Connect with us

ದಿನದ ಸುದ್ದಿ

ಸಕ್ಕರೆ ಕಾಯಿಲೆ ಸುತ್ತ ಮುತ್ತ..! ; ಹುಷಾರಾಗಿರಿ..!

Published

on

ಪ್ರಪಂಚದಲ್ಲಿ ಅತಿ ಹೆಚ್ಚು ಸಕ್ಕರೆ ಕಾಯಿಲೆ ಇರುವ ನಂಬರ್ ಒನ್ ದೇಶ ಚೀನಾ, ಭಾರತ ಎರಡನೇ ಸ್ಥಾನದಲ್ಲಿದೆ. 2025 ರಲ್ಲಿ ಭಾರತವೇ ನಂಬರ್ ಒನ್ ಆಗಲಿದೆ ಎಂದು ವೈದ್ಯಕೀಯ ಜಗತ್ತು ಹೇಳುತ್ತಿದೆ. ನಮ್ಮ ದೇಶದಲ್ಲಿ ಸಾಕಷ್ಟು ಆಸ್ಪತ್ರೆಗಳಿವೆ. ಸಾಕಷ್ಟು ವೈದ್ಯರಿದ್ದಾರೆ. ಪ್ರತಿಯೊಂದು ಕಾಯಿಲೆಗೂ ಉತ್ತಮವಾದ ಔಷಧಿಗಳೂ ಇವೆ.

ಒಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರ ಅತ್ಯಂತ ಮುಂದುವರೆದಿದೆ. ಆದರೂ ಬಿಪಿ ಶುಗರ್ ನಿಯಂತ್ರಣ ಏಕೆ ಸಾಧ್ಯವಾಗುತ್ತಿಲ್ಲ. ಇಂದಿಗೂ ಅನೇಕ ವೈದ್ಯರು ಬಿಪಿ ಶುಗರ್ ಕಾಯಿಲೆಗೆ ಔಷಧಿ ಜೀವನ ಪರ್ಯಂತರ ತೆಗೆದುಕೊಳ್ಳಲೇಬೇಕೆಂದು ಏಕೆ ಹೇಳುತ್ತಿದ್ದಾರೆ? ಈ ಬಗ್ಗೆ ಆಳವಾಗಿ ನೋಡಿದಾಗ ಪ್ರಮುಖವಾಗಿ ಇಂದಿನ ಅಧಿಕ ಜನರು ಅಧಿಕ ಆಹಾರ ಸೇವಿಸುತ್ತಿದ್ದಾರೆ. ಪದೇ ಪದೇ ಆಹಾರ ಸೇವಿಸುತ್ತಿದ್ದಾರೆ. ಪ್ರತಿದಿನ ಮೂರು ಹೊತ್ತು ಊಟ ಮಾಡಲೇಬೇಕು. ಹಸಿವೆ ಇರಲಿ ಇಲ್ಲದಿರಲಿ ಆಹಾರ ಸೇವಿಸುತ್ತಿದ್ದಾರೆ. ಅದರಲ್ಲೂ ಪ್ರಕೃತಿಯಿಂದ ಗಿಡ ಮರಗಳಿಂದ ಬರುವ ಆಹಾರವನ್ನು ನೇರವಾಗಿ ಸೇವಿಸುತ್ತಿಲ್ಲ. ಪ್ರತಿಯೊಂದು ಆಹಾರವೂ ಪ್ರೊಸೆಸ್ಡ್ ಪ್ಯಾಕ್ಡ್ ಆಗಿ ಬರುತ್ತಿದೆ. ಅದರಲ್ಲೂ ಎಣ್ಣೆಯಲ್ಲಿ ಕರಿದ, ಮಸಾಲೆಯಿಂದ ರುಚಿಕರವಾದ ಆಹಾರವೇ ಬೇಕು. ಉಪವಾಸ ಮಾಡುವವರು ಅತಿ ಕಡಿಮೆಯಾಗಿದ್ದಾರೆ. ಇದಕ್ಕೆಲ್ಲ ಕಾರಣ ಇಂದಿನ ಜನರಲ್ಲಿ ಅಧಿಕ ಹಣವಿದೆ. ಆಹಾರದ ಕೊರತೆಯಿಲ್ಲ. ಮನೆಯಲ್ಲಿ ಊಟವಿಲ್ಲವೆಂದರೆ ಹೋಟೆಲ್ಗೆ ಹೋಗಿ ಊಟ ಮಾಡುತ್ತಾರೆ. ಖಾಲಿ ಹೊಟ್ಟೆಯಲ್ಲಿ ಮಾತ್ರ ಇರುವುದಿಲ್ಲ.

ದೇಶದ ಶೇಕಡ 20 ರಷ್ಟು ಜನರಿಗೆ ತಮಗೆ ಬಿಪಿ ಮತ್ತು ಸಕ್ಕರೆ ಕಾಯಿಲೆ ಇರುವ ಬಗ್ಗೆ ಅರಿವೆಯೇ ಇರುವುದಿಲ್ಲ. ಶೇ.20 ರಷ್ಟು ಜನರು ತಮಗೆ ಬಿಪಿ ಅಥವಾ ಶುಗರ್ ಕಾಯಿಲೆ ಇಲ್ಲದೆ ಇದ್ದರೂ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 50 ರಷ್ಟು ಜನರು ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳದೇ ಬಿಪಿ ಸಕ್ಕರೆ ಕಾಯಿಲೆಗೆ ಮಾತ್ರೆ ಸೇವಿಸುತ್ತಿದ್ದಾರೆ. ಶೇಕಡ 30 ರಷ್ಟು ಜನರು ಅನವಶ್ಯಕ ಅತಿಯಾದ ನಿರಂತರ ಔಷಧಿಗಳ ಸೇವನೆಯಿಂದ ಹೈಬಿಪಿ ಮತ್ತು ಶುಗರ್ ಕಾಯಿಲೆಗೆ ಈಡಾಗುತ್ತಿದ್ದಾರೆ. ಬಿಪಿ ಮತ್ತು ಶುಗರ್ ಕಾಯಿಲೆ ಇವೆರಡೂ ಅಣ್ಣ ತಮ್ಮಂದಿರಿದ್ದಂತೆ. ಒಂದು ಬಂದರೆ ಇನ್ನೊಂದು ಬರಲೇಬೇಕು. ಇವೆರಡೂ ಬಂದಾಗ ಇತರೆ ಎಲ್ಲಾ ಕಾಯಿಲೆಗಳು ಒಂದೊಂದಾಗಿ ಬರುತ್ತವೆ.

ನಮ್ಮ ದೇಹದಲ್ಲಿರುವ ಮೇದೋಜೀರಕ ಗ್ರಂಥಿಯು (pancreatitis) ಶುಗರ್ ಕಾಯಿಲೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಮೆದೋಜೀರಕ ಗ್ರಂಥಿಯು ಆಹಾರ ಜೀರ್ಣಗೊಳಿಸಲು ಕೆಲವು ರಾಸಾಯನಿಕಗಳನ್ನು ಉತ್ಪತ್ತಿ ಮಾಡುತ್ತದೆ. ಜೊತೆಗೆ ಇನ್ಸುಲಿನ್ ಉತ್ಪಾದಿಸುವ ಕೆಲಸವನ್ನೂ ಇದು ಮಾಡುತ್ತದೆ. ನಾವು ಸೇವಿಸುವ ಕೆಟ್ಟ ಆಹಾರದಿಂದ, ಕೆಟ್ಟ ಜೀವನ ಶೈಲಿಯಿಂದ ಈ ಮೆದೋಜೀರಕ ಗ್ರಂಥಿಯು ಬಲಹೀನಗೊಂಡು ಇನ್ಸುಲಿನ್ ಅನ್ನು ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವದನ್ನೇ ನಿಲ್ಲಿಸಿ ಬಿಡುತ್ತದೆ. ಆಗಲೇ ಶುಗರ್ ಕಾಯಿಲೆ ನಮಗೆ ಬರುತ್ತದೆ.

ನಾನು ಈ ಲೇಖನದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾಗಿ ಮಾಹಿತಿ ಒದಗಿಸಿರುತ್ತೇನೆ. ನಾನು ತಿಳಿಸಿರುವ ಈ ಚಿಕಿತ್ಸಾ ಪದ್ಧತಿಯು ವಿಶ್ವದಲ್ಲಿಯೇ ಶ್ರೇಷ್ಠ ಚಿಕಿತ್ಸಾ ಪದ್ದತಿಯಾಗಿದೆ. ಇದನ್ನು 100% ಪಾಲಿಸುವ ಮೂಲಕ ನಿಮ್ಮ ಶುಗರ್ ಕಾಯಿಲೆಯನ್ನು 100% ಕಂಟ್ರೋಲ್ನಲ್ಲಿ ಇಡಬಹುದು. ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ನಿಮ್ಮ ಅನುಭವಕ್ಕೆ ಬರುತ್ತದೆ. ಅವರವರ ದೇಹ ಪ್ರಕೃತಿಗೆ ಅನುಗುಣವಾಗಿ ನಿಯಂತ್ರಣ ಹೊಂದಲು, ಗುಣಮುಖ ಹೊಂದಲು ಹೆಚ್ಚು ಕಡಿಮೆ ಸಮಯ ತೆಗೆದುಕೊಳ್ಳಬಹುದು. ಆದರೆ, ಶಾಶ್ವತ ಪರಿಹಾರ ಸಿಗುತ್ತದೆ.

ಸಕ್ಕರೆ ಕಾಯಿಲೆ ಎಂದರೇನು?

ಅಧಿಕ ಸಕ್ಕರೆ ಸೇವನೆಯಿಂದ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅನೇಕರು ತಿಳಿದುಕೊಂಡಿದ್ದಾರೆ. ಆದರೆ, ಇದು ತಪ್ಪು. ಏಕೆಂದರೆ ನಾವು ಪ್ರತಿ ದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ಸೇವಿಸುವ ಎಲ್ಲಾ ಆಹಾರಗಳು ಕಾರ್ಬೋಹೈಡ್ರೇಟ್ ಎಂಬ ಸಕ್ಕರೆ ಅಂಶವನ್ನು ಹೊಂದಿರುತ್ತವೆ. ಅಂದರೆ, ನಾವು ಪ್ರತಿ ದಿನ ಸೇವಿಸುವ ಅನ್ನ, ಚಪಾತಿ, ಇಡ್ಲಿ, ವಡಾ, ದೋಸೆ ಇತರೆ ಎಲ್ಲವುಗಳಲ್ಲೂ ಶೇ.50 ಕ್ಕಿಂತ ಹೆಚ್ಚು ಸಕ್ಕರೆ ಅಂಶವಿರುತ್ತದೆ. ಈ ಆಹಾರ ಸೇವಿಸಿದಾಗ ಜೀರ್ಣಗೊಂಡು ಗ್ಲುಕೋಸ್ ರೂಪದಲ್ಲಿ ಪರಿವರ್ತನೆ ಹೊಂದಿ ರಕ್ತ ಸೇರುತ್ತದೆ. ರಕ್ತ ಸೇರಿದ ಈ ಗ್ಲುಕೋಸನ್ನು ಮೆದೋಜೀರಕ ಗ್ರಂಥಿ ಬಿಡುಗಡೆ ಮಾಡುವ ಇನ್ಸುಲಿನ್ ಎಂಬ ಹಾರ್ಮೋನು ರಕ್ತದ ಮೂಲಕ ಶರೀರದ ಎಲ್ಲಾ ಜೀವಕೋಶಗಳಿಗೆ ತಲುಪಿಸುತ್ತದೆ. ಆಗಲೇ ನಮಗೆ ಶಕ್ತಿ ಬರುತ್ತದೆ. ಈ ಗ್ಲುಕೋಸ್ ಜೀವಕೋಶಗಳಿಗೆ ತಲುಪದೇ ರಕ್ತದಲ್ಲಿಯೇ ಅಧಿಕವಾಗಿ ಸಂಗ್ರಹವಾಗುವುದನ್ನು ಸಕ್ಕರೆ ಕಾಯಿಲೆ ಎನ್ನುವರು.

ಟೈಪ್-1 ಮತ್ತು ಟೈಪ್-2 ಡಯಾಬಿಟೀಸ್ ಎಂದರೇನು?

ಕೆಲವು ಕಾರಣಗಳಿಂದ ಮೆದೋಜೀರಕ ಗ್ರಂಥಿಯು ಇನ್ಸುಲಿನ್ ಕಡಿಮೆ ಉತ್ಪಾದಿಸುತ್ತದೆ ಅಥವಾ ಉತ್ಪಾದಿಸುವುದನ್ನೆ ನಿಲ್ಲಿಸಿಬಿಡುತ್ತದೆ. ಆಗ ರಕ್ತದಲ್ಲಿರುವ ಗ್ಲುಕೋಸ್ ಉಪಯೋಗವಾಗದೆ ರಕ್ತದಲ್ಲಿಯೇ ಅಧಿಕವಾಗಿ ಉಳಿದುಬಿಡುತ್ತದೆ. ಇದನ್ನು ಟೈಪ್-1 ಡಯಾಬಿಟೀಸ್ ಎನ್ನುವರು. ಇದು ಮಕ್ಕಳಲ್ಲಿ ಅತಿ ಹೆಚ್ಚಾಗಿ ಕಂಡುಬರುತ್ತದೆ. ಕೆಲವರಲ್ಲಿ ಮೇದೋಜೀರಕ ಗ್ರಂಥಿ ಅಗತ್ಯ ಇನ್ಸುಲಿನ್ ಉತ್ಪಾದಿಸಿದರೂ ಗ್ಲುಕೋಸ್ ಉಪಯೋಗಿಸಿಕೊಳ್ಳಲು ಜೀವಕೋಶಗಳು ವಿಫಲವಾಗುತ್ತವೆ. ಇದರಿಂದಲೂ ರಕ್ತದಲ್ಲಿ ಅಧಿಕ ಗ್ಲುಕೋಸ್ ಸಂಗ್ರಹವಾಗುತ್ತದೆ. ಇದನ್ನೇ ಟೈಪ್-2 ಡಯಾಬಿಟೀಸ್ ಎನ್ನುವರು. ಇದು ಇಂದು ಎಲ್ಲರಲ್ಲೂ ಅತೀ ಹೆಚ್ಚಾಗಿ ಕಂಡುಬರುತ್ತಿದೆ.

ಸಕ್ಕರೆ ಕಾಯಿಲೆಯ ಲಕ್ಷಣಗಳು

ಅತಿಯಾದ ಹಸಿವು, ಪದೇ ಪದೇ ಮೂತ್ರ ವಿಸರ್ಜನೆ, ತೂಕ ಕಡಿಮೆಯಾಗುವುದು, ಗಾಯ ವಾಸಿಯಾಗಲು ವಿಳಂಬ, ಕಣ್ಣು ಮಂಜಾಗುವುದು, ಇವು ಸಕ್ಕರೆ ಕಾಯಿಲೆಯ ಪ್ರಮುಖ ಲಕ್ಷಗಳಾಗಿವೆ. ಇವುಗಳಲ್ಲಿ ಕೆಲವು ಲಕ್ಷಣಗಳು ಕಾಣದೇ ಇರಬಹುದು. ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದಲ್ಲಿ ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.

ಸಕ್ಕರೆ ಕಾಯಿಲೆ ಬರಲು ಕಾರಣವೇನು?

ಪ್ರಮುಖವಾಗಿ ಎರಡು ಕಾರಣಗಳಿಂದ ಸಕ್ಕರೆ ಕಾಯಿಲೆ ಬರುತ್ತದೆ. ತಪ್ಪಾದ ಆಹಾರ ಸೇವನೆ ಮತ್ತು ತಪ್ಪಾದ ಜೀವನ ಶೈಲಿಯಿಂದ ಸಕ್ಕರೆ ಕಾಯಿಲೆ ಬರುತ್ತದೆ. ಪ್ರೊಸೆಸ್ಡ್ ಪ್ಯಾಕ್ಡ್ ಫುಡ್ ಸೇವನೆ, ಕರಿದ ಹುರಿದ ಆಹಾರ, ಅತಿಯಾದ ಆಹಾರ, ಪದೇ ಪದೇ ಆಹಾರ ಸೇವನೆ, ತೂಕ ಹೆಚ್ಚಳ, ಅನವಶ್ಯಕ ಅತಿಯಾದ ಔಷಧಿಗಳ ಸೇವನೆ, ರೋಗ ನಿರೋಧಕ ವ್ಯವಸ್ಥೆಯ ಅಸಮತೋಲನ, ಅನುವಂಶಿಕ, ಮಾನಸಿಕ ಒತ್ತಡ, ಮತ್ತು ದೈಹಿಕ ಶ್ರಮ ಇಲ್ಲದೇ ಇರುವುದು ಈ ಎಲ್ಲಾ ಕಾರಣಗಳಿಂದಲೂ ಸಕ್ಕರೆ ಕಾಯಿಲೆ ಬರುತ್ತದೆ.

ಸಕ್ಕರೆ ಕಾಯಿಲೆಯ ನಾರ್ಮಲ್ ರೇಂಜ್

ಖಾಲಿ ಹೊಟ್ಟೇಲಿ 100 ರೊಳಗೆ ಇದ್ದಲ್ಲಿ ನಾರ್ಮಲ್, ಊಟದ ನಂತರ 140 ರೊಳಗಿದ್ದಲ್ಲಿ ನಾರ್ಮಲ್ ಎಂದು ವೈದ್ಯಕೀಯ ಕ್ಷೇತ್ರವು ಪರಿಗಣಿಸಿದೆ. ನಿಮಗೆ ಖಾಲಿ ಹೊಟ್ಟೇಲಿ 100 ರಿಂದ 126 ರೊಳಗಿದ್ದಲ್ಲಿ ಮತ್ತು ಊಟದ ನಂತರ 140 ರಿಂದ 200ರ ರೊಳಗಿದ್ದಲ್ಲಿ ನಿಮಗೆ ಸಕ್ಕರೆ ಖಾಯಿಲೆ ಬರುವ ಸಂಭವವಿರುತ್ತದೆ. ಮುಂಜಾಗ್ರತೆಯಾಗಿ ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಆದರೆ, ಶುಗರ್ ಮಾತ್ರೆ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಖಾಲಿ ಹೊಟ್ಟೇಲಿ 126ರ ಮೇಲಿದ್ದಲ್ಲಿ ಮತ್ತು ಊಟದ ನಂತರ 200 ಕ್ಕಿಂತ ಮೇಲಿದ್ದಲ್ಲಿ ನಿಮಗೆ ಸಕ್ಕರೆ ಕಾಯಿಲೆ ಇದ್ದು, ನಿಮ್ಮ ಆಹಾರದಲ್ಲಿ ಬದಲಾವಣೆ ಮತ್ತು ಜೀವನ ಶೈಲಿಯಲ್ಲಿ ಬದಲಾವಣೆ ಜೊತೆಗೆ ಅಲ್ಪ ಪ್ರಮಾಣದ ಶುಗರ್ ಔಷಧ ತೆಗೆದುಕೊಳ್ಳಲೇಬೇಕು. (ಬರಹ :ಸೂರ್ಯಕಾಂತ ಸಜ್ಜನ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Published

on

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending