Connect with us

ದಿನದ ಸುದ್ದಿ

ಸಕ್ಕರೆ ಕಾಯಿಲೆ ಸುತ್ತ ಮುತ್ತ..! ; ಹುಷಾರಾಗಿರಿ..!

Published

on

ಪ್ರಪಂಚದಲ್ಲಿ ಅತಿ ಹೆಚ್ಚು ಸಕ್ಕರೆ ಕಾಯಿಲೆ ಇರುವ ನಂಬರ್ ಒನ್ ದೇಶ ಚೀನಾ, ಭಾರತ ಎರಡನೇ ಸ್ಥಾನದಲ್ಲಿದೆ. 2025 ರಲ್ಲಿ ಭಾರತವೇ ನಂಬರ್ ಒನ್ ಆಗಲಿದೆ ಎಂದು ವೈದ್ಯಕೀಯ ಜಗತ್ತು ಹೇಳುತ್ತಿದೆ. ನಮ್ಮ ದೇಶದಲ್ಲಿ ಸಾಕಷ್ಟು ಆಸ್ಪತ್ರೆಗಳಿವೆ. ಸಾಕಷ್ಟು ವೈದ್ಯರಿದ್ದಾರೆ. ಪ್ರತಿಯೊಂದು ಕಾಯಿಲೆಗೂ ಉತ್ತಮವಾದ ಔಷಧಿಗಳೂ ಇವೆ.

ಒಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರ ಅತ್ಯಂತ ಮುಂದುವರೆದಿದೆ. ಆದರೂ ಬಿಪಿ ಶುಗರ್ ನಿಯಂತ್ರಣ ಏಕೆ ಸಾಧ್ಯವಾಗುತ್ತಿಲ್ಲ. ಇಂದಿಗೂ ಅನೇಕ ವೈದ್ಯರು ಬಿಪಿ ಶುಗರ್ ಕಾಯಿಲೆಗೆ ಔಷಧಿ ಜೀವನ ಪರ್ಯಂತರ ತೆಗೆದುಕೊಳ್ಳಲೇಬೇಕೆಂದು ಏಕೆ ಹೇಳುತ್ತಿದ್ದಾರೆ? ಈ ಬಗ್ಗೆ ಆಳವಾಗಿ ನೋಡಿದಾಗ ಪ್ರಮುಖವಾಗಿ ಇಂದಿನ ಅಧಿಕ ಜನರು ಅಧಿಕ ಆಹಾರ ಸೇವಿಸುತ್ತಿದ್ದಾರೆ. ಪದೇ ಪದೇ ಆಹಾರ ಸೇವಿಸುತ್ತಿದ್ದಾರೆ. ಪ್ರತಿದಿನ ಮೂರು ಹೊತ್ತು ಊಟ ಮಾಡಲೇಬೇಕು. ಹಸಿವೆ ಇರಲಿ ಇಲ್ಲದಿರಲಿ ಆಹಾರ ಸೇವಿಸುತ್ತಿದ್ದಾರೆ. ಅದರಲ್ಲೂ ಪ್ರಕೃತಿಯಿಂದ ಗಿಡ ಮರಗಳಿಂದ ಬರುವ ಆಹಾರವನ್ನು ನೇರವಾಗಿ ಸೇವಿಸುತ್ತಿಲ್ಲ. ಪ್ರತಿಯೊಂದು ಆಹಾರವೂ ಪ್ರೊಸೆಸ್ಡ್ ಪ್ಯಾಕ್ಡ್ ಆಗಿ ಬರುತ್ತಿದೆ. ಅದರಲ್ಲೂ ಎಣ್ಣೆಯಲ್ಲಿ ಕರಿದ, ಮಸಾಲೆಯಿಂದ ರುಚಿಕರವಾದ ಆಹಾರವೇ ಬೇಕು. ಉಪವಾಸ ಮಾಡುವವರು ಅತಿ ಕಡಿಮೆಯಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಜನರಲ್ಲಿ ಅಧಿಕ ಹಣವಿದೆ. ಆಹಾರದ ಕೊರತೆಯಿಲ್ಲ. ಮನೆಯಲ್ಲಿ ಊಟವಿಲ್ಲವೆಂದರೆ ಹೋಟೆಲ್ಗೆ ಹೋಗಿ ಊಟ ಮಾಡುತ್ತಾರೆ. ಖಾಲಿ ಹೊಟ್ಟೆಯಲ್ಲಿ ಮಾತ್ರ ಇರುವುದಿಲ್ಲ.

ದೇಶದ ಶೇಕಡ 20 ರಷ್ಟು ಜನರಿಗೆ ತಮಗೆ ಬಿಪಿ ಮತ್ತು ಸಕ್ಕರೆ ಕಾಯಿಲೆ ಇರುವ ಬಗ್ಗೆ ಅರಿವೆಯೇ ಇರುವುದಿಲ್ಲ. ಶೇ.20 ರಷ್ಟು ಜನರು ತಮಗೆ ಬಿಪಿ ಅಥವಾ ಶುಗರ್ ಕಾಯಿಲೆ ಇಲ್ಲದೆ ಇದ್ದರೂ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 50 ರಷ್ಟು ಜನರು ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳದೇ ಬಿಪಿ ಸಕ್ಕರೆ ಕಾಯಿಲೆಗೆ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 30 ರಷ್ಟು ಜನರು ಅನವಶ್ಯಕ ಅತಿಯಾದ ನಿರಂತರ ಔಷಧಿಗಳ ಸೇವನೆಯಿಂದ ಹೈಬಿಪಿ ಮತ್ತು ಶುಗರ್ ಕಾಯಿಲೆಗೆ ಈಡಾಗುತ್ತಿದ್ದಾರೆ. ಬಿಪಿ ಮತ್ತು ಶುಗರ್ ಕಾಯಿಲೆ ಇವೆರಡೂ ಅಣ್ಣ ತಮ್ಮಂದಿರಿದ್ದಂತೆ. ಒಂದು ಬಂದರೆ ಇನ್ನೊಂದು ಬರಲೇಬೇಕು. ಇವೆರಡೂ ಬಂದಾಗ ಇತರೆ ಎಲ್ಲಾ ಕಾಯಿಲೆಗಳು ಒಂದೊಂದಾಗಿ ಬರುತ್ತವೆ.

ನಮ್ಮ ದೇಹದಲ್ಲಿರುವ ಮೇದೋಜೀರಕ ಗ್ರಂಥಿಯು (pancreatitis) ಶುಗರ್ ಕಾಯಿಲೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಮೆದೋಜೀರಕ ಗ್ರಂಥಿಯು ಆಹಾರ ಜೀರ್ಣಗೊಳಿಸಲು ಕೆಲವು ರಾಸಾಯನಿಕಗಳನ್ನು ಉತ್ಪತ್ತಿ ಮಾಡುತ್ತದೆ. ಜೊತೆಗೆ ಇನ್ಸುಲಿನ್ ಉತ್ಪಾದಿಸುವ ಕೆಲಸವನ್ನೂ ಇದು ಮಾಡುತ್ತದೆ. ನಾವು ಸೇವಿಸುವ ಕೆಟ್ಟ ಆಹಾರದಿಂದ, ಕೆಟ್ಟ ಜೀವನ ಶೈಲಿಯಿಂದ ಈ ಮೆದೋಜೀರಕ ಗ್ರಂಥಿಯು ಬಲಹೀನಗೊಂಡು ಇನ್ಸುಲಿನ್ ಅನ್ನು ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವದನ್ನೇ ನಿಲ್ಲಿಸಿ ಬಿಡುತ್ತದೆ. ಆಗಲೇ ಶುಗರ್ ಕಾಯಿಲೆ ನಮಗೆ ಬರುತ್ತದೆ.

ನಾನು ಈ ಲೇಖನದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಮಾಹಿತಿ ಒದಗಿಸಿರುತ್ತೇನೆ. ನಾನು ತಿಳಿಸಿರುವ ಈ ಚಿಕಿತ್ಸಾ ಪದ್ಧತಿಯು ವಿಶ್ವದಲ್ಲಿಯೇ ಶ್ರೇಷ್ಠ ಚಿಕಿತ್ಸಾ ಪದ್ದತಿಯಾಗಿದೆ. ಇದನ್ನು 100% ಪಾಲಿಸುವ ಮೂಲಕ ನಿಮ್ಮ ಶುಗರ್ ಕಾಯಿಲೆಯನ್ನು 100% ಕಂಟ್ರೋಲ್ನಲ್ಲಿ ಇಡಬಹುದು. ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ನಿಮ್ಮ ಅನುಭವಕ್ಕೆ ಬರುತ್ತದೆ. ಅವರವರ ದೇಹ ಪ್ರಕೃತಿಗೆ ಅನುಗುಣವಾಗಿ ನಿಯಂತ್ರಣ ಹೊಂದಲು, ಗುಣಮುಖ ಹೊಂದಲು ಹೆಚ್ಚು ಕಡಿಮೆ ಸಮಯ ತೆಗೆದುಕೊಳ್ಳಬಹುದು. ಆದರೆ, ಶಾಶ್ವತ ಪರಿಹಾರ ಸಿಗುತ್ತದೆ.

ಸಕ್ಕರೆ ಕಾಯಿಲೆ ಎಂದರೇನು?

ಅಧಿಕ ಸಕ್ಕರೆ ಸೇವನೆಯಿಂದ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅನೇಕರು ತಿಳಿದುಕೊಂಡಿದ್ದಾರೆ. ಆದರೆ, ಇದು ತಪ್ಪು. ಏಕೆಂದರೆ ನಾವು ಪ್ರತಿ ದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸೇವಿಸುವ ಎಲ್ಲಾ ಆಹಾರಗಳು ಕಾರ್ಬೋಹೈಡ್ರೇಟ್ ಎಂಬ ಸಕ್ಕರೆ ಅಂಶವನ್ನು ಹೊಂದಿರುತ್ತವೆ. ಅಂದರೆ, ನಾವು ಪ್ರತಿ ದಿನ ಸೇವಿಸುವ ಅನ್ನ, ಚಪಾತಿ, ಇಡ್ಲಿ, ವಡಾ, ದೋಸೆ ಇತರೆ ಎಲ್ಲವುಗಳಲ್ಲೂ ಶೇ.50 ಕ್ಕಿಂತ ಹೆಚ್ಚು ಸಕ್ಕರೆ ಅಂಶವಿರುತ್ತದೆ. ಈ ಆಹಾರ ಸೇವಿಸಿದಾಗ ಜೀರ್ಣಗೊಂಡು ಗ್ಲುಕೋಸ್ ರೂಪದಲ್ಲಿ ಪರಿವರ್ತನೆ ಹೊಂದಿ ರಕ್ತ ಸೇರುತ್ತದೆ. ರಕ್ತ ಸೇರಿದ ಈ ಗ್ಲುಕೋಸನ್ನು ಮೆದೋಜೀರಕ ಗ್ರಂಥಿ ಬಿಡುಗಡೆ ಮಾಡುವ ಇನ್ಸುಲಿನ್ ಎಂಬ ಹಾರ್ಮೋನು ರಕ್ತದ ಮೂಲಕ ಶರೀರದ ಎಲ್ಲಾ ಜೀವಕೋಶಗಳಿಗೆ ತಲುಪಿಸುತ್ತದೆ. ಆಗಲೇ ನಮಗೆ ಶಕ್ತಿ ಬರುತ್ತದೆ. ಈ ಗ್ಲುಕೋಸ್ ಜೀವಕೋಶಗಳಿಗೆ ತಲುಪದೇ ರಕ್ತದಲ್ಲಿಯೇ ಅಧಿಕವಾಗಿ ಸಂಗ್ರಹವಾಗುವುದನ್ನು ಸಕ್ಕರೆ ಕಾಯಿಲೆ ಎನ್ನುವರು.

ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದರೇನು?

ಕೆಲವು ಕಾರಣಗಳಿಂದ ಮೆದೋಜೀರಕ ಗ್ರಂಥಿಯು ಇನ್ಸುಲಿನ್ ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವುದನ್ನೆ ನಿಲ್ಲಿಸಿಬಿಡುತ್ತದೆ. ಆಗ ರಕ್ತದಲ್ಲಿರುವ ಗ್ಲುಕೋಸ್ ಉಪಯೋಗವಾಗದೆ ರಕ್ತದಲ್ಲಿಯೇ ಅಧಿಕವಾಗಿ ಉಳಿದುಬಿಡುತ್ತದೆ. ಇದನ್ನು ಟೈಪ್-1 ಡಯಾಬಿಟೀಸ್ ಎನ್ನುವರು. ಇದು ಮಕ್ಕಳಲ್ಲಿ ಅತಿ ಹೆಚ್ಚಾಗಿ ಕಂಡುಬರುತ್ತದೆ. ಕೆಲವರಲ್ಲಿ ಮೇದೋಜೀರಕ ಗ್ರಂಥಿ ಅಗತ್ಯ ಇನ್ಸುಲಿನ್ ಉತ್ಪಾದಿಸಿದರೂ ಗ್ಲುಕೋಸ್ ಉಪಯೋಗಿಸಿಕೊಳ್ಳಲು ಜೀವಕೋಶಗಳು ವಿಫಲವಾಗುತ್ತವೆ. ಇದರಿಂದಲೂ ರಕ್ತದಲ್ಲಿ ಅಧಿಕ ಗ್ಲುಕೋಸ್ ಸಂಗ್ರಹವಾಗುತ್ತದೆ. ಇದನ್ನೇ ಟೈಪ್-2 ಡಯಾಬಿಟೀಸ್ ಎನ್ನುವರು. ಇದು ಇಂದು ಎಲ್ಲರಲ್ಲೂ ಅತೀ ಹೆಚ್ಚಾಗಿ ಕಂಡುಬರುತ್ತಿದೆ.

ಸಕ್ಕರೆ ಕಾಯಿಲೆಯ ಲಕ್ಷಣಗಳು

ಅತಿಯಾದ ಹಸಿವು, ಪದೇ ಪದೇ ಮೂತ್ರ ವಿಸರ್ಜನೆ, ತೂಕ ಕಡಿಮೆಯಾಗುವುದು, ಗಾಯ ವಾಸಿಯಾಗಲು ವಿಳಂಬ, ಕಣ್ಣು ಮಂಜಾಗುವುದು, ಇವು ಸಕ್ಕರೆ ಕಾಯಿಲೆಯ ಪ್ರಮುಖ ಲಕ್ಷಗಳಾಗಿವೆ. ಇವುಗಳಲ್ಲಿ ಕೆಲವು ಲಕ್ಷಣಗಳು ಕಾಣದೇ ಇರಬಹುದು. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಲ್ಲಿ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.

ಸಕ್ಕರೆ ಕಾಯಿಲೆ ಬರಲು ಕಾರಣವೇನು?

ಪ್ರಮುಖವಾಗಿ ಎರಡು ಕಾರಣಗಳಿಂದ ಸಕ್ಕರೆ ಕಾಯಿಲೆ ಬರುತ್ತದೆ. ತಪ್ಪಾದ ಆಹಾರ ಸೇವನೆ ಮತ್ತು ತಪ್ಪಾದ ಜೀವನ ಶೈಲಿಯಿಂದ ಸಕ್ಕರೆ ಕಾಯಿಲೆ ಬರುತ್ತದೆ. ಪ್ರೊಸೆಸ್ಡ್ ಪ್ಯಾಕ್ಡ್ ಫುಡ್ ಸೇವನೆ, ಕರಿದ ಹುರಿದ ಆಹಾರ, ಅತಿಯಾದ ಆಹಾರ, ಪದೇ ಪದೇ ಆಹಾರ ಸೇವನೆ, ತೂಕ ಹೆಚ್ಚಳ, ಅನವಶ್ಯಕ ಅತಿಯಾದ ಔಷಧಿಗಳ ಸೇವನೆ, ರೋಗ ನಿರೋಧಕ ವ್ಯವಸ್ಥೆಯ ಅಸಮತೋಲನ, ಅನುವಂಶಿಕ, ಮಾನಸಿಕ ಒತ್ತಡ, ಮತ್ತು ದೈಹಿಕ ಶ್ರಮ ಇಲ್ಲದೇ ಇರುವುದು ಈ ಎಲ್ಲಾ ಕಾರಣಗಳಿಂದಲೂ ಸಕ್ಕರೆ ಕಾಯಿಲೆ ಬರುತ್ತದೆ.

ಸಕ್ಕರೆ ಕಾಯಿಲೆಯ ನಾರ್ಮಲ್ ರೇಂಜ್

ಖಾಲಿ ಹೊಟ್ಟೇಲಿ 100 ರೊಳಗೆ ಇದ್ದಲ್ಲಿ ನಾರ್ಮಲ್, ಊಟದ ನಂತರ 140 ರೊಳಗಿದ್ದಲ್ಲಿ ನಾರ್ಮಲ್ ಎಂದು ವೈದ್ಯಕೀಯ ಕ್ಷೇತ್ರವು ಪರಿಗಣಿಸಿದೆ. ನಿಮಗೆ ಖಾಲಿ ಹೊಟ್ಟೇಲಿ 100 ರಿಂದ 126 ರೊಳಗಿದ್ದಲ್ಲಿ ಮತ್ತು ಊಟದ ನಂತರ 140 ರಿಂದ 200ರ ರೊಳಗಿದ್ದಲ್ಲಿ ನಿಮಗೆ ಸಕ್ಕರೆ ಖಾಯಿಲೆ ಬರುವ ಸಂಭವವಿರುತ್ತದೆ. ಮುಂಜಾಗ್ರತೆಯಾಗಿ ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಆದರೆ, ಶುಗರ್ ಮಾತ್ರೆ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಖಾಲಿ ಹೊಟ್ಟೇಲಿ 126ರ ಮೇಲಿದ್ದಲ್ಲಿ ಮತ್ತು ಊಟದ ನಂತರ 200 ಕ್ಕಿಂತ ಮೇಲಿದ್ದಲ್ಲಿ ನಿಮಗೆ ಸಕ್ಕರೆ ಕಾಯಿಲೆ ಇದ್ದು, ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನ ಶೈಲಿಯಲ್ಲಿ ಬದಲಾವಣೆ ಜೊತೆಗೆ ಅಲ್ಪ ಪ್ರಮಾಣದ ಶುಗರ್ ಔಷಧ ತೆಗೆದುಕೊಳ್ಳಲೇಬೇಕು. (ಬರಹ :ಸೂರ್ಯಕಾಂತ ಸಜ್ಜನ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending