ದಿನದ ಸುದ್ದಿ
ಸಾರ್ವಜನಿಕರ ಸಮಸ್ಯೆಗಳ ಸ್ಪಂದನೆಗೆ ಡಿಜಿಟಲ್ ಮೊರೆ ಹೋದ ಪಾಲಿಕೆ : ವಾಟ್ಸ್ ಆ್ಯಪ್ ನಂಬರ್ ಪೋಸ್ಟರ್ ಬಿಡುಗಡೆ ಮಾಡಿದ ಮೇಯರ್ ಎಸ್.ಟಿ.ವೀರೇಶ್
ಸುದ್ದಿದಿನ,ದಾವಣಗೆರೆ : ಗ್ರಾಹಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಮಹಾನಗರಪಾಲಿಕೆ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದು, ಗ್ರಾಹಕರು ತಮ್ಮ ಸಮಸ್ಯೆಗಳನ್ನು ತಕ್ಷಣವೇ ತಿಳಿಸಲು ವಾಟ್ಸ್ಆ್ಯಪ್ ನಂಬರ್ನ್ನು ನೀಡಲಾಗಿದೆ.
ಶುಕ್ರವಾರ ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ.ವೀರೇಶ್ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆ-ಡಿಜಿಟಲ್ ತಂತ್ರಜ್ಞಾನ ವಾಟ್ಸ್ಆ್ಯಪ್ ಚಾಲನೆ ಪೋಸ್ಟರ್ ಬಿಡುಗಡೆ ಮಾಡಿ 8277234444 ವಾಟ್ಸ್ಆ್ಯಪ್ ನಂಬರ್ಗೆ ಚಾಲನೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗಿದ್ದು, ಸಾಮಾನ್ಯ ಜನರು ಸಹ ಮೊಬೈಲ್ಗಳನ್ನು ಬಳಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಾಟ್ಸ್ಆ್ಯಪ್ ಸಂವಹನ ಮಾಧ್ಯಮವಾಗಿ ವ್ಯಾಪಕ ಬಳಕೆಯಲ್ಲಿದ್ದು, ಗ್ರಾಹಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಲು ಆಧುನಿಕ ತಂತ್ರಜ್ಞಾನದ ಮೊರೆ ಹೋಗಲು ತೀರ್ಮಾನಿಸಿದ್ದೇವೆ ಎಂದರು.
ಮಹಾನಗರಪಾಲಿಕೆಯ ಸ್ಥಿರ ದೂರವಾಣಿ 234444 ಇದ್ದು, ಸಾರ್ವಜನಿಕರ ಚಿರಪರಿಚಿತ ಸಂಖ್ಯೆಯು ಆಗಿದೆ. ಆದ್ದರಿಂದ ಇದೇ ನಂಬರ್ಗೆ 8277 ಎಂಬ ನಾಲ್ಕು ಸಂಖ್ಯೆಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರು ತಮ್ಮ ದೂರುಗಳನ್ನು 8277234444 ನಂಬರ್ಗೆ ವಾಟ್ಸ್ಆ್ಯಪ್ ಮಾಡಬಹುದು ಎಂದು ತಿಳಿಸಿದರು.
ನಗರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು, ಸಾರ್ವಜನಿಕರ ಕುಂದು-ಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ನಗರದಾದ್ಯಂತ ಯಾವುದೇ ಸೌಲಭ್ಯಗಳ ಪೂರೈಕೆ ಸ್ಥಗಿತಗೊಂಡಿದ್ದಲ್ಲಿ ಮಹಾನಗರ ಪಾಲಿಕೆ ನೀಡಿರುವ ವಾಟ್ಸ್ಆ್ಯಪ್ ನಂಬರ್ಗೆ ಮೆಸೇಜ್, ಫೋಟೋಗಳನ್ನು ಕಳಿಸಿಕೊಡಬಹುದು.
ಅಥವಾ ಕರೆ ಮಾಡಿ ಸಮಸ್ಯೆಗಳನ್ನು ಹಂಚಿಕೊಳ್ಳಬಹುದು. ಸಾರ್ವಜನಿಕರು ತಿಳಿಸುವ ಸಮಸ್ಯೆಗಳನ್ನು ಪಾಲಿಕೆ ವ್ಯಾಪ್ತಿಯ ಕಂಟ್ರೋಲ್ ರೂಂ ನಿರ್ವಹಿಸಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸಿ, ಸಮಸ್ಯೆಯನ್ನು ಬಗೆಹರಿಸುತ್ತಾರೆ.
ಇದನ್ನೂ ಓದಿ |ಪಡಿತರ ಚೀಟಿದಾರರು ಕೂಡಲೇ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ
ಈಗಾಗಲೇ ಕೆಲ ವಾರ್ಡ್ಗಳಲ್ಲಿ ಇದರ ಪ್ರಯೋಗ ಮಾಡಿದ್ದು ಯಶಸ್ವಿಯಾಗುತ್ತಿರುವುದರ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸುತ್ತಿದ್ದೇವೆÉ. ನಗರದಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದು ಮೊದಮೊದಲು ನಿಭಾಯಿಸಲು ಕಷ್ಟವೆನಿಸಬಹುದು. ಆದರೆ ಇದನ್ನು ಸವಾಲಾಗಿ ಸ್ವೀಕರಿಸಿ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಸಾರ್ವಜನಿಕರ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುತ್ತೇವೆ ಎಂದು ಭರವಸೆ ನೀಡಿದರು.
ದಾವಣಗೆರೆ ಜಿಲ್ಲೆಯು ವಾಸಯೋಗ್ಯ ನಗರವೆಂದು ದೇಶದಲ್ಲಿ 9ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಆದರೆ ಉಳಿದ ವಿಚಾರಗಳಲ್ಲಿ ಹಿಂದೆ ಉಳಿದಿದೆ. ಹಾಗೂ ಮಂಗಳೂರಿನಲ್ಲಿ ಸ್ವಚ್ಛ ಅಭಿಯಾನದಡಿ ಸುಮಾರು 440 ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯಶಸ್ವಿಯಾಗಿದ್ದು, ಇದೀಗ ಸ್ವಚ್ಛ ದಾವಣಗೆರೆಯನ್ನು ಮಾಡಲು ಹಿರಿಯ ತಜ್ಞರು, ಆಡಳಿತಾಧಿಕಾರಿಗಳು, ಮಾಧ್ಯಮ ವರ್ಗದವರು,ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ವಾರ್ಡ್ ವಿಸಿಟ್
ವಾರಕ್ಕೆ ನಾಲ್ಕು ಬಾರಿ ಮುಖಂಡರು, ಆಡಳಿತಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಆಯಾ ವಾರ್ಡ್ಗಳ ಕಾರ್ಪೋರೇಟರ್ಗಳು ಖುದ್ದಾಗಿ ಸ್ಥಳ ವೀಕ್ಷಣೆ ಮಾಡಲು ಮುಂದಾಗಿದ್ದು, ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಶೀಲಿಸಿ ಸಾಧ್ಯವಾದಲ್ಲಿ ಸ್ಥಳದಲ್ಲೇ ಬಗೆಹರಿಸಲು ಯತ್ನಿಸುತ್ತೇವೆ. ಇಲ್ಲದಿದ್ದಲ್ಲಿ ಸಮಯವಕಾಶ ತೆಗೆದುಕೊಂಡು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.
ತಿಂಗಳ ಅಂತ್ಯದಲ್ಲಿ ಬಜೆಟ್ ಮಂಡನೆ
ಮಾರ್ಚ್ ತಿಂಗಳ ಅಂತ್ಯದಲ್ಲಿ ಬಜೆಟ್ ಮಂಡನೆ ಮಾಡಲಿದ್ದು, ಅಧಿಕಾರಿಗಳು ಸೇರಿದಂತೆ ನಗರದ ಸಮಸ್ತ ಜನರು ನಗರಾಭಿವೃದ್ಧಿಗೆ ಸೂಕ್ತ ಸಲಹೆ, ಸೂಚನೆಗಳನ್ನು ವಾಟ್ಸ್ಆ್ಯಪ್ ನಂಬರ್ಗೆ ತಲುಪಿಸಬಹುದು ಅಥವಾ ಬರಹದ ಮೂಲಕ ಕಚೇರಿಗೆ ತಂದು ಕೊಡಬಹುದು. ನಿಮ್ಮ ಸಲಹೆಗಳನ್ನು ಪರಿಶೀಲಿಸಿ ಬಜೆಟ್ನಲ್ಲಿ ಅನುಮೋದಿಸಲು ಯತ್ನಿಸುತ್ತೇವೆ ಎಂದು ತಿಳಿಸಿದರು.
ಸನ್ಮಾನ, ಸಮಾರಂಭಗಳಿಗೆ ಕರೆಯಬೇಡಿ
ಮೇಯರ್ ಅವಧಿ ಒಂದು ವರ್ಷ ಮಾತ್ರ ಇದ್ದು, ಈ ಸಂಪೂರ್ಣ ಅವಧಿಯನ್ನು ಸಾರ್ವಜನಿಕರ ಸೇವೆಗೆ ಮೀಸಲಿಡುತ್ತೇನೆ. ಸಮಯದ ಅಭಾವವಿರುವುದರಿಂದ ಸಮರ್ಪಕ ಸೇವೆ ಸಲ್ಲಿಸಲು ಕಷ್ಟವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಸನ್ಮಾನ, ಸಭೆ-ಸಮಾರಂಭಗಳಿಗೆ ನನ್ನನ್ನು ಕರೆದು ಪ್ರಶಸ್ತಿ-ಪುರಸ್ಕಾರಗಳನ್ನು ನೀಡಬೇಡಿ.
ನನ್ನ ಅವಧಿ ಮುಗಿದ ನಂತರ ನಾನು ಮಾಡಿದ ಸೇವೆಯನ್ನು ಪರಿಶೀಲಿಸಿ ನಂತರ ಸನ್ಮಾನಿಸಿ ಹಾಗೂ ಹಾರ, ಬೊಕ್ಕೆ ಎಂದು ನೀಡುವ ಬದಲು ಪುಸ್ತಕಗಳನ್ನು ಕೊಡಿ ಎಂದು ಮನವಿ ಮಾಡಿದರು. ಈಗಾಗಲೇ 2 ಸಾವಿರ ಪುಸ್ತಕಗಳು ಕಚೇರಿಗೆ ಬಂದಿದ್ದು, ಅವುಗಳನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಸದಸ್ಯರಾದ ಕೆ.ಎಂ.ವೀರೇಶ್, ಶಿವಪ್ರಕಾಶ್, ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಸುನಿಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

