Connect with us

ದಿನದ ಸುದ್ದಿ

ರಾಜ್ಯಸಭೆಯಲ್ಲಿ ಕಲಾಪಕ್ಕೆ ಅಡ್ಡಿ; ಪ್ರತಿಪಕ್ಷಗಳ 19 ಸದಸ್ಯರ ಅಮಾನತು

Published

on

ಸುದ್ದಿದಿನ ಡೆಸ್ಕ್ : ರಾಜ್ಯಸಭೆಯಲ್ಲಿ ನಿಯಮಾವಳಿ ಉಲ್ಲಂಘಿಸಿ ಅನುಚಿತವಾಗಿ ನಡೆದುಕೊಂಡ 19 ಪ್ರತಿಪಕ್ಷಗಳ ಸದಸ್ಯರನ್ನು ಈ ವಾರದ ಅಂತ್ಯದವರೆಗೆ ಕಲಾಪದಿಂದ ಅಮಾನತುಗೊಳಿಸಲಾಗಿದೆ.

ತೃಣಮೂಲ ಕಾಂಗ್ರೆಸ್‌ನ 7, ಡಿಎಂಕೆಯ ಮೂವರು, ಟಿಆರ್‌ಎಸ್‌ನ ಮೂವರು, ಸಿಪಿಎಂನ ಇಬ್ಬರು ಹಾಗೂ ಸಿಪಿಐನ ಒಬ್ಬ ಸದಸ್ಯರು ಇವರಲ್ಲಿ ಸೇರಿದ್ದಾರೆ. ದೋಲಾಸೇನ್, ಸುಶ್ಮಿತಾ ದೇವ್, ಡಾಕ್ಟರ್ ಸಂತಾನು ಸೇನ್, ಮೌಸಂ ನೂರ್, ಮಹಮದ್ ಅಬ್ದುಲ್ಲಾ, ಎಸ್. ಕಲ್ಯಾಣಸುಂದರಮ್, ಡಾಕ್ಟರ್ ಕನಿಮೌಳಿ ಸೋಮು, ವಿ.ಶಿವದಾಸನ್, ಸಂತೋಷ್ ಕುಮಾರ್ ಹಾಗೂ ಲಿಂಗಯ್ಯ ಯಾದವ್ ಅಮಾನತುಗೊಂಡ ಸದಸ್ಯರಲ್ಲಿ ಸೇರಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆ ಮರು ಸಮಾವೇಶಗೊಂಡಾಗ ತೃಣಮೂಲ ಕಾಂಗ್ರೆಸ್, ಆಮ್‌ಆದ್ಮಿ ಪಕ್ಷ, ಎಡಪಕ್ಷಗಳು, ಡಿಎಂಕೆ ಹಾಗೂ ಇತರೆ ಪಕ್ಷಗಳ ಸದಸ್ಯರು ಸಭಾಪತಿಗಳ ಮುಂದಿನ ಅಂಗಳಕ್ಕೆ ಇಳಿದು, ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವ ಸರ್ಕಾರದ ಕ್ರಮದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಉಪಸಭಾಪತಿ ಹರಿವಂಶ್, ಸದನದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಪದೆ ಪದೇ ಮನವಿ ಮಾಡಿಕೊಂಡರೂ ಪ್ರತಿಭಟನಾನಿರತ ಸದಸ್ಯರು ಕಿವಿಗೊಡಲಿಲ್ಲ. ಕಲಾಪವನ್ನು ನಿರಂತವಾಗಿ ಅಡ್ಡಿಪಡಿಸುತ್ತಿರುವ ಸದಸ್ಯರ ವಿರುದ್ಧ ನಿಯಮ 256 ರಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಆದರೆ, ಪ್ರತಿಭಟನಾನಿರತ ಸದಸ್ಯರು ಗದ್ದಲ, ಕೋಲಾಹಲ ಮುಂದುವರಿದಾಗ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್, ಪೀಠಕ್ಕೆ ಅಗೌರವ ತೋರಿಸಿ, ಅನುಚಿತವಾಗಿ ವರ್ತಿಸುತ್ತಿರುವ ಸದಸ್ಯರನ್ನು ಅಮಾನತುಗೊಳಿಸಲು ನಿಯಮ 256ರ ಅಡಿ ಗೊತ್ತುವಳಿಯನ್ನು ಮಂಡಿಸಿದರು.

ಗೊತ್ತುವಳಿಯನ್ನು ಸದನ ಧ್ವನಿಮತದಿಂದ ಅಂಗೀಕರಿಸಿತು. ಉಪಸಭಾಪತಿ ಪದೆ ಪದೇ ಮನವಿ ಮಾಡಿಕೊಂಡರೂ ಅಮಾನತುಗೊಂಡ ಸದಸ್ಯರು ಸದನದಿಂದ ಹೊರ ನಡೆಯಲು ನಿರಾಕರಿಸಿದಾಗ ಮೊದಲು 2 ಬಾರಿ, ನಂತರ ದಿನದ ಮಟ್ಟಿಗೆ ಕಲಾಪವನ್ನು ಮುಂದೂಡಲಾಯಿತು.

ಭೋಜನ ಅವಧಿಗೆ ಮುನ್ನ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಬೆಲೆ ಏರಿಕೆ, ಗುಜರಾತ್ ಕಳ್ಳಭಟ್ಟಿ ದುರಂತ ಹಾಗೂ ಇತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿ, ಗದ್ದಲ ನಿರ್ಮಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಲಾಗಿತ್ತು. 12.30 ಕ್ಕೆ ಮರು ಸಮಾವೇಶಗೊಂಡಾಗ ಆಮ್ ಆದ್ಮಿ ಪಕ್ಷ, ಡಿಎಂಕೆ, ಎಡಪಕ್ಷ, ಟಿಎಂಸಿ ಸೇರಿದಂತೆ ಇತರ ಪಕ್ಷಗಳ ಸದಸ್ಯರು ಸಭಾಪತಿಗಳ ಮುಂದಿನ ಅಂಗಳಕ್ಕೆ ಇಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇಡೀ ದೇಶ ಸದನದ ಕಲಾಪವನ್ನು ವೀಕ್ಷಿಸುತ್ತಿದೆ. ಹಾಗಾಗಿ ಸದಸ್ಯರು ತಮ್ಮ ಆಸನಗಳಿಗೆ ಮರಳಿ ಕಲಾಪ ನಡೆಸಲು ಸಹಕರಿಸಬೇಕು ಎಂದು ಉಪ ಸಭಾಪತಿ ಹರಿವಂಶ್ ಹಲವು ಬಾರಿ ಮನವಿ ಮಾಡಿಕೊಂಡರು.

ಈ ಗದ್ದಲಗಳ ನಡುವೆಯೇ ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು. ಫಲಕ ಪ್ರದರ್ಶಿಸಿ, ಕಲಾಪ ಅಡ್ಡಿಪಡಿಸುವ ಸದಸ್ಯರ ವಿರುದ್ಧ ನಿಯಮ 256ರಂತೆ ಕ್ರಮ ಜರುಗಿಸುವುದಾಗಿ ಉಪಸಭಾಪತಿ ಎಚ್ಚರಿಕೆ ನೀಡಿದರು.

ಇಂದು ಬೆಳಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ನಿಯಮ 267ರಡಿ ಪ್ರತಿಪಕ್ಷಗಳ ಸದಸ್ಯರು ಮಂಡಿಸಿದ ನಿಲುವಳಿ ಸೂಚನೆಗಳನ್ನು ಸಭಾಪತಿ ಎಂ. ವೆಂಕಯ್ಯನಾಯ್ಡು ತಿರಸ್ಕರಿಸಿದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದ ಎದುರಿನ ಅಂಗಳಕ್ಕೆ ಇಳಿದು ಗುಜರಾತ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತ ಕುರಿತ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗಿದರು. ಈ ನಡುವೆ, ಸಭಾಪತಿ ಅವರು ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಿದರು. ಇದಕ್ಕೂ ಮುನ್ನ ಕಾರ್ಗಿಲ್ ವಿಜಯ್ ದಿನದ ೨೩ನೇ ವರ್ಷಾಚರಣೆ ಅಂಗವಾಗಿ ಹುತಾತ್ಮ ಮತ್ತು ಧೈರ್ಯಶಾಲಿ ಯೋಧರಿಗೆ ಸದನ ಗೌರವ ನಮನ ಸಲ್ಲಿಸಿದರು.

ಸಚಿವ ಪಿಯೂಷ್ ಗೋಯಲ್ ಹೇಳಿದ್ದು

ರಾಜ್ಯಸಭೆಯಲ್ಲಿ ಈ ವಾರ 19 ಪ್ರತಿಪಕ್ಷ ಸದಸ್ಯರ ಅಮಾನತುಗೊಳಿಸುವ ನಿರ್ಧಾರವನ್ನು ಭಾರವಾದ ಹೃದಯದಿಂದ ಕೈಗೊಳ್ಳಲಾಗಿದೆ ಎಂದು ಮೇಲ್ಮನೆಯ ಸಭಾನಾಯಕರೂ ಆಗಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಭಾಪತಿಗಳ ಪೀಠದ ಮನವಿಗಳನ್ನು ನಿರ್ಲಕ್ಷಿಸಿದ ಹಾಗೂ ರಾಜ್ಯಸಭೆಯ ಕಲಾಪವನ್ನು ನಿರಂತರವಾಗಿ ಅಡ್ಡಿಪಡಿಸಿದ್ದಕ್ಕಾಗಿ ಈ ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡು ಸಂಸತ್ತಿಗೆ ಮರಳಿದ ನಂತರ ಬೆಲೆ ಏರಿಕೆ ವಿಷಯ ಕುರಿತಂತೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಸುಗಮವಾಗಿ ಕಲಾಪ ನಡೆಸಲು ಸಹಕರಿಸುವಂತೆ ಪ್ರತಿಪಕ್ಷ ಸದಸ್ಯರಿಗೆ ಮತ್ತೊಮ್ಮೆ ಮನವಿ ಮಾಡಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending