ಬಹಿರಂಗ
ಡಾ.ಅಂಬೇಡ್ಕರ್ರವರ ಬರಹಗಳ ವಿರುದ್ಧ ವ್ಯವಸ್ಥಿತ ಅಸ್ಪೃಶ್ಯತಾಚರಣೆ..?
- ರಘೋತ್ತಮ ಹೊ.ಬ
ಭಾರತದ ಯಾವುದೇ ಪುಸ್ತಕದ ಅಂಗಡಿಗಳಲ್ಲಿ ಡಾ.ಅಂಬೇಡ್ಕರ್ರವರು ಬರೆದಿರುವ ಪುಸ್ತಕಗಳು ದೊರೆಯುವುದಿಲ್ಲ. ಹೌದು, ಇದು ಕಟು ಸತ್ಯ. ನಾವು ಅಥವಾ ಅಂಬೇಡ್ಕರರ ಬಗ್ಗೆ ಓದಲು ಆಸಕ್ತಿ ಇರುವ ಯಾರೇ ಆದರೂ ಡಾ.ಅಂಬೇಡ್ಕರ್ ರವರು ಬರೆದಿರುವ ಪುಸ್ತಕಗಳನ್ನು ಖರೀದಿಸಲು ಭಾರತದ ಯಾವುದೇ ಪುಸ್ತಕದ ಮಳಿಗೆಗೆ ಹೋದರು ಪುಸ್ತಕಗಳು ಅವರಿಗೆ ದೊರೆಯುವುದೇ ಇಲ್ಲ! ತಮಾಷೆಗೆ ಹೇಳುತ್ತಿಲ್ಲ.
ಮೊನ್ನೆ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿರುವ ಬೆಂಗಳೂರಿನ ಉದಯೋನ್ಮುಖ ನರರೋಗತಜ್ಞರಾದ ಡಾ.ಲಿಂಗರಾಜುರವರು ಫೇಸ್ಬುಕ್ನಲ್ಲಿ ಲೈವ್ನಲ್ಲಿ ಅಂತರರಾಷ್ಟ್ರೀಯ ವೇದಿಕೆಯೊಂದರ ಆಹ್ವಾನದ ಮೇರೆಗೆ ಡಾ.ಅಂಬೇಡ್ಕರರ Annihilation of caste (ಜಾತಿ ವಿನಾಶ) ಕೃತಿ ಬಗ್ಗೆ ಮಾತನಾಡಲು ಒಪ್ಪಿಕೊಂಡು ಪುಸ್ತಕ ಹುಡುಕಲು ಬೆಂಗಳೂರಿನ ಪುಸ್ತಕ ಮಳಿಗೆಯೊಂದಕ್ಕೆ ಹೊರಟಿದ್ದಾರೆ.
ಆದರೆ ಅವರಿಗೆ ಡಾ.ಅಂಬೇಡ್ಕರರು ಬರೆದಿರುವ ಒಂದು ಪುಸ್ತಕ ಕೂಡ ಸಿಕ್ಕಿಲ್ಲ. ಏಷ್ಯಾದ ಬೃಹತ್ ಪುಸ್ತಕ ಮಾರಾಟ ಮಳಿಗೆ ಎಂದು ಬೋರ್ಡ್ ಹಾಕಿಕೊಂಡಿರುವ, ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹಲವಾರು ಬ್ರ್ಯಾಂಚ್ಗಳನ್ನು ಹೊಂದಿರುವ ಆ ಪುಸ್ತಕ ಮಳಿಗೆಯಲ್ಲಿ ಟಾಲ್ ಸ್ಟಾಯ್, ಕಾರ್ಲ್ ಮಾರ್ಕ್ಸ್ ಹೀಗೆ ವಿದೇಶಿ ಚಿಂತಕರ ಕೃತಿಗಳು ಸಿಗುತ್ತವೆ. ಆದರೆ ಸ್ವದೇಶಿ ಡಾ.ಅಂಬೇಡ್ಕರರ ಪುಸ್ತಕಗಳು ಸಿಗುವುದಿಲ್ಲ. ಇದು ಆ ಮಳಿಗೆಯೊಂದರ ಕತೆಯಲ್ಲ, ಭಾರತದ ಎಲ್ಲಾ ನಗರಗಳ ಪುಸ್ತಕ ಮಳಿಗೆಗಳ ಕತೆಯಿದು.
ಈ ಬಗ್ಗೆ ಮಾತನಾಡಿರುವ ಡಾ.ಲಿಂಗರಾಜುರವರು “ಅಂಬೇಡ್ಕರರ ಆ ಕೃತಿ ಕಾನೂನುಬಾಹಿರವೇ? ಇಲ್ಲ. ಏಕೆಂದರೆ ಅದನ್ನು ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾನಿಲಯವೇ ಪಠ್ಯಪುಸ್ತಕವಾಗಿ ಮಾನ್ಯತೆ ನೀಡಿದೆ. ಆದರೆ ವಾಸ್ತವ ಏನೆಂದರೆ ಕೆಲವು ದುಷ್ಟ ಶಕ್ತಿಗಳು ಅಂಬೇಡ್ಕರರ ಕೃತಿಗಳು ಯಾರಿಗೂ ಸಿಗದಂತೆ, ಜನರನ್ನು ತಲುಪುದಂತೆ ತಡೆದಿವೆ” ಎನ್ನುತ್ತಾರೆ. ಕೊನೆಯಲ್ಲಿ ಅಮೆಜಾನ್ ಮೂಲಕ ತಾನು ಪುಸ್ತಕ ತರಿಸಿಕೊಂಡಿದ್ದಾಗಿ ಡಾ.ಲಿಂಗರಾಜು ಹೇಳಿಕೊಂಡಿದ್ದಾರೆ.
ಹಾಗಿದ್ದರೆ ಅಂಬೇಡ್ಕರರ ಕೃತಿಗಳಿಗೆ ಬೇಡಿಕೆ ಕಡಿಮೆಯೇ? ಆ ಕಾರಣಕ್ಕೆ ಮಳಿಗೆಗಳು ತರಿಸುತ್ತಿಲ್ಲವೆ ಎಂದರೆ ಖಂಡಿತ ಇಲ್ಲ. ವಾಸ್ತವ ಏನೆಂದರೆ ಡಾ.ಅಂಬೇಡ್ಕರರು ಬರೆದಿರುವ ಕೃತಿಗಳಿಗೆ ಭಾರೀ ಬೇಡಿಕೆ ಇದೆ. ಸಾಹಿತ್ಯ ಸಮ್ಮೇಳನಗಳಲ್ಲಿ ಅತಿ ಹೆಚ್ಚು ಮಾರಾಟ ಆಗುವುದು ಡಾ.ಅಂಬೇಡ್ಕರ್ ಸಂಬಂಧಿಸಿದ ವೈಚಾರಿಕ ಕೃತಿಗಳೇ! ಡಾ.ಅಂಬೇಡ್ಕರರ ಹೆಸರಿನ ಕಾರಣಕ್ಕೆ ಆ ಕೃತಿಗಳಿಗೆ ಬೇಡಿಕೆಯೇ? ಖಂಡಿತ ಇಲ್ಲ. ಅಂಬೇಡ್ಕರರ ಕೃತಿಗಳಿಗೆ ಈ ಮಟ್ಟಿಗಿನ ಬೇಡಿಕೆಗೆ ಕಾರಣ ಆ ಕೃತಿಗಳ ವಸ್ತು, ವಿಚಾರಗಳನ್ನು ಉತ್ಕೃಷ್ಟ ಇಂಗ್ಲಿಷ್ ಭಾಷೆಯಲ್ಲಿ ಮಂಡಿಸಿರುವ ಶೈಲಿ, ಓದುಗನನ್ನು ಹಿಡಿದಿಡುವ ಧಾಟಿ.
ಕುತೂಹಲಕರ ವಿಚಾರವೆಂದರೆ ಅಂಬೇಡ್ಕರರ ಒಂದು ಪುಟ್ಟ ಕೃತಿ ಒಂದು ಬೃಹತ್ ಚಳುವಳಿಯನ್ನೇ ಒಂದು ಬೃಹತ್ ರಾಜಕೀಯ ಪಕ್ಷವನ್ನೇ ಹುಟ್ಟು ಹಾಕಿದೆ ಎಂದರೆ…!1970ರ ಸಂದರ್ಭದಲ್ಲಿ ದಿವಂಗತ ಕಾನ್ಷೀರಾಮ್ರವರಿಗೆ ಡಾ.ಅಂಬೇಡ್ಕರ್ ರವರ ಈ “ಅನ್ನಿಹಿಲೇಷನ್ ಆಫ್ ಕ್ಯಾಸ್ಟ್” ಕೃತಿ ಸಿಕ್ಕಿ ಇಡೀ ರಾತ್ರಿ ಅವರು ಅದನ್ನು ಓದಿ ಜ್ಞಾನೋದಯಗೊಂಡು ಬಹುಜನ ಸಮಾಜ ಪಕ್ಷದ ಉದಯಕ್ಕೆ ಕಾರಣರಾಗುತ್ತಾರೆ! ಆ ಮಟ್ಟಿಗಿನ ಭವ್ಯ ವಸ್ತು, ಸ್ಪೂರ್ತಿ ಚಿಲುಮೆ ಇರುವ ಕೃತಿಗಳು ಡಾ.ಅಂಬೇಡ್ಕರರದು.
ಈ ನಿಟ್ಟಿನಲ್ಲಿ ಅವರ “ಅನ್ನಿಹಿಲೇಷನ್ ಆಫ್ ಕ್ಯಾಸ್ಟ್” ಜೊತೆಗೆ “ರೆವಲ್ಯೂಷನ್ ಅಂಡ್ ಕೌಂಟರ್ ರೆವಲ್ಯೂಷನ್”, “ರಿಡಲ್ಸ್ ಇನ್ ಹಿಂದೂಯಿಸಂ”, “ವೂ ವರ್ ಶೂದ್ರಾಸ್”, “ದಿ ಅಂಟಚಬಲ್ಸ್”, “ಪ್ರಾಬ್ಲಂ ಆಫ್ ರುಪೀ“, “ಪಾಕಿಸ್ತಾನ್ ಆರ್ ಪಾರ್ಟಿಷನ್ ಆಫ್ ಇಂಡಿಯಾ “, “ಬುದ್ಧ ಅಂಡ್ ಹಿಸ್ ಧಮ್ಮ” ಹೀಗೆ ಡಾ.ಅಂಬೇಡ್ಕರರ ಇತರೆ ಕೃತಿಗಳು ಅವುಗಳ ವಸ್ತುಗಳ ಜೊತೆಗೆ ಪ್ರಾಚೀನ ಭಾರತದ ಇತಿಹಾಸ, ಭಾರತದ ಸ್ವಾತಂತ್ರ್ಯ ಸಂದರ್ಭದ ಘಟನೆಗಳು, ಈ ದೇಶದ ಸಾಮಾಜಿಕ ಕಟುಸತ್ಯಗಳನ್ನು ಐತಿಹಾಸಿಕ ದಾಖಲೆಗಳೊಡನೆ ಮನಮುಟ್ಟುತ್ತವೆಯೆಂದರೆ, ಕಣ್ಣಿಗೆ ಕಟ್ಟುವಂತೆ ಚಿತ್ರಿಸುತ್ತವೆಯೆಂದರೆ…, ಅದರಲ್ಲೂ ಅವರ “ಪ್ರಾಬ್ಲಂ ಆಫ್ ರುಪೀ” ಪುಸ್ತಕ ಈ ದೇಶದ ಹಣಕಾಸು ವ್ಯವಸ್ಥೆ ನಿಯಂತ್ರಣ ಮಾಡುವ ಉತ್ಕೃಷ್ಟ ಬ್ಯಾಂಕ್ ಆದ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ” ಸ್ಥಾಪನೆಗೆ ಕಾರಣವಾದರೆ “ಪಾಕಿಸ್ತಾನ್ ಆರ್ ಪಾರ್ಟಿಷನ್ ಆಫ್ ಇಂಡಿಯಾ” ಕೃತಿ ದೇಶ ವಿಭಜನೆಯ ಕಾರ್ಯವನ್ನು ಸುಲಲಿತವಾಗಿ ನಡೆಯಲಿಕ್ಕೆ ನೆರವಾಯಿತು.
ದುರಂತವೆಂದರೆ ಇಂತೆಲ್ಲ ಮಹತ್ವದ ಜ್ಞಾನ ಮತ್ತು ಐತಿಹಾಸಿಕ ಬೆಳವಣಿಗೆ ಮಯ ಹಿನ್ನೆಲೆಯನ್ನು ಈ ದೇಶದ ಪಟ್ಟಭದ್ರ ಹಿತಾಸಕ್ತಿಗಳು ಜನಸಾಮಾನ್ಯರಿಗೆ ತಲುಪಲು ಬಿಟ್ಟಿಲ್ಲ. ಮತ್ತೊಂದು ವಾಸ್ತವವೆಂದರೆ ಭಾರತದ ಪ್ರಕಾಶನ ಸಂಸ್ಥೆಗಳ, ಪುಸ್ತಕ ಮಳಿಗೆಗಳ ಇಂತಹ ಧೋರಣೆ ಕೊನೆಗಾಣ ಸಲು1980ರ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಅಲ್ಲಿನ ಅಂಬೇಡ್ಕರರ ಅನುಯಾಯಿಗಳ ಒತ್ತಾಯದ ಫಲವಾಗಿ ಸರ್ಕಾರ ಸಂಪೂರ್ಣ ಇಂಗ್ಲಿಷ್ ಭಾಷೆಯಲ್ಲಿದ್ದ ಡಾ.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳನ್ನು ಸಂಪುಟಗಳ ರೂಪದಲ್ಲಿ ಪ್ರಕಟಿಸಲು ಆರಂಭಿಸಿತು.
ಮಹಾರಾಷ್ಟ್ರದ ಈ ಯೋಜನೆಗೆ ಕೈಗೂಡಿಸಿದ ಇತರೆ ರಾಜ್ಯಗಳು ತಮ್ಮ ತಮ್ಮ ಭಾಷೆಗಳಲ್ಲಿ ಅವುಗಳನ್ನು ಅನುವಾದಿಸಿ ಪ್ರಕಟಿಸಿದವು. ಈ ನಡುವೆ ಬಾಬಾಸಾಹೇಬ್ ಅಂಬೇಡ್ಕರರ ಇಂಗ್ಲಿಷ್ ಬರಹಗಳಿಗೆ ಈ ಮಟ್ಟಿಗಿನ ರಾಷ್ಟ್ರವ್ಯಾಪಿ ಬೇಡಿಕೆ ಮತ್ತು ದಲಿತ ಸಂಘಟನೆಗಳಿಂದ ಒತ್ತಾಯ ಬಂದ ಹಿನ್ನೆಲೆಯಲ್ಲಿ 2004ರಲ್ಲಿ ಯುಪಿಎ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವೆಯಾದ ಕುಮಾರಿ ಶೆಲ್ಜಾರವರ ಒತ್ತಾಸೆಯ ಮೇರೆಗೆ ಮಹಾರಾಷ್ಟ್ರದ ಯೋಜನೆಯನ್ನು ಕೇಂದ್ರ ಸರ್ಕಾರ ಮುಂದುವರಿಸಿ ಅಂಬೇಡ್ಕರರ ಪುಸ್ತಕಗಳು ಎಲ್ಲೆಡೆ ದೊರೆಯಲಿಕ್ಕೆ ಕಾರಣವಾಯಿತು.
ಹಾಗೆಯೇ ಯುಪಿಎ ಸರ್ಕಾರ ಡಾ.ಅಂಬೇಡ್ಕರರ ಈ ಎಲ್ಲಾ ಬರಹಗಳ ಸಂಪುಟಗಳನ್ನು ಪಿಡಿಎಫ್ ಮೂಲಕ ಅಂತರ್ಜಾಲದಲ್ಲೂ ಪ್ರಕಟಿಸಿದೆ. ಆಸಕ್ತರು ಯಾರೂ ಬೇಕಾದರೂ ಅವುಗಳನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಆದರೆ ಪ್ರಶ್ನೆಯೇನೆಂದರೆ ಭಾರತದ ಪುಸ್ತಕ ಮಳಿಗೆಗಳಲ್ಲಿ ಅಂಬೇಡ್ಕರರ ಈ ಪುಸ್ತಕಗಳ ಲಭ್ಯತೆ?
ಹಾಗಿದ್ದರೆ ಮಹಾರಾಷ್ಟ್ರ ಸರ್ಕಾರ ಪ್ರಕಟಿಸುವ ಮೊದಲು ಅವುಗಳು ಲಭ್ಯವಿರಲಿಲ್ಲವೆಂದೇ? ಪ್ರಕಟವಾಗಿರಲಿಲ್ಲವೆಂದೇ? ಅದಕ್ಕಾಗಿ ಪ್ರಕಾಶನ ಸಂಸ್ಥೆಗಳಿಗೆ ಈ ಕಾರ್ಯ ಸಾಧ್ಯವಾಗಲಿಲ್ಲವೆಂದೇ? ಹಾಗೇನಿಲ್ಲ, ಲಭ್ಯವಿತ್ತು, ಪ್ರಕಟವಾಗಿತ್ತು. ಬಾಬಾಸಾಹೇಬ್ ಅಂಬೇಡ್ಕರರ ಸಹಪಾಠಿ ವಾಲ್ಮೀಕಿ ಭಂಗಿ ಸಮುದಾಯದದಿ.ಭಗವಾನ್ದಾಸ್ರವರು1960, 70 ರ ಹೊತ್ತಿಗೆ “ದಸ್ ಸ್ಪೋಕ್ ಅಂಬೇಡ್ಕರ್ (ಅಂಬೇಡ್ಕರ್ ಹೀಗೆ ಹೇಳಿದರು)” ಹೆಸರಿನಲ್ಲಿ ಸ್ವಂತ ಖರ್ಚು ಮತ್ತು ಶ್ರಮದ ಮೂಲಕ ಸರಣ ರೂಪದಲ್ಲಿ ಪ್ರಕಟಿಸಿದರು.
ಹಾಗಿದ್ದರೂ ಭಾರತದ ಪುಸ್ತಕ ಮಳಿಗೆಗಳು ಅಂಬೇಡ್ಕರರ ಆ ಸಂಪುಟಗಳತ್ತ ಕಣ್ಣೆತ್ತಿಯೂ ನೋಡಲಿಲ್ಲ ಅಥವಾ ತಮ್ಮ ಮಳಿಗೆಗಳ ಮೂಲಕ ಮಾರಾಟ ಮಾಡಲು ಮುಂದೆ ಬರಲಿಲ್ಲ. ಯಾಕೆ ಹೀಗೆ? ಈ ಲೇಖನದ ಆರಂಭದಲ್ಲೇ ಪ್ರಸ್ತಾಪಿಸಿರುವ ಹಾಗೆ “ಕೆಲವು ದುಷ್ಟ ಶಕ್ತಿಗಳು”. ಹೌದು, ಕೆಲವು ದುಷ್ಟ ಶಕ್ತಿಗಳು, ಅಸ್ಪೃಶ್ಯತಾಚರಣೆಯ ಮನಸ್ಥಿತಿ ಹೊಂದಿರುವ ದುಷ್ಟ ಶಕ್ತಿಗಳು ಅವು. ಸಂವಿಧಾನ ವಿರೋಧಿ ಶಕ್ತಿಗಳು ಎಂದು ಕೂಡ ಹೇಳಬಹುದು.
ಯಾಕೆಂದರೆ ಸಂವಿಧಾನದ ಅನುಚ್ಛೇದ 19 “ಅಭಿವ್ಯಕ್ತಿ ಸ್ವಾತಂತ್ರ್ಯ” ನೀಡುತ್ತದೆ. ಆದರೆ ಇಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಡೆಯೊಡ್ಡಲಾಗಿದೆ. ಯಾವ ಮಟ್ಟಿಗೆ ಎಂದರೆ ಈಗಲೂ ವಯಕ್ತಿಕವಾಗಿ ಬಹುತೇಕರು ನನ್ನನ್ನು “ಸರ್, ಅಂಬೇಡ್ಕರರ ಬರಹಗಳ ಭಾಷಣಗಳ ಇಂಗ್ಲಿಷ್ ಸಂಪುಟಗಳು ಎಲ್ಲಿ ಸಿಗುತ್ತವೆ?” ಎಂದರೆ ನನಗೆ ಭಾರತದ ಯಾವ ಪುಸ್ತಕ ಮಳಿಗೆಗಳಲ್ಲಿ ಸಿಗುತ್ತದೆ ಎಂದು ಹೇಳಲಿಕ್ಕೆ ಖಂಡಿತ ಸಾಧ್ಯವಾಗುವುದಿಲ್ಲ. ಆ ಮಟ್ಟಿಗೆ ಅಂಬೇಡ್ಕರರ ಅಭಿವ್ಯಕ್ತಿ ಸ್ವಾತಂತ್ರ್ಯ ಅಸ್ಪೃಶ್ಯತಾಚರಣೆ ಮೂಲಕ ದಮನವಾಗಿದೆ.
ಅಂದಹಾಗೆ ಇದಕ್ಕೆ ಯಾರನ್ನು ದೂರುವುದು? ಯಾರು ಹೊಣೆ?
ಉತ್ತರ: ಈ ದೇಶದ ಹಿಂದುತ್ವವಾದಿ, ಜಾತಿವಾದಿ, ಮನುವಾದಿ ಮನಸ್ಸುಗಳು ಎಂದು ನೇರ ಹೇಳದೆ ವಿಧಿಯಿಲ್ಲ. ಪ್ರಶ್ನೆ ಏನೆಂದರೆ ಮುಂದಾದರೂ ಇಂತಹ ಪರಿಸ್ಥಿತಿ ತೊಲಗುವುದೇ? ಅಂಬೇಡ್ಕರರ ಬರಹಗಳು ಎಲ್ಲರಿಗೂ ಧಕ್ಕುವುದೇ, ಈ ದೇಶದ ಜನಸಾಮಾನ್ಯರ ಜ್ಞಾನ ದಾಹ ಹಿಂಗಿಸುವುದೇ? ಕಾದು ನೋಡಬೇಕಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು