ದಿನದ ಸುದ್ದಿ
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್
ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್ಗಳು ಮಾರಾಟವಾಗುತ್ತವೆ.
ಈ ಟಿಕೆಟ್ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು
ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.
ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.
ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.
ವಿವಿಧ ಸೌಲಭ್ಯಗಳ ವಿತರಣೆ
ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.
ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ13 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

