ದಿನದ ಸುದ್ದಿ
ಕ್ಯಾನ್ಸರ್ ಪೀಡಿತನಿಗೆ ಔಷಧಿ ತಲುಪಿಸಿ ಮಾನವೀಯತೆ ಮೆರೆದ ಸಿಬ್ಬಂದಿ
ಸುದ್ದಿದಿನ,ಧಾರವಾಡ : ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಅವಧಿಯಲ್ಲಿ ಬಿಡುವಿಲ್ಲದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದೀಪಾಚೋಳನ್ ಹಾಗೂ ಅವರ ಸಿಬ್ಬಂದಿ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಾನವೀಯತೆಯಿಂದ ವೃದ್ಧೆಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸಿ, ಕ್ಯಾನ್ಸರ್ ಪೀಡಿತ ವ್ಯಕ್ತಿಗೆ ಬೆಂಗಳೂರಿನಿಂದ ಔಷಧಿ ತರಿಸಿ ಕೊಟ್ಟಿದ್ದಾರೆ.
ನಗರದ ಚರಂತಿಮಠ ಗಾರ್ಡನ್ನಿನ ಜೈ ಜಿನೇಂದ್ರ ಕಾಲನಿಯ ನಿವಾಸಿ ಶಕುಂತಲಾ ಎಂಬ ವಯೋವೃದ್ಧ ಮಹಿಳೆಯೊಬ್ಬರು ಕಳೆದ ನಾಲ್ಕೈದು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಕ್ಯಾನ್ಸರ್ ಪೀಡಿತನಾಗಿರುವ ತನ್ನ 27 ವರ್ಷದ ಮೊಮ್ಮಗ ಸುನೀಲ ಅವಾರಿಗೆ ಔಷಧಿ ತೆಗೆದುಕೊಂಡು ಬರಲು ವಾಹನ ಪಾಸ್ ಪಡೆಯಲು ಬಂದಾಗ, ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ತನ್ನ ಸಮಸ್ಯೆಗಳನ್ನು ನಿವೇದಿಸಿಕೊಂಡಿದ್ದರು. ಆಗ ಜಿಲ್ಲಾಧಿಕಾರಿಗಳು ಪಾಸ್ ವಿತರಣೆ ವಿಭಾಗದ ಸಿಬ್ಬಂದಿಯನ್ನು ಕರೆದು ಈ ಅಜ್ಜಿಗೆ ಸಹಾಯ ಮಾಡಲು ಸೂಚಿಸಿದರು.
ಕ್ಯಾನ್ಸರ್ ಪೀಡಿತನಾಗಿರುವ ಮೊಮ್ಮಗನಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 30 ಸಾವಿರ ರೂ.ಮೌಲ್ಯದ ಔಷಧಿ,ಮಾತ್ರೆಗಳು ಬೇಕಾಗುತ್ತದೆ.ಕಿದ್ವಾಯಿಯಲ್ಲಿ ಈ ಮಾತ್ರೆಗಳು ಅಲ್ಲಿನ ವೈದ್ಯರಾದ ಡಾ.ಶ್ಯಾಮಸುಂದರ ಅವರ ಸಹಾಯದಿಂದ ತಮಗೆ ಉಚಿತವಾಗಿ ಸಿಗುತ್ತಿವೆ.ಪ್ರತಿ ತಿಂಗಳು ಆ ವೈದ್ಯರೇ ಬಸ್ ಚಾರ್ಜ್ ಸಹ ನೀಡಿ ಉಪಕರಿಸುತ್ತಿರುವುದನ್ಮು ವಿವರಿಸಿದ್ದಾಳೆ.
ಈಗ ತನಗೆ ಬಾಡಿಗೆ ಕಾರು ತೆಗೆದುಕೊಂಡು ಬೆಂಗಳೂರಿಗೆ ಹೋಗಿ ಔಷಧಿ ತರುವ ಸಾಮರ್ಥ್ಯವೂ ಇಲ್ಲ ಎಂಬುದನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗೆ ಹೇಳಿದ್ದಾಳೆ. ಮಾನವೀಯತೆಯಿಂದ ಈ ಪ್ರಕರಣದಲ್ಲಿ ಸಹಾಯ ಮಾಡಲು ನಿರ್ಧರಿಸಿದ ಸಿಬ್ಬಂದಿ, ಅನಿವಾರ್ಯ ಕಾರಣದಿಂದ ಬೆಂಗಳೂರಿಗೆ ಹೋಗಲು ಪಾಸ್ ಕೇಳಲು ಬಂದ ಜಿಲ್ಲಾ ಖಜಾನೆಯ ಸಿಬ್ಬಂದಿಯೊಬ್ಬರ ಮೂಲಕ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ಔಷಧಿ ತೋರಿಸಿಕೊಟ್ಟಿದ್ದಾರೆ.
ಉಚಿತ ಪರೀಕ್ಷೆ
ಔಷಧಿ ಬಂದ ನಂತರ ಅದನ್ನು ನೇರವಾಗಿ ರೋಗಿಗೆ ಕೊಡುವ ಮೊದಲು ರಕ್ತ ಪರೀಕ್ಷೆಯೊಂದು ಕಡ್ಡಾಯವಾಗಿತ್ತು. ಆಗ ನವನಗರದ ಕ್ಯಾನ್ಸರ್ ಆಸ್ಪತ್ರೆಯ ಡಾ.ಉಮೇಶ ಹಳ್ಳಿಕೇರಿಯವರನ್ನು ಸಂಪರ್ಕಿಸಿದಾಗ ಅವರೂ ಕೂಡ ಉಚಿತವಾಗಿ ಪರೀಕ್ಷೆ ಮಾಡಿ ವರದಿ ನೀಡಿದ ನಂತರ , ಆ ವರದಿಯನ್ನು ಬೆಂಗಳೂರಿನ ತಜ್ಞ ವೈದ್ಯರಾದ ಡಾ.ಶಾಮಸುಂದರ್ ಅವರಿಗೆ ವಾಟ್ಸಪ್ ಮೂಲಕ ಕಳುಹಿಸಿ, ಅವರ ಸಲಹೆ ಪಡೆದ ನಂತರ ರೋಗಿಗೆ ಔಷಧಿ ತೆಗೆದುಕೊಳ್ಳಲು ಸಾಧ್ಯವಾಗಿದೆ.
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅವರ ಕಚೇರಿಯ ಪಾಸ್ ವಿತರಣಾ ವಿಭಾಗದ ನೋಡಲ್ ಅಧಿಕಾರಿ ದೀಪಕ ಮಡಿವಾಳರ, ತಹಸೀಲ್ದಾರ ಪ್ರವೀಣ ಹುಚ್ಚಣ್ಣವರ, ಕೆ.ಎ.ಜಂಗೂರ, ಧರಣೇಂದ್ರ ಕಸಮಾಳಗಿ, ಇಸ್ಮಾಯಿಲ್ ಮಳಲಿ, ಜಿ.ಬಿ.ಪಾಟೀಲ, ಅರವಿಂದ, ಸುನೀಲ ,ಅಶೋಕ ನಿಂಗೋಳಿ ಮತ್ತಿತರರು ಮುತುವರ್ಜಿ ವಹಿಸಿ ತನ್ನ ಮೊಮ್ಮಗನ ಚಿಕಿತ್ಸೆಗೆ ನೆರವಾಗಿದ್ದನ್ನು ಇಂದು ವಯೋವೃದ್ಧ ಅಜ್ಜಿ ಶಕುಂತಲಾ ಸ್ವತಃ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನದುಂಬಿ ಸ್ಮರಿಸಿ,ಕೃತಜ್ಞತೆ ಸಲ್ಲಿಸಿದಳು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

