ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version