Connect with us

ದಿನದ ಸುದ್ದಿ

ಪ್ರಾಟೆಸ್ಟೆಂಟ್ ಕ್ರಿಶ್ಚಿಯನ್ ಮಾದರಿಯಲ್ಲಿ ಬೌದ್ಧ ಧರ್ಮ ಕಟ್ಟಲು ಬಾಬಾಸಾಹೇಬ್ ಅಂಬೇಡ್ಕರರು ರೂಪಿಸಿದ್ದ ನೀಲನಕ್ಷೆ

Published

on

  • ರಘೋತ್ತಮ ಹೊ.ಬ

1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿಸಲು ಸಭೆಗೆ ನೀಲನಕ್ಷೆ ಮಾದರಿಯಲ್ಲಿ ಒಂದು ಮನವಿ ಪತ್ರ ಸಲ್ಲಿಸುತ್ತಾರೆ.

ಆ ನೀಲನಕ್ಷೆಯ ಮುಖ್ಯಾಂಶಗಳನ್ನು ದಾಖಲಿಸುವುದಾದರೆ

ಮೊದಲಿಗೆ ಬಾಬಾಸಾಹೇಬರು ಹೇಳುವುದು ಮತಾಂತರ ಹೊಂದಿದವರಿಗೆ ಅಗತ್ಯವಾಗಿರುವ ಒಂದು ಬೌದ್ಧ ಧರ್ಮಗ್ರಂಥದ ಬಗ್ಗೆ. ಈ ನಿಟ್ಟಿನಲ್ಲಿ ಕ್ರೈಸ್ತ ಧರ್ಮ ಹೋಲಿಸುವ ಅವರು ಕ್ರೈಸ್ತ ಧರ್ಮ ಬೆಳೆಯಲು ಕಾರಣ ಅವರಲ್ಲಿ ಇರುವ ಬೈಬಲ್ ನಂತಹ ಯಾರಾದರೂ ಸುಲಭವಾಗಿ ಇಟ್ಟುಕೊಳ್ಳಬಹುದಾದ ಸಣ್ಣ ಪುಸ್ತಕ. ಆದರೆ ಬೌದ್ಧ ಧರ್ಮಕ್ಕೆ ಅಂತಹ ಅನುಕೂಲ ಇಲ್ಲ ಎನ್ನುತ್ತಾರೆ.

ಇದಕ್ಕೆ ಅವರು ಕೊಡುವ ಕಾರಣ ಸಾಮಾನ್ಯ ಅನುಯಾಯಿಯೊಬ್ಬ ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಪಾಳಿ ಭಾಷೆಯ 73 ಆ ಬೃಹತ್ ಸಂಪುಟಗಳನ್ನು ಓದಲಾರ ಎಂಬುದು. ಖಂಡಿತ, ಬಾಬಾಸಾಹೇಬರು ಹೇಳುವಂತೆ 73 ಆ ಬೃಹತ್ ಸಂಪುಟಗಳನ್ನು ಸಾಮಾನ್ಯ ಓದುಗನಿರಲಿ ಪಂಡಿತರೂ ಕೂಡ ಓದಲಾರರು. ಈ ನಿಟ್ಟಿನಲ್ಲಿ ಬೈಬಲ್ ಮಾದರಿಯಲ್ಲೇ ಬೌದ್ಧಧರ್ಮಕ್ಕೂ ಧರ್ಮ ಗ್ರಂಥವೊಂದನ್ನು ತಯಾರಿಸುವ ಇಂಗಿತ ವ್ಯಕ್ತಪಡಿಸುವ ಬಾಬಾಸಾಹೇಬರು ಆ ಗ್ರಂಥದಲ್ಲಿ ಬುದ್ಧನ ಸಾಮಾಜಿಕ ಮತ್ತು ನೈತಿಕ ನಿಲುವಿಗೆ ಹೆಚ್ಚು ಒತ್ತು ಕೊಡಬೇಕಾದ ಅಗತ್ಯತೆ ಹೇಳುತ್ತಾರೆ.

ಯಾಕೆಂದರೆ ಅವರು ಹೇಳುವುದು ಇದುವರೆಗೂ ಬೌದ್ಧ ಗ್ರಂಥಗಳಲ್ಲಿ ಆದ್ಯತೆ ಕೊಟ್ಟಿರುವುದು ಧ್ಯಾನ, ಚಿಂತನೆ ಮತ್ತು ಅಭಿಧಮ್ಮಕ್ಕೆ. ಈ ದಿಸೆಯಲ್ಲಿ ಈ ಮಾದರಿಯಲ್ಲಿ ಅಂದರೆ ಧ್ಯಾನ, ಚಿಂತನೆ ಮತ್ತು ಅಭಿಧಮ್ಮದ ಮಾದರಿಯಲ್ಲಿ ಭಾರತದಲ್ಲಿ ಬೌದ್ಧ ಧರ್ಮ ಹರಡುವುದನ್ನು ಮುಂದುವರೆಸಿದ್ದೇ ಆದರೆ ಅದು ಅಕ್ಷರಶಃ ಬೌದ್ಧ ಧರ್ಮದ ಬೆಳವಣಿಗೆಗೆ ಮಾರಣಾಂತಿಕವಾಗಿ ಪರಿಣಮಿಸಲಿದೆ ಎನ್ನುತ್ತಾರೆ ಅಂಬೇಡ್ಕರರು.

ಇನ್ನು ಎರಡನೇ ಅಂಶ ತಮ್ಮ ಆ ನೀಲನಕ್ಷೆಯಲ್ಲಿ ಬಾಬಾಸಾಹೇಬರು ಹೇಳುವುದು; ಬೌದ್ಧ ಧರ್ಮದಲ್ಲಿ ಸಾಮಾನ್ಯ ಅನುಯಾಯಿಗಳಿಗೆ ಕ್ರೈಸ್ತ ಧರ್ಮದ ಮಾದರಿಯಲ್ಲಿ ದೀಕ್ಷೆ ನೀಡುವ ಪದ್ಧತಿ ಆರಂಭಿಸುವ ಬಗ್ಗೆ. ಯಾಕೆಂದರೆ ಅವರು ಹೇಳುವುದು ಬೌದ್ಧ ಧರ್ಮದಲ್ಲಿ ಭಿಕ್ಕುಗಳಿಗೆ ಮಾತ್ರ ಈ ಥರದ ದೀಕ್ಷಾ ನೀಡುವ ಪದ್ಧತಿ ಇದ್ದು ಮತಾಂತರ ಆಗುವ ಸಾಮಾನ್ಯ ಅನುಯಾಯಿಗಳಿಗೆ ಅಂತಹ ಯಾವುದೇ ದೀಕ್ಷಾ ಪದ್ಧತಿ ಇಲ್ಲ ಎಂದು.

ಈ ಹಿನ್ನೆಲೆಯಲ್ಲಿ ಎಷ್ಟೋ ಜನ ಬೌದ್ಧ ಧರ್ಮಕ್ಕೆ ಸೇರುತ್ತಾರದರೂ ಅಂತಹ ಒಂದು ದೀಕ್ಷಾ ಪದ್ಧತಿ ಇಲ್ಲದ್ದರಿಂದಾಗಿ ಇದ್ದಕ್ಕಿದ್ದಂತೆ ಅವರು ಬಿಟ್ಟು ಹೋಗುತ್ತಿದ್ದಾರೆ. ಆದ್ದರಿಂದ ಕ್ರೈಸ್ತ ದೀಕ್ಷೆಯ ಮಾದರಿಯಲ್ಲಿ ಯಾವುದೇ ಒಬ್ಬ ವ್ಯಕ್ತಿ ಬೌದ್ಧ ಎನಿಸಿಕೊಳ್ಳಲು ಕಡ್ಡಾಯವಾಗಿ ಅಂತಹ ಒಂದು ದೀಕ್ಷೆ ಸ್ವೀಕರಿಸುವ ಅಗತ್ಯತೆ ಅವರು ಹೇಳುತ್ತ ಅಂತೆಯೇ ಒಂದು ಬೌದ್ಧ ದೀಕ್ಷಾ ಪದ್ಧತಿಯನ್ನು ಆರಂಭಿಸುವ ಬಗ್ಗೆ ಅಂಬೇಡ್ಕರ್ ರು ಸ್ಪಷ್ಟವಾಗಿ ಒತ್ತಿ ಹೇಳುತ್ತಾರೆ.

ಹಾಗೆಯೇ ಆ ದೀಕ್ಷೆಯಲ್ಲಿ ಕೇವಲ ಪಂಚಶೀಲ ಉಚ್ಛರಿಸಿದರಷ್ಟೆ ಸಾಲದು ಜೊತೆಗೆ ಅಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸಬೇಕು ಹೇಗೆಂದರೆ ದೀಕ್ಷೆ ಸ್ವೀಕರಿಸಿದ ತಕ್ಷಣ ಆತನಲ್ಲಿ ತಾನು ಹಿಂದೂ ಎಂಬ ಮನೋಭಾವ ಹೋಗಬೇಕು ಆತ ಹೊಸ ಮನುಷ್ಯನಂತೆ ಆಗಬೇಕು ಎಂದು ಅಂಬೇಡ್ಕರರು ತಮ್ಮ ಆ ದೀಕ್ಷಾ ಪದ್ಧತಿ ಇರಬೇಕಾದ ರೀತಿಯನ್ನು ಹೇಳುತ್ತಾರೆ.

ಮುಂದುವರಿದು ಬೌದ್ಧ ಧರ್ಮ ಬೆಳವಣಿಗೆಯ ತಮ್ಮ ಆ ಬೃಹತ್ ಯೋಜನೆಯ ನೀಲನಕ್ಷೆಯಲ್ಲಿ ಅವರು ಹೇಳುವುದು ಬೌದ್ಧ ಧರ್ಮ ಬೋಧಕರ ಬಗ್ಗೆ. ಈ ನಿಟ್ಟಿನಲ್ಲಿ ಬೌದ್ಧ ಧರ್ಮ ಬೋಧಕರನ್ನು ನೇಮಿಸಿಕೊಳ್ಳಬೇಕೆನ್ನುವ ಅಂಬೇಡ್ಕರರು ಅಂತಹ ಬೋಧಕರು ಸಾಮಾನ್ಯ ಅನುಯಾಯಿಗಳಿಗೆ ಧಮ್ಮ ಬೋಧಿಸಬೇಕು ಮತ್ತು ಅನುಯಾಯಿಗಳು ಬುದ್ಧನ ಆ ಧಮ್ಮವನ್ನು ಹೇಗೆ ಪಾಲಿಸುತ್ತಿದ್ದಾರೆ ಎಂಬುದನ್ನೂ ಗಮನಿಸುತ್ತಿರಬೇಕು ಎನ್ನುತ್ತಾರೆ.

ಹಾಗೆಯೇ ಆ ಬೋಧಕರಿಗೆ ಸಂಬಳ ನೀಡುವ ಅಗತ್ಯತೆ ಹೇಳುವ ಅಂಬೇಡ್ಕರರು ಮದುವೆಯಾಗಿರುವವರನ್ನು ಕೂಡ ಅಂತಹ ಬೌದ್ಧ ಧಮ್ಮ ಬೋಧಕ ವೃತ್ತಿಗೆ ನೇಮಿಸಿಕೊಳ್ಳಬಹುದು ಎನ್ನುತ್ತಾರೆ, ಜೊತೆಗೆ ಅಂತಹವರು ಆರಂಭದಲ್ಲಿ ಪಾರ್ಟ್ ಟೈಮ್ ವೃತ್ತಿ ಮಾಡುತ್ತಿದ್ದರು ಕೂಡ ತಪ್ಪೇನಿಲ್ಲ ಎನ್ನುತ್ತಾರೆ. ಅಂದರೆ ಬಾಬಾಸಾಹೇಬರ ಪ್ರಕಾರ ಅಂತಹ ಧಮ್ಮ ಬೋಧಕರು ತಮ್ಮ ಧಮ್ಮ ಬೋಧನೆಯ ಜೊತೆ ಜೊತೆಗೆ ತಮ್ಮ ಸಂಸಾರ ಮತ್ತು ತಮ್ಮ ವೃತ್ತಿಯನ್ನೂ ಕೂಡ ನಿರ್ವಹಿಸಬಹುದು.

ಮುಂದುವರಿದು ಬಾಬಾಸಾಹೇಬರು ಹೇಳುವುದು ಬೌದ್ಧ ಧಾರ್ಮಿಕ ಪೂಜಾ ಶಾಲೆಗಳನ್ನು ಸ್ಥಾಪಿಸುವ ಬಗ್ಗೆ. ಅಂದಹಾಗೆ ಅಂತಹ ಶಾಲೆಗಳಲ್ಲಿ ಉದ್ದೇಶಿತ ಆ ಧಮ್ಮ ಬೋಧಕರು ಬೌದ್ಧ ಧರ್ಮವನ್ನು ಬೋಧಿಸಬಹುದು, ಅದರ ಜೊತೆಗೆ ಇತರ ಧರ್ಮಗಳನ್ನು ಬೌದ್ಧ ಧರ್ಮದ ಜೊತೆಗೆ ಹೋಲಿಸಿ ಧಮ್ಮದ ಅಧ್ಯಯನ ಮಾಡಬಹುದು ಎನ್ನುತ್ತಾರೆ.

ಈ ಸಂದರ್ಭದಲ್ಲಿ ಬಾಬಾಸಾಹೇಬರು ಒಂದು ಪ್ರಮುಖ ವಿಚಾರ ಪ್ರಸ್ತಾಪಿಸುತ್ತಾರೆ. ಅದು ವಿಹಾರದಲ್ಲಿ ಪ್ರತಿ ಭಾನುವಾರ ಬೌದ್ಧ ಪೂಜಾ ಸಂಪ್ರದಾಯವೊಂದನ್ನು ಆರಂಭಿಸುವ ಬಗ್ಗೆ. ಅಂದಹಾಗೆ ಅಂತಹ ಪೂಜೆಯ ನಂತರ ಧಮ್ಮ ಪ್ರವಚನ ಮಾಡಬೇಕು ಎಂದು ಅವರು ಸ್ಪಷ್ಟವಾಗಿ ಹೇಳುತ್ತಾರೆ.

ಒಟ್ಟಾರೆ ಬಾಬಾಸಾಹೇಬ್ ಅಂಬೇಡ್ಕರ ಈ ನೀಲನಕ್ಷೆಯಂತೆ ಒಂದು ಬೌದ್ಧ ಧರ್ಮ ಗ್ರಂಥ ರಚಿಸುವುದು, ಒಂದು ಬೌದ್ಧ ದೀಕ್ಷಾ ಪದ್ಧತಿ ಸೃಷ್ಟಿಸುವುದು, ಬೌದ್ಧ ಬೋಧಕರನ್ನು ನೇಮಿಸಿಕೊಳ್ಳುವುದು ಮತ್ತು ಪೂಜಾ ಪದ್ಧತಿಯೊಂದನ್ನು ಪ್ರಾರಂಭಿಸಿ ಪ್ರತಿ ಭಾನುವಾರ ಬೌದ್ಧ ಅನುಯಾಯಿಗಳು ಅಂತಹ ವಾರದ ಪ್ರಾರ್ಥನೆಯಲ್ಲಿ ಕಡ್ಡಾಯ ವಾಗಿ ಪಾಲ್ಗೊಳ್ಳುವಂತೆ ಮಾಡುವುದು ಅವರ ಆ ಮಹತ್ವದ ಯೋಜನೆ ಮತ್ತು ಯೋಚನೆಯಾಗಿತ್ತು.

ಹಾಗಿದ್ದರೆ ಧಮ್ಮ ಬೆಳೆಸಲು ಇದಿಷ್ಟೇ ಸಾಕೆ? ವಿಹಾರಗಳು ಬೇಡವೆ? ಇದಕ್ಕೂ ತಮ್ಮ ನೀಲನಕ್ಷೆಯಲ್ಲಿ ಹೇಳುವ ಬಾಬಾಸಾಹೇಬರು ಭಾರತದ ನಾಲ್ಕು ಪ್ರಮುಖ ನಗರಗಳಲ್ಲಿ ಅಂದರೆ ಮದ್ರಾಸ್, ಬಾಂಬೆ, ನಾಗಪುರ ಮತ್ತು ದೆಹಲಿಯಲ್ಲಿ ದೊಡ್ಡ ದೊಡ್ಡ ಬೌದ್ಧ ದೇಗುಲಗಳನ್ನು ವಿಹಾರಗಳನ್ನು ನಿರ್ಮಿಸುವ ವಿಚಾರ ಪ್ರಸ್ತಾಪಿಸುತ್ತಾರೆ. ಹಾಗೆಯೇ ಮಿಶನರಿ ಮಾದರಿಯಲ್ಲಿ ಈ ನಾಲ್ಕು ನಗರಗಳಲ್ಲಿ ಅಂದರೆ ಮದ್ರಾಸ್, ಬಾಂಬೆ, ನಾಗಪುರ ಮತ್ತು ದೆಹಲಿಯಲ್ಲಿ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸುವ ಯೋಜನೆ ಕೂಡ ಬಾಬಾಸಾಹೇಬರು ತಮ್ಮ ಆ ನಕ್ಷೆಯಲ್ಲಿ ಹೇಳುತ್ತಾರೆ.

ಮುಂದುವರಿದು ಎಲ್ಲಾ ಧರ್ಮದವರಲ್ಲಿ ಬೌದ್ಧ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಲು ಬೌದ್ಧ ಧರ್ಮದ ಬಗ್ಗೆ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ, ಗೆದ್ದವರಿಗೆ ಬಹುಮಾನ ನೀಡುವ ಮಾತನ್ನೂ ಬಾಬಾಸಾಹೇಬರು ಹೇಳುತ್ತಾರೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಬೌದ್ಧ ಧರ್ಮ ಪುನರುತ್ಥಾನಕ್ಕೆ ತಾನು ಹೀಗೆ ಪ್ರಾಥಮಿಕ ತಯಾರಿ ಮಾಡಿಕೊಂಡಿದ್ದೇನೆ ಮತ್ತು ಮುಂದೆಂದೂ ಅದು ಭಾರತದಿಂದ ಕಾಣೆಯಾಗದಂತೆ ನಾನು ಎಚ್ಚರಿಕೆ ವಹಿಸುವುದಾಗಿ ಬರ್ಮಾದ ಆ ಅಂತರರಾಷ್ಟ್ರೀಯ ಸಭೆಗೆ ಅವರು ತಿಳಿಸುತ್ತಾರೆ.

ನಿಜ ಹೇಳಬೇಕೆಂದರೆ ಅಂಬೇಡ್ಕರರು ಹಾಕಿಕೊಂಡಿದ್ದ ಈ ನೀಲ ನಕ್ಷೆ ಕಾರ್ಯ ರೂಪಕ್ಕೆ ಬಂದಿದ್ದರೆ ಖಂಡಿತ ಭಾರತದಲ್ಲಿ ಬೌದ್ಧ ಧರ್ಮ ಅಕ್ಷರಶಃ ಪುನರುಜ್ಜೀವನ ಗೊಂಡಿರುತ್ತಿತ್ತು. ಆದರೆ ದುರಂತ ಎಂದರೆ ಅವರು ಆ ನೀಲನಕ್ಷೆ ತಯಾರಿಸಿದ ಎರಡೇ ವರ್ಷದಲ್ಲಿ ಪರಿನಿಬ್ಬಾಣ ಹೊಂದಿದ್ದರು. ಈ ನಡುವೆ ಮತ್ತೂ ದುರಂತವೆಂದರೆ ಬಾಬಾಸಾಹೇಬರ ಅನುಯಾಯಿಗಳಿಗೆ ಅದನ್ನು ಅಂದರೆ ಬೌದ್ಧ ಧರ್ಮವನ್ನು ಪುನರುಜ್ಜೀವನ ಗೊಳಿಸುವ ಮಾತಿರಲಿ ಅಂಬೇಡ್ಕರರು ಹಾಕಿ ಕೊಂಡಿದ್ದ ಆ ನೀಲನಕ್ಷೆಯತ್ತ ಕಣ್ಣೆತ್ತಿ ನೋಡುವ ತಾಳ್ಮೆಯೂ ಇಲ್ಲದಿರುವುದು. ಈ ನಿಟ್ಟಿನಲ್ಲಿ ತಡವಾಗಿದ್ದರೂ ಈಗಲಾದರೂ ಬೌದ್ಧ ಧರ್ಮದ ಪುನರುತ್ಥಾನಕ್ಕೆ ಬಾಬಾಸಾಹೇಬರು ಹಾಕಿದ್ದ ನೀಲನಕ್ಷೆಯತ್ತ ಅವರ ಅನುಯಾಯಿಗಳು ನೋಡಲಿ. ಬೌದ್ಧ ಧರ್ಮದ ಪುನರುತ್ಥಾನಕ್ಕೆ, ಪುನರುಜ್ಜೀವನಕ್ಕೆ ಪಣ ತೊಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

Published

on

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್‌ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

Published

on

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.

ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

Published

on

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಜನವರಿ 11 ರಂದು ಬೆಳಿಗ್ಗೆ 8 ಗಂಟೆಗೆ ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ರಾಷ್ಟ್ರ ಧ್ವಜಾರೋಹಣ ನೆರೆವೇರಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಪರಿಷತ್ತಿನ ಧ್ವಜಾರೋಹಣ ನೆರೆವೇರಿಸುವರು.ಜಗಳೂರು ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ನಾಡ ಧ್ವಜಾರೋಹಣ ನೆರೆವೇರಿಸುವರು. ನವಚೇತನ ಶಾಲೆಯ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ನಾಡಗೀತೆ ಹಾಡುವರು.

ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ತಾಯಿ ಭುವನೇಶ್ವರಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡುವರು.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾದ ಲೋಕಮ್ಮ ಜೆ ಸಿ ಓಬಣ್ಣ, ಡಿ.ಡಿ.ಪಿ.ಯು ಕರಿಸಿದ್ದಪ್ಪ ಎಸ್.ಜಿ, ಡಿ.ಡಿ.ಪಿ.ಐ ಕೋಟ್ರೇಶ್.ಜಿ, ಜಗಳೂರು ವೃತ್ತ ನಿರೀಕ್ಷಕರು ಶ್ರೀನಿವಾಸರಾವ್, ತಾಲ್ಲೂಕು ಪಂಚಾಯಿತಿ, ಸಿ.ಇ.ಓ ಕೆಂಚಪ್ಪ, ಜಗಳೂರು ಬಿ.ಇ.ಓ ಹಾಲಮೂರ್ತಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಬೀರೇಂದ್ರ ಕುಮಾರ್ ಭಾಗವಹಿಸುವರು. ಮೆರವಣಿಗೆ ತಾಲೂಕು ಕಚೇರಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಯಲು ರಂಗಮಂದಿರವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯುತ್ತದೆ.

ಡೊಳ್ಳು ಕುಣಿತ,ಹಗಲುವೇಷ, ಬೊಂಬೆ ಮೇಳ, ಉರುಮೆ, ತಪ್ಪಡಿ, ಕಹಳೆ, ವೀರಗಾಸೆ, ಕರಡಿ ಮಜಲು, ನಂದಿಧ್ವಜ, ಭಜನೆ, ಕೋಲಾಟ, ಎತ್ತಿನಗಾಡಿಗಳ ಮೆರವಣಿಗೆ, ಮಹಿಳೆಯರಿಂದ ಪೂರ್ಣಕುಂಭ, ಇಲಾಖೆಗಳ ಸ್ತಬ್ಧ ಚಿತ್ರಗಳು ಇತ್ಯಾದಿ.

ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸುವರು. ಜಗಳೂರು ಶಾಸಕರಾದ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು.

ಸಂಸ್ಕøತಿ ಚಿಂತಕರು ಸಾಹಿತಿಗಳಾದ ಡಾ.ಎ.ಬಿ.ರಾಮಚಂದ್ರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ಆಶಯ ನುಡಿಗಳಾನ್ನಾಡುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮಹಲಿಂಗರಂಗ ವೇದಿಕೆಯನ್ನು ಉದ್ಘಾಟಿಸುವರು. ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿನ್ನಹಗರಿಯ ನುಡಿ ತೇರು ಸ್ಮರಣ ಸಂಚಿಕೆಯ ಲೋಕಾರ್ಪಣೆ ಮಾಡುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಜೆ.ಎಂ ಇಮಾಮ್ ಮಹಾದ್ವಾರವನ್ನು ಉದ್ಘಾಟಿಸುವರು.

ಕ.ಸಾ.ಪ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ವಿದ್ಯಾರತ್ನ ಡಾ.ಟಿ.ತಿಪ್ಪೇಸ್ವಾಮಿ ಸಭಾಂಗಣವನ್ನು ಉದ್ಘಾಟಿಸುವರು. ನಿಕಟ ಪೂರ್ವ ಸಮ್ಮೇಳಧ್ಯಕ್ಷರಾದ ಪ್ರೊ.ಸಿ.ವಿ ಪಾಟೀಲ್ ಕನ್ನಡ ಧ್ವಜ ಹಸ್ತಾಂತರ ಮಾಡುವರು. ಜಗಳೂರು ಕ್ಷೇತ್ರದ ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಸ್.ವಿ ರಾಮಚಂದ್ರಪ್ಫ, ಹೆಚ್.ಪಿ.ರಾಜೇಶ್ ಕೃತಿಗಳ ಲೋಕಾರ್ಪಣೆ ಮಾಡುವರು.

ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಪ್ರೊ.ಎಸ್.ಬಿ ರಂಗನಾಥ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಜಗಳೂರು ಪಟ್ಟಣದ ಅಧ್ಯಕ್ಷರಾದ ಕೆ.ಎಸ್ ನವೀನ್ ಕುಮಾರ್ ಡಾ.ಎಂ.ಜಿ.ಈಶ್ವರಪ್ಪ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಹೊನ್ನಾಳಿ ಶಾಸಕರಾದ ಡಿ.ಜಿ.ಶಾಂತನಗೌಡ, ಹರಿಹರ ಶಾಸಕರಾಧ ಬಿ.ಪಿ ಹರೀಶ್, ಚನ್ನಗಿರಿ ಶಾಸಕರಾದ ಬಸವರಾಜ ವಿ. ಶಿವಗಂಗ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅಸಗೋಡು ಜಯಸಿಂಹ, ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎನ್ ಜಯದೇವ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್ ನವೀನ್, ನಾ.ರವಿಕುಮಾರ, ಡಿ.ಟಿ.ಶ್ರೀನಿವಾಸ್, ಡಾ.ಚಿದಾನಂದ ಎಂ.ಗೌಡ, ಜಿ.ಸ.ನೌ ಸಂಘದ ಅಧ್ಯಕ್ಷರಾದ ವೀರೇಶ್ ಎಸ್ ಒಡೇನಪುರ, ಜಿಲ್ಲಾ ವರದಿಗಾರರ ಕೂಟ ನಾಗರಾಜ್.ಎಸ್ ಬಡದಾಳ್, ಯುವ ಮುಖಂಡರಾದ ಕೆ.ಪಿ ಪಾಲಯ್ಯ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಕುರ್ಕಿ, ತಾ.ಸ.ನೌ ಸಂಘದ ಎ.ಎಲ್ ತಿಪ್ಪೇಸ್ವಾಮಿ, ಕಾರ್ಯಕಾರಿ ಸಮಿಯಿಯ ಅಧ್ಯಕ್ಷರಾದ ಜಿ.ರುದ್ರಯ್ಯ, ಪ್ರಗತಿಪರ ಕೃಷಿಕರು ಕಲ್ಲೇರುದ್ರೇಶ್ ಪಾಲ್ಗೋಳ್ಳುವರು.

ಮಧ್ಯಾಹ್ನ 2 ಗಂಟೆಗೆ ಗೋಷ್ಠಿ-1ರಲ್ಲಿ. ಸಾಹಿತ್ಯ ಮತ್ತು ಸಾಮಾಜಿಕ ನೆಲೆಗಳು, ಮಧ್ಯಾಹ್ನ 3:45 ಕ್ಕೆ ಗೋಷ್ಠಿ -2ರಲ್ಲಿ ಸೌಹಾರ್ದತೆ- ಸಮಾನತೆ-ಸಾಮಾಜಿಕ ನ್ಯಾಯ, ಗೋಷ್ಠಿ-3ರಲ್ಲಿ ಸಂಜೆ 5.30ಕ್ಕೆ ದಾವಣಗೆರೆ ಜಿಲ್ಲೆಯ ಐತಿಹಾಸಿಕ ನೆಲೆಗಳು, ಗೋಷ್ಠಿಗಳು ನಡೆಸಲಾಗುವುದು.

ಸಂಜೆ 6:15 ಗಂಟೆಗೆ ಜಗಳೂರು ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಇರುತ್ತದೆ. ನಂತರ ಡಾ. ಶುಭಾ ಮರವಂತೆ, ಗಂಗಾವತಿ ಪ್ರಾಣೇಶ್ ಮತ್ತು ತಂಡದವರಿಂದ ಹಾಸ್ಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending