ದಿನದ ಸುದ್ದಿ
ಸಕ್ಕರೆ ಕಾಯಿಲೆ ಸುತ್ತ ಮುತ್ತ..! ; ಹುಷಾರಾಗಿರಿ..!

ಪ್ರಪಂಚದಲ್ಲಿ ಅತಿ ಹೆಚ್ಚು ಸಕ್ಕರೆ ಕಾಯಿಲೆ ಇರುವ ನಂಬರ್ ಒನ್ ದೇಶ ಚೀನಾ, ಭಾರತ ಎರಡನೇ ಸ್ಥಾನದಲ್ಲಿದೆ. 2025 ರಲ್ಲಿ ಭಾರತವೇ ನಂಬರ್ ಒನ್ ಆಗಲಿದೆ ಎಂದು ವೈದ್ಯಕೀಯ ಜಗತ್ತು ಹೇಳುತ್ತಿದೆ. ನಮ್ಮ ದೇಶದಲ್ಲಿ ಸಾಕಷ್ಟು ಆಸ್ಪತ್ರೆಗಳಿವೆ. ಸಾಕಷ್ಟು ವೈದ್ಯರಿದ್ದಾರೆ. ಪ್ರತಿಯೊಂದು ಕಾಯಿಲೆಗೂ ಉತ್ತಮವಾದ ಔಷಧಿಗಳೂ ಇವೆ.
ಒಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರ ಅತ್ಯಂತ ಮುಂದುವರೆದಿದೆ. ಆದರೂ ಬಿಪಿ ಶುಗರ್ ನಿಯಂತ್ರಣ ಏಕೆ ಸಾಧ್ಯವಾಗುತ್ತಿಲ್ಲ. ಇಂದಿಗೂ ಅನೇಕ ವೈದ್ಯರು ಬಿಪಿ ಶುಗರ್ ಕಾಯಿಲೆಗೆ ಔಷಧಿ ಜೀವನ ಪರ್ಯಂತರ ತೆಗೆದುಕೊಳ್ಳಲೇಬೇಕೆಂದು ಏಕೆ ಹೇಳುತ್ತಿದ್ದಾರೆ? ಈ ಬಗ್ಗೆ ಆಳವಾಗಿ ನೋಡಿದಾಗ ಪ್ರಮುಖವಾಗಿ ಇಂದಿನ ಅಧಿಕ ಜನರು ಅಧಿಕ ಆಹಾರ ಸೇವಿಸುತ್ತಿದ್ದಾರೆ. ಪದೇ ಪದೇ ಆಹಾರ ಸೇವಿಸುತ್ತಿದ್ದಾರೆ. ಪ್ರತಿದಿನ ಮೂರು ಹೊತ್ತು ಊಟ ಮಾಡಲೇಬೇಕು. ಹಸಿವೆ ಇರಲಿ ಇಲ್ಲದಿರಲಿ ಆಹಾರ ಸೇವಿಸುತ್ತಿದ್ದಾರೆ. ಅದರಲ್ಲೂ ಪ್ರಕೃತಿಯಿಂದ ಗಿಡ ಮರಗಳಿಂದ ಬರುವ ಆಹಾರವನ್ನು ನೇರವಾಗಿ ಸೇವಿಸುತ್ತಿಲ್ಲ. ಪ್ರತಿಯೊಂದು ಆಹಾರವೂ ಪ್ರೊಸೆಸ್ಡ್ ಪ್ಯಾಕ್ಡ್ ಆಗಿ ಬರುತ್ತಿದೆ. ಅದರಲ್ಲೂ ಎಣ್ಣೆಯಲ್ಲಿ ಕರಿದ, ಮಸಾಲೆಯಿಂದ ರುಚಿಕರವಾದ ಆಹಾರವೇ ಬೇಕು. ಉಪವಾಸ ಮಾಡುವವರು ಅತಿ ಕಡಿಮೆಯಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಜನರಲ್ಲಿ ಅಧಿಕ ಹಣವಿದೆ. ಆಹಾರದ ಕೊರತೆಯಿಲ್ಲ. ಮನೆಯಲ್ಲಿ ಊಟವಿಲ್ಲವೆಂದರೆ ಹೋಟೆಲ್ಗೆ ಹೋಗಿ ಊಟ ಮಾಡುತ್ತಾರೆ. ಖಾಲಿ ಹೊಟ್ಟೆಯಲ್ಲಿ ಮಾತ್ರ ಇರುವುದಿಲ್ಲ.
ದೇಶದ ಶೇಕಡ 20 ರಷ್ಟು ಜನರಿಗೆ ತಮಗೆ ಬಿಪಿ ಮತ್ತು ಸಕ್ಕರೆ ಕಾಯಿಲೆ ಇರುವ ಬಗ್ಗೆ ಅರಿವೆಯೇ ಇರುವುದಿಲ್ಲ. ಶೇ.20 ರಷ್ಟು ಜನರು ತಮಗೆ ಬಿಪಿ ಅಥವಾ ಶುಗರ್ ಕಾಯಿಲೆ ಇಲ್ಲದೆ ಇದ್ದರೂ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 50 ರಷ್ಟು ಜನರು ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳದೇ ಬಿಪಿ ಸಕ್ಕರೆ ಕಾಯಿಲೆಗೆ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 30 ರಷ್ಟು ಜನರು ಅನವಶ್ಯಕ ಅತಿಯಾದ ನಿರಂತರ ಔಷಧಿಗಳ ಸೇವನೆಯಿಂದ ಹೈಬಿಪಿ ಮತ್ತು ಶುಗರ್ ಕಾಯಿಲೆಗೆ ಈಡಾಗುತ್ತಿದ್ದಾರೆ. ಬಿಪಿ ಮತ್ತು ಶುಗರ್ ಕಾಯಿಲೆ ಇವೆರಡೂ ಅಣ್ಣ ತಮ್ಮಂದಿರಿದ್ದಂತೆ. ಒಂದು ಬಂದರೆ ಇನ್ನೊಂದು ಬರಲೇಬೇಕು. ಇವೆರಡೂ ಬಂದಾಗ ಇತರೆ ಎಲ್ಲಾ ಕಾಯಿಲೆಗಳು ಒಂದೊಂದಾಗಿ ಬರುತ್ತವೆ.
ನಮ್ಮ ದೇಹದಲ್ಲಿರುವ ಮೇದೋಜೀರಕ ಗ್ರಂಥಿಯು (pancreatitis) ಶುಗರ್ ಕಾಯಿಲೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಮೆದೋಜೀರಕ ಗ್ರಂಥಿಯು ಆಹಾರ ಜೀರ್ಣಗೊಳಿಸಲು ಕೆಲವು ರಾಸಾಯನಿಕಗಳನ್ನು ಉತ್ಪತ್ತಿ ಮಾಡುತ್ತದೆ. ಜೊತೆಗೆ ಇನ್ಸುಲಿನ್ ಉತ್ಪಾದಿಸುವ ಕೆಲಸವನ್ನೂ ಇದು ಮಾಡುತ್ತದೆ. ನಾವು ಸೇವಿಸುವ ಕೆಟ್ಟ ಆಹಾರದಿಂದ, ಕೆಟ್ಟ ಜೀವನ ಶೈಲಿಯಿಂದ ಈ ಮೆದೋಜೀರಕ ಗ್ರಂಥಿಯು ಬಲಹೀನಗೊಂಡು ಇನ್ಸುಲಿನ್ ಅನ್ನು ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವದನ್ನೇ ನಿಲ್ಲಿಸಿ ಬಿಡುತ್ತದೆ. ಆಗಲೇ ಶುಗರ್ ಕಾಯಿಲೆ ನಮಗೆ ಬರುತ್ತದೆ.
ನಾನು ಈ ಲೇಖನದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಮಾಹಿತಿ ಒದಗಿಸಿರುತ್ತೇನೆ. ನಾನು ತಿಳಿಸಿರುವ ಈ ಚಿಕಿತ್ಸಾ ಪದ್ಧತಿಯು ವಿಶ್ವದಲ್ಲಿಯೇ ಶ್ರೇಷ್ಠ ಚಿಕಿತ್ಸಾ ಪದ್ದತಿಯಾಗಿದೆ. ಇದನ್ನು 100% ಪಾಲಿಸುವ ಮೂಲಕ ನಿಮ್ಮ ಶುಗರ್ ಕಾಯಿಲೆಯನ್ನು 100% ಕಂಟ್ರೋಲ್ನಲ್ಲಿ ಇಡಬಹುದು. ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ನಿಮ್ಮ ಅನುಭವಕ್ಕೆ ಬರುತ್ತದೆ. ಅವರವರ ದೇಹ ಪ್ರಕೃತಿಗೆ ಅನುಗುಣವಾಗಿ ನಿಯಂತ್ರಣ ಹೊಂದಲು, ಗುಣಮುಖ ಹೊಂದಲು ಹೆಚ್ಚು ಕಡಿಮೆ ಸಮಯ ತೆಗೆದುಕೊಳ್ಳಬಹುದು. ಆದರೆ, ಶಾಶ್ವತ ಪರಿಹಾರ ಸಿಗುತ್ತದೆ.
ಸಕ್ಕರೆ ಕಾಯಿಲೆ ಎಂದರೇನು?
ಅಧಿಕ ಸಕ್ಕರೆ ಸೇವನೆಯಿಂದ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅನೇಕರು ತಿಳಿದುಕೊಂಡಿದ್ದಾರೆ. ಆದರೆ, ಇದು ತಪ್ಪು. ಏಕೆಂದರೆ ನಾವು ಪ್ರತಿ ದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸೇವಿಸುವ ಎಲ್ಲಾ ಆಹಾರಗಳು ಕಾರ್ಬೋಹೈಡ್ರೇಟ್ ಎಂಬ ಸಕ್ಕರೆ ಅಂಶವನ್ನು ಹೊಂದಿರುತ್ತವೆ. ಅಂದರೆ, ನಾವು ಪ್ರತಿ ದಿನ ಸೇವಿಸುವ ಅನ್ನ, ಚಪಾತಿ, ಇಡ್ಲಿ, ವಡಾ, ದೋಸೆ ಇತರೆ ಎಲ್ಲವುಗಳಲ್ಲೂ ಶೇ.50 ಕ್ಕಿಂತ ಹೆಚ್ಚು ಸಕ್ಕರೆ ಅಂಶವಿರುತ್ತದೆ. ಈ ಆಹಾರ ಸೇವಿಸಿದಾಗ ಜೀರ್ಣಗೊಂಡು ಗ್ಲುಕೋಸ್ ರೂಪದಲ್ಲಿ ಪರಿವರ್ತನೆ ಹೊಂದಿ ರಕ್ತ ಸೇರುತ್ತದೆ. ರಕ್ತ ಸೇರಿದ ಈ ಗ್ಲುಕೋಸನ್ನು ಮೆದೋಜೀರಕ ಗ್ರಂಥಿ ಬಿಡುಗಡೆ ಮಾಡುವ ಇನ್ಸುಲಿನ್ ಎಂಬ ಹಾರ್ಮೋನು ರಕ್ತದ ಮೂಲಕ ಶರೀರದ ಎಲ್ಲಾ ಜೀವಕೋಶಗಳಿಗೆ ತಲುಪಿಸುತ್ತದೆ. ಆಗಲೇ ನಮಗೆ ಶಕ್ತಿ ಬರುತ್ತದೆ. ಈ ಗ್ಲುಕೋಸ್ ಜೀವಕೋಶಗಳಿಗೆ ತಲುಪದೇ ರಕ್ತದಲ್ಲಿಯೇ ಅಧಿಕವಾಗಿ ಸಂಗ್ರಹವಾಗುವುದನ್ನು ಸಕ್ಕರೆ ಕಾಯಿಲೆ ಎನ್ನುವರು.
ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದರೇನು?
ಕೆಲವು ಕಾರಣಗಳಿಂದ ಮೆದೋಜೀರಕ ಗ್ರಂಥಿಯು ಇನ್ಸುಲಿನ್ ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವುದನ್ನೆ ನಿಲ್ಲಿಸಿಬಿಡುತ್ತದೆ. ಆಗ ರಕ್ತದಲ್ಲಿರುವ ಗ್ಲುಕೋಸ್ ಉಪಯೋಗವಾಗದೆ ರಕ್ತದಲ್ಲಿಯೇ ಅಧಿಕವಾಗಿ ಉಳಿದುಬಿಡುತ್ತದೆ. ಇದನ್ನು ಟೈಪ್-1 ಡಯಾಬಿಟೀಸ್ ಎನ್ನುವರು. ಇದು ಮಕ್ಕಳಲ್ಲಿ ಅತಿ ಹೆಚ್ಚಾಗಿ ಕಂಡುಬರುತ್ತದೆ. ಕೆಲವರಲ್ಲಿ ಮೇದೋಜೀರಕ ಗ್ರಂಥಿ ಅಗತ್ಯ ಇನ್ಸುಲಿನ್ ಉತ್ಪಾದಿಸಿದರೂ ಗ್ಲುಕೋಸ್ ಉಪಯೋಗಿಸಿಕೊಳ್ಳಲು ಜೀವಕೋಶಗಳು ವಿಫಲವಾಗುತ್ತವೆ. ಇದರಿಂದಲೂ ರಕ್ತದಲ್ಲಿ ಅಧಿಕ ಗ್ಲುಕೋಸ್ ಸಂಗ್ರಹವಾಗುತ್ತದೆ. ಇದನ್ನೇ ಟೈಪ್-2 ಡಯಾಬಿಟೀಸ್ ಎನ್ನುವರು. ಇದು ಇಂದು ಎಲ್ಲರಲ್ಲೂ ಅತೀ ಹೆಚ್ಚಾಗಿ ಕಂಡುಬರುತ್ತಿದೆ.
ಅತಿಯಾದ ಹಸಿವು, ಪದೇ ಪದೇ ಮೂತ್ರ ವಿಸರ್ಜನೆ, ತೂಕ ಕಡಿಮೆಯಾಗುವುದು, ಗಾಯ ವಾಸಿಯಾಗಲು ವಿಳಂಬ, ಕಣ್ಣು ಮಂಜಾಗುವುದು, ಇವು ಸಕ್ಕರೆ ಕಾಯಿಲೆಯ ಪ್ರಮುಖ ಲಕ್ಷಗಳಾಗಿವೆ. ಇವುಗಳಲ್ಲಿ ಕೆಲವು ಲಕ್ಷಣಗಳು ಕಾಣದೇ ಇರಬಹುದು. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಲ್ಲಿ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.
ಸಕ್ಕರೆ ಕಾಯಿಲೆ ಬರಲು ಕಾರಣವೇನು?
ಪ್ರಮುಖವಾಗಿ ಎರಡು ಕಾರಣಗಳಿಂದ ಸಕ್ಕರೆ ಕಾಯಿಲೆ ಬರುತ್ತದೆ. ತಪ್ಪಾದ ಆಹಾರ ಸೇವನೆ ಮತ್ತು ತಪ್ಪಾದ ಜೀವನ ಶೈಲಿಯಿಂದ ಸಕ್ಕರೆ ಕಾಯಿಲೆ ಬರುತ್ತದೆ. ಪ್ರೊಸೆಸ್ಡ್ ಪ್ಯಾಕ್ಡ್ ಫುಡ್ ಸೇವನೆ, ಕರಿದ ಹುರಿದ ಆಹಾರ, ಅತಿಯಾದ ಆಹಾರ, ಪದೇ ಪದೇ ಆಹಾರ ಸೇವನೆ, ತೂಕ ಹೆಚ್ಚಳ, ಅನವಶ್ಯಕ ಅತಿಯಾದ ಔಷಧಿಗಳ ಸೇವನೆ, ರೋಗ ನಿರೋಧಕ ವ್ಯವಸ್ಥೆಯ ಅಸಮತೋಲನ, ಅನುವಂಶಿಕ, ಮಾನಸಿಕ ಒತ್ತಡ, ಮತ್ತು ದೈಹಿಕ ಶ್ರಮ ಇಲ್ಲದೇ ಇರುವುದು ಈ ಎಲ್ಲಾ ಕಾರಣಗಳಿಂದಲೂ ಸಕ್ಕರೆ ಕಾಯಿಲೆ ಬರುತ್ತದೆ.
ಸಕ್ಕರೆ ಕಾಯಿಲೆಯ ನಾರ್ಮಲ್ ರೇಂಜ್
ಖಾಲಿ ಹೊಟ್ಟೇಲಿ 100 ರೊಳಗೆ ಇದ್ದಲ್ಲಿ ನಾರ್ಮಲ್, ಊಟದ ನಂತರ 140 ರೊಳಗಿದ್ದಲ್ಲಿ ನಾರ್ಮಲ್ ಎಂದು ವೈದ್ಯಕೀಯ ಕ್ಷೇತ್ರವು ಪರಿಗಣಿಸಿದೆ. ನಿಮಗೆ ಖಾಲಿ ಹೊಟ್ಟೇಲಿ 100 ರಿಂದ 126 ರೊಳಗಿದ್ದಲ್ಲಿ ಮತ್ತು ಊಟದ ನಂತರ 140 ರಿಂದ 200ರ ರೊಳಗಿದ್ದಲ್ಲಿ ನಿಮಗೆ ಸಕ್ಕರೆ ಖಾಯಿಲೆ ಬರುವ ಸಂಭವವಿರುತ್ತದೆ. ಮುಂಜಾಗ್ರತೆಯಾಗಿ ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಆದರೆ, ಶುಗರ್ ಮಾತ್ರೆ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಖಾಲಿ ಹೊಟ್ಟೇಲಿ 126ರ ಮೇಲಿದ್ದಲ್ಲಿ ಮತ್ತು ಊಟದ ನಂತರ 200 ಕ್ಕಿಂತ ಮೇಲಿದ್ದಲ್ಲಿ ನಿಮಗೆ ಸಕ್ಕರೆ ಕಾಯಿಲೆ ಇದ್ದು, ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನ ಶೈಲಿಯಲ್ಲಿ ಬದಲಾವಣೆ ಜೊತೆಗೆ ಅಲ್ಪ ಪ್ರಮಾಣದ ಶುಗರ್ ಔಷಧ ತೆಗೆದುಕೊಳ್ಳಲೇಬೇಕು. (ಬರಹ :ಸೂರ್ಯಕಾಂತ ಸಜ್ಜನ್)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಆರ್.ಶೀತಲ್ಗೆ ಮೂರು ಚಿನ್ನದ ಪದಕಗಳು

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಕನ್ವೆಷನ್ ಸೆಂಟರ್ನಲ್ಲಿ ಮೇ 15ರಂದು ನಡೆದ 59ನೇ ಘಟಿಕೋತ್ಸವದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿದರಕೆರೆ ಗ್ರಾಮದ ಎಸ್.ಬಿ.ರುದ್ರಕುಮಾರ್ ಇವರ ಪುತ್ರಿಯಾದ ಎಸ್.ಆರ್. ಶೀತಲ್ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
2023-24ನೇ ಸಾಲಿನಲ್ಲಿ 10,000 ಅಂಕಗಳಿಗೆ ಸರಾಸರಿ 9.104 ಅಂಕಗಳನ್ನು ಗಳಿಸಿ ಪ್ರಥಮ ಶ್ರೇಯಾಂಕಿತರಾಗಿರುವ ಎಸ್.ಆರ್. ಶೀತಲ್ ಅವರು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಿಂದ ಕೊಡ ಮಾಡುವ ಕೃಷಿ ವಿಶ್ವವಿದ್ಯಾನಿಲಯದ ಚಿನ್ನದ ಪದಕ, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ ಚಿನ್ನದ ಪದಕ ಹಾಗೂ ಡಾ.ಆರ್.ರಾಮಯ್ಯ ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಆರೋಗ್ಯಕರ ಡಯಟ್ ಮಾಡಲು ಈ ಟಿಪ್ಸ್ ಗಳನ್ನು ಅನುಸರಿಸಿ

ಆರೋಗ್ಯಕರ ಡಯಟ್ ಮಾಡಲು ಈ ಟಿಪ್ಸ್ ಗಳನ್ನು ಅನುಸರಿಸಿ
1.ಪೌಷ್ಟಿಕತೆಯ ಸಮತೋಲನ
ಆರೋಗ್ಯಕರ ಡಯಟ್ನಲ್ಲಿ ಮ್ಯಾಕ್ರೋನ್ಯೂಟ್ರಿಯೆಂಟ್ಗಳು (ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ಗಳು, ಕೊಬ್ಬು) ಮತ್ತು ಮೈಕ್ರೋನ್ಯೂಟ್ರಿಯೆಂಟ್ಗಳು (ವಿಟಮಿನ್ಗಳು, ಖನಿಜಗಳು) ಸಮತೋಲನವಿರಬೇಕು. ಉದಾಹರಣೆಗೆ, ಭಾರತೀಯ ಆಹಾರದಲ್ಲಿ ರಾಗಿ, ಜೋಳ, ಕ್ವಿನೋವಾ, ದ್ವಿದಳ ಧಾನ್ಯಗಳು, ಮತ್ತು ಸೊಪ್ಪುಗಳು ಸಮತೋಲಿತ ಆಹಾರವನ್ನು ಒದಗಿಸುತ್ತವೆ.
ಗ್ಲೈಸೆಮಿಕ್ ಇಂಡೆಕ್ಸ್ (GI) : ಕಡಿಮೆ GI ಆಹಾರಗಳಾದ ಓಟ್ಸ್, ಕಂದು ಅಕ್ಕಿ, ಮತ್ತು ಕಾಳುಗಳು ರಕ್ತದ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡುತ್ತವೆ, ಇದು ಡಯಾಬಿಟೀಸ್ ನಿರ್ವಹಣೆಗೆ ಸಹಾಯಕವಾಗಿದೆ.
2. ಸ್ಥಳೀಯ ಮತ್ತು ಋತುಮಾನದ ಆಹಾರಗಳ ಆಯ್ಕೆ
ಕರ್ನಾಟಕದಂತಹ ಪ್ರದೇಶಗಳಲ್ಲಿ, ರಾಗಿ ರೊಟ್ಟಿ, ತರಕಾರಿ ಸಾಂಬಾರ್, ಕೋಸಂಬರಿ, ಮತ್ತು ಒಣಗಿದ ಹಣ್ಣುಗಳು (ಬಾದಾಮಿ, ಗೋಡಂಬಿ) ಸ್ಥಳೀಯವಾಗಿ ಲಭ್ಯವಿರುವ ಆರೋಗ್ಯಕರ ಆಯ್ಕೆಗಳಾಗಿವೆ. ಇವು ಪರಿಸರ ಸ್ನೇಹಿಯಾಗಿರುತ್ತವೆ ಮತ್ತು ತಾಜಾತನವನ್ನು ಖಾತ್ರಿಪಡಿಸುತ್ತವೆ.
ಋತುಮಾನದ ಹಣ್ಣುಗಳು : ಮಾವಿನಹಣ್ಣು, ಜಾಮೂನ್, ದಾಳಿಂಬೆ ಇತ್ಯಾದಿಗಳು ವಿಟಮಿನ್ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತವೆ.
3. ಗಟ್ ಹೆಲ್ತ್ (ಕರುಳಿನ ಆರೋಗ್ಯ)
ಆರೋಗ್ಯಕರ ಕರುಳು ಒಟ್ಟಾರೆ ಆರೋಗ್ಯಕ್ಕೆ ಮುಖ್ಯವಾಗಿದೆ. ಮೊಸರು, ಮಜ್ಜಿಗೆ, ಒಣಗಿದ ಹಣ್ಣುಗಳು, ಮತ್ತು ಫೈಬರ್ ಶ್ರೀಮಂತ ಆಹಾರಗಳಾದ ತರಕಾರಿಗಳು ಮತ್ತು ಧಾನ್ಯಗಳು ಪ್ರೋಬಯಾಟಿಕ್ಗಳು ಮತ್ತು ಪ್ರಿಬಯಾಟಿಕ್ಗಳನ್ನು ಒದಗಿಸುತ್ತವೆ. ಉದಾಹರಣೆ: ರಾಗಿ ಮತ್ತು ತರಕಾರಿಗಳಿಂದ ತಯಾರಿಸಿದ ಖಿಚಡಿ ಕರುಳಿನ ಆರೋಗ್ಯಕ್ಕೆ ಒಳ್ಳೆಯದು.
4. ಸಂಸ್ಕರಿತ ಆಹಾರದಿಂದ ದೂರ
ಸಂಸ್ಕರಿತ ಆಹಾರಗಳು (ಚಿಪ್ಸ್, ಸಕ್ಕರೆಯಿಂದ ಕೂಡಿದ ಪಾನೀಯಗಳು, ಫಾಸ್ಟ್ ಫುಡ್) ದೀರ್ಘಕಾಲೀನವಾಗಿ ಒಬೇಸಿಟಿ, ಡಯಾಬಿಟೀಸ್, ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಬಹುದು. ಇವುಗಳ ಬದಲಿಗೆ ತಾಜಾ, ಗೃಹ ತಯಾರಿಕೆಯ ಆಹಾರವನ್ನು ಆದ್ಯತೆ ನೀಡಿ.
5. ವೈಯಕ್ತಿಕಗೊಳಿಸಿದ ಡಯಟ್
ವಯಸ್ಸು, ಲಿಂಗ, ದೈಹಿಕ ಚಟುವಟಿಕೆ, ಮತ್ತು ಆರೋಗ್ಯ ಸ್ಥಿತಿಗೆ ತಕ್ಕಂತೆ ಡಯಟ್ ರೂಪಿಸಿ. ಉದಾಹರಣೆಗೆ, ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋಟೀನ್ ಮತ್ತು ಕಾರ್ಬೋಹೈಡ್ರೇಟ್ಗಳು ಬೇಕಾಗುತ್ತವೆ, ಆದರೆ ವಯಸ್ಸಾದವರಿಗೆ ಕಡಿಮೆ ಕ್ಯಾಲೋರಿ ಆದರೆ ವಿಟಮಿನ್ಗಳ ಶ್ರೀಮಂತ ಆಹಾರ ಸೂಕ್ತವಾಗಿರುತ್ತದೆ.
6. ಹೈಡ್ರೇಷನ್ ಮತ್ತು ಜೀವನಶೈಲಿ
ದಿನಕ್ಕೆ 2-3 ಲೀಟರ್ ನೀರು ಕುಡಿಯಿರಿ. ತೆಂಗಿನೀರು, ಮಜ್ಜಿಗೆ, ಅಥವಾ ಗಿಡಮೂಲಿಕೆ ಚಹಾವನ್ನು ಸೇವಿಸಿ. ಆರೋಗ್ಯಕರ ಡಯಟ್ನ ಜೊತೆಗೆ, 30 ನಿಮಿಷಗಳ ದೈಹಿಕ ಚಟುವಟಿಕೆ (ಯೋಗ, ವಾಕಿಂಗ್, ಅಥವಾ ಜಿಮ್) ಮತ್ತು 7-8 ಗಂಟೆಗಳ ನಿದ್ರೆಯನ್ನು ಸಂಯೋಜಿಸಿ.
ನಿರ್ದಿಷ್ಟ ಆರೋಗ್ಯಕರ ಡಯಟ್ ಯೋಜನೆ
ಬೆಳಗಿನ ಉಪಾಹಾರ:ರಾಗಿ ದೋಸೆ + ಚಟ್ನಿ, ಅಥವಾ ಓಟ್ಸ್ ಉಪ್ಮಾ + ತರಕಾರಿಗಳು. ಮಧ್ಯಾಹ್ನದ ತಿಂಡಿ: ತೆಂಗಿನೀರು ಅಥವಾ ಮೊಸರು + ಒಂದು ಹಣ್ಣು (ಸೀಬೆ, ಬಾಳೆಹಣ್ಣು).
ಮಧ್ಯಾಹ್ನದ ಊಟ: ಕಂದು ಅಕ್ಕಿ, ಸಾಂಬಾರ್, ಪಾಲಕ್ ಸೊಪ್ಪಿನ ಪಲ್ಯ, ಮತ್ತು ಕೋಸಂಬರಿ. ಸಂಜೆಯ ತಿಂಡಿ: ಬೇಯಿಸಿದ ಕಾಳುಗಳು (ಕಡಲೆಕಾಯಿ, ಕಡಲೆ) ಅಥವಾ ಒಣಗಿದ ಹಣ್ಣುಗಳು.ರಾತ್ರಿಯ ಊಟ: ರಾಗಿ ರೊಟ್ಟಿ + ತರಕಾರಿ ಕೂಟು, ಅಥವಾ ಜೋಳದ ರೊಟ್ಟಿ + ಮೊಸರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೇ 22 | ಇಂದಿನ ಅಡಿಕೆ ದರ

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ):
ಶಿವಮೊಗ್ಗ ಮಾರುಕಟ್ಟೆ:
ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429
ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):
ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767
ಸಾಗರ ಮಾರುಕಟ್ಟೆ (ಶಿವಮೊಗ್ಗ):
ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621
ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):
ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729
ಚಿತ್ರದುರ್ಗ ಮಾರುಕಟ್ಟೆ:
ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ4 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ4 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಹೃದಯಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೇ..?
-
ದಿನದ ಸುದ್ದಿ3 days ago
ಇಂದಿನ ಅಡಿಕೆ ದರ ಪಟ್ಟಿ
-
ದಿನದ ಸುದ್ದಿ4 days ago
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ