Connect with us

ಬಹಿರಂಗ

ಸಂವಿಧಾನ ನಿತ್ಯದ ಪಾಠವಾಗಲಿ..!

Published

on

  • ಸನಾವುಲ್ಲ ನವಿಲೇಹಾಳ್

ನಾನು ಮೊದಲು ಎರಡು ವಿಷಯಗಳನ್ನು ನಿಮಗೆ ನೆನಪಿಸಲು ಬಯಸುತ್ತೇನೆ,ಒಂದು;ಆಗಸ್ಟ್ -09-2018 ರಂದು ದೆಹಲಿಯ ಜಂತರ್ ಮಂತರ್ ಎಂಬಲ್ಲಿ ದುಷ್ಟ ಬುದ್ದಿಯ ಕೆಲವರು ಸಂವಿಧಾನದ ಪ್ರತಿಯನ್ನು ಸುಟ್ಟುಹಾಕಿದರು.

ಎರಡನೆಯದು; ಕರ್ನಾಟಕ ವಿಧಾನ ಸಭೆಯ ಚುನಾವಣ ಪ್ರಚಾರದ ವೇಳೆ ಕೇಂದ್ರ ಮಂತ್ರಿಯೊಬ್ಬರು ‘ಸಂವಿಧಾನವನ್ನು ಬದಲಾಯಿಸಬೇಕು,ಅದಕ್ಕಾಗಿ ನಾವು ಅಧಿಕಾರಕ್ಕೆ ಬಂದಿದ್ದೇವೆ, ಎಂದು ಭಾಷಣಮಾಡಿ ವಿವಾದವೆಬ್ಬಿಸಿದರು.

ನಾವು ಈ ಎರೆಡು ಘಟನೆಗಳನ್ನ ಒಟ್ಟಿಗೆಯಿಟ್ಟು ನೋಡಿದಾಗ ಇಂದು ನಾವು ಅಂಬೇಡ್ಕರ್ ಅವರ ಜನ್ಮದಿನವನ್ನು ಯಾವ ಆಶಯಗಳೊಂದಿಗೆ ಆಚರಿಸಬೇಕು, ಎಂಬ ಪ್ರಶ್ನೆ ನಮ್ಮ ಕಣ್ಣಮುಂದೆ ಬರುತ್ತದೆ. ಸಂವಿಧಾನವನ್ನು ಬದಲಾಯಿಸುವುದು ಬೇರೆ ,ತಿದ್ದುಪಡಿ ಮಾಡುವುದು ಬೇರೆ. 368 ನೆ ವಿಧಿಯಲ್ಲಿ ಸಂವಿಧಾನ ತಿದ್ದುಮಾಡುವ ಅವಕಾಶ ಕಲ್ಪಿಸಲಾಗಿದೆ, ನಾವು ಸಂವಿಧಾನ ಬದಲಾಯಿಸುತ್ತೇವೆ ಎಂಬ ಮಾತಿನಲ್ಲಿ ತಿದ್ದುಪಡಿ ಮಾಡುವ ಅಪೇಕ್ಷೆಯಿಲ್ಲ.

ಈ ತರಹದ ಮಾತುಗಳು ಜನರ ಅಸಹನೆ ಸ್ಪೋಟಗೊಳ್ಳುವಲ್ಲಿ ಸಹಕಾರಿಯಾಗುತ್ತವೆ ಎಂಬುದಕ್ಕೆ ದೆಹಲಿಯಲ್ಲಿ ಸಂವಿಧಾನ ಪ್ರತಿಸುಟ್ಟ ಘಟನೆ ಸಾಕ್ಷಿಯಾಗುತ್ತದೆ. ಅಂಬೇಡ್ಕರ್ ಅವರ 130 ನೆ ಜನ್ಮದಿನದ ಈ ಸಂದರ್ಭದಲ್ಲಿ ಸಂವಿಧಾನ ನಮಗೆ ಎಷ್ಟರ ಮಟ್ಟಿಗೆ ತಿಳಿದಿದೆ ಎಂದು ನಮ್ಮನ್ನು ನಾವೆ ಪ್ರಶ್ನೆ ಮಾಡಿಕೊಳ್ಳಬೇಕಾಗಿದೆ, ಈಗ ನನ್ನ ಕಣ್ಣೆದರಿಗೆ ಇರುವ ಬಹುಪಾಲು ಜನರು ಸ್ವತಂತ್ರ ನಂತರ ಅಥವಾ ಸಂವಿಧಾನ ಹುಟ್ಟಿದ ನಂತರ ಹುಟ್ಟಿದವರಿರಬಹುದು ಎಂದು ಭಾವಿಸಿದ್ದೇನೆ.

ಹಾಗಾಗಿ ನಮ್ಮ ದೇಶಕ್ಕೆ ಈ ತೆರೆನಾದ ಸಂವಿಧಾನ ಬೇಕು ಎಂಬ ಅಂಬೇಡ್ಕರ್ ಅವರ ದನಿಯ ಹಿಂದಿನ ಅನುಭವ ಮತ್ತು ಸಂಕಟ ನಮಗ್ಯಾರಿಗೂ ಇರಲಾರದು, ಇದನ್ನು ಅರ್ಥಮಾಡಿಕೊಳ್ಳ ಬೇಕಾದರೆ ನಾವು ಅಂಬೇಡ್ಕರ್ ಅವರ ಬದುಕನ್ನ ಅಧ್ಯಾಯನ ಮಾಡಬೇಕಾಗಿದೆ,ನಂತರ ಸಂವಿಧಾನ ನಮಗೆ ಅರ್ಥವಾಗ ಬಹುದು.

ಅನೇಕ ನಾಯಕರ, ಜನಸಾಮನ್ಯರ,ಹುತಾತ್ಮರ ತ್ಯಾಗ ಬಲಿದಾನದ ಸಾಕಾರದಿಂದ 1947 ಆಗಷ್ಟ್ 15 ರಂದು ಸಿಕ್ಕ ಸ್ವತಂತ್ರದ ಆಶಯವನ್ನು ಸಾಕಾರಗೊಳಿಸಲು,1950-ಜನವರಿ 26 ರಂದು ನಮ್ಮ ದೇಶದಲ್ಲಿ ಸಂವಿಧಾನ ಜಾರಿಗೆ ತರಲಾಯಿತು.
ಒಂದು ದೇಶದ ಸಂವಿಧಾನವೆಂದರೆ ಅದು ಆ ದೇಶದ ಪವಿತ್ರ ಗ್ರಂಥವೆ ಸರಿ, ಸಂವಿಧಾನವನ್ನು ಅಪಮಾನಿಸುವುದು ದೇಶವನ್ನು ಅಪಮಾನಿಸಿದಂತೆ, ಯಾವುದಾದರೂ ಒಂದು ಸಮಾರಂಭದಲ್ಲಿ ಸೇರಿರುವ ಜನರಿಗೆ ಎಷ್ಟು ಮನೆಗಳಲ್ಲಿ ಭಗವದ್ಗೀತೆ ಇದೆ ಅಂತ ನಾನು ಪ್ರಶ್ನೆಕೇಳಿದರೆ, ಕೆಲವು ಹಿಂದೂ ಸ್ನೇಹಿತರು ಕೈ ಎತ್ತಬಹುದು.

ಎಷ್ಟು ಮನೆಗಳಲ್ಲಿ ಕುರಾನ್ ಇದೆ ಎಂದರೆ ಕೆಲವು ಮುಸ್ಲೀಂ ಸ್ನೇಹಿತರು ಕೈ ಎತ್ತ ಬಹುದು, ಅಥವಾ ಕೆಲವು ಮುಸ್ಲೀಂ ಭಾಂದವರು ನಮ್ಮ ಮನೆಯಲ್ಲಿ ಭಗವದ್ಗೀತೆ ಇದೆ ಎನ್ನಬುದು, ಕೆಲವು ಹಿಂದೂ ಬಾಂಧವರು ನಮ್ಮ ಮನೆಯಲ್ಲಿ ಕುರಾನ್ ಇದೆ ಎನ್ನಬಹುದು, ಆದರೆ ಯಾರ ಮನೆಯಲ್ಲಿ ಸಂವಿಧಾನದ ಪ್ರತಿ ಇದೆ ಎಂದು ಕೇಳಿದರೆ ಬಹುಷ್ಯ ಯಾರು ಕೈ ಎತ್ತಲಿಕ್ಕಿಲ್ಲ ಅನ್ನಿಸುತ್ತೆ.

ನಾನು ಮೇಲೆ ಹೇಳುವಾಗ ಸಂವಿಧಾನವನ್ನು ಒಂದು ದೇಶದ ಪವಿತ್ರ ಗ್ರಂಥ ಎಂದು ಹೇಳಿದೆ ಆಗೆಂದ ತಕ್ಷಣ ಅದನ್ನು ಜನರು ಒಂದು ಬಟ್ಟೆಯಲ್ಲಿ ಸುತ್ತಿ ಯಾರಿಗೂ ಸಿಗದ ಹಾಗೆ ಇಡುವ ಅಪಾಯ ಇದೆ, ಹಾಗಾಗಿ ನನ್ನ ವಾಖ್ಯವನ್ನ ಬದಲಿಸುತ್ತೇನೆ, ‘ಸಂವಿಧಾನ ಅದೊಂದು ಮಹತ್ವದ ಗ್ರಂಥ’. ಬೇಕಾದರೆ ಅವರ ಅವರ ಧರ್ಮಗ್ರಂಥಗಳನ್ನ ಬಟ್ಟೆಯಲ್ಲಿ ಸುತ್ತಿಡಲಿ, ಆದರೆ ಸಂವಿಧಾನದಂತ ಮಹತ್ವದ ಗ್ರಂಥವನ್ನು ನಿಮ್ಮ ಮನೆಯವರೆಲ್ಲರಿಗೂ ಕೈಗೆಟುಕುವಂತೆ ಇಟ್ಟು ಓದಿಸುವ ಕೆಲಸ ಮಾಡಿ.

ಸಂವಿಧಾನದ ಪ್ರತಿ ಪುಟಗಳು ಹರಿದು ಹೋಗುವಂತೆ ಓದಿ,ಅದರ ತಾತ್ವಿಕ ನೆಲೆ ಏನು ಎಂಬುದನ್ನು ಎಲ್ಲಾ ಧರ್ಮ,ಜಾತಿಯವರು ಅರ್ಥೈಸಿಕೊಂಡು ಬದುಕಿದರೆ ಮಾತ್ರ ನಾವು ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಿಕ್ಕೆ ಮತ್ತಷ್ಟು ಯೋಗ್ಯತೆಯನ್ನ ಪಡೆದುಕೊಳ್ಳುತ್ತೇವೆ.
ನಮಗೆ ಇವತ್ತು ಆತಂಕದ ವಿಷಯ ಏನು ಅಂತ ಹೇಳಿದರೆ ‘ಯುವ ಜನತೆಯನ್ನು ದಿಕ್ಕುಗೆಡಿಸುವ ಪ್ರಯತ್ನ ಇಂದು ವ್ಯವಸ್ಥಿತವಾಗಿ ನಡೆಯುತ್ತಿದೆ’.

ನಮ್ಮನ್ನು ಮುನ್ನಡೆಸಬೇಕಾದ ಸಂವಿದಾನವನ್ನು ನಾವು ಕಪಾಡಿಕೊಳ್ಳಬೇಕಾದ ಸಂದರ್ಭಬಂದಿರುವಂತದ್ದು,ಮತ್ತು ಸಂವಿಧಾನವು ಪ್ರತಿಪಾದಿಸಿದ ಬಹುತ್ವ ಭಾರತೀಯತೆಯ ತತ್ವಕ್ಕೆ ಧಕ್ಕೆಯಾಗುತ್ತಿರುವುದನ್ನು ಕಾಣುತ್ತಿದ್ದೇವೆ’. ಬಹುತ್ವ ಭಾರತ ಎಂದರೆ ಒಂದು ದೇಶದದೊಳಗಿನ ಎಲ್ಲಾ ಧರ್ಮಿಯರನ್ನು, ಸಮುದಾಯಗಳನ್ನು ಸಮಾನತೆ, ಸಮತೆಯಿಂದ ಕಾಣಬೇಕು ಎಂಬುದು ಸಂವಿಧಾನದ ಆಶಯವಾಗಿದೆ, ಆದರೆ ಇಂದು ಹಿಂದುತ್ವದ ಹೆಸರಿನಲ್ಲಿ ಕೆಲವರು ಅನ್ಯಧರ್ಮದ ನಿಂದನೆಯನ್ನ ಮಾಡುವುದನ್ನು ಕಾಣುತ್ತಿದ್ದೇವೆ.

ಇಸ್ಲಾಂ ಧರ್ಮದ ಹೆಸರಿನಲ್ಲಿ ಕೆಲವರು ಅಮಾನವೀಯವಾಗಿ ನಡೆದುಕೊಳ್ಳುವುದನ್ನ ಕಾಣುತ್ತಿದ್ದೇವೆ, ‘ಸರ್ವೆಜನ ಸುಖಿನೋ ಭವಂತೋ’ ಅನ್ನೊ ಭಗವದ್ಗೀತೆ ಮಾತಿಗೆ ಅಪಮಾನವಾಗುತ್ತಿದೆ. ‘ನಮ್ಮ ಮನೆಯ ಪಕ್ಕದ ಮನೆಯವನು ಯಾವ ಧರ್ಮಿಯನೆ ಆಗಿರಲಿ ಅವನ ಹಸಿವು ಕಷ್ಟಗಳಿಗೆ ಸ್ಪಂದಿಸಬೇಕು’ ಎನ್ನುವ ಕುರಾನ್ ನ ಮಾತಿಗೆ ಅಪಮಾನ ಮಾಡುತ್ತಿದ್ದೇವೆ.

ಇಂತವರಿಂದ ಸಂವಿಧಾನದ ಆಶಯಗಳಿಗೆ ಧಕ್ಕೆಯಿದೆ, ಎರೆಡು ಧರ್ಮದ ಇಂತಹ ಕೆಲವರಿಂದ ಹಲವು ಒಳ್ಳೆಮನಸುಗಳಿಗೆ ಮುಜುಗರದ ಬದುಕು ಎದುರುಗೊಳ್ಳುತ್ತದೆ.
ಅಂಬೇಡ್ಕರ್ ಕೊಟ್ಟ ಸಂವಿಧಾನ ನಮಗೆ ಜಾತ್ಯಾತೀತವಾಗಿ, ಸಮಾನತೆಯಿಂದ, ಸಮತೆಯಿಂದ,ಸಹೋಧರತೆಯಿಂದ ಬದುಕುವುದನ್ನು ಕಲಿಸುತ್ತದೆ.

ಇದು ಅಂಬೇಡ್ಕರ್ ಅವರು ನಮಗೆ ಸಂವಿಧಾನದ ರೂಪದಲ್ಲಿ ಎಲ್ಲಾ ಧರ್ಮಗಳ ಆಚೆಯಿರುವ ‘ಮಾನವಧರ್ಮ’ವನ್ನು ಕೊಟ್ಟಿರುವಂತದ್ದು, ಮನುಷ್ಯರನ್ನ ಮನುಷ್ಯರಂತೆ ಕಾಣುವುದನ್ನು ಕಲಿಸಿರುವಂತದ್ದನ್ನು ನಾವು ಅರ್ಥೈಸಿಕೊಂಡು ನಡೆಯಬೇಕಾಗಿದೆ.

ಅಂಬೇಡ್ಕರ್ ಅವರಿಗೆ ಈ ತರದ ಆಲೋಚನೆ ಕೇವಲ ಶಕ್ಷಣದಿಂದ ಬಂದದ್ದಲ್ಲ ಸ್ವತ: ಅವರು ಇದನ್ನೆಲ್ಲಾ ತಮ್ಮ ಜೀವನದಲ್ಲಿ ಅನುಭವಿಸಿದ್ದರಿಂದ ಬಂದಿರುವಂತದ್ದು, ‘ಮನುಧರ್ಮ’ದಲ್ಲಿದ್ದಂತ ಸಾಮಾಜಿಕ, ಧಾರ್ಮಿಕ, ಆಚರಣೆಗಳಿಂದ ನೋವುಂಡವರು ಅಂಬೇಡ್ಕರ್ ಅವರು.

ಹಾಗಾಗಿ ಇಂತಹ ಒಂದು ವ್ಯವಸ್ಥೆಯ ವಿರುದ್ದ ತಿರುಗಿಬಿದ್ದು ತಾನು ಅನುಭವಿಸಿದ ಸಂಕಟ,ನೋವು,ಅವಮಾನಗಳು ನನ್ನ ಮುಂದಿನ ತಲೆಮಾರು ಅನುಭವಿಸಭಾರದು ಎಂಬುದು ಅಂಬೇಡ್ಕರ್ ಅವರ ಕನಸ್ಸಾಗಿತ್ತು. ಆದರೆ ಇವತ್ತು ನಾವು ಯಾವ ಮಾರ್ಗದಲ್ಲಿ ಮುನ್ನಡೆಯುತ್ತಿದ್ದೇವೆಂದು ಆಲೋಚಿಸಿದರೆ ಅಂದಿನ ಆಚರಣೆ,ಸಂಪ್ರದಾಯ,ಧಾರ್ಮಿಕ ನಂಬಿಕೆಗಳ ವಿರುದ್ದ ತಿರುಗಿಬೀಳಲು ಅಂಬೇಡ್ಕರ್ ಅವರ ಹೋರಾಟ ಎಷ್ಟು ಮುಖ್ಯವಾಗಿತ್ತೊ, ಇಂದು ಅವರು ಕೊಟ್ಟ ಸಂವಿಧಾನ ನಮಗೆ ಅಷ್ಟೆ ಮುಖ್ಯವಾಗಿದೆ ಮತ್ತು ಪ್ರಸ್ತುತವಾಗಿದೆ.

1931-ಆಗಷ್ಟ್-14 ನೆ ತಾರೀಕು ಅಂಬೇಡ್ಕರ್ ಅವರು ಮಹತ್ಮಗಾಂಧಿಯವರನ್ನ ಭೇಟಿಮಾಡಿದ ಸಂದರ್ಭದಲ್ಲಿ ತುಂಬಾ ಮನನೊಂದು ಹೀಗೆ ಹೇಳಿದರಂತೆ: ‘ನನಗೆ ಒಂದು ತಾಯ್ನಾಡಿಲ್ಲ ಅಂತ ನಾನು ಹೇಳಲು ಹಿಂಜರಿಯುವುದಿಲ್ಲ ಏಕೆಂದರೆ ನನ್ನನ್ನು ಅತ್ಯಂತ ಕೀಳಾಗಿ ಕಾಣುವ ಈ ನಾಡನ್ನು, ನನ್ನನ್ನೆ ಅತ್ಯಂತ ಕೀಳಾಗಿ ಕಾಣುವ ಈ ಧರ್ಮವನ್ನು ನನ್ನ ನಾಡು,ನನ್ನ ಧರ್ಮ ಅಂತ ಒಪ್ಪಲು ನನಗೆ ಆಗುವುದಿಲ್ಲ ಅಂತ ವಿಷಾದಿಸುತ್ತೇನೆ.

ಒಂದು ವೇಳೆ ಈ ಕಾರಣಕ್ಕೆ ನನ್ನನ್ನು ದೇಶದ್ರೋಹಿ ಅಂತ ಕರೆಯುವುದಾದರೆ ಅದಕ್ಕೆ ನನ್ನ ವಿಷಾದ ಇಲ್ಲ.ಯಾಕೆಂದರೆ ನನ್ನನ್ನು ದೇಶದ್ರೋಹಿಯಾಗಿ ಮಾಡಿದ್ದು ಈ ನಾಡು.’ ಎಂದು ಹೇಳಿದರು. ಇದು ಅಂಬೇಡ್ಕರ್ ಅವರ ಸ್ವಾಭಿಮಾನದ ನುಡಿಗಳೆ ಸರಿ. ಅಂದು ಆಚರಣೆಯಲ್ಲಿದ್ದಂತ ವರ್ಣ ವ್ಯೆವಸ್ಥೆಯಿಂದ ಅವರು ಅನುಭವಿಸಿದ ಯಾತನೆ ಅವರನ್ನ ಹೀಗೆ ಮಾತನಾಡುವಂತೆ ಮಾಡಿತ್ತು.

ಈ ಎಲ್ಲಾ ಕಾರಣಗಳಿಂದಾಗಿ ಬಹುಷ್ಯ ಅಂಬೇಡ್ಕರ್ ಅವರು 1956 ಅಕ್ಟೋಬರ್ 14 ರಂದು ಬೌದ್ಧಧರ್ಮವನ್ನು ಸ್ವೀಕಾರ ಮಾಡ್ತಾರೆ. ಅದೆ ಧರ್ಮದಲ್ಲಿ 1956 ಡಿಸೆಂಬರ್ 06 ರಂದು ಅಂಬೇಡ್ಕರ್ ಅವರು ಪರಿನಿರ್ವಾಣವಾಗುತ್ತಾರೆ. ನಮ್ಮ ದೇಶಕ್ಕೆ ಸಂವಿಧಾನದಂತ ಮಾಹಾನ್ ಕೊಡುಗೆ ಕೊಟ್ಟ ಅಂಬೇಡ್ಕರ್ ಅವರಿಗೆ ಭಾರತ ರತ್ನ ಸಿಗೋದಿಕ್ಕೆ 1989/90 ರ ವರೆಗೆ ಕಾಯಬೇಕಾಯಿತು.

ಡಾ. ಬಿ.ಆರ್.ಅಂಬೇಡ್ಕರ್ ಅವರು ಕೇವಲ ಅಸ್ಪøಶ್ಯರ, ದಲಿತರ,ಹೇಳ್ಗೆಗೆ ಮಾತ್ರವಲ್ಲದೆ,ಮಹಿಳೆಯರ ,ಸರ್ಕಾರಿ ನೌಕರರ,ಖಾಸಗಿ ನೌಖರರ,ಕಾರ್ಮಿಕರ,ರೈತರ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ, ಬಹಳ ಮುಖ್ಯವಾಗಿ ನಮ್ಮ ದೇಶ ಮುನ್ನಡೆಯಲು ಒಳ್ಳೆ ಸಂವಿಧಾನವನ್ನು ಕೊಟ್ಟಿದ್ದಾರೆ ಸಂವಿಧಾನದ ಬಗ್ಗೆ ಇಂದು ತೀರ ಅವಶ್ಯಕವಾಗಿ ಜನರಿಗೆ ಸರಳ ಹಾಗೂ ಸ್ಪಷ್ಟ ಮಾಹಿತಿಕೊಡುವ ಅಗತ್ಯವಿದೆ, ಅದು ನಮಗೆ ನಿತ್ಯದ ಪಾಠವಾಗಬೇಕಿದೆ, ಪ್ರಾರ್ಥನೆಯಾಗಬೇಕಿದೆ, ಮಂತ್ರವಾಗಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

Trending