Connect with us

ದಿನದ ಸುದ್ದಿ

ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ

Published

on

ಸುದ್ದಿದಿನ,ಬೆಂಗಳೂರು:ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು

ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ.

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ.

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು.

ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ.

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ.

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ.

ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದು ಭಾವುಕರಾದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending