಆಧರಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆದಾಗ್ಯೂ ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರ ಸಹಾನುಭೂತಿಯಿಂದ ಇದೆ. ಅವರ ಬೇಡಿಕೆ, ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಈಗಾಗಲೇ ಸರ್ಕಾರ ಮಾಡಿದೆ. ಮುಖ್ಯಮಂತ್ರಿಗಳು ಈಗಾಗಲೇ ದಿನಾಂಕ 15 12-2021 ರಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾನೂನು ಇಲಾಖೆ, ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ‌ ಎಂದು ಮಾಹಿತಿ ತಿಳಿಸಿದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆ ಕಾಲಿಕ ಉಪನ್ಯಾಸಕರನ್ನು ಖಾಯಂ ಮಾಡುವ ಕುರಿತಂತೆ ಸರ್ಕಾರ ಈಗಾಗಲೇ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಿದ್ದು, ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version