ದಿನದ ಸುದ್ದಿ

15 ಸಾಧಕರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ

Published

on

ಸುದ್ದಿದಿನಡೆಸ್ಕ್:ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025 ನೇ ಸಾಲಿನ ಡಾ.ಬಿ.ಆ‌ರ್. ಅಂಬೇಡ್ಕರ್ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 15 ಸಾಧಕರಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023ನೇ ಸಾಲಿನ ಪ್ರಶಸ್ತಿಯನ್ನು ಮೈಸೂರಿನ ಹರಿಹರಾನಂದ ಸ್ವಾಮಿ ಅವರ ಸಮಾಜ ಸೇವೆಗೆ, ಪತ್ರಿಕೋದ್ಯಮದಲ್ಲಿನ ಸೇವೆಗೆ ಬೆಂಗಳೂರಿನ ಇಂದೂಧರ ಹೊನ್ನಾಪುರ, ಸರ್ಕಾರಿ ಸೇವೆಯಲ್ಲಿ ಉತ್ತಮ ಆಡಳಿತ ನಿರ್ಹಿಸಿದ ದಾವಣಗೆರೆಯ ರುದ್ರಪ್ಪ ಹನಗವಾಡಿ ,ಸೀತವ್ವ ಜೋಡಟ್ಟಿ ಬೆಳಗಾವಿ ದೇವದಾಸಿ ವಿಮೋಚನೆ, ಕೆ. ಪುಂಡಲೀಕರಾವ್ ಶೆಟ್ಟಿ ಬಾ ಬೀದರ್ ಸಮಾಜ ಸೇವೆ/ರಾಜಕೀಯ.

2024 ನೇ ಸಾಲಿನ ಪ್ರಶಸ್ತಿಯನ್ನು ಶ್ರೀಧರ ಕಲಿವೀರ ಬೆಂಗಳೂರು ಹೋರಾಟ, ಮಲ್ಲಾಜಮ್ಮ ಮಂಡ್ಯ ಸಮಾಜ ಸೇವೆ/ರಾಜಕೀಯ, ರಾಮದೇವ ರಾಕೆ ಬೆಂಗಳೂರು ಪತ್ರಿಕೋದ್ಯಮ, ವೈ.ಬಿ. ಹಿಮ್ಮಡಿ ಬೆಳಗಾವಿ ಸಾಹಿತ್ಯ/ಸಮಾಜ ಸೇವೆ,ಲಕ್ಷ್ಮೀಪತಿ ಕೋಲಾರ ಕೋಲಾರ ಸಾಹಿತ್ಯ/ಸಂಘಟನೆ.

2025ನೇ ಸಾಲಿನ ಪ್ರಶಸ್ತಿಯನ್ನು ದತ್ತಾತ್ರೇಯ ಇಕ್ಕಳಗಿ ಕಲಬುರಗಿ ಪ್ರಕಾಶನ, ಮಾವಳ್ಳಿ ಶಂಕರ್ ಬೆಂಗಳೂರು ಹೋರಾಟ, ಎಫ್.ಹೆಚ್. ಜಕ್ಕಪ್ಪನವ‌ರ್ ಧಾರವಾಡ ಹೋರಾಟ, ಹೊನ್ನೂರು ಗೌರಮ್ಮ ಚಾಮರಾಜನಗರ ಜನಪದ ಕಲೆ, ಈರಪ್ಪ ಹಾಸನ ದಲಿತ ಹೋರಾಟಕ್ಕೆ ನೀಡಿ ಗೌರವಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version