Connect with us

ನೆಲದನಿ

ಸಾಧನೆಯ ಹಾದಿಯಲ್ಲಿ ಯುವ ನಿರ್ದೇಶಕ ‘ಡಿ.ಸತ್ಯಪ್ರಕಾಶ್’

Published

on

  • ಡಾ.ಕೆ.ಎ.ಓಬಳೇಶ್

ಗತ್ತಿನ ಸಾಂಸ್ಕೃತಿಕ ವಲಯದಲ್ಲಿ ಯುವಪ್ರತಿಭೆಗಳು ಸೃಜನಾತ್ಮಕ ನೆಲೆಯಲ್ಲಿ ತಮ್ಮ ಅಸ್ತಿತ್ವವನ್ನು ರೂಪಿಸಿಕೊಳ್ಳುವತ್ತ ದಾಪುಗಾಲಿಡುತ್ತಿವೆ. ಇಂತಹ ಯುವಪ್ರತಿಭೆಗಳಿಗೆ ಕಲಾಲೋಕವು ಸೂಕ್ತ ವೇದಿಕೆಯೊಂದನ್ನು ನಿರಂತರವಾಗಿ ಕಲ್ಪಿಸಿಕೊಡುತ್ತ ಬಂದಿದೆ.

ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದಲ್ಲಾ ಒಂದು ವಿಶಿಷ್ಟವಾದ ಕಲಾಪ್ರತಿಭೆಗೆ ಅಂತರ್ಗತವಾಗಿರುತ್ತದೆ. ಆದರೆ ಅದು ಬೆಳಕಿಗೆ ಬರುವುದು ಮಾತ್ರ ಪ್ರದರ್ಶನಾತ್ಮಕ ನೆಲೆಯಲ್ಲಿ. ಇಂತಹ ಯುವಪ್ರತಿಭೆಗೆಳಲ್ಲಿ ಕನ್ನಡ ಚಿತ್ರರಂಗ ಕಂಡ ಯುವ ನಿರ್ದೇಶಕ ಡಿ.ಸತ್ಯಪ್ರಕಾಶ್ ಅವರು ಒಬ್ಬರಾಗಿದ್ದಾರೆ. ಬಹುತೇಕ ಯುವ ಪೀಳಿಗೆ ಹೆಚ್ಚು ಆಕರ್ಷಿತವಾಗುವುದು ಸಿನಿಮಾ ರಂಗದ ಮೇಲೆ.

ನಾವು ಸಿನಿಮಾ ಕ್ಷೇತ್ರದಲ್ಲಿ ನಟರಾಗಿಯೋ, ನಿರ್ದೇಶಕರಾಗಿಯೋ, ಸಾಹಿತಿಯಾಗಿಯೋ ಇಲ್ಲವೇ ಸಿನಿಮಾ ರಂಗದ ವಿವಿಧ ಕ್ಷೇತ್ರಗಳ ಮೂಲಕ ಗುರುತಿಸಿಕೊಳ್ಳಬೇಕೆಂಬ ಹಂಬಲವಿರುತ್ತದೆ. ಈ ನಿಟ್ಟಿನಲ್ಲಿ ಸಿನಿಮಾ ಲೋಕವನ್ನು ಹರಸಿಕೊಂಡು ಹೊರಟ ಎಷ್ಟೋ ಪ್ರತಿಭೆಗಳಿಗೆ ಅವಕಾಶಗಳ ಕೊರತೆಯಿಂದಲೋ, ಸೂಕ್ತವಾದ ಮಾರ್ಗದರ್ಶನದ ಕೊರತೆಯಿಂದಲೋ ಸಾಕಷ್ಟು ಏಳು ಬೀಳುಗಳನ್ನು ಕಂಡು ಕೈ ಸುಟ್ಟುಕೊಂಡು ದೂರ ಸರಿದವರು ಇದ್ದಾರೆ.

ಆದರೆ ಯುವ ಪ್ರತಿಭೆಯಾದ ಸತ್ಯಪ್ರಕಾಶ್ ಅವರು ಸೋಲೆ ಬರಲಿ, ಗೆಲುವೆ ಬರಲಿ ನಾನು ಆಯ್ದುಕೊಂಡಿರುವ ಸಿನಿಮಾ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂಬ ಹಠದಿಂದಾಗಿ ಇಂದು ಹಲವಾರು ಸಿನಿಮಾಗಳ ಮೂಲಕ ಸದ್ದಿಲ್ಲದೆ ಸುದ್ಧಿಯಾಗಿ ಸಿನಿಪ್ರಿಯರ ಮನ ಗೆದ್ದಿದ್ದಾರೆ. ಅವರ ಸಿನಿಯಾನದ ಮೇಲೆ ಬೆಳಕು ಚೆಲ್ಲುವ ಒಂದು ಸಣ್ಣ ಆಶಯವು ಪ್ರಸ್ತುತ ಲೇಖನದ ಉದ್ದೇಶವಾಗಿದೆ.

ಶ್ರೀಯುತ ಡಿ.ಸತ್ಯಪ್ರಕಾಶ್ ಅವರು ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಕೆ.ಸಿ.ದತ್ತಾತ್ರೇಯ ಹಾಗೂ ಗೀತಾ ದಂಪತಿಗಳ ಮಗನಾಗಿ ದಿನಾಂಕ 20 ಏಪ್ರಿಲ್ 1984ರಂದು ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಕಡೂರು, ಹಾಸನ, ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ ಪೂರೈಸಿದರು. ಶಿವಮೊಗ್ಗದ ಡಿ.ವಿ.ಎಸ್ ಕಾಲೇಜಿನಲ್ಲಿ ಡಿಪ್ಲೋಮ ಇನ್ ಕಂಪ್ಯೂಟರ್ ಸೈನ್ಸ್ ಮುಗಿಸಿದ ತರುವಾಯದಲ್ಲಿ ಸಿನಿಮಾ ಲೋಕದತ್ತ ತಮ್ಮ ಆಸಕ್ತಿಯನ್ನು ಕೇಂದ್ರಿಕರಿಸಿದರು.

ಸತ್ಯಪ್ರಕಾಶ್ ಅವರು ಬಾಲ್ಯದ ದಿನಗಳಿಂದಲೂ ಸಾಂಸ್ಕøತಿಕ ಚಟುವಟಿಗಳಲ್ಲಿ ವಿಶೇಷವಾದ ಆಸಕ್ತಿಯನ್ನು ಹೊಂದಿದ್ದರು. ಇವರ ತಾತ ಎಚ್.ಸಿ.ಸುಬ್ಬರಾವ್ ಅವರು ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ನ್ಯಾಷನಲ್ ಅವಾರ್ಡ್ ಗಳಿಸಿದ್ದರು. ಇವರು ರಂಗಭೂಮಿ ಹಾಗೂ ನಾಟಕ ಕ್ಷೇತ್ರದಲ್ಲಿ ವಿಶೇಷವಾದ ಪರಿಣಿತಿ ಹೊಂದಿದ್ದರು. ಸತ್ಯಪ್ರಕಾಶ್ ಅವರು ಬಾಲ್ಯದ ಶಿಕ್ಷಣ ಪಡೆಯುವ ಹಂತದಲ್ಲಿಯೇ ತಾತನಿಂದ ಪ್ರೇರಿತರಾಗಿ ಹಲವಾರು ರೇಡಿಯೋ ನಾಟಕಗಳು ಹಾಗೂ ಏಕಪಾತ್ರಾಭಿನಯದಲ್ಲಿ ಪರಿಣಿತಿಯನ್ನು ಗಳಿಸಿದ್ದರು.

ಹೀಗಾಗಿ ಕಲಾಲೋಕದ ನಂಟು ಇವರಿಗೆ ಬಾಲ್ಯದಿಂದಲೇ ಬೆಸೆದುಕೊಂಡಿತ್ತು. ಹಾಗೆಯೇ ಸತ್ಯಪ್ರಕಾಶ್ ಅವರ ತಾಯಿಯವರು ಕೂಡ ಶಾಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಶೇಷವಾದ ವೇಶಭೂಷಣಗಳ ಮೂಲಕ ತಮ್ಮ ಮುದ್ಧಿನ ಕಂದನಲ್ಲಿ ಸೃಜನಶೀಲತೆಯನ್ನು ಮೈಗೂಡಿಸುತ್ತ ಬಂದಿದ್ದರು. ಇದು ಕೂಡ ಇವರ ಆಂತರ್ಯದಲ್ಲಿ ಕಲಾತ್ಮಕ ಪ್ರತಿಭೆಯೊಂದು ರೂಪುತಳೆಯಲು ಪ್ರಮುಖ ಕಾರಣವಾಯಿತು.

ಇವೆಲ್ಲದರ ನಡುವೆ ಇವರ ತಂದೆ ದತ್ತಾತ್ರೇಯ ಅವರು ಸಾಹಿತ್ಯಾಸಕ್ತರಾಗಿದ್ದು, ಹಲವಾರು ಕತೆ, ಕಾದಂಬರಿಗಳನ್ನು ಓದುವ ಹವ್ಯಾಸವನ್ನು ಮೈಗೂಡಿಸಿಕೊಂಡಿದ್ದರು. ಆದ ಕಾರಣ ಸತ್ಯಪ್ರಕಾಶ್ ಅವರಿಗೆ ಸಾಹಿತ್ಯದಲ್ಲಿ ವಿಶೇಷವಾದ ಅಭಿರುಚಿ ಮೂಡಿತ್ತು. ಈ ಕಾರಣದಿಂದಾಗಿಯೇ ಇವರು ಕಂಪ್ಯೂಟರ್ ಸೈನ್ಸ್ ಶಿಕ್ಷಣ ಪಡೆದರು ಕೂಡ ಆ ಕ್ಷೇತ್ರಕ್ಕೆ ವಿದಾಯ ಹೇಳಿ, ತಮ್ಮಲ್ಲಿ ಬಾಲ್ಯದ ದಿನಮಾನಗಳಿಂದಲೂ ಅಂತರ್ಗತವಾಗಿ ಬೇರೂರಿದ್ದ ಕಲಾಲೋಕದತ್ತ ಮುಖ ಮಾಡಿದರು.
ಸತ್ಯಪ್ರಕಾಶ್ ಅವರು ಸಿನಿಮಾ ಲೋಕದಲ್ಲಿ ಕೆಲಸ ಮಾಡುವ ಉದ್ದೇಶದಿಂದಾಗಿ ಬೆಂಗಳೂರಿಗೆ ತೆರಳಿದ ಸಂದರ್ಭದಲ್ಲಿ ಅವಕಾಶಗಳ ಕೊರತೆ ಇತ್ತು. ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಟಿ.ಎಸ್.ನಾಗಾಭರಣ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುವ ಆಸಕ್ತಿಯಿಂದ ಅರ್ಜಿಯೊಂದನ್ನು ಸಲ್ಲಿಸಿದ್ದರು. ಆದರೆ ಎಂಟು ತಿಂಗಳುಗಳ ಕಾಲ ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ.

ಈ ಸಂದರ್ಭದಲ್ಲಿ ಸತ್ಯಪ್ರಕಾಶ್ ಅವರು ಅವಕಾಶಗಳಿಗಾಗಿ ಕೈಕಟ್ಟಿ ಕೂರದೆ ತಮ್ಮ ಸ್ನೇಹಿತರೊಂದಿಗೆ ಸೇರಿಕೊಂಡು ಕಿರುಚಿತ್ರಗಳ ತಯಾರಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ನಾಗಾಭರಣ ಅವರ ಬಳಿ ಅರ್ಜಿ ಸಲ್ಲಿಸಿದ ಎಂಟು ತಿಂಗಳ ತರುವಾಯ ಪ್ರಾಜೆಕ್ಟ್ ಒಂದಕ್ಕೆ ಸಹಾಯಕ ನಿರ್ದೇಶಕರ ಅವಶ್ಯಕತೆ ಇದೆ ಎಂಬ ಆಹ್ವಾನ ಬರುತ್ತದೆ.

ಈ ಸಂದರ್ಭದಲ್ಲಿ ಸತ್ಯಪ್ರಕಾಶ್ ಅವರನ್ನು ಸಂದರ್ಶನ ಮಾಡಿ ಇವರಲ್ಲಿರುವ ಕ್ರಿಯಾಶೀಲ ವ್ಯಕ್ತಿತ್ವ, ನಿರ್ದೇಶನದ ಬಗ್ಗೆ ಇವರು ಹೊಂದಿರುವ ಕಾಳಜಿ ಹಾಗೂ ಬದ್ಧತೆಯಿಂದಾಗಿ ಸಹಾಯಕ ನಿರ್ದೇಶಕರಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಆರಂಭಿಕ ಹಂತದಲ್ಲಿ ನಿರ್ದೇಶನದ ಬಗೆಗಿನ ತಾಂತ್ರಿಕತೆಯ ಕುರಿತು ಅಷ್ಟೊಂದು ತಿಳಿವು ಹೊಂದಿರದ ಸತ್ಯಪ್ರಕಾಶ್ ಅವರು ತಮ್ಮ ಪ್ರಾಮಾಣಿಕ ಪ್ರಯತ್ನದ ಮೂಲಕವಾಗಿ ಪ್ರಬುದ್ಧತೆಯನ್ನು ಗಳಿಸುತ್ತ ಮುನ್ನಡೆಯುತ್ತಾರೆ.

ಮುಂದೆ ಟಿ.ಎಸ್.ನಾಗಾಭರಣ ಅವರ ನೆಚ್ಚಿನ ಶಿಷ್ಯರಾಗಿ, ಅವರ ಗರಡಿಯೊಳಗೆ ಕ್ರಿಯಾಶೀಲ ನಿರ್ದೇಶಕರಾಗಿ ಬೆಳೆದು ನಿಲ್ಲುತ್ತಾರೆ. ಸಹಾಯಕ ನಿರ್ದೇಶಕರಾಗಿ ಹಲವಾರು ಸಿನಿಮಾಗಳನ್ನು ನಿರ್ವಹಿಸಿದ ಇವರು, ಇದೇ ಹಂತದಲ್ಲಿ ಕೆಲವೊಂದು ಸಿನಿಮಾಗಳಿಗೆ ಚಿತ್ರಕಥೆ, ಸಂಭಾಷಣೆಗಳನ್ನು ಸಿದ್ಧಪಡಿಸುವಷ್ಟು ಆತ್ಮಸ್ಥೈರ್ಯವನ್ನು ಗಳಿಸುತ್ತಾರೆ.

ನಂತರದಲ್ಲಿ ಸ್ವತಃ ನಿರ್ದೇಶಕರಾಗಿ ಒಂದು ಸಿನಿಮಾವನ್ನು ಯಶಸ್ವಿಯಾಗಿ ಕಟ್ಟಬಲ್ಲೆ ಎಂಬ ಆತ್ಮವಿಶ್ವಾಸವನ್ನು ಪಡೆಯುತ್ತಾರೆ. ಇಷ್ಟೆಲ್ಲಾ ಬೆಳವಣಿಗೆಗೆ ಪ್ರಮುಖ ಕಾರಣವೆಂದರೆ ಅವರಲ್ಲಿನ ಪ್ರಾಮಾಣಿಕ ವ್ಯಕ್ತಿತ್ವ ಹಾಗೂ ಯಾವುದೇ ಕೆಲಸವನ್ನಾದರೂ ಯಶಸ್ವಿಯಾಗಿ ನಿಭಾಯಿಸಬಲ್ಲೆ ಎನ್ನುವ ಎದೆಗಾರಿಕೆ ಅವರನ್ನು ಕನ್ನಡ ಚಿತ್ರರಂಗ ಗುರುತಿಸುವಂತೆ ರೂಪಿಸಿದೆ.

ಸತ್ಯಪ್ರಕಾಶ್ ಅವರು ನಿರ್ದೇಶಕರಾಗಿ ಸಿನಿಮಾವನ್ನು ಆರಂಭಿಸುವುದಕ್ಕೆ ಮುಂದಾದ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತ ಬಂದಿದ್ದಾರೆ. ಅವುಗಳಲ್ಲಿ ಬಹುಮುಖ್ಯವಾದ ಸಮಸ್ಯೆಯೆಂದರೆ ಇವರ ಸಿನಿಮಾಗಳಿಗೆ ಇರುವ ನಿರ್ಮಾಪಕರ ಕೊರತೆ. ಯಾವ ನಿರ್ಮಾಪಕರು ಮುಂದೆ ಬರದಿದ್ದ ಸಂದರ್ಭದಲ್ಲಿ ಕೈಕಟ್ಟಿ ಕೂರದೆ ಇವರು ತಮ್ಮ ಸಮಾನ ಮನಸ್ಕರೊಂದಿಗೆ ಸೇರಿ, ಒಂದು ತಂಡವನ್ನು ರಚಿಸಿಕೊಂಡು ಎಲ್ಲರೂ ಸ್ವಲ್ಪ ಸ್ವಲ್ಪ ಹಣವನ್ನು ಸಂಗ್ರಹಿಸಿಕೊಂಡು ಸಿನಿಮಾ ಯಾನವನ್ನು ಮುಂದುವರೆಸುತ್ತಾರೆ.

ಇಂತಹ ಸಮಾನ ಮನಸ್ಕರ ಸಿನಿಯಾನದ ಫಲವಾಗಿ ಮೂಡಿಬಂದ ಸಿನಿಮಾಗಳಲ್ಲಿ ಮೊದಲು ಆರಂಭಿಸಿದ ಕಿರುಚಿತ್ರ ‘ಜಯನಗರ 4th ಬ್ಲಾಕ್’. ಆ ನಂತರದ ಸಿನಿಮಾ ‘ರಾಮ ರಾಮ ರೇ’. ಇಲ್ಲಿ ಯುವಪ್ರತಿಭೆಗಳನ್ನೇ ಕೇಂದ್ರವಾಗಿಟ್ಟುಕೊಂಡು ವಿಶಿಷ್ಟ ದೃಷ್ಟಿಕೋನದ ಅಡಿಯಲ್ಲಿ ಸಿನಿಮಾವೊಂದನ್ನು ರೂಪಿಸಿದರು. ಈ ಸಿನಿಮಾ ಕನ್ನಡ ಚಿತ್ರರಂಗವು ಸತ್ಯಪ್ರಕಾಶ್ ಅವರನ್ನು ಬೆರಗುಗಣ್ಣಿನಿಂದ ನೋಡುವಂತೆ ಮಾಡಿತು.

ಸತ್ಯಪ್ರಕಾಶ್ ಅವರು ಕೂಡ ತಮ್ಮಲ್ಲಿ ಅಂತರ್ಗತವಾಗಿರುವ ವಿಶಿಷ್ಟ ಪ್ರತಿಭೆಯೊಂದನ್ನು ಈ ಸಿನಿಮಾದ ಮೂಲಕ ಹೊರಹಾಕಿದ್ದರು. ಹೀಗಾಗಿಯೇ ಈ ಸಿನಿಮಾ ಸಾಕಷ್ಟು ಸುದ್ದು ಮಾಡಿತು. ಈ ಸಿನಿಮಾದ ಅತ್ಯುತ್ತಮ ನಿರ್ದೇಶನಕ್ಕಾಗಿ 2016ರ ‘ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್’ ಲಭಿಸಿತು. ಬೆಂಗಳೂರಿನಲ್ಲಿ ನಡೆದ ಇಂಟರ್‍ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‍ನಲ್ಲಿ ‘ಕನ್ನಡದ ಅತ್ಯುತ್ತಮ ಸಿನಿಮಾ’ ಎಂಬ ಕೀರ್ತಿಗೆ ಇದು ಪಾತ್ರವಾಯಿತು.

ಹಾಗೆಯೇ 64ನೇ ‘ಫಿಲ್ಮ್‍ಫೇರ್ ಅವಾರ್ಡ್ ಸೌತ್’ನಲ್ಲಿ ಅತ್ಯುತ್ತಮ ಸಿನಿಮಾವಾಗಿ ಪ್ರತಿನಿಧಿಸಲ್ಪಟ್ಟಿತು. ಇದು ಸತ್ಯಪ್ರಕಾಶ್ ಅವರಲ್ಲಿ ಮತ್ತಷ್ಟು ಆತ್ಮವಿಶ್ವಾಸವನ್ನು ಮೂಡಿಸಿತು. ಇದೇ ಆತ್ಮಸ್ಥೈರ್ಯದೊಂದಿಗೆ ಸಮಕಾಲೀನ ಸಾಮಾಜಿಕ ತಲ್ಲಣ್ಣಗಳನ್ನು ಆಧಾರವಾಗಿಟ್ಟುಕೊಂಡು ‘ಒಂದಲ್ಲಾ ಎರಡಲ್ಲಾ’ ಸಿನಿಮಾವನ್ನು ನಿರ್ದೇಶಿಸಿದರು.

ಈ ಸಿನಿಮಾ ಕೂಡ ಸತ್ಯಪ್ರಕಾಶ್ ಅವರ ಕ್ರಿಯಾಶೀಲತೆಗೆ ಸಾಕ್ಷಿಯಾಯಿತು. ಈ ಸಿನಿಮಾಗೆ 66ನೇ ‘ನ್ಯಾಷನಲ್ ಅವಾರ್ಡ್’, 2018ರ ‘ಕರ್ನಾಟಕ ಸ್ಟೇಟ್ ಫಿಲ್ಮ್ ಅವಾರ್ಡ್ ಹಾಗೂ ಅತ್ಯುತ್ತಮ ಸಿನಿಮಾ ಎಂಬ ಹೆಚ್ಚಳಿಕೆ ಪಾತ್ರವಾಗಿ ‘ಕ್ರಿಟಿಕ್ ಚಾಯ್ಸ್ ಫಿಲ್ಮ್ ಅವಾರ್ಡ್’ ಕೂಡ ಲಭಿಸಿದೆ.

ಸತ್ಯಪ್ರಕಾಶ್ ಅವರು ತಮ್ಮ ಸರಳ ವ್ಯಕ್ತಿತ್ವದಿಂದಾಗಿ ಎಲ್ಲರೊಳಗೊಂದಾಗಿ ಬೆರೆತು, ವಿಶಿಷ್ಟ ಮಾದರಿಯೊಂದನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರ ಇಲ್ಲಿವರೆಗಿನ ಸಿನಿಮಾಗಳಲ್ಲಿ ಯುವಪ್ರತಿಭೆಗಳೇ ಮುಂಚೂಣಿಯಲ್ಲಿದ್ದಾರೆ. ಹೊಸ ಹೊಸ ಪ್ರತಿಭೆಗಳು, ಹೊಸ ಹೊಸ ಬಗೆಯಲ್ಲಿ ಸಿನಿಮಾ ಕಟ್ಟುವ ಕಲೆಯೇ ಸತ್ಯಪ್ರಕಾಶ್ ಅವರ ವಿಶಿಷ್ಟತೆ.

ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ವಿಶೇಷವಾದ ಒಲವು ಹೊಂದಿರುವ ಇವರು, ಕನ್ನಡ ಸಿನಿಮಾಗಳು ಅನ್ಯಭಾಷೆ ಸಿನಿಮಾಗಳ ಎದುರು ಕೈಕಟ್ಟಿ ನಿಲ್ಲುವಂತಾಗದೆ ತನ್ನ ನೆಲದ ಸೊಗಡನ್ನೇ ಬಳಸಿಕೊಂಡು ವಿಶಿಷ್ಟವಾಗಿ ಬೆಳೆದು ನಿಲ್ಲಬೇಕು ಎಂಬ ಹಂಬಲವುಳ್ಳವರಾಗಿದ್ದಾರೆ. ಹೀಗಾಗಿಯೇ ಇವರು ಕಥೆ ಕಟ್ಟುವ ಪರಿ ಹಾಗೂ ಅದನ್ನು ವಿಶಿಷ್ಟ ಆಯಾಮದ ಮೂಲಕ ಅಭಿವ್ಯಕ್ತಿಸುವ ಕ್ರಮವು ಇವರನ್ನು ಇತರ ನಿರ್ದೇಶಕರಿಗಿಂತ ಭಿನ್ನವಾಗಿಸುತ್ತದೆ.

ಒಂದೊ, ಎರಡೋ ಸಿನಿಮಾವನ್ನು ಮಾಡಿದ ಕೆಲವು ಯುವಪ್ರತಿಭೆಗಳು ತಾವು ಏನನ್ನೋ ಸಾಧಿಸಿದ ಮಹಾನ್ ಸಾಧಕರಂತೆ ಹಬ್ಬರಿಸುವ ಸಂದರ್ಭದಲ್ಲಿ ಸತ್ಯಪ್ರಕಾಶ್ ಅವರು ತಮ್ಮ ಮೃದು ಸ್ವಭಾವದ ಮೂಲಕ ತಮ್ಮ ಸೇವೆಯನ್ನು ಪ್ರಾಮಾಣಿಕ ನೆಲೆಯಲ್ಲಿ ಮುಂದುವರೆಸಿಕೊಂಡು ಸಾಗುತ್ತಿದ್ದಾರೆ. ಇವರಲ್ಲಿ ಅಂತರ್ಗತವಾಗಿರುವ ಪ್ರತಿಭೆಯ ಮೂಲಕ ಹೊರಬಂದ ಸಿನಿಮಾಗಳು ಇವರ ಕ್ರಿಯಾಶೀಲ ವ್ಯಕ್ತಿತ್ವವನ್ನು ಸದ್ದಿಲ್ಲದೆ ಸುದ್ಧಿ ಮಾಡುತ್ತಿವೆ.

ಇವರ ಈ ಪ್ರಾಮಾಣಿಕ ಕಾರ್ಯದಕ್ಷತೆಯ ಫಲವಾಗಿಯೇ ಇಂದು ಪುನಿತ್ ರಾಜ್‍ಕುಮಾರ್ ಅವರ ನಿರ್ಮಾಣ ಮತ್ತು ನಟನೆಯ ಸಿನಿಮಾಗೆ ನಿರ್ದೇಶನ ಮಾಡುವಷ್ಟು ದೊಡ್ಡ ಅವಕಾಶಗಳು ಲಭಿಸಿದೆ. ಇದು ನಿಜವಾದ ಕಲಾಪ್ರತಿಭೆಯೊಂದಕ್ಕೆ ಸಿಕ್ಕ ಜಯ. ಕನ್ನಡ ಚಿತ್ರರಂಗದಲ್ಲಿ ಯುವ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಸತ್ಯಪ್ರಕಾಶ್ ಅವರು ‘ಕ್ರಿಯಾಶೀಲ ನಿರ್ದೇಶಕ’ ಎಂದು ಹಲವರ ಪ್ರಶಂಸೆಗೂ ಪಾತ್ರವಾಗಿದ್ದಾರೆ.

ಇವರ ಸಿನಿಯಾನವು ಸದಾ ಯಶಸ್ವಿನಿಂದ ಕೂಡಿರಲಿ ಹಾಗೂ ಇವರಿಗೆ ಮತ್ತಷ್ಟು ಹೆಸರು, ಕೀರ್ತಿ ಲಭಿಸುವ ಮೂಲಕ ಕನ್ನಡ ಚಿತ್ರರಂಗವನ್ನು ಬೆಳಗುವಂತಾಗಲಿ ಎಂದು ಸುದ್ದಿದಿನ ಪತ್ರಿಕಾ ಬಳಗದ ವತಿಯಿಂದ ಹಾರೈಸುತ್ತೇವೆ.

ಡಾ.ಕೆ.ಎ.ಓಬಳೇಶ್
9591420216

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

Trending