Connect with us

ಬಹಿರಂಗ

ಸಂವಿಧಾನ ನಿತ್ಯದ ಪಾಠವಾಗಲಿ..!

Published

on

  • ಸನಾವುಲ್ಲ ನವಿಲೇಹಾಳ್

ನಾನು ಮೊದಲು ಎರಡು ವಿಷಯಗಳನ್ನು ನಿಮಗೆ ನೆನಪಿಸಲು ಬಯಸುತ್ತೇನೆ,ಒಂದು;ಆಗಸ್ಟ್ -09-2018 ರಂದು ದೆಹಲಿಯ ಜಂತರ್ ಮಂತರ್ ಎಂಬಲ್ಲಿ ದುಷ್ಟ ಬುದ್ದಿಯ ಕೆಲವರು ಸಂವಿಧಾನದ ಪ್ರತಿಯನ್ನು ಸುಟ್ಟುಹಾಕಿದರು.

ಎರಡನೆಯದು; ಕರ್ನಾಟಕ ವಿಧಾನ ಸಭೆಯ ಚುನಾವಣ ಪ್ರಚಾರದ ವೇಳೆ ಕೇಂದ್ರ ಮಂತ್ರಿಯೊಬ್ಬರು ‘ಸಂವಿಧಾನವನ್ನು ಬದಲಾಯಿಸಬೇಕು,ಅದಕ್ಕಾಗಿ ನಾವು ಅಧಿಕಾರಕ್ಕೆ ಬಂದಿದ್ದೇವೆ, ಎಂದು ಭಾಷಣಮಾಡಿ ವಿವಾದವೆಬ್ಬಿಸಿದರು.

ನಾವು ಈ ಎರೆಡು ಘಟನೆಗಳನ್ನ ಒಟ್ಟಿಗೆಯಿಟ್ಟು ನೋಡಿದಾಗ ಇಂದು ನಾವು ಅಂಬೇಡ್ಕರ್ ಅವರ ಜನ್ಮದಿನವನ್ನು ಯಾವ ಆಶಯಗಳೊಂದಿಗೆ ಆಚರಿಸಬೇಕು, ಎಂಬ ಪ್ರಶ್ನೆ ನಮ್ಮ ಕಣ್ಣಮುಂದೆ ಬರುತ್ತದೆ. ಸಂವಿಧಾನವನ್ನು ಬದಲಾಯಿಸುವುದು ಬೇರೆ ,ತಿದ್ದುಪಡಿ ಮಾಡುವುದು ಬೇರೆ. 368 ನೆ ವಿಧಿಯಲ್ಲಿ ಸಂವಿಧಾನ ತಿದ್ದುಮಾಡುವ ಅವಕಾಶ ಕಲ್ಪಿಸಲಾಗಿದೆ, ನಾವು ಸಂವಿಧಾನ ಬದಲಾಯಿಸುತ್ತೇವೆ ಎಂಬ ಮಾತಿನಲ್ಲಿ ತಿದ್ದುಪಡಿ ಮಾಡುವ ಅಪೇಕ್ಷೆಯಿಲ್ಲ.

ಈ ತರಹದ ಮಾತುಗಳು ಜನರ ಅಸಹನೆ ಸ್ಪೋಟಗೊಳ್ಳುವಲ್ಲಿ ಸಹಕಾರಿಯಾಗುತ್ತವೆ ಎಂಬುದಕ್ಕೆ ದೆಹಲಿಯಲ್ಲಿ ಸಂವಿಧಾನ ಪ್ರತಿಸುಟ್ಟ ಘಟನೆ ಸಾಕ್ಷಿಯಾಗುತ್ತದೆ. ಅಂಬೇಡ್ಕರ್ ಅವರ 130 ನೆ ಜನ್ಮದಿನದ ಈ ಸಂದರ್ಭದಲ್ಲಿ ಸಂವಿಧಾನ ನಮಗೆ ಎಷ್ಟರ ಮಟ್ಟಿಗೆ ತಿಳಿದಿದೆ ಎಂದು ನಮ್ಮನ್ನು ನಾವೆ ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ, ಈಗ ನನ್ನ ಕಣ್ಣೆದರಿಗೆ ಇರುವ ಬಹುಪಾಲು ಜನರು ಸ್ವತಂತ್ರ ನಂತರ ಅಥವಾ ಸಂವಿಧಾನ ಹುಟ್ಟಿದ ನಂತರ ಹುಟ್ಟಿದವರಿರಬಹುದು ಎಂದು ಭಾವಿಸಿದ್ದೇನೆ.

ಹಾಗಾಗಿ ನಮ್ಮ ದೇಶಕ್ಕೆ ಈ ತೆರೆನಾದ ಸಂವಿಧಾನ ಬೇಕು ಎಂಬ ಅಂಬೇಡ್ಕರ್ ಅವರ ದನಿಯ ಹಿಂದಿನ ಅನುಭವ ಮತ್ತು ಸಂಕಟ ನಮಗ್ಯಾರಿಗೂ ಇರಲಾರದು, ಇದನ್ನು ಅರ್ಥಮಾಡಿಕೊಳ್ಳ ಬೇಕಾದರೆ ನಾವು ಅಂಬೇಡ್ಕರ್ ಅವರ ಬದುಕನ್ನ ಅಧ್ಯಾಯನ ಮಾಡಬೇಕಾಗಿದೆ,ನಂತರ ಸಂವಿಧಾನ ನಮಗೆ ಅರ್ಥವಾಗ ಬಹುದು.

ಅನೇಕ ನಾಯಕರ, ಜನಸಾಮನ್ಯರ,ಹುತಾತ್ಮರ ತ್ಯಾಗ ಬಲಿದಾನದ ಸಾಕಾರದಿಂದ 1947 ಆಗಷ್ಟ್ 15 ರಂದು ಸಿಕ್ಕ ಸ್ವತಂತ್ರದ ಆಶಯವನ್ನು ಸಾಕಾರಗೊಳಿಸಲು,1950-ಜನವರಿ 26 ರಂದು ನಮ್ಮ ದೇಶದಲ್ಲಿ ಸಂವಿಧಾನ ಜಾರಿಗೆ ತರಲಾಯಿತು.
ಒಂದು ದೇಶದ ಸಂವಿಧಾನವೆಂದರೆ ಅದು ಆ ದೇಶದ ಪವಿತ್ರ ಗ್ರಂಥವೆ ಸರಿ, ಸಂವಿಧಾನವನ್ನು ಅಪಮಾನಿಸುವುದು ದೇಶವನ್ನು ಅಪಮಾನಿಸಿದಂತೆ, ಯಾವುದಾದರೂ ಒಂದು ಸಮಾರಂಭದಲ್ಲಿ ಸೇರಿರುವ ಜನರಿಗೆ ಎಷ್ಟು ಮನೆಗಳಲ್ಲಿ ಭಗವದ್ಗೀತೆ ಇದೆ ಅಂತ ನಾನು ಪ್ರಶ್ನೆಕೇಳಿದರೆ, ಕೆಲವು ಹಿಂದೂ ಸ್ನೇಹಿತರು ಕೈ ಎತ್ತಬಹುದು.

ಎಷ್ಟು ಮನೆಗಳಲ್ಲಿ ಕುರಾನ್ ಇದೆ ಎಂದರೆ ಕೆಲವು ಮುಸ್ಲೀಂ ಸ್ನೇಹಿತರು ಕೈ ಎತ್ತ ಬಹುದು, ಅಥವಾ ಕೆಲವು ಮುಸ್ಲೀಂ ಭಾಂದವರು ನಮ್ಮ ಮನೆಯಲ್ಲಿ ಭಗವದ್ಗೀತೆ ಇದೆ ಎನ್ನಬುದು, ಕೆಲವು ಹಿಂದೂ ಬಾಂಧವರು ನಮ್ಮ ಮನೆಯಲ್ಲಿ ಕುರಾನ್ ಇದೆ ಎನ್ನಬಹುದು, ಆದರೆ ಯಾರ ಮನೆಯಲ್ಲಿ ಸಂವಿಧಾನದ ಪ್ರತಿ ಇದೆ ಎಂದು ಕೇಳಿದರೆ ಬಹುಷ್ಯ ಯಾರು ಕೈ ಎತ್ತಲಿಕ್ಕಿಲ್ಲ ಅನ್ನಿಸುತ್ತೆ.

ನಾನು ಮೇಲೆ ಹೇಳುವಾಗ ಸಂವಿಧಾನವನ್ನು ಒಂದು ದೇಶದ ಪವಿತ್ರ ಗ್ರಂಥ ಎಂದು ಹೇಳಿದೆ ಆಗೆಂದ ತಕ್ಷಣ ಅದನ್ನು ಜನರು ಒಂದು ಬಟ್ಟೆಯಲ್ಲಿ ಸುತ್ತಿ ಯಾರಿಗೂ ಸಿಗದ ಹಾಗೆ ಇಡುವ ಅಪಾಯ ಇದೆ, ಹಾಗಾಗಿ ನನ್ನ ವಾಖ್ಯವನ್ನ ಬದಲಿಸುತ್ತೇನೆ, ‘ಸಂವಿಧಾನ ಅದೊಂದು ಮಹತ್ವದ ಗ್ರಂಥ’. ಬೇಕಾದರೆ ಅವರ ಅವರ ಧರ್ಮಗ್ರಂಥಗಳನ್ನ ಬಟ್ಟೆಯಲ್ಲಿ ಸುತ್ತಿಡಲಿ, ಆದರೆ ಸಂವಿಧಾನದಂತ ಮಹತ್ವದ ಗ್ರಂಥವನ್ನು ನಿಮ್ಮ ಮನೆಯವರೆಲ್ಲರಿಗೂ ಕೈಗೆಟುಕುವಂತೆ ಇಟ್ಟು ಓದಿಸುವ ಕೆಲಸ ಮಾಡಿ.

ಸಂವಿಧಾನದ ಪ್ರತಿ ಪುಟಗಳು ಹರಿದು ಹೋಗುವಂತೆ ಓದಿ,ಅದರ ತಾತ್ವಿಕ ನೆಲೆ ಏನು ಎಂಬುದನ್ನು ಎಲ್ಲಾ ಧರ್ಮ,ಜಾತಿಯವರು ಅರ್ಥೈಸಿಕೊಂಡು ಬದುಕಿದರೆ ಮಾತ್ರ ನಾವು ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಿಕ್ಕೆ ಮತ್ತಷ್ಟು ಯೋಗ್ಯತೆಯನ್ನ ಪಡೆದುಕೊಳ್ಳುತ್ತೇವೆ.
ನಮಗೆ ಇವತ್ತು ಆತಂಕದ ವಿಷಯ ಏನು ಅಂತ ಹೇಳಿದರೆ ‘ಯುವ ಜನತೆಯನ್ನು ದಿಕ್ಕುಗೆಡಿಸುವ ಪ್ರಯತ್ನ ಇಂದು ವ್ಯವಸ್ಥಿತವಾಗಿ ನಡೆಯುತ್ತಿದೆ’.

ನಮ್ಮನ್ನು ಮುನ್ನಡೆಸಬೇಕಾದ ಸಂವಿದಾನವನ್ನು ನಾವು ಕಪಾಡಿಕೊಳ್ಳಬೇಕಾದ ಸಂದರ್ಭಬಂದಿರುವಂತದ್ದು,ಮತ್ತು ಸಂವಿಧಾನವು ಪ್ರತಿಪಾದಿಸಿದ ಬಹುತ್ವ ಭಾರತೀಯತೆಯ ತತ್ವಕ್ಕೆ ಧಕ್ಕೆಯಾಗುತ್ತಿರುವುದನ್ನು ಕಾಣುತ್ತಿದ್ದೇವೆ’. ಬಹುತ್ವ ಭಾರತ ಎಂದರೆ ಒಂದು ದೇಶದದೊಳಗಿನ ಎಲ್ಲಾ ಧರ್ಮಿಯರನ್ನು, ಸಮುದಾಯಗಳನ್ನು ಸಮಾನತೆ, ಸಮತೆಯಿಂದ ಕಾಣಬೇಕು ಎಂಬುದು ಸಂವಿಧಾನದ ಆಶಯವಾಗಿದೆ, ಆದರೆ ಇಂದು ಹಿಂದುತ್ವದ ಹೆಸರಿನಲ್ಲಿ ಕೆಲವರು ಅನ್ಯಧರ್ಮದ ನಿಂದನೆಯನ್ನ ಮಾಡುವುದನ್ನು ಕಾಣುತ್ತಿದ್ದೇವೆ.

ಇಸ್ಲಾಂ ಧರ್ಮದ ಹೆಸರಿನಲ್ಲಿ ಕೆಲವರು ಅಮಾನವೀಯವಾಗಿ ನಡೆದುಕೊಳ್ಳುವುದನ್ನ ಕಾಣುತ್ತಿದ್ದೇವೆ, ‘ಸರ್ವೆಜನ ಸುಖಿನೋ ಭವಂತೋ’ ಅನ್ನೊ ಭಗವದ್ಗೀತೆ ಮಾತಿಗೆ ಅಪಮಾನವಾಗುತ್ತಿದೆ. ‘ನಮ್ಮ ಮನೆಯ ಪಕ್ಕದ ಮನೆಯವನು ಯಾವ ಧರ್ಮಿಯನೆ ಆಗಿರಲಿ ಅವನ ಹಸಿವು ಕಷ್ಟಗಳಿಗೆ ಸ್ಪಂದಿಸಬೇಕು’ ಎನ್ನುವ ಕುರಾನ್ ನ ಮಾತಿಗೆ ಅಪಮಾನ ಮಾಡುತ್ತಿದ್ದೇವೆ.

ಇಂತವರಿಂದ ಸಂವಿಧಾನದ ಆಶಯಗಳಿಗೆ ಧಕ್ಕೆಯಿದೆ, ಎರೆಡು ಧರ್ಮದ ಇಂತಹ ಕೆಲವರಿಂದ ಹಲವು ಒಳ್ಳೆಮನಸುಗಳಿಗೆ ಮುಜುಗರದ ಬದುಕು ಎದುರುಗೊಳ್ಳುತ್ತದೆ.
ಅಂಬೇಡ್ಕರ್ ಕೊಟ್ಟ ಸಂವಿಧಾನ ನಮಗೆ ಜಾತ್ಯಾತೀತವಾಗಿ, ಸಮಾನತೆಯಿಂದ, ಸಮತೆಯಿಂದ,ಸಹೋಧರತೆಯಿಂದ ಬದುಕುವುದನ್ನು ಕಲಿಸುತ್ತದೆ.

ಇದು ಅಂಬೇಡ್ಕರ್ ಅವರು ನಮಗೆ ಸಂವಿಧಾನದ ರೂಪದಲ್ಲಿ ಎಲ್ಲಾ ಧರ್ಮಗಳ ಆಚೆಯಿರುವ ‘ಮಾನವಧರ್ಮ’ವನ್ನು ಕೊಟ್ಟಿರುವಂತದ್ದು, ಮನುಷ್ಯರನ್ನ ಮನುಷ್ಯರಂತೆ ಕಾಣುವುದನ್ನು ಕಲಿಸಿರುವಂತದ್ದನ್ನು ನಾವು ಅರ್ಥೈಸಿಕೊಂಡು ನಡೆಯಬೇಕಾಗಿದೆ.

ಅಂಬೇಡ್ಕರ್ ಅವರಿಗೆ ಈ ತರದ ಆಲೋಚನೆ ಕೇವಲ ಶಕ್ಷಣದಿಂದ ಬಂದದ್ದಲ್ಲ ಸ್ವತ: ಅವರು ಇದನ್ನೆಲ್ಲಾ ತಮ್ಮ ಜೀವನದಲ್ಲಿ ಅನುಭವಿಸಿದ್ದರಿಂದ ಬಂದಿರುವಂತದ್ದು, ‘ಮನುಧರ್ಮ’ದಲ್ಲಿದ್ದಂತ ಸಾಮಾಜಿಕ, ಧಾರ್ಮಿಕ, ಆಚರಣೆಗಳಿಂದ ನೋವುಂಡವರು ಅಂಬೇಡ್ಕರ್ ಅವರು.

ಹಾಗಾಗಿ ಇಂತಹ ಒಂದು ವ್ಯವಸ್ಥೆಯ ವಿರುದ್ದ ತಿರುಗಿಬಿದ್ದು ತಾನು ಅನುಭವಿಸಿದ ಸಂಕಟ,ನೋವು,ಅವಮಾನಗಳು ನನ್ನ ಮುಂದಿನ ತಲೆಮಾರು ಅನುಭವಿಸಭಾರದು ಎಂಬುದು ಅಂಬೇಡ್ಕರ್ ಅವರ ಕನಸ್ಸಾಗಿತ್ತು. ಆದರೆ ಇವತ್ತು ನಾವು ಯಾವ ಮಾರ್ಗದಲ್ಲಿ ಮುನ್ನಡೆಯುತ್ತಿದ್ದೇವೆಂದು ಆಲೋಚಿಸಿದರೆ ಅಂದಿನ ಆಚರಣೆ,ಸಂಪ್ರದಾಯ,ಧಾರ್ಮಿಕ ನಂಬಿಕೆಗಳ ವಿರುದ್ದ ತಿರುಗಿಬೀಳಲು ಅಂಬೇಡ್ಕರ್ ಅವರ ಹೋರಾಟ ಎಷ್ಟು ಮುಖ್ಯವಾಗಿತ್ತೊ, ಇಂದು ಅವರು ಕೊಟ್ಟ ಸಂವಿಧಾನ ನಮಗೆ ಅಷ್ಟೆ ಮುಖ್ಯವಾಗಿದೆ ಮತ್ತು ಪ್ರಸ್ತುತವಾಗಿದೆ.

1931-ಆಗಷ್ಟ್-14 ನೆ ತಾರೀಕು ಅಂಬೇಡ್ಕರ್ ಅವರು ಮಹತ್ಮಗಾಂಧಿಯವರನ್ನ ಭೇಟಿಮಾಡಿದ ಸಂದರ್ಭದಲ್ಲಿ ತುಂಬಾ ಮನನೊಂದು ಹೀಗೆ ಹೇಳಿದರಂತೆ: ‘ನನಗೆ ಒಂದು ತಾಯ್ನಾಡಿಲ್ಲ ಅಂತ ನಾನು ಹೇಳಲು ಹಿಂಜರಿಯುವುದಿಲ್ಲ ಏಕೆಂದರೆ ನನ್ನನ್ನು ಅತ್ಯಂತ ಕೀಳಾಗಿ ಕಾಣುವ ಈ ನಾಡನ್ನು, ನನ್ನನ್ನೆ ಅತ್ಯಂತ ಕೀಳಾಗಿ ಕಾಣುವ ಈ ಧರ್ಮವನ್ನು ನನ್ನ ನಾಡು,ನನ್ನ ಧರ್ಮ ಅಂತ ಒಪ್ಪಲು ನನಗೆ ಆಗುವುದಿಲ್ಲ ಅಂತ ವಿಷಾದಿಸುತ್ತೇನೆ.

ಒಂದು ವೇಳೆ ಈ ಕಾರಣಕ್ಕೆ ನನ್ನನ್ನು ದೇಶದ್ರೋಹಿ ಅಂತ ಕರೆಯುವುದಾದರೆ ಅದಕ್ಕೆ ನನ್ನ ವಿಷಾದ ಇಲ್ಲ.ಯಾಕೆಂದರೆ ನನ್ನನ್ನು ದೇಶದ್ರೋಹಿಯಾಗಿ ಮಾಡಿದ್ದು ಈ ನಾಡು.’ ಎಂದು ಹೇಳಿದರು. ಇದು ಅಂಬೇಡ್ಕರ್ ಅವರ ಸ್ವಾಭಿಮಾನದ ನುಡಿಗಳೆ ಸರಿ. ಅಂದು ಆಚರಣೆಯಲ್ಲಿದ್ದಂತ ವರ್ಣ ವ್ಯೆವಸ್ಥೆಯಿಂದ ಅವರು ಅನುಭವಿಸಿದ ಯಾತನೆ ಅವರನ್ನ ಹೀಗೆ ಮಾತನಾಡುವಂತೆ ಮಾಡಿತ್ತು.

ಈ ಎಲ್ಲಾ ಕಾರಣಗಳಿಂದಾಗಿ ಬಹುಷ್ಯ ಅಂಬೇಡ್ಕರ್ ಅವರು 1956 ಅಕ್ಟೋಬರ್ 14 ರಂದು ಬೌದ್ಧಧರ್ಮವನ್ನು ಸ್ವೀಕಾರ ಮಾಡ್ತಾರೆ. ಅದೆ ಧರ್ಮದಲ್ಲಿ 1956 ಡಿಸೆಂಬರ್ 06 ರಂದು ಅಂಬೇಡ್ಕರ್ ಅವರು ಪರಿನಿರ್ವಾಣವಾಗುತ್ತಾರೆ. ನಮ್ಮ ದೇಶಕ್ಕೆ ಸಂವಿಧಾನದಂತ ಮಾಹಾನ್ ಕೊಡುಗೆ ಕೊಟ್ಟ ಅಂಬೇಡ್ಕರ್ ಅವರಿಗೆ ಭಾರತ ರತ್ನ ಸಿಗೋದಿಕ್ಕೆ 1989/90 ರ ವರೆಗೆ ಕಾಯಬೇಕಾಯಿತು.

ಡಾ. ಬಿ.ಆರ್.ಅಂಬೇಡ್ಕರ್ ಅವರು ಕೇವಲ ಅಸ್ಪøಶ್ಯರ, ದಲಿತರ,ಹೇಳ್ಗೆಗೆ ಮಾತ್ರವಲ್ಲದೆ,ಮಹಿಳೆಯರ ,ಸರ್ಕಾರಿ ನೌಕರರ,ಖಾಸಗಿ ನೌಖರರ,ಕಾರ್ಮಿಕರ,ರೈತರ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ, ಬಹಳ ಮುಖ್ಯವಾಗಿ ನಮ್ಮ ದೇಶ ಮುನ್ನಡೆಯಲು ಒಳ್ಳೆ ಸಂವಿಧಾನವನ್ನು ಕೊಟ್ಟಿದ್ದಾರೆ ಸಂವಿಧಾನದ ಬಗ್ಗೆ ಇಂದು ತೀರ ಅವಶ್ಯಕವಾಗಿ ಜನರಿಗೆ ಸರಳ ಹಾಗೂ ಸ್ಪಷ್ಟ ಮಾಹಿತಿಕೊಡುವ ಅಗತ್ಯವಿದೆ, ಅದು ನಮಗೆ ನಿತ್ಯದ ಪಾಠವಾಗಬೇಕಿದೆ, ಪ್ರಾರ್ಥನೆಯಾಗಬೇಕಿದೆ, ಮಂತ್ರವಾಗಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending