ದಿನದ ಸುದ್ದಿ
ಡಿಕೆಶಿ ಬಳಿ 317 ಖಾತೆ, 800 ಕೋಟಿ ಆಸ್ತಿ ಪತ್ತೆ – ಸೆ.17ರವರೆಗೆ ಇಡಿ ಕಸ್ಟಡಿಗೆ..!
ಸುದ್ದಿದಿನ,ನವದೆಹಲಿ: ಅಕ್ರಮ ಹಣಕಾಸು ವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಇಡಿ ಕಸ್ಟಡಿ ಅವಧಿಯನ್ನು ವಿಶೇಷ ಕೋರ್ಟ್ 5 ದಿನ ವಿಸ್ತರಿಸಿದೆ.
ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ದೆಹಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹರ್ ಡಿಕೆಶಿ ಅವರನ್ನ ಇನ್ನು ಐದು ದಿನ ಇಡಿ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕೆಂದು ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರೆ, ವಿಚಾರಣೆ ಪೂರ್ಣಗೊಂಡಿಲ್ಲ 5 ದಿನ ಕಸ್ಟಡಿಗೆ ನೀಡಿ ಎಂದು ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ವಾದಿಸಿದರು. ವಿಚಾರಣೆ ಸಂದರ್ಭದಲ್ಲಿ ಜಡ್ಜ್ ಸೋಮವಾರದ ಒಳಗಡೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಇಡಿಗೆ ಸೂಚಿಸಿದರು. ಎರಡು ಕಡೆ ವಾದ, ಪ್ರತಿವಾದ ಆಲಿಸಿದ ಕೋರ್ಟ್ ಡಿಕೆಶಿಯನ್ನು ಸೆ.17ರವರೆಗೆ ಇಡಿ ಕಸ್ಟಡಿಗೆ ನೀಡಿತು.
ಇ.ಡಿ ಪರ ವಕೀಲರ ವಾದವೇನು?
ಡಿಕೆ ಶಿವಕುಮಾರ್ ಗೆ ಸಂಬಂಧ ಪಟ್ಟ 317 ಬ್ಯಾಂಕ್ ಖಾತೆಗಳಿಂದ ವ್ಯವಹಾರ ನಡೆಸುತ್ತಿದ್ದು ಈ ಬಗ್ಗೆ ತನಿಖೆ ನಡೆಸಬೇಕಾಗಿದೆ. ಇ.ಡಿ. ಸಂಗ್ರಹಿಸಿರುವ ದಾಖಲೆಗಳಿಗೆ ಡಿಕೆ ಶಿವಕುಮಾರ್ ಉತ್ತರ ನೀಡಬೇಕಾಗಿದೆ. ಡಿಕೆಶಿ ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿರುವುದು ಇ.ಡಿ ಗಮನಕ್ಕೆ ಬಂದಿದೆ. ಅಲ್ಲದೇ ಡಿಕೆಶಿಗೆ ಮಾತ್ರವೇ ತಿಳಿದಿರುವ ಸಂಗತಿಯನ್ನು ಇ.ಡಿಗೆ ನೀಡುತ್ತಿಲ್ಲ. ಹೀಗಾಗಿ ಇನ್ನೂ ಐದು ದಿನಗಳ ಕಾಲ ವಿಚಾರಣೆ ನಡೆಸಲು ಡಿಕೆಶಿಯನ್ನು ಇ.ಡಿ. ಕಸ್ಟಡಿಗೆ ಒಪ್ಪಿಸಬೇಕೆಂದು ವಾದ ಮಂಡಿಸಿದ್ದರು.
ಮುಂದಿನ ಐದು ದಿನಗಳಲ್ಲಿ ಉತ್ತರ ನೀಡುತ್ತಾರೆಂಬ ಭಾವಿಸಿದ್ದೀರಾ? ಹಣದ ಎಲ್ಲಿಂದ ಬಂತು, ಎಲ್ಲಿಗೆ ಹೋಯ್ತು ನಂತರ ವಿಚಾರಿಸೋಣ. ಪಿಎಂಎಲ್ ಎ ಅನುಸೂಚಿತ ಅಪರಾಧಗಳನ್ನು ಮೀರಿ ಇ.ಡಿ ತನಿಖೆ ನಡೆಸಬಹುದೇ? ಈ ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ನಂತರ ವಿಚಾರಣೆ ಆರಂಭವಾಗಬೇಕಿದೆ ಎಂದು ಜಡ್ಜ್ ಕುಹರ್ ಇ.ಡಿ ಪರ ವಕೀಲರನ್ನು ಪ್ರಶ್ನಿಸಿದ್ದರು.
ಡಿಕೆಶಿ ಪರ ಅಭಿಷೇಕ್ ಮನುಸಿಂಘ್ವಿ ವಾದ:
ಇಲ್ಲಿಯವರೆಗೂ ಇ.ಡಿ.ನೂರಾರು ಗಂಟೆಗಳ ಕಾಲಾವಕಾಶ ಸಿಕ್ಕಿದೆ. ಡಿಕೆಶಿ ಅನಾರೋಗ್ಯದ ಮಾಹಿತಿ ಕೋರ್ಟ್ ಗೆ ನೀಡಿದ ಸಿಂಘ್ವಿ. ಅವರ ಆರೋಗ್ಯ ಸ್ಥಿತಿಯನ್ನು ಇ.ಡಿ ಮುಚ್ಚಿಟ್ಟಿದೆ. ನಿನ್ನೆ ರಾತ್ರಿ ಡಿಕೆಶಿ ಆಸ್ಪತ್ರೆಗೆ ದಾಖಲಾಗಿದ್ದರು. ಅತೀವ ರಕ್ತದೊತ್ತಡ ಪಾರ್ಶ್ವವಾಯುಗೆ ಕಾರಣವಾಗುತ್ತದೆ. ಇಂಜೆಕ್ಷನ್ ನೀಡಿದ ಬಳಿಕವೂ ಡಿಕೆಶಿ ಬಿಪಿ 160/120ರಷ್ಟು ಇತ್ತು. ನಿನ್ನೆ ಬಿಪಿ 200/140ಕ್ಕೆ ಏರಿತ್ತು. ಕೋರ್ಟ್ ಏನಾದರೂ ಆದೇಶ ನೀಡಲಿ ಡಿಕೆಶಿ ಇವತ್ತು ಆಸ್ಪತ್ರೆಗೆ ದಾಖಲಾಗಬೇಕು ಎಂದು ಸಿಂಘ್ವಿ ಪ್ರತಿವಾದ ಮಂಡಿಸಿದ್ದರು.
ಡಿಕೆ ಶಿವಕುಮಾರ್ ತನಿಖೆಗೆ ಸಹಕರಿಸುತ್ತಿಲ್ಲ ಎಂದರೆ ಏನರ್ಥ. ಎಲ್ಲಾ ಕಡೆ ಸಿಕ್ಕ ಹಣ ಸೇರಿಸಿ 8.5 ಕೋಟಿ ಸಿಕ್ಕಿದೆ ಅಂತ ಹೇಳಿದ್ದಾರೆ. ಆದರೆ ಆರೋಪ ಬಂದಿರೋದು ಕೇವಲ 41 ಲಕ್ಷ ರೂಪಾಯಿ ಹಣದ್ದಾಗಿದೆ. ಆಂಜನೇಯ, ಸಚಿನ್ ನಾರಾಯಣ್ ಬೇರೆ, ಬೇರೆ ವ್ಯಕ್ತಿಗಳು. ಮೂವರು ಪ್ರತ್ಯೇಕವಾಗಿ ಐಟಿ ರಿಟರ್ನ್ಸ್ ಸಲ್ಲಿಸುತ್ತಿದ್ದಾರೆ. ಮತ್ತೆ ಡಿಕೆಶಿಯನ್ನು ಇ.ಡಿ ವಶಕ್ಕೆ ಒಪ್ಪಿಸಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಸಿಂಘ್ವಿ ವಾದಿಸಿದ್ರು.

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ16 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ15 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

