ದಿನದ ಸುದ್ದಿ
ಸಾಹಿತ್ಯ ಸಮ್ಮೇಳನ | ಡಾ.ಕಂಬಾರ ವಿರಚಿತ ‘ಶಿವರಾತ್ರಿ’ ನಾಟಕ ಯಶಸ್ವಿ ಪ್ರಯೋಗ
![](https://suddidina.com/wp-content/uploads/2019/01/Dharwad-suddidina78.jpg)
ಸುದ್ದಿದಿನ,ಧಾರವಾಡ,ರಂಗಾಯಣ ನಾಟಕ ವೇದಿಕೆ :84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ರಚಿತ ಶಿವರಾತ್ರಿ ನಾಟಕವನ್ನು, ಧಾರವಾಡದ ರಂಗಾಯಣ ಬಯಲು ರಂಗ ಮಂದಿರದಲ್ಲಿ ಕೊಪ್ಪಳದ ಶಿಕ್ಷಕರ ಕಲಾ ಸಂಘದ ಕಲಾವಿದರಿಂದ ಪ್ರದರ್ಶನಗೊಂಡು ರಂಗಾಸಕ್ತರ ಮನತಣಿಸುವಲ್ಲಿ ಯಶಸ್ವಿಯಾಯಿತು.
ದೇಶಿ ಭಾಷೆಯ ಸೊಗಡುಳ್ಳ ಈ ನಾಟಕದಲ್ಲಿ ಕಲ್ಯಾಣ ಕ್ರಾಂತಿಯ ವಿವಿಧ ಆಯಾಮಗಳನ್ನು ರಂಗನಟರು ಮನೋಜ್ಙವಾಗಿ ನಿರೂಪಿಸಿದರು. ಬಿಜ್ಜಳ ಮತ್ತು ಬಸವಣ್ಣನ ನಡುವೆ ಮನಸ್ತಾಪ ಉಂಟಾಗಿ ಸೂಳೆ ಸಾವಂತ್ರಿ ಮನೆಯಲ್ಲಿ ಚರ್ಚೆ ಸಾಗುತ್ತ, ಸೂಳೆ ಸಾವಂತ್ರಿಗೆ ಬಸವಣ್ಣನೆಂದರೆ ಭಕ್ತಿ. ಸೂಳೆ ಸಾವಂತ್ರಿಯು ತನ್ನ ವೇಶ್ಯೆ ಕಾಯಕದಿಂದ ಬಂದ ಹಣದಿಂದ ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಾಳೆ. ಇದನ್ನು ಬಸವಣ್ಣನವರು ಮೆಚ್ಚಿ ಆಕೆಯನ್ನು ತಾಯಿ ಎಂದು ಕರೆದು ನಮಸ್ಕರಿಸುತ್ತಾರೆ. ಕೊನೆಗೆ ಬಿಜ್ಜಳನ ಆಜ್ಙೆಯಂತೆ ಬಸವಣ್ಣನವರು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟು ಕೂಡಲಸಂಗಮಕ್ಕೆ ಹೋಗುತ್ತಾರೆ. ಬಿಜ್ಜಳನು ಪಾಶ್ಚಾತಾಪದಿಂದ ಬಳಲುತ್ತ, ವೈರಿಗಳಿಂದ ಹತ್ಯೆಗೊಳಗಾಗುತ್ತಾನೆ.
ಬಸವಣ್ಣನವರ ಪಾತ್ರದಲ್ಲಿ ರಾಮಣ್ಣ ಶ್ಯಾವಿ, ಬಿಜ್ಜಳನ ಪಾತ್ರದಲ್ಲಿ ಮಂಜುನಾಥ ಪೂಜಾರ, ಜಗದೇವವಾಗಿ ನಾಗರಾಜನಾಯಕ ಡಿ.ಡೊಳ್ಳಿನ, ಹರಿಹರನಾಗಿ ಪ್ರಾಣೇಶ ಪೂಜಾರ, ಮಲ್ಲಿಬೊಮ್ಮಣ್ಣನಾಗಿ ಗುರುರಾಜ, ಸೂಳೆ ಸಾವಂತ್ರಿಯ ಪಾತ್ರದಲ್ಲಿ ಜಯಶ್ರೀ ಸಿಂಧನೂರ, ಹುಚ್ಚಿಯಾಗಿ ವಿಜಯಲಕ್ಷ್ಮೀ ಕೂಟಗಿ, ನಟಿಯಾಗಿ ಸುಮಾ ವೈಶಂಪಾಯನ, ಮುಗ್ಧ ಸಂಗಯ್ಯನಾಗಿ ದಯಾನಂದ ಸಾಗರ, ಕಲ್ಲಪ್ಪನ ಪಾತ್ರದಲ್ಲಿ ಮುಕುಂದ, ಮುದುಕಪ್ಪನಾಗಿ ಯೋಗಾನರಸಿಂಹ, ದಾಮೋದರನಾಗಿ ರಮೇಶ ಪೂಜಾರ, ಕಾಶವ್ವನ ಪಾತ್ರದಲ್ಲಿ ಅಂಜನಾದೇವಿ, ಕಾಮಾಕ್ಷಿಯಾಗಿ ಜ್ಯೋತಿ, ನಂದೀಶ ಮತ್ತು ಅಳ್ಳೂರಪ್ಪ ಕೋಟೆ ಅವರು ರಾಜಭಟರ ಪಾತ್ರವರ್ಗದಲ್ಲಿ ಅಭಿನಯಿಸಿ ತಮ್ಮ ತಮ್ಮ ಪಾತ್ರಗಳಿಗೆ ಜೀವ ತುಂಬಿದರು.
ಫಕೀರಪ್ಪ ಗುಳದಳ್ಳಿ ಅವರು ಸಂಗೀತ ಸಂಯೋಜನೆ ಮಾಡಿದರು. ಉಪೇಂದ್ರ ಅವರು ನಿರ್ದೇಶಿಸಿದರು. ವಸ್ತ್ರ ವಿನ್ಯಾಸ, ಪ್ರಸಾದನವನ್ನು ರಮೇಶ ಬಾನವಳ್ಳಿ ನೆರವೇರಿಸಿದರು.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!