Connect with us

ದಿನದ ಸುದ್ದಿ

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಕೀರ್ತಿ ದೇವರಾಜು ಅರಸು ಅವರದ್ದು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಸಾಮಾಜಿಕ ಬದಲಾವಣೆ ಮೂಲಕ ಜನಪರ ಆಡಳಿತಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಭದ್ರ ಬುನಾದಿ ಹಾಕಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ದಿವಂಗತ ದೇವರಾಜ ಅರಸು ಅವರ 42ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಹಾವನೂರು ಆಯೋಗ ರಚನೆ ಮೂಲಕ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಟ್ಟ ದಿಟ್ಟನಾಯಕ ಎಂದು ಹೇಳಿದರು.

ಅನೇಕ ಬದಲಾವಣೆಗಳ ಮೂಲಕ ಆಡಳಿತಕ್ಕೆ ಹೊಸ ದಿಕ್ಕು ತೋರಿದರು. ಭೂಸುಧಾರಣಾ ಕಾಯ್ದೆಯನ್ನು ಸಮಪರ್ಕವಾಗಿ ಜಾರಿಗೆ ತಂದು ಭೂರಹಿತ ಕುಟುಂಬಗಳಿಗೆ ನ್ಯಾಯ ಒದಗಿಸಿದ್ದಾರೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಕೀರ್ತಿ ದೇವರಾಜು ಅರಸು ಅವರಿಗೆ ಸಲ್ಲುತ್ತದೆ. ಅವರ ಪುಣ್ಯಸ್ಮರಣೆಯನ್ನು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವರ ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ವಿಶೇಷ ತನಿಖಾ ತಂಡ ಇದರ ಬಗ್ಗೆ ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮತ್ತೊಬ್ಬ ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್. ಬೊಮ್ಮಾಯಿ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ನಾಡಿನ ಅನೇಕ ಗಣ್ಯರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಸಲ್ಲಿಸಿರುವ ಸೇವೆ ಅನನ್ಯವಾದದ್ದು ಎಂದು ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending