ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು
ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು.
ಬುಧವಾರ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಕೋಶದ ಪ್ರೇರಣಾ ವಿಭಾಗದ ವತಿಯಿಂದ ಸ್ನಾತಕೊತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಡಿಜಿಟಲ್ ಸ್ಕಿಲ್ಸ್ ಸರ್ಟಿಫಿಕೇಟ್ ಕೋರ್ಸ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಂಪ್ಯೂಟರ್ ಆಧರಿತ ಉದ್ಯೋಗದ ಕೌಶಲಗಳನ್ನು ಹೊಂದಿದ್ದರೆ ಉದ್ಯೋಗಗಳು ನಮ್ಮನ್ನ ಹುಡುಕಿಕೊಂಡು ಬರುತ್ತವೆ ಎಂದು ತಿಳಿಸಿದರು.
ಕಾಲೇಜಿನ ಅಲ್ಮನಿ ವಿದ್ಯಾರ್ಥಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿರುವ ಶ್ರೀ ಮಧು ಜಿ.ಟಿ ರವರು ತಾನು ಈ ಕಾಲೇಜಿನಲ್ಲಿ ಕಲಿಯುವಾಗ ಇಲ್ಲದಿರುವ ಎಲ್ಲಾ ಸೌಲಭ್ಯಗಳು/ ಅವಕಾಶಗಳು ಈಗ ದೊರೆಯುತ್ತಿವೆ ವಿದ್ಯಾರ್ಥಿಗಳು ಅವುಗಳನ್ನು ಬಳಸಿಕೊಂಡು ತಮ್ಮ ಭವಿಷ್ಯ ಕಟ್ಟಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಅಮೃತೇಶ್ವರ ಬಿ.ಜಿ ಅವರು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಡಿಜಿಟಲ್ ಸ್ಕಿಲ್ ಹಾಗೂ ಇಂಗ್ಲಿಷ್ ಸಂವಹನ ಜ್ಞಾನದ ಅವಶ್ಯಕತೆ ಇದ್ದು ಪದವಿಯೊಂದಿಗೆ ಡಿಜಿಟಲ್ ಕೌಶಲ್ಯಗಳ ಅರಿ ವನ್ನು ವಿದ್ಯಾರ್ಥಿಗಳಿಗೆ ಕಾಲೇಜಿನ ಉದ್ಯೋಗ ಕೋಶ ವೇದಿಕೆಯು ಉಚಿತವಾಗಿ ನೀಡುತ್ತಿದೆ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಲು ಕರೆ ನೀಡಿದರು.
ಡಾ. ಮಂಜುಳಾ ಟಿ ಪ್ಲೇಸ್ಮೆಂಟ್ ಸೆಲ್ ಸಂಚಾಲಕರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ವರ್ತಮಾನದ ಜಗತ್ತಿಗೆ ಡಿಜಿಟಲ್ ಕೌಶಲ ವಿಶೇಷವಾಗಿ ವಿದ್ಯಾರ್ಥಿ ಗಳು ಅತಿ ತುರ್ತಾಗಿ ಕಲಿಯುವ ಅವಶ್ಯಕತೆ ಇದೆ ಎಂದರು.
ಬಿ ಸಿ ಎ/ ಸಿ ಎಸ್ ವಿಭಾಗದ ಮುಖ್ಯಸ್ಥರು ಶ್ರೀಮುರುಳಿಧರವರು, ವಾಣಿಜ್ಯಶಾಸ್ತ್ರ ವಿಭಾಗದ ಲಕ್ಷ್ಮಿ ರಂಗನಾಥ್, ಐಕ್ಯೂ ಏ ಸಿ ಸಂಚಾಲಕರಾದ ಶ್ರೀವಿಜಯಕುಮಾರ್ ಎನ್ ಸಿ ಡಾ. ಪ್ರದೀಪ್ ಕುಮಾರ್. ಡಾ. ದಾಕ್ಷಾಯಿಣಿ ಡೋಂಗ್ರೆ ಹಾಗೂ ಬೋಧಕ/ ಬೋಧಕೇತ ತರರು ಹಾಜರಿದ್ದರು.
ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ನಡೆದ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಸ್ಕಿಲ್ಸ್ ಸರ್ಟಿಫಿಕೇಟ್ ಕೋರ್ಸ್ ಹಾಗೂ ವಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಉದ್ಘಾಟಿಸಲಾಯಿತು ಇಂದಿನಿಂದ ಸತತ 15 ದಿನಗಳು ಮದ್ಯಾಹ್ನ 2:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಡಿಜಿಟಲ್ ಸ್ಕಿಲ ಬಗ್ಗೆ ಪ್ರಾಯೋಗಿಕ ತರಗತಿಗಳು ಮತ್ತು ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ ಪಿಜಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಇದೇ ಸಂದರ್ಭದಲ್ಲಿ ಸೂಚಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


