ರಾಜಕೀಯ

ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

Published

on

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.

ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version