ದಿನದ ಸುದ್ದಿ
ಮೈಸೂರು : ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಡೆಂಗ್ಯೂ ಗೆ ಬಾಲಕಿ ಬಲಿ
ಸುದ್ದಿದಿನ, ಮೈಸೂರು : ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಸಾಧುಗೋನಹಳ್ಳಿ ಗ್ರಾಮದಲ್ಲಿ ಡೆಂಗ್ಯೂ ಜ್ವರದಿಂದ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೆಣ್ಣು ಮಗು ಮನಸ್ವಿನಿ(6) ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಕೆ.ಆರ್.ಪೇಟೆ ಪಟ್ಟಣದ ಸ್ಕೂಲ್ ಆಫ್ ಇಂಡಿಯಾ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಧುಗೋನಹಳ್ಳಿ ಗ್ರಾಮದ ಮಂಜು ಅವರ ಪುತ್ರಿಯಾದ ಮನಸ್ವಿನಿ ನಿನ್ನೆ ತೀವ್ರವಾದ ಜ್ವರದಿಂದ ಬಳಲುತ್ತಿರುವುದನ್ನು ನೋಡಿದ ಪೋಷಕರು,ಕೂಡಲೇ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೊಲಂಬಿಯಾ ಏಷಿಯಾ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಮನಸ್ವಿನಿ ಸಂಜೆ 5 ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243