ದಿನದ ಸುದ್ದಿ
ಕಾರಂತರು ಸಾಯಲಿ ಎಂದು ಬಯಸಿದ್ದ ಅಮಿನ್ ಮಟ್ಟು ಕೊಟ್ಟ ಸಮರ್ಥನೆ ಏನು ಗೊತ್ತಾ?
![](https://suddidina.com/wp-content/uploads/2018/08/Dinesh-Amin-Mattu-3x2.jpg)
ಸುದ್ದಿದಿನ ಡೆಸ್ಕ್: ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದದಲ್ಲಿ ಆರೆಸ್ಸೆಸ್ ಅನ್ನು ಸಮರ್ಥಿಸಿಕೊಂಡಾಗ ಜ್ಞಾನಪೀಠ ಪುರಸ್ಕೃತ ಸಾಹಿತಿ ಶಿವರಾಮ ಕಾರಂತರು ಸಾಯಲಿ ಎಂದು ಬಯಸಿದ್ದೆ ಎಂಬುದಾಗಿ ವಿಮರ್ಶಿಸಿದ್ದ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ತಮ್ಮ ವಾದವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಕಾರಂತರ ಕುರಿತು ತಮಗಿರುವ ಪ್ರೀತಿ, ಹಾಗೂ ಮನಸ್ಸಿನಲ್ಲಿದ್ದ ಅವರ ಬಿಂಬ ಒಡೆದುಹೋದಾಗ ಆದ ನೋವು ಎಲ್ಲವನ್ನೂ ಈ ಪೋಸ್ಟ್ ನಲ್ಲಿ ಬರೆದಿದ್ದಾರೆ. ಅವರು ಬರೆದಿರುವ ಫೇಸ್ ಬುಕ್ ಪೋಸ್ಟ್ ಗೆ ಮೆಚ್ಚುಗೆಯ ಕಮೆಂಟ್ ಗಳು ವ್ಯಕ್ತವಾಗುತ್ತಿವೆ. ಆ ಪೋಸ್ಟ್ ಹೀಗಿದೆ.
ಶಿವರಾಮ ಕಾರಂತರು ನನ್ನ ಮೊದಲ ವೈಚಾರಿಕ ಗುರು. ನಾನು ಎನ್.ನರಸಿಂಹಯ್ಯ ಅವರ ಪತ್ತೇದಾರಿ ಕಾದಂಬರಿಗಳಿಂದ ನೇರವಾಗಿ ಕಾರಂತರ ಕಾದಂಬರಿಗಳಿಗೆ ಗ್ರಾಜುವೇಟ್ ಆದವನು. ಸಾಹಿತ್ಯದ ವಿದ್ಯಾರ್ಥಿಯಲ್ಲದ ನಾನು ಪಿಯುಸಿ ಮುಗಿಸುವಷ್ಟರಲ್ಲಿ ಅವರ ಅಲ್ಲಿಯವರೆಗಿನ ಎಲ್ಲ ಕೃತಿಗಳನ್ನು ಓದಿಮುಗಿಸಿದವನು. ನನ್ನೊಳಗಿನ ವೈಚಾರಿಕ ಸ್ಪಷ್ಟತೆಗೆ ಮೊದಲು ಕಾರಣರಾದವರು ಕಾರಂತರು. ಅಂಬೇಡ್ಕರ್, ಲೋಹಿಯಾ, ಗಾಂಧೀಜಿ, ಕುವೆಂಪು, ಲಂಕೇಶ್ ನನಗೆ ಸಿಕ್ಕಿದ್ದು ನಂತರದ ದಿನಗಳಲ್ಲಿ. ಆದರೆ ಇವರನ್ನು ಓದಲು ಪ್ರೇರಣೆ ನೀಡಿದವರು ಕಾರಂತರು.
ಕಾರಂತರು ಘೋಷಿಸಿಕೊಳ್ಳದೆ ಇದ್ದರೂ ಅವರ ಕೃತಿಗಳಲ್ಲಿ ವೈಚಾರಿಕತೆಯ ಒಂದು ಒಳ ಹರಿವು ಇರುತ್ತಿತ್ತು. ಅದನ್ನು ಅವರು ಒಂದು Statement ರೀತಿ ಹೇಳದೆಯೇ ನಮ್ಮೊಳಗೆ ವೈಚಾರಿಕತೆಯನ್ನು ಬಿತ್ತುತ್ತಾ ಹೋದವರು. ಈ ಮೂಲಕವೇ ನನ್ನಂತಹವರಿಗೆ ಓದಿನ ಪಯಣದ ದಾರಿಯನ್ನು ತಿಳಿಸಿಕೊಟ್ಟವರು.
ಇದನ್ನು ಹಿಂದೊಮ್ಮೆ ಬರೆದಿದ್ದೆ, ನಾನು ಓದಲು ತರುತ್ತಿದ್ದ ಕಾದಂಬರಿಗಳನ್ನು ಓದತೊಡಗಿದ್ದ ನಿವೃತ್ತ ಜೀವನ ಕಳೆಯುತ್ತಿದ್ದ ನನ್ನ ತಂದೆ, ಕೊನೆಯ ದಿನಗಳಲ್ಲಿ ದೇವರು-ಧರ್ಮದ ಬಗ್ಗೆ ನನ್ನಂತೆಯೇ ಮಾತನಾಡತೊಡಗಿದ್ದರು.
ಕಾರಂತರು ನನ್ನೊಳಗೆ ವೈಚಾರಿಕತೆಯ ಕಿಡಿ ಹಚ್ಚಿದ್ದರೆ, ತಾನೇ ಬದಲಾಗುವ ಮೂಲಕ ನನ್ನ ನಿಲುವು ಸರಿ ಎಂದು endorse ಮಾಡಿದವರು ನನ್ನ ತಂದೆ.
ಆದ್ದರಿಂದ ಕಾರಂತರ ಬಗ್ಗೆ ಯಾರಾದರೂ ಬೈದರೆ ನನ್ನ ತಂದೆಗೆ ಬೈದಷ್ಟೇ ಕೋಪ ಬರ್ತಿತ್ತು. ‘ಬಾಳ್ವೆಯ ಬೆಳಕು’ ಬಗ್ಗೆ ಸ್ನೇಹಿತರ ಜತೆ _ಹಲವುಸುತ್ತಿನ ಜಗಳವಾಡಿದ್ದೆ.
ನನ್ನ ವಿದ್ಯಾರ್ಥಿ ಜೀವನದಲ್ಲಿ ನನ್ನೊಳಗೆ ಅಚ್ಚೊತ್ತಿದ್ದ ಎರಡು ಬಿಂಬಗಳು, ಕಾರಂತರದ್ದು ಮತ್ತು ನನ್ನ ತಂದೆಯದ್ದು. ನನ್ನೊಳಗಿನ ಆ ಎರಡು ಬಿಂಬಗಳನ್ನು ನಾನು ಪ್ರೀತಿಸುತ್ತಾ ಬಂದವನು. ಆ ಬಿಂಬಗಳು ಛಿದ್ರಗೊಳ್ಳುವುದನ್ನು ನನಗೆ ಸಹಿಸಲಾಗುತ್ತಿರಲಿಲ್ಲ.
ಕಾರಂತರು ಮೊದಲಿನಿಂದಲೂ ಕಮ್ಯುನಿಷ್ಟರ ಟೀಕಾಕಾರರಾಗಿದ್ದರು. ಈ ವಿಷಯದಲ್ಲಿ ಅವರ ಕೆಲವು ಭಿನ್ನಾಭಿಪ್ರಾಯಗಳು ನನ್ನದೂ ಆಗಿದ್ದವು.
ಆದರೆ…
ಬಾಬರಿ ಮಸೀದಿ ಧ್ವಂಸದ ಘಟನೆಯನ್ನು ಅವರು ಬೆಂಬಲಿಸತೊಡಗಿದಾಗ ನನ್ನೊಳಗಿನ ಕಾರಂತರ ಬಿಂಬ ಅಲುಗಾಡತೊಡಗಿತ್ತು.
ಈದ್ಗಾ ಮೈದಾನದ ವಿವಾದದ ಸಂದರ್ಭದಲ್ಲಿ ಕಾರಂತರು ಧಾರವಾಡಕ್ಕೆ ಬಂದಿದ್ದರು. ಅವರನ್ನು ಧಾರವಾಡ ವಿಶ್ವವಿದ್ಯಾಲಯದ ಗೆಸ್ಟ್ ಹೌಸ್ನಲ್ಲಿ ನಾನು ಸಂದರ್ಶನ ಮಾಡಿದ್ದೆ. ಆಗ ಅವರು ಈದ್ಗಾ ಮೈದಾನ ವಿವಾದದ ಹಿಂದಿನ ಕೋಮುವಾದಿ ಅಜೆಂಂಡಾದ ಅರಿವಿಲ್ಲದಂತೆ ಸಂಘ ಪರಿವಾರವನ್ನು ಸಮರ್ಥಿಸಿಕೊಂಡು ಮಾತನಾಡಿದ್ದು ಕೇಳಿ ಆಘಾತಕ್ಕೀಡಾಗಿದ್ದೆ. ನನ್ನೊಳಗೆ ಕಟ್ಟಿಕೊಂಡಿದ್ದ ಕಾರಂತರ ಬಿಂಬ ಛಿದ್ರಗೊಳ್ಳುತ್ತಿತ್ತು. ನನ್ನ ಕೈ ಹಿಡಿದು ಮುನ್ನಡೆಸುತ್ತಾ ಬಂದಿದ್ದ ವೈಚಾರಿಕ ಕಾರಂತರು ಇಲ್ಲವಾದರಲ್ಲಾ ಎಂಬ ನೋವು ನನ್ನನ್ನು ತಿನ್ನತೊಡಗಿತ್ತು. ವೈಚಾರಿಕ ಕಾರಂತರು ಶಾಶ್ವತವಾಗಿ ಉಳಿಯಬೇಕಾದರೆ, ಕೋಮುವಾದದ ಸಮರ್ಥಕ ಕಾರಂತರು ಅಳಿಯಬೇಕು ಎಂದು ಒಂದು ಕ್ಷಣ ನನಗನಿಸಿದ್ದು ನಿಜ. ಈ ಅಳಿವು-ಉಳಿವು ದೈಹಿಕವಾದುದಲ್ಲ, ಅದು ಬರವಣಿಗೆಯ ಅಳಿವು-ಉಳಿವಿಗೆ ಸಂಬಂಧಿಸಿದ್ದು.
ಆದರೆ ಕಾರಂತರು ನನ್ನೊಳಗಿನ ಅವರ ಬಿಂಬವನ್ನು ಶಾಶ್ವತವಾಗಿ ಛಿದ್ರಗೊಳ್ಳಲು ಬಿಡಲಿಲ್ಲ. ಯಾಕೆಂದರೆ ಅವರು ತಾನು ಬರೆದುದನ್ನೇ disown ಮಾಡುವಂತೆ ಬರೆಯಲಿಲ್ಲ. ಸಾಹಿತಿ ತನ್ನ ಕೃತಿಗಳ ಮೂಲಕ ಬದುಕುತ್ತಾನೆ. ಲೇಖಕ ಕಾಲವಾದ ನಂತರವೂ ಬರವಣಿಗೆ ಉಳಿಯುತ್ತದೆ, ಅದಕ್ಕೆ ಸಾವಿರುವುದಿಲ್ಲ.
ಶಿವರಾಮ ಕಾರಂತರು ಈಗ ಬದುಕಬೇಕಿತ್ತು. ೧೯೭೫ರಲ್ಲಿ ತುರ್ತುಪರಿಸ್ಥಿತಿಯನ್ನು ವಿರೋಧಿಸಿ ಪದ್ಮ ಭೂಷಣ ಪ್ರಶಸ್ತಿಯನ್ನು ವಾಪಸು ಮಾಡಿದವರು ಕಾರಂತರು. ಅವರು ಬದುಕಿದ್ದರೆ ಈಗಿನ ಅಘೋಷಿತ ತುರ್ತು ಪರಿಸ್ಥಿತಿ ವಿರುದ್ದ ಅವರೇ ಮೊದಲು ದನಿ ಎತ್ತುತ್ತಿದ್ದರೇನೋ?
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!