Connect with us

ಬಹಿರಂಗ

ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ) ಸ್ಥಾಪನೆಗೆ ಕಾರಣರಾದ ಬಾಬಾಸಾಹೇಬ್ ಅಂಬೇಡ್ಕರ್

Published

on

  • ರಘೋತ್ತಮ ಹೊ.ಬ

ಭಾರತೀಯ ರಿಸರ್ವ್ ಬ್ಯಾಂಕ್ ಅಥವಾ ಆರ್ ಬಿ ಐ ಅಕ್ಷರಶಃ ಬಾಬಾಸಾಹೇಬ್ ಅಂಬೇಡ್ಕರರ ಮೆದುಳಿನ ಕೂಸು Brain child of Babasaheb. ಹೇಗೆಂದಿರಾ? ಇಲ್ಲಿ ನೋಡಿ. ರಿಸರ್ವ್ ಬ್ಯಾಂಕ್ ಅಂದರೆ ಅರ್ಥಶಾಸ್ತ್ರ ಅಥವಾ ಎಕನಾಮಿಕ್ಸ್ ತಾನೇ? RBI ನ ಅರ್ಥಶಾಸ್ತ್ರಕ್ಕೂ ಅಥವಾ ಅರ್ಥಶಾಸ್ತ್ರದ ಹಿನ್ನೆಲೆಯ RBIಗೂ ಅಂಬೇಡ್ಕರ್ ಗೂ ಎತ್ತಣದಿಂದೆತ್ತಣ ಸಂಬಂಧ ಎಂದು ಕೇಳುವುದಾದರೆ..

ಓರ್ವ ಸಾಮಾನ್ಯ ವಿದ್ಯಾರ್ಥಿಯಾಗಿ 1913ರಲ್ಲಿ ಅಂಬೇಡ್ಕರರು ಮುಂಬಯಿನ ಎಲ್ಫಿನ್ ಸ್ಟೋನ್ ಕಾಲೇಜ್ ನಲ್ಲಿ ಬಿ.ಎ ಪದವಿ ಪಡೆದರು. ವಿಷಯ: ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರ. ಮುಂದುವರೆದು ಅರ್ಥಶಾಸ್ತ್ರವನ್ನು ಪ್ರಮುಖ ವಿಷಯವಾಗಿ ತೆಗೆದುಕೊಂಡು ಅದೇ ಎಲ್ಫಿನ್ ಸ್ಟೋನ್ ಕಾಲೇಜಿನಲ್ಲಿ ಎಂ.ಎ ಪದವಿ ಪಡೆದರು. ತದನಂತರ 1917ರಲ್ಲಿ ಅಂಬೇಡ್ಕರರು ಅಮೆರಿಕದ ನ್ಯೂಯಾರ್ಕ್ ನಗರದ ಕೊಲಂಬಿಯಾ ವಿವಿಯಿಂದ ಪಿಹೆಚ್‌ಡಿ ಪದವಿ ಪಡೆದರಾದರೂ ಅರ್ಥಶಾಸ್ತ್ರದ ಮೇಲಿನ ತಮ್ಮ ಅಭಿಮಾನವನ್ನು ಬಿಟ್ಟು ಕೊಡಲಿಲ್ಲ.

ಈ ಹಿನ್ನೆಲೆಯಲ್ಲಿ ಅವರು 1921ರಲ್ಲಿ “ಬ್ರಿಟಿಷ್ ಭಾರತದಲ್ಲಿ ಸಾಮ್ರಾಜ್ಯಶಾಹಿ ಹಣಕಾಸಿನ ಪ್ರಾಂತೀಯ ವಿಕೇಂದ್ರಿಕರಣ” ಎಂಬ ಪ್ರೌಢ ಪ್ರಬಂಧ (thesis) ಮಂಡಿಸಿ ಅರ್ಥಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದರು. ಗಮನಿಸಿ, ಅಂಬೇಡ್ಕರರ ಪ್ರಬಂಧದ ಈ ವಿಷಯವನ್ನು ಆ ಮೂಲಕ ಭಾರತೀಯ ಹಣಕಾಸು ವ್ಯವಸ್ಥೆಗೆ ಒಂದು ರೂಪ ಕೊಡುವಲ್ಲಿ ಅವರ ಮೆದುಳಿನಲ್ಲಿ ಹುಟ್ಟಿದ ಆ ವಿಷಯವನ್ನು. ಅಂದರೆ “ಹಣಕಾಸಿನ ಪ್ರಾಂತೀಯ ವಿಕೇಂದ್ರಿಕರಣ”, ಅರ್ಥಾತ್ ಹಣಕಾಸಿನ ಚಲಾವಣೆಯನ್ನು ವಿಕೇಂದ್ರೀಕರಿಸುವುದು.

ಮುಂದುವರೆದು ಇದೇ ವಿಷಯದ ಸಂಶೋಧನೆ ಮುಂದುವರೆಸಿದ ಅಂಬೇಡ್ಕರರು 1923ರಲ್ಲಿ ” ರೂಪಾಯಿಯ ಸಮಸ್ಯೆ: ಅದರ ಮೂಲ ಮತ್ತು ಪರಿಹಾರ. ಭಾರತೀಯ ಕರೆನ್ಸಿ ಮತ್ತು ಬ್ಯಾಂಕಿಂಗ್ ನ ಇತಿಹಾಸ ” ಎಂಬ ಮತ್ತೊಂದು ಪ್ರೌಢ ಪ್ರಬಂಧ ಮಂಡಿಸಿದರು. ಅಂದಹಾಗೆ ಇಂಗ್ಲೆಂಡಿನ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಬೇಡ್ಕರರ ಈ ಅದ್ಭುತ ಕೃತಿಗೆ “ಡಾಕ್ಟರ್ ಆಫ್ ಸೈನ್ಸ್ (D.Sc)” ಪದವಿ ಇತ್ತು ಗೌರವಿಸಿತು ಮತ್ತು ಅಂಬೇಡ್ಕರರ ಈ D.Sc ಪದವಿ ಪುರಸ್ಕೃತ ಈ ಕೃತಿಯನ್ನು ಲಂಡನ್ ನ “ಪಿ.ಎಸ್.ಕಿಂಗ್ ಅಂಡ್ ಕಂಪನಿ” ಪ್ರಕಾಶನ ಸಂಸ್ಥೆಯು “Problem of Rupee” ಎಂಬ ಶೀರ್ಷಿಕೆಯಲ್ಲಿ ಪುಸ್ತಕವಾಗಿ ಅದೇ ವರ್ಷ ಅಂದರೆ 1923 ರಲ್ಲಿ ಪ್ರಕಟಿಸಿತು.

ಹೀಗೆ ಅಂಬೇಡ್ಕರರ ಅರ್ಥಶಾಸ್ತ್ರದ ಚಿಂತನೆ, ಭಾರತದ ಹಣಕಾಸು ವ್ಯವಸ್ಥೆಯ ಸಮಸ್ಯೆ ಕುರಿತ ಈ ಸಂಶೋಧನೆ ಲಂಡನ್ ನಲ್ಲೇ ಬ್ರಿಟಿಷ್ ಆಡಳಿತಗಾರರ ಕೈಸೇರುತ್ತಲೇ ಅಂಬೇಡ್ಕರರು “ರೂಪಾಯಿಯ ಸಮಸ್ಯೆ , ಅದರ ಮೂಲ ಮತ್ತು ಪರಿಹಾರ” ಎಂದು ಹೇಳಿದ್ದರಲ್ಲ, ಅದರ ಪರಿಹಾರಾರ್ಥವಾಗಿ ಬ್ರಿಟಿಷ್ ಸರ್ಕಾರ 1926ರಲ್ಲಿ ಹಿಲ್ಟನ್ ಯಂಗ್ ರವರ ನೇತೃತ್ವದಲ್ಲಿ Royal Commission on Indian Currency and Finance ಎಂಬ ಆಯೋಗ ನೇಮಿಸಿತು. ಈ ವಿಷಯ ದಾಖಲಿಸುತ್ತ ಅಂಬೇಡ್ಕರ್ ವಾದಿ ಲೇಖಕ ಕ್ರಿಸ್ಟೋಫರ್ ಜೆಫರ್ಲೆಟ್ “ಹಾಗೆ ಭೇಟಿಕೊಟ್ಟ ಆಯೋಗದ ಪ್ರತಿಯೊಬ್ಬ ಸದಸ್ಯನ ಕೈಯಲ್ಲೂ ಕೂಡ ಆಕರ ಗ್ರಂಥವಾಗಿ (reference book) ಅಂಬೇಡ್ಕರರು ಪ್ರಕಟಿಸಿದ್ದ “ಪ್ರಾಬ್ಲಂ ಆಫ್ ರುಪೀ” ಎಂಬ ಆ ಕೃತಿ ಇತ್ತು” ಎನ್ನುತ್ತಾರೆ.

ಈ ಹಿನ್ನೆಲೆಯಲ್ಲಿ ಆ ಆಯೋಗ ಅಂಬೇಡ್ಕರರು ಎತ್ತಿದ್ದ ಸಮಸ್ಯೆಯ ಈ ಎಳೆ ಹಿಡಿದು ಭಾರತದಲ್ಲಿ ದೇಶದಾದ್ಯಂತ ಸಂಚರಿಸಿ ಅನೇಕರಿಂದ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹಿಸಿತು. ಸ್ವತಃ ಬಾಬಾಸಾಹೇಬ್ ಅಂಬೇಡ್ಕರರು ಕೂಡ ಆ ಆಯೋಗದ ಮುಂದೆ ಖುದ್ದು ಹಾಜರಾಗಿ ಸಾಕ್ಷಿ ನುಡಿದರು, ತಮ್ಮ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಮಂಡಿಸಿದರು. (ಅಂಬೇಡ್ಕರರ ಆ ಲಿಖಿತ ಸಾಕ್ಷಿ ಕೂಡ ಭಾರತ ಸರ್ಕಾರ ಪ್ರಕಟಿಸಿರುವ ಅಂಬೇಡ್ಕರರ ಬರಹಗಳು ಭಾಷಣಗಳು ಸಂಪುಟಗಳ ಸರಣಿಯಲ್ಲಿದೆ.)

ಹಾಗಿದ್ದರೆ ಕರೆನ್ಸಿ ಕುರಿತು ಅಂಬೇಡ್ಕರ್
ಏನು ಪ್ರತಿಪಾದಿಸಿದರು? ಈ ಬಗ್ಗೆ ಹೇಳುವ ಅವರ “ಕರೆನ್ಸಿ ನಿಯಂತ್ರಣ ಮಾಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುವುದು ಅಪಾಯಕಾರಿ. ಯಾಕೆಂದರೆ ಕರೆನ್ಸಿ ಪೂರೈಕೆಯನ್ನು ವಾಣಿಜ್ಯದ ಅಗತ್ಯಕ್ಕೆ ತಕ್ಕಂತೆ
ಹೆಚ್ಚಿಸಬೇಕು ಅಥವಾ ಕಡಿಮೆಗೊಳಿಸಬೇಕು. ಆದರೆ ಆತಂಕದ ವಿಷಯವೆಂದರೆ ಸರ್ಕಾರ ಕೆಲವೊಮ್ಮೆ ಯಾವುದೇ ಪಶ್ಚಾತ್ತಾಪ ಪಡದೆ ಅನಿಯಂತ್ರಿತವಾಗಿ ಕರೆನ್ಸಿ ಉತ್ಪಾದಿಸಬಹುದು. ಇದು ಇಡೀ ಕರೆನ್ಸಿ ವ್ಯವಸ್ಥೆಯನ್ನೇ ನಾಶಗೊಳಿಸಲಿದೆ. ಈ ನಿಟ್ಟಿನಲ್ಲಿ ಇಂತಹ ಅನೇಕ ಉದಾಹರಣೆಗಳು ಇತಿಹಾಸದಲ್ಲಿ ದಾಖಲಾಗಿವೆ” ಆದ್ದರಿಂದ ಹಿಲ್ಟನ್ ಯಂಗ್ ಆಯೋಗದ ಮುಂದೆ ಅಂಬೇಡ್ಕರರು ಹೇಳುವುದು ಕರೆನ್ಸಿ ಪೂರೈಕೆ ಮತ್ತು ನಿಯಂತ್ರಣವನ್ನು ಸರ್ಕಾರಕ್ಕೆ ವಹಿಸುವ ಬದಲು ಕೇಂದ್ರೀಯ ಬ್ಯಾಂಕ್ ಒಂದನ್ನು ಸ್ಥಾಪಿಸಿ ಅದಕ್ಕೆ ವಹಿಸಬೇಕು ಎಂದು.

ಅಂದಹಾಗೆ ಇಂತಹ ಸಾಕ್ಷಿ ಮತ್ತು ಅಭಿಪ್ರಾಯಗಳ ಆಧಾರದ ಮೇಲೆ ಹಿಲ್ಟನ್ ಯಂಗ್ ಆಯೋಗ ತನ್ನ ಅಂತಿಮ ವರದಿ ಸಲ್ಲಿಸುತ್ತಲೇ ಕೇಂದ್ರೀಯ ಅಸೆಂಬ್ಲಿಯು 1934ರಲ್ಲಿ RBI ಕಾಯಿದೆಯನ್ನು ಅಂಗೀಕರಿಸಿತು. ಪರಿಣಾಮ 1935 ಏಪ್ರಿಲ್ 1 ರಂದು RBI ಅಥವಾ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾಯಿತು. ಈ ಕುರಿತು ಮಾಹಿತಿ ದಾಖಲಿಸುವ ವಿಕಿಪೀಡಿಯ RBI was conceptualized as per the guidelines, working style and outlook presented by Bhimrao Ramji Ambedkar ಎನ್ನುತ್ತದೆ.

ಪ್ರಶ್ನೆ ಎಂದರೆ ಈ ಮಾಹಿತಿ ಭಾರತೀಯರಿಗೆ ಎಷ್ಟು ತಿಳಿದಿದೆ? ಎಂಬುದು. ಏಕೆಂದರೆ ಜನಸಾಮಾನ್ಯರು ಸುಮ್ಮನೆ ನೋಟು ಎಣಿಸಿಕೊಳ್ಳುತ್ತಾರೆ, ಅಲ್ಲಿ ಕಾಣುವ Reserve Bank of India ಎಂಬ ಮುದ್ರಣ ಕಣ್ತುಂಬಿಕೊಳ್ಳುತ್ತಾರೆ. ಆದರೆ ಅದರ ಸ್ಥಾಪನೆ ಹಿಂದಿರುವ ಚಿಂತನೆ? ಬಾಬಾಸಾಹೇಬ್ ಅಂಬೇಡ್ಕರ್ ಎಂಬ ಓರ್ವ ವಿದ್ಯಾರ್ಥಿ ತನ್ನ ಬಿಎ ಪದವಿಯಿಂದ ಹಿಡಿದು ಡಿಎಸ್ಸಿ ಪದವಿವರೆಗೆ ಅದನ್ನು ಪ್ರತಿಪಾದಿಸಿದ ರೀತಿ? ಪ್ರತಿಪಾದಿಸಿ ಸ್ವತಃ ಅದರ ಸ್ಥಾಪನೆಗೆ ಸಾಕ್ಷಿ ನುಡಿದ ರೀತಿ? ನಿಜ, ಬಾಬಾಸಾಹೇಬ್ ಅಂಬೇಡ್ಕರರೇನು ತನ್ನನ್ನು RBI ಸ್ಥಾಪಕ ಎಂದು ಹೇಳಲಿ ಅಥವಾ ಜನಸಾಮಾನ್ಯರು ಹಾಗೆ ಗುರುತಿಸಲಿ ಎಂದು ಈ ಸಾಧನೆ ಮಾಡಿರಲಿಕ್ಕಿಲ್ಲ.

ಅರ್ಥಶಾಸ್ತ್ರದ ಓರ್ವ ಸಂಶೋಧನಾರ್ಥಿಯಾಗಿ ತಮ್ಮ ಸಂಶೋಧನೆ ಮೂಲಕ ಆ ಕಾಲದಲ್ಲಿ ರೂಪಾಯಿ ಎದುರಿಸುತ್ತಿದ್ದ ಸಮಸ್ಯೆ ಮತ್ತು ಅದಕ್ಕೆ ಪರಿಹಾರವನ್ನು ಅವರು ಕಂಡುಹಿಡಿದರು. ಈ ನಿಟ್ಟಿನಲ್ಲಿ ಅಂಬೇಡ್ಕರರ ಅಂತಹ RBI ಸ್ಥಾಪನೆಯ ಸಾಧನೆಯನ್ನು ನಾವು ಅಂದರೆ ಜನಸಾಮಾನ್ಯರು ಗುರುತಿಸಬೇಕು, ಇತಿಹಾಸದಲ್ಲಿ ದಾಖಲಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ನಾವು ಬಳಸುವ ಹಣಕ್ಕೆ ಮೌಲ್ಯ ಇರುವುದಿಲ್ಲ. ಏಕೆಂದರೆ ಅಂಬೇಡ್ಕರರು ಅದಕ್ಕೊಂದು ರೂಪ ಕೊಟ್ಟು ಇಂದು ನಮ್ಮ ಕೈಗೆ ಅದು ಸಿಗುವಂತೆ ಮಾಡದಿದ್ದರೆ ಅದು ಅದ್ಯಾವ ಶ್ರೀಮಂತನ ತಿಜೋರಿ ಸೇರುತ್ತಿತ್ತೋ! ಹಣ ಎಂದರೆ ಹೆಣವಿರಲಿ ನಾವೇ ಬಾಯಿ ಬಾಯಿ ಬಿಡಬೇಕಿತ್ತಷ್ಟೆ..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending