ದಿನದ ಸುದ್ದಿ
ಯುವತಿಯನ್ನು ದೇವದಾಸಿ ಮಾಡಲು ಯತ್ನ: ದೂರು ದಾಖಲು
ಸುದ್ದಿದಿನ,ಕೊಪ್ಪಳ: ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಯತ್ನಿಸಿದ ಯುವತಿಯ ತಾಯಿ ಮತ್ತು ಸೋದರರ ವಿರುದ್ಧ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದ ಕಂಠಿ ದುರ್ಗಮ್ಮ ದೇವಾಲಯದಲ್ಲಿ ಯುವತಿಯನ್ನು ದೇವದಾಸಿಯಾಗಿ ಮಾಡಲು ತೀರ್ಮಾನಿಸಲಾಗಿತ್ತು. ಖಚಿತ ಮಾಹಿತಿ ಪಡೆದ ದೇವದಾಸಿ ಪುನರ್ವಸತಿ ಯೋಜನೆ ಯೋಜನಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243