ದಿನದ ಸುದ್ದಿ
ಕಾರಂತರು ಸಾಯಲಿ ಎಂದು ಬಯಸಿದ್ದ ಅಮಿನ್ ಮಟ್ಟು ಕೊಟ್ಟ ಸಮರ್ಥನೆ ಏನು ಗೊತ್ತಾ?

ಸುದ್ದಿದಿನ ಡೆಸ್ಕ್: ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದದಲ್ಲಿ ಆರೆಸ್ಸೆಸ್ ಅನ್ನು ಸಮರ್ಥಿಸಿಕೊಂಡಾಗ ಜ್ಞಾನಪೀಠ ಪುರಸ್ಕೃತ ಸಾಹಿತಿ ಶಿವರಾಮ ಕಾರಂತರು ಸಾಯಲಿ ಎಂದು ಬಯಸಿದ್ದೆ ಎಂಬುದಾಗಿ ವಿಮರ್ಶಿಸಿದ್ದ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ತಮ್ಮ ವಾದವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಕಾರಂತರ ಕುರಿತು ತಮಗಿರುವ ಪ್ರೀತಿ, ಹಾಗೂ ಮನಸ್ಸಿನಲ್ಲಿದ್ದ ಅವರ ಬಿಂಬ ಒಡೆದುಹೋದಾಗ ಆದ ನೋವು ಎಲ್ಲವನ್ನೂ ಈ ಪೋಸ್ಟ್ ನಲ್ಲಿ ಬರೆದಿದ್ದಾರೆ. ಅವರು ಬರೆದಿರುವ ಫೇಸ್ ಬುಕ್ ಪೋಸ್ಟ್ ಗೆ ಮೆಚ್ಚುಗೆಯ ಕಮೆಂಟ್ ಗಳು ವ್ಯಕ್ತವಾಗುತ್ತಿವೆ. ಆ ಪೋಸ್ಟ್ ಹೀಗಿದೆ.
ಶಿವರಾಮ ಕಾರಂತರು ನನ್ನ ಮೊದಲ ವೈಚಾರಿಕ ಗುರು. ನಾನು ಎನ್.ನರಸಿಂಹಯ್ಯ ಅವರ ಪತ್ತೇದಾರಿ ಕಾದಂಬರಿಗಳಿಂದ ನೇರವಾಗಿ ಕಾರಂತರ ಕಾದಂಬರಿಗಳಿಗೆ ಗ್ರಾಜುವೇಟ್ ಆದವನು. ಸಾಹಿತ್ಯದ ವಿದ್ಯಾರ್ಥಿಯಲ್ಲದ ನಾನು ಪಿಯುಸಿ ಮುಗಿಸುವಷ್ಟರಲ್ಲಿ ಅವರ ಅಲ್ಲಿಯವರೆಗಿನ ಎಲ್ಲ ಕೃತಿಗಳನ್ನು ಓದಿಮುಗಿಸಿದವನು. ನನ್ನೊಳಗಿನ ವೈಚಾರಿಕ ಸ್ಪಷ್ಟತೆಗೆ ಮೊದಲು ಕಾರಣರಾದವರು ಕಾರಂತರು. ಅಂಬೇಡ್ಕರ್, ಲೋಹಿಯಾ, ಗಾಂಧೀಜಿ, ಕುವೆಂಪು, ಲಂಕೇಶ್ ನನಗೆ ಸಿಕ್ಕಿದ್ದು ನಂತರದ ದಿನಗಳಲ್ಲಿ. ಆದರೆ ಇವರನ್ನು ಓದಲು ಪ್ರೇರಣೆ ನೀಡಿದವರು ಕಾರಂತರು.
ಕಾರಂತರು ಘೋಷಿಸಿಕೊಳ್ಳದೆ ಇದ್ದರೂ ಅವರ ಕೃತಿಗಳಲ್ಲಿ ವೈಚಾರಿಕತೆಯ ಒಂದು ಒಳ ಹರಿವು ಇರುತ್ತಿತ್ತು. ಅದನ್ನು ಅವರು ಒಂದು Statement ರೀತಿ ಹೇಳದೆಯೇ ನಮ್ಮೊಳಗೆ ವೈಚಾರಿಕತೆಯನ್ನು ಬಿತ್ತುತ್ತಾ ಹೋದವರು. ಈ ಮೂಲಕವೇ ನನ್ನಂತಹವರಿಗೆ ಓದಿನ ಪಯಣದ ದಾರಿಯನ್ನು ತಿಳಿಸಿಕೊಟ್ಟವರು.
ಇದನ್ನು ಹಿಂದೊಮ್ಮೆ ಬರೆದಿದ್ದೆ, ನಾನು ಓದಲು ತರುತ್ತಿದ್ದ ಕಾದಂಬರಿಗಳನ್ನು ಓದತೊಡಗಿದ್ದ ನಿವೃತ್ತ ಜೀವನ ಕಳೆಯುತ್ತಿದ್ದ ನನ್ನ ತಂದೆ, ಕೊನೆಯ ದಿನಗಳಲ್ಲಿ ದೇವರು-ಧರ್ಮದ ಬಗ್ಗೆ ನನ್ನಂತೆಯೇ ಮಾತನಾಡತೊಡಗಿದ್ದರು.
ಕಾರಂತರು ನನ್ನೊಳಗೆ ವೈಚಾರಿಕತೆಯ ಕಿಡಿ ಹಚ್ಚಿದ್ದರೆ, ತಾನೇ ಬದಲಾಗುವ ಮೂಲಕ ನನ್ನ ನಿಲುವು ಸರಿ ಎಂದು endorse ಮಾಡಿದವರು ನನ್ನ ತಂದೆ.
ಆದ್ದರಿಂದ ಕಾರಂತರ ಬಗ್ಗೆ ಯಾರಾದರೂ ಬೈದರೆ ನನ್ನ ತಂದೆಗೆ ಬೈದಷ್ಟೇ ಕೋಪ ಬರ್ತಿತ್ತು. ‘ಬಾಳ್ವೆಯ ಬೆಳಕು’ ಬಗ್ಗೆ ಸ್ನೇಹಿತರ ಜತೆ _ಹಲವುಸುತ್ತಿನ ಜಗಳವಾಡಿದ್ದೆ.
ನನ್ನ ವಿದ್ಯಾರ್ಥಿ ಜೀವನದಲ್ಲಿ ನನ್ನೊಳಗೆ ಅಚ್ಚೊತ್ತಿದ್ದ ಎರಡು ಬಿಂಬಗಳು, ಕಾರಂತರದ್ದು ಮತ್ತು ನನ್ನ ತಂದೆಯದ್ದು. ನನ್ನೊಳಗಿನ ಆ ಎರಡು ಬಿಂಬಗಳನ್ನು ನಾನು ಪ್ರೀತಿಸುತ್ತಾ ಬಂದವನು. ಆ ಬಿಂಬಗಳು ಛಿದ್ರಗೊಳ್ಳುವುದನ್ನು ನನಗೆ ಸಹಿಸಲಾಗುತ್ತಿರಲಿಲ್ಲ.
ಕಾರಂತರು ಮೊದಲಿನಿಂದಲೂ ಕಮ್ಯುನಿಷ್ಟರ ಟೀಕಾಕಾರರಾಗಿದ್ದರು. ಈ ವಿಷಯದಲ್ಲಿ ಅವರ ಕೆಲವು ಭಿನ್ನಾಭಿಪ್ರಾಯಗಳು ನನ್ನದೂ ಆಗಿದ್ದವು.
ಆದರೆ…
ಬಾಬರಿ ಮಸೀದಿ ಧ್ವಂಸದ ಘಟನೆಯನ್ನು ಅವರು ಬೆಂಬಲಿಸತೊಡಗಿದಾಗ ನನ್ನೊಳಗಿನ ಕಾರಂತರ ಬಿಂಬ ಅಲುಗಾಡತೊಡಗಿತ್ತು.
ಈದ್ಗಾ ಮೈದಾನದ ವಿವಾದದ ಸಂದರ್ಭದಲ್ಲಿ ಕಾರಂತರು ಧಾರವಾಡಕ್ಕೆ ಬಂದಿದ್ದರು. ಅವರನ್ನು ಧಾರವಾಡ ವಿಶ್ವವಿದ್ಯಾಲಯದ ಗೆಸ್ಟ್ ಹೌಸ್ನಲ್ಲಿ ನಾನು ಸಂದರ್ಶನ ಮಾಡಿದ್ದೆ. ಆಗ ಅವರು ಈದ್ಗಾ ಮೈದಾನ ವಿವಾದದ ಹಿಂದಿನ ಕೋಮುವಾದಿ ಅಜೆಂಂಡಾದ ಅರಿವಿಲ್ಲದಂತೆ ಸಂಘ ಪರಿವಾರವನ್ನು ಸಮರ್ಥಿಸಿಕೊಂಡು ಮಾತನಾಡಿದ್ದು ಕೇಳಿ ಆಘಾತಕ್ಕೀಡಾಗಿದ್ದೆ. ನನ್ನೊಳಗೆ ಕಟ್ಟಿಕೊಂಡಿದ್ದ ಕಾರಂತರ ಬಿಂಬ ಛಿದ್ರಗೊಳ್ಳುತ್ತಿತ್ತು. ನನ್ನ ಕೈ ಹಿಡಿದು ಮುನ್ನಡೆಸುತ್ತಾ ಬಂದಿದ್ದ ವೈಚಾರಿಕ ಕಾರಂತರು ಇಲ್ಲವಾದರಲ್ಲಾ ಎಂಬ ನೋವು ನನ್ನನ್ನು ತಿನ್ನತೊಡಗಿತ್ತು. ವೈಚಾರಿಕ ಕಾರಂತರು ಶಾಶ್ವತವಾಗಿ ಉಳಿಯಬೇಕಾದರೆ, ಕೋಮುವಾದದ ಸಮರ್ಥಕ ಕಾರಂತರು ಅಳಿಯಬೇಕು ಎಂದು ಒಂದು ಕ್ಷಣ ನನಗನಿಸಿದ್ದು ನಿಜ. ಈ ಅಳಿವು-ಉಳಿವು ದೈಹಿಕವಾದುದಲ್ಲ, ಅದು ಬರವಣಿಗೆಯ ಅಳಿವು-ಉಳಿವಿಗೆ ಸಂಬಂಧಿಸಿದ್ದು.
ಆದರೆ ಕಾರಂತರು ನನ್ನೊಳಗಿನ ಅವರ ಬಿಂಬವನ್ನು ಶಾಶ್ವತವಾಗಿ ಛಿದ್ರಗೊಳ್ಳಲು ಬಿಡಲಿಲ್ಲ. ಯಾಕೆಂದರೆ ಅವರು ತಾನು ಬರೆದುದನ್ನೇ disown ಮಾಡುವಂತೆ ಬರೆಯಲಿಲ್ಲ. ಸಾಹಿತಿ ತನ್ನ ಕೃತಿಗಳ ಮೂಲಕ ಬದುಕುತ್ತಾನೆ. ಲೇಖಕ ಕಾಲವಾದ ನಂತರವೂ ಬರವಣಿಗೆ ಉಳಿಯುತ್ತದೆ, ಅದಕ್ಕೆ ಸಾವಿರುವುದಿಲ್ಲ.
ಶಿವರಾಮ ಕಾರಂತರು ಈಗ ಬದುಕಬೇಕಿತ್ತು. ೧೯೭೫ರಲ್ಲಿ ತುರ್ತುಪರಿಸ್ಥಿತಿಯನ್ನು ವಿರೋಧಿಸಿ ಪದ್ಮ ಭೂಷಣ ಪ್ರಶಸ್ತಿಯನ್ನು ವಾಪಸು ಮಾಡಿದವರು ಕಾರಂತರು. ಅವರು ಬದುಕಿದ್ದರೆ ಈಗಿನ ಅಘೋಷಿತ ತುರ್ತು ಪರಿಸ್ಥಿತಿ ವಿರುದ್ದ ಅವರೇ ಮೊದಲು ದನಿ ಎತ್ತುತ್ತಿದ್ದರೇನೋ?

ದಿನದ ಸುದ್ದಿ
ಮೇ 22 | ಇಂದಿನ ಅಡಿಕೆ ದರ

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ):
ಶಿವಮೊಗ್ಗ ಮಾರುಕಟ್ಟೆ:
ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429
ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):
ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767
ಸಾಗರ ಮಾರುಕಟ್ಟೆ (ಶಿವಮೊಗ್ಗ):
ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621
ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):
ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729
ಚಿತ್ರದುರ್ಗ ಮಾರುಕಟ್ಟೆ:
ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್ಶುಗರ್, ಕೋಕೆನ್, ನಿಕೋಟಿನ್ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್ಲೈನ್ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ6 days ago
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
-
ಅಂಕಣ4 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ7 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ3 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ