ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version