ದಿನದ ಸುದ್ದಿ

ದಾವಣಗೆರೆ | ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾಸಮಿತಿಯಿಂದ ಪಾದಯಾತ್ರೆ ಆರಂಭ

Published

on

ಸುದ್ದಿದಿನ,ದಾವಣಗೆರೆ: ನಗರದ ಮಟ್ಟಿಕಲ್ಲು ಬಸವೇಶ್ವರ ದೇವಸ್ಥಾನದಿಂದ ಮಂಗಳವಾರ ಬೆಳಗ್ಗೆ 7.30 ಕ್ಕೆ 80 ಭಕ್ತಾದಿಗಳು ಪಾದಯಾತ್ರೆ ಆರಂಭಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಸಮಿತಿವತಿಯಿಂದ ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ 9ನೇವರ್ಷದ ಪಾದಯಾತ್ರೆಯನ್ನು ಮಟ್ಟಿಕಲ್ಲು ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಾವಣಗೆರೆ ನಗರಪಾಲಿಕೆ ಮಾಜಿ ಸದಸ್ಯರಾದ ಶ್ರೀ ರಮೇಶ್ ನಾಯ್ಕರವರು ಚಾಲನೆ ನೀಡಿದರು.

ಚನ್ನಗಿರಿ | ಕುಡಿಯುವ ನೀರಿಗೆ ರೂ.5.47 ಕೋಟಿ ಹಣ ಮಂಜೂರು: ಸಚಿವ ಭೈರತಿ ಬಸವರಾಜ್

ಪಾದಯಾತ್ರಿಗಳು ಬಾಡ, ಸಂತೇಬೆನ್ನೂರು, ಚನ್ನಗಿರಿ, ಅಜ್ಜಂಪುರ, ಕಡೂರು, ಕೊಟ್ಟಿಗೆಹಾರ, ಉಜಿರೆ ಮಾರ್ಗವಾಗಿ ಮಾರ್ಚ್ 10ನೆ ತಾರೀಖಿನಂದು ಧರ್ಮಸ್ಥಳ ತಲುಪುವರು ಈ ಪಾದಯಾತ್ರೆಗೆ ದಾವಣಗೆರೆ ಮತ್ತು ಹರಿಹರದ ಸುಮಾರು 80 ಜನ ಭಕ್ತಾದಿಗಳು ಪಾದಯಾತ್ರಿ ಸೇವಾ ಸಮಿತಿಯ ರಾಜನಾಯ್ಕ, ಶಿವಾಜಿ, ಎ.ಬಿ.ಚಂದ್ರಪ್ಪ, ವೇಣುಗೋಪಾಲ್, ಕೃಷ್ಣ, ಅರುಣ್ ಹಿರೇಮಠ ಮುಂತಾದವರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version