ಬಹಿರಂಗ
ಭಾರತದ ಇತಿಹಾಸದ ಅಂಬೇಡ್ಕರ್ವಾದಿ ವಿಶ್ಲೇಷಣೆ
- ರಘೋತ್ತಮ ಹೊ.ಬ
ಭಾರತದ ಇತಿಹಾಸ ಅದು ಹೇಗಿದೆ ಎಂದು ಯಾರಾದರೂ ತಾವು ಕಲಿತದ್ದನ್ನು ನೆನಪಿಸಿಕೊಂಡರೆ ಅಥವಾ ಕಲಿಯಲು ಹೊರಟರೆ ಅವರಿಗೆ ತಿಳಿದುಬರುವುದು ಬರೀ ಮುಸ್ಲಿಂ ಆಕ್ರಮಣಕಾರರ ಧಾಳಿಯ ಅನುಕ್ರಮಣಿಕೆ ಎಂಬುದು. ನಿಜ, ಅಲ್ಲಿ ತದನಂತರ ಬ್ರಿಟಿಷರು, ಫ್ರೆಂಚರು, ಡಚ್ಚರು, ಪೋರ್ಚುಗೀಸರು, ಹೀಗೆ ವಿದೇಶಿ ಧಾಳಿಕೋರರ ದಾಖಲೀಕರಣವೂ ಇದೆ. ಆದರೆ ಅತಿ ಮಹತ್ವದ್ದಾಗಿ ಅಂದರೆ ಎರಡು ಅಥವಾ ಎರಡೂವರೆ ಸಾವಿರ ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ವ್ಯಾಪಕವಾಗಿ ಕಾಣಬರುವುದೆಂದರೆ ಅಥವಾ ಕಾಣಿಸಲ್ಪಡುವುದೆಂದರೆ ಅದು ಮುಸ್ಲಿಂ ಆಕ್ರಮಣ ಮತ್ತು ಧಾಳಿಗಳು. ಯಾಕೆ ಹೀಗೆ? ಈ ನಿಟ್ಟಿನಲ್ಲಿ ಹೇಳುವುದಾದರೆ ಭಾರತದ ಇತಿಹಾಸದ ಈ ಬಗೆಯ ದಾಖಲೀಕರಣವೇ ತಪ್ಪು ಎಂಬುದು.
ಹೇಗೆ? ಅಂಬೇಡ್ಕರ್ರವರ ಸಂಶೋಧನಾಭರಿತ ಬರಹಗಳ (ಇಂಗ್ಲಿಷ್ ಸಂ.3, ಪು.275) ಆಧಾರದ ಮೇಲೆ ಹೇಳುವುದಾದರೆ ಭಾರತದ ಇತಿಹಾಸ ಬರೆದಿರುವ ಅಥವಾ ದಾಖಲಿಸಿರುವ ಕಾರ್ಯವೇ ತಪ್ಪು ಮಾರ್ಗದಲ್ಲಿ ನಡೆದಿದೆ ಅಥವಾ ಕೆಲವು ತಪ್ಪು ಕಲ್ಪನೆಗಳ ಹಾದಿಯಲ್ಲಿ ಅದು ಬರೆಯಲ್ಪಟ್ಟಿದೆ ಎಂಬುದು. ಹಾಗಿದ್ದರೆ ಭಾರತದ ಇತಿಹಾಸದ ದಾಖಲೀಕರಣ ಮಾಡಿಕೊಂಡ ಅಥವಾ ದಾಖಲಿಸಿದವರು ಮಾಡಿದ ಮೊದಲ ತಪ್ಪು ಕಲ್ಪನೆ ಏನು? ಉತ್ತರ: ಮೊದಲನೆಯದು, ಇಡೀ ಇತಿಹಾಸದ ಉದ್ದಕ್ಕೂ ಭಾರತದ ಸಂಸ್ಕೃತಿ ಒಂದೇ ತೆರನಾಗಿತ್ತು ಎಂದುಕೊಂಡದ್ದು. ಎರಡನೆಯದು, ಭಾರತದ ರಾಜಕಾರಣದಲ್ಲಿ ನಡೆದ ಸಂಘರ್ಷಗಳೆಲ್ಲವೂ ಕೇವಲ ರಾಜಕೀಯ ಮತ್ತು ವಂಶಪರಂಪರೆಯ ಅಂಶಗಳನ್ನಷ್ಟೆ ಹೊಂದಿದ್ದವು, ಮತ್ತಾವುದೇ ಸಾಮಾಜಿಕ ಮತ್ತು ಆಧ್ಯಾತ್ಮಿಕ ಅಂಶಗಳನ್ನು ಅದು ಒಳಗೊಂಡಿರಲಿಲ್ಲ ಎಂದುಕೊಂಡದ್ದು.
ಸತ್ಯ, ಉದಾಹರಣೆಗೆ ಭಾರತದ ಇತಿಹಾಸ ಭಾರತವನ್ನು ಉದ್ದಕ್ಕೂ ಒಂದೇ ಸಂಸ್ಕೃತಿ ಹೊಂದಿತ್ತು ಎಂದು ಕಲ್ಪಿಸಿಕೊಂಡಿತ್ತು ಎಂಬ ಪರಿಕಲ್ಪನೆಗೆ ಪೂರಕವಾಗಿ ಹೇಳುವುದಾದರೆ ಭಾರತದ ಇತಿಹಾಸ ಬ್ರಾಹ್ಮಣಧರ್ಮ, ಬೌದ್ಧಧರ್ಮ ಮತ್ತು ಜೈನಧರ್ಮಗಳನ್ನು ತನ್ನ ಇತಿಹಾಸದ ವಿವಿಧ ಹಂತಗಳು ಎಂದುಕೊಳ್ಳಲಿಲ್ಲ! ಹಾಗೆಯೇ ಅವುಗಳ ನಡುವೆ ಯಾವುದೇ ಮೂಲಭೂತ ಸಂಘರ್ಷಗಳು ತಿಕ್ಕಾಟಗಳು ನಡೆದೇ ಇಲ್ಲ ಎಂದುಕೊಂಡದ್ದು! ಇತಿಹಾಸದ ದಾಖಲೀಕರಣದ ಇಂತಹ ತಪ್ಪು ನಡೆಯಿಂದಾಗಿ ಭಾರತದ ಇತಿಹಾಸ ಒಂದು ಯಾಂತ್ರಿಕ ಪ್ರಕ್ರಿಯೆಯಾಗಿ ದಾಖಲಾಗಿದೆ. ಹೇಗೆಂದರೆ ಒಂದು ವಂಶದ ನಂತರ ಮತ್ತೊಂದು ವಂಶ…, ಒಬ್ಬ ಆಡಳಿತಗಾರನ ನಂತರ ಮತ್ತೊಬ್ಬ ಆಡಳಿತಗಾರ… ಹೀಗೆ.
ಹಾಗಿದ್ದರೆ ಇತಿಹಾಸ ರಚಿಸಲ್ಪಟ್ಟ ಈ ಮಾದರಿಗೆ ಸೂಚಿಸಬಹುದಾದ ಅಥವಾ ಅಳವಡಿಸಬಹುದಾದ ಪರಿಹಾರ ಸಾಮಗ್ರಿಗಳು? ಮೊದಲನೆಯದು, ಭಾರತದಲ್ಲಿ ಸಾಮಾನ್ಯ ಸಂಸ್ಕೃತಿ ಎಂಬುದು ಇರಲೇ ಇಲ್ಲ ಎಂಬುದನ್ನು ಅರಿಯುವುದು. ಎರಡನೆಯದು, ಮುಸ್ಲಿಮರ ಧಾಳಿಗಿಂತಲಿನ ಮೊದಲಿನ ಇತಿಹಾಸ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವಿನ ಮಾರಕ ಕಾಳಗ ಎಂಬುದನ್ನು ಅರಿಯುವುದು, ಗುರುತಿಸುವುದು.
ಸಾಮಾನ್ಯ ಸಂಸ್ಕೃತಿ ಇಲ್ಲ ಎಂಬುದರ ಬಗ್ಗೆ ಹೇಳುವುದಾದರೆ, ಇತಿಹಾಸದಲ್ಲಿ ಭಾರತದಲ್ಲಿ ಮೂರು ಬಗೆಯ ಭಾರತಗಳಿದ್ದವು. 1.ಬ್ರಾಹ್ಮಣ ಭಾರತ 2.ಬೌದ್ಧ ಭಾರತ 3.ಹಿಂದೂ ಭಾರತ. ಈ ಮೂರೂ ಪ್ರತಿಯೊಂದೂ ತನ್ನದೇ ಆದ ಪ್ರತ್ಯೇಕ ಸಂಸ್ಕೃತಿಗಳನ್ನು ಹೊಂದಿದ್ದವು. ಹಾಗೆಯೇ ಮುಸ್ಲಿಂ ಆಕ್ರಮಣಕ್ಕಿಂತ ಮೊದಲು ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವೆ ಮಾರಕ ಕಾಳಗ ನಡೆದಿತ್ತು ಎಂಬುದರ ಬಗ್ಗೆ ಹೇಳುವುದಾದರೆ, ಭಾರತದ ಇತಿಹಾಸದ ಈ ಪ್ರಮುಖ ಅಂಶವನ್ನು ಕಡೆಗಣಿಸಿದರೆ ಅಥವಾ ಇತಿಹಾಸ ಅಧ್ಯಯನಕಾರರು ಗುರುತಿಸುವಲ್ಲಿ ವಿಫಲರಾದರೆ ಭಾರತದ ನೈಜ ಇತಿಹಾಸ ಆ ಮೂಲಕ ಇತಿಹಾಸ ಎಂಬ ಆ ಪದದ ಅರ್ಥ ಮತ್ತು ಉದ್ದೇಶ ಈಡೇರುವುದು ಸಾಧ್ಯವೇ ಇಲ್ಲ ಎಂಬುದು.
ಆದ್ದರಿಂದ ಈ ಅಂಶಗಳ ಬಗ್ಗೆ , ಅದರಲ್ಲೂ ಭಾರತದ ಇತಿಹಾಸ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವಿನ ಸಂಘರ್ಷ ಎಂಬ ಬಗ್ಗೆ ನಾವು ತಿಳಿದುಕೊಳ್ಳುವುದಾದರೆ ಈ ಅಂಶ ಹೆಕ್ಕುವ ಅಂಬೇಡ್ಕರ್ರವರ ವಿಚಾರಗಳನ್ನು ದಾಖಲಿಸುವುದಾದರೆ ಅಂಬೇಡ್ಕರ್ರವರು ಹೇಳುವುದು “ಭಾರತದ ಇತಿಹಾಸದಲ್ಲಿ ಭಾರತದ ಮೇಲೆ ನಡೆದಿರುವ ಮುಸ್ಲೀಮರ ಧಾಳಿಯ ಅಂಶಗಳ ಬಗ್ಗೆ ಸಿಕ್ಕಾಪಟ್ಟೆ ಒತ್ತು ನೀಡಲಾಗಿದೆ. ಹಿಮಪಾತ ಉಂಟಾಗುವಾಗ ಒಂದು ಅಲೆಯಾದ ಮೇಲೆ ಮತ್ತೊಂದು ಅಲೆ ಬರುವಂತೆ ಒಟ್ಟಾರೆ ಒಂದು ಬೃಹತ್ ಹಿಮಪಾತದ ರೀತಿ ಮುಸ್ಲಿಂ ಧಾಳಿಕೋರರು ಭಾರತಕ್ಕೆ ಬಂದರು, ಈ ಜನರನ್ನು ಸುತ್ತುವರಿದರು ಮತ್ತು ಇಲ್ಲಿಯ ರಾಜರನ್ನು ಕೆಳಗಿಳಿಸಿದರು… ಹೀಗೆ ರೀಲುಗಟ್ಟಲೆ ಬರೆಯಲಾಗಿದೆ. ಈ ನಿಟ್ಟಿನಲ್ಲಿ ಇಂತಹ ಸಂಕುಚಿತ ದೃಷ್ಟಿಕೋನದಲ್ಲಿ ನೋಡಿದರು ಕೂಡ ಈ ಅಧ್ಯಯನಯೋಗ್ಯ ಇಂತಹ ಧಾಳಿಗಳಲ್ಲಿ ಕೇವಲ ಮುಸ್ಲಿಂ ಧಾಳಿಗಳಷ್ಟೇ ಅಲ್ಲ, ಇತರ ಧಾಳಿಗಳೂ ಕೂಡ ಮಹತ್ವ ಪಡೆಯುತ್ತವೆ ಎಂಬುದು. ಹಾಗೆಯೇ ಇತರೆ ಆಕ್ರಮಣಗಳು, ಧಾಳಿಗಳು ಅಂತಹ ಪ್ರಮುಖವಾದುವಲ್ಲ ಎನಿಸಿದರೂ ಕೂಡ ಅವು ಮುಸ್ಲಿಂ ಧಾಳಿಗಳಷ್ಟೆ ಮಹತ್ವ ಪಡೆಯುತ್ತವೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ ಹಿಂದೂ ಭಾರತವನ್ನು ಮುಸ್ಲಿಂ ಧಾಳಿಕೋರರು ಆಕ್ರಮಿಸಿದರೆ ಬೌದ್ಧ ಭಾರತವನ್ನು ಬ್ರಾಹ್ಮಣ ಆಕ್ರಮಣಕಾರರು ಆಕ್ರಮಿಸಿದರು”. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.3, ಪು.273).
ಅರೆ, ಇದೇನಿದು? ಬ್ರಾಹ್ಮಣ ಆಕ್ರಮಣಕಾರರು? ಎಂದು ಯಾರಿಗಾದರೂ ಅನಿಸದಿರದು. ಆದರೆ ಭಾರತದ ಇತಿಹಾಸ ಇದನ್ನು ಗುರುತಿಸುವಲ್ಲಿ ವಿಫಲವಾಗಿರುವುದು ಅಥವಾ ಗುರುತಿಸದೆ ಮರೆಮಾಚಿರುವುದು ಏಕೆ ಎಂಬ ಪ್ರಶ್ನೆ ಎಂಥವರಿಗಾದರೂ ಕಾಡದಿರದು. ಹಾಗೆಯೇ ಅದಕ್ಕೆ ಉತ್ತರವೂ ಕೂಡ ಅಷ್ಟೆ ಸುಲಭವಾಗಿ ಸಿಗುತ್ತದೆ. ಇರಲಿ, ಅದನ್ನು ಮುಂದೆ ಎಂದಾದರೂ ಚರ್ಚಿಸೋಣ. ಈ ದಿಸೆಯಲ್ಲಿ ಮತ್ತೆ ಈ ಲೇಖನದ ಮುಖ್ಯ ಉದ್ದೇಶಕ್ಕೆ ಬರುವುದಾದರೆ, ಹಾಗಿದ್ದರೆ ಮುಸ್ಲಿಂ ಆಕ್ರಮಣ ಮತ್ತು ಬ್ರಾಹ್ಮಣರ ಆಕ್ರಮಣಗಳ ನಡುವೆ ಏನಾದರೂ ಸಾಮ್ಯತೆ ಇತ್ತಾ? ಅಂಬೇಡ್ಕರರ ಪ್ರಕಾರ ಎರಡು ಆಕ್ರಮಣಗಳಲ್ಲೂ ಸಾಕಷ್ಟು ಸಾಮ್ಯತೆ ಇತ್ತು. ಉದಾಹರಣೆಗೆ ತಮ್ಮ ವಂಶಪಾರಂಪರ್ಯ ಆಳ್ವಿಕೆಯ ಉಳಿಯುವಿಕೆಗಾಗಿ ಮುಸ್ಲಿಂ ಆಕ್ರಮಣಕಾರರು ಪರಸ್ಪರ ಕಾದಾಡಿದರೆ ಉದಾಹರಣೆಗೆ ಹೇಳುವುದಾದರೆ ಅರಬ್ಬರು, ಟರ್ಕರು, ಮಂಗೋಲಿಯನ್ನರು, ಆಪ್ಘನ್ನರು… ಹೀಗೆ ಪರಸ್ಪರ ಕಾದಾಡಿದರೆ ಬ್ರಾಹ್ಮಣ ಆಕ್ರಮಣಕಾರರು ಕೂಡ ಪರಸ್ಪರ ಕಾದಾಡಿದರು. ಆದರೆ ಒಂದು ವ್ಯತ್ಯಾಸವೆಂದರೆ ಮುಸ್ಲಿಮರು ಹಿಂದೂ ಭಾರತದ ಮೇಲೆ ಧಾಳಿ ನಡೆಸಿದರೆ ಬ್ರಾಹ್ಮಣ ಆಕ್ರಮಣಕಾರರು ಬೌದ್ಧಧರ್ಮ ಮತ್ತು ಬೌದ್ಧ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯದ ಮೇಲೆ ಧಾಳಿ ನಡೆಸಿದರು. ಈ ಹಿನ್ನೆಲೆಯಲ್ಲಿ ಹಿಂದೂ ಭಾರತದ ಮೇಲೆ ಮುಸ್ಲಿಂ ಆಕ್ರಮಣಕಾರರು ನಡೆಸಿದ ಧಾಳಿ ಅಧ್ಯಯನಯೋಗ್ಯವಾದುದಾದರೆ ಬೌದ್ಧ ಭಾರತದ ಮೇಲೆ ಬ್ರಾಹ್ಮಣ ಆಕ್ರಮಣಕಾರರು ನಡೆಸಿದ ಧಾಳಿ ಕೂಡ ಅಷ್ಟೇ ಅಧ್ಯಯನಯೋಗ್ಯವಾದುದು. ಹಾಗಂತ ಬೌದ್ಧಧರ್ಮ ಆ ಮೂಲಕ ಬೌದ್ಧ ಭಾರತ ನಾಶಗೊಳಿಸಲು ಬ್ರಾಹ್ಮಣ ಆಕ್ರಮಣಕಾರರು ನಡೆಸಿದ ಧಾಳಿ ಹಿಂದೂ ಭಾರತದ ಮೇಲೆ ಮುಸ್ಲಿಂ ಆಕ್ರಮಣಕಾರರು ನಡೆಸಿದ ಧಾಳಿಗಿಂತ ಭಿನ್ನವೇನಿರಲಿಲ್ಲ. ಒಟ್ಟಾರೆ ಬೌದ್ಧ ಭಾರತದ ಮೇಲೆ ಬ್ರಾಹ್ಮಣ ಆಕ್ರಮಣಕಾರರು ನಡೆಸಿದ ಧಾಳಿ ಮುಸ್ಲಿಂ ಆಕ್ರಮಣಕಾರರಷ್ಟೇ ಭೀಕರ ಮತ್ತು ಹಿಂಸಾತ್ಮಕವಾಗಿತ್ತು.
ಮತ್ತೂ ಮುಂದುವರೆದು ಹೇಳುವುದಾದರೆ ಜನತೆಯ ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದ ಮೇಲೆ ಬೀರಿದ ಶಾಶ್ವತ ಪರಿಣಾಮಗಳ ಆಧಾರದ ಮೇಲೆ ಹೇಳುವುದಾದರೆ ಬೌದ್ಧಭಾರತದ ಮೇಲೆ ಬ್ರಾಹ್ಮಣ ಆಕ್ರಮಣಕಾರರ ಧಾಳಿ ಅದೆಷ್ಟು ತೀವ್ರವಾಗಿತ್ತೆಂದರೆ ಇದಕ್ಕೆ ಹೋಲಿಸಿದರೆ ಹಿಂದೂ ಭಾರತದ ಮೇಲೆ ಮುಸ್ಲಿಮರ ಆಕ್ರಮಣ ಏನೇನೂ ಅಲ್ಲದ್ದಾಗಿತ್ತು. In fact ಆ ಧಾಳಿ ಭಾರತದ ಮೇಲೆ ಕೇವಲ ಅಲ್ಪಪ್ರಮಾಣದ ತೆಳು ಪರಿಣಾಮ ಬೀರಿತ್ತಷ್ಟೆ. ಏಕೆಂದರೆ ಮುಸ್ಲಿಂ ಆಕ್ರಮಣಕಾರರು ದೇವಸ್ಥಾನಗಳು, ಮಠಗಳು… ಹೀಗೆ ಹಿಂದೂ ಧರ್ಮದ ಹೊರ ರಚನೆಗಳ ಮೇಲೆ ಧಾಳಿ ನಡೆಸಿದರಷ್ಟೆ ಹೊರತು ಸಂಪೂರ್ಣ ಹಿಂದೂ ಧರ್ಮವನ್ನೇ ನಿರ್ಮೂಲನೆಗೊಳಿಸುವುದಾಗಲೀ ಅಥವಾ ಜನತೆಯ ಆಧ್ಯಾತ್ಮಿಕ ಜೀವನದ ಮೇಲೆ ಆಳವಾದ ಪರಿಣಾಮ ಬೀರಿದ್ದ ಹಿಂದೂ ಧರ್ಮದ ಶಾಸ್ತ್ರಗಳು-ಪುರಾಣಗಳು, ತತ್ವಗಳಿಗೆ ಧಕ್ಕೆಯುಂಟುಮಾಡುವ, ನಾಶಗೊಳಿಸುವ ಯಾವುದೇ ಕ್ರಿಯೆಯನ್ನು ಮುಸ್ಲಿಂ ಆಕ್ರಮಣಕಾರರು ಮಾಡಲಿಲ್ಲ. ಆದರೆ ಇದಕ್ಕೆ ವಿರುದ್ಧವಾಗಿ ಬೌದ್ಧಧರ್ಮದ ಮೇಲೆ ನಡೆದ ಬ್ರಾಹ್ಮಣ ಆಕ್ರಮಣ ಬೌದ್ಧ ತತ್ವಗಳನ್ನು ಸಂಪೂರ್ಣವಾಗಿ ಬದಲಿಸಿತು. ಹೇಗೆಂದರೆ ಬೌದ್ಧತತ್ವ ತಮ್ಮ ಆಧ್ಯಾತ್ಮಿಕ ಜೀವನದ ಶಾಶ್ವತ ಮತ್ತು ಸತ್ಯದ ತತ್ವವೆಂದು ಜನತೆ ಶತಶತಮಾನಗಳ ಕಾಲ ಒಪ್ಪಿದ್ದನ್ನು, ಜೀವನಮಾರ್ಗವಾಗಿ ಅಳವಡಿಸಿಕೊಂಡಿದ್ದನ್ನು ಬ್ರಾಹ್ಮಣ ಆಕ್ರಮಣ ಸಂಪೂರ್ಣವಾಗಿ ನಾಶಗೊಳಿಸಿತು.
ಇದನ್ನು ದಾಖಲಿಸುತ್ತಾ ಅಂಬೇಡ್ಕರ್ರವರು ಇದನ್ನು ನೀರಿನ ಕೊಳವೊಂದರಲ್ಲಿ ಆಟವಾಡುತ್ತಿರುವ ಒಂದು ಮಗುವಿಗೆ ಹೋಲಿಸುತ್ತಾ ಹೇಳುವುದು “ಮುಸ್ಲಿಂ ಆಕ್ರಮಣಕಾರರು ಮಗು ಆಟ ಆಡುತ್ತಿದ್ದ ಆ ನೀರಿನ ತೊಟ್ಟಿಯನ್ನು ತುಸು ಕದಡಿದರಷ್ಟೆ, ಅದೂ ಸ್ವಲ್ಪ ಸಮಯ. ನಂತರ ನೀರನ್ನು ಕದಡಿ ಕದಡಿ ಸುಸ್ತಾದ ಮುಸ್ಲಿಂ ಆಕ್ರಮಣಕಾರರು ಅದನ್ನು ಹಾಗೆಯೇ ಬಿಟ್ಟರು. ಪರಿಣಾಮ ಪದರ ಪದರಾಗಿ ಕಸ ತಳ ಸೇರಿಸುವ ಕೆಲಸವನ್ನಷ್ಟೆ ಅವರು ಮಾಡಿದರು. ಅಂದಹಾಗೆ ನೀರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಹಿಂದೂ ತತ್ವಗಳು ಎನ್ನುವುದಾದರೆ ಆ ‘ಮಗುವನ್ನು’ ಹೊರಗೆಸೆಯುವ ಕ್ರಿಯೆಯನ್ನು ಮುಸ್ಲಿಂ ಆಕ್ರಮಣಕಾರರು ಎಂದಿಗೂ ಮಾಡಲಿಲ್ಲ. ದುರಂತವೆಂದರೆ ಇದಕ್ಕೆ ವಿರುದ್ಧವಾಗಿ ಬೌದ್ಧಧರ್ಮದೊಂದಿಗಿನ ತನ್ನ ಸಂಘರ್ಷದಲ್ಲಿ ಬ್ರಾಹ್ಮಣರು ಆ ನೀರಿನ ತೊಟ್ಟಿಯನ್ನು ಸಂಪೂರ್ಣ ಗುಡಿಸಿಹಾಕಿದ್ದರು. ಹೇಗೆಂದರೆ ನೀರನ್ನು ಸಂಪೂರ್ಣ ಖಾಲಿಗೊಳಿಸಿದ ಬ್ರಾಹ್ಮಣಧರ್ಮ ಅದರೊಳಗಿದ್ದ ಬೌದ್ಧ ಮಗುವನ್ನು ಹೊರತೆಗೆದು ತನ್ನ ನೀರನ್ನು ಅಲ್ಲಿ ತುಂಬಿಸಿ ತನ್ನ ಮಗುವನ್ನು ಅಲ್ಲಿ ಇಟ್ಟಿತು. ಈ ದಿಸೆಯಲ್ಲಿ ಬೌದ್ಧಧರ್ಮದಿಂದ ಹರಿದುಬಂದಿದ್ದ ಪರಿಶುದ್ಧವಾದ ಸುಗಂಧಭರಿತವಾದ ಶ್ರೇಷ್ಠ ನೀರಿಗೆ ಹೋಲಿಸಿದಾಗ ತನ್ನ ನೀರು ಅದೆಷ್ಟು ಕೊಳಕಾಗಿದೆ, ಅದೆಷ್ಟು ಗಲೀಜಾಗಿದೆ ಎಂಬುದು ತಿಳಿದಿದ್ದರೂ ಬ್ರಾಹ್ಮಣಧರ್ಮ ಅದರ ಬಗ್ಗೆ ಕೊಂಚವೂ ತಲೆಕೆಡಸಿಕೊಳ್ಳಲಿಲ್ಲ”. (ಅದೇ ಕೃತಿ, ಪು.274)
ಹಾಗೆಯೇ ಬೌದ್ಧ ಮಗುವಿಗೆ ಹೋಲಿಸಿಕೊಂಡರೆ ತನ್ನ ಮಗು ಅದೆಷ್ಟು ಕೊಳಕು, ಭಯಂಕರ ಎಂಬ ಬಗ್ಗೆಯೂ ಬ್ರಾಹ್ಮಣಧರ್ಮ ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ನೀರಿನ ಕೊಳದಲ್ಲಿದ್ದ ಆ ನೀರನ್ನು (ಬೌದ್ಧತತ್ವಗಳು) ಸಂಪೂರ್ಣ ಖಾಲಿಗೊಳಿಸಿ ಅದರಲ್ಲಿದ್ದ ಮಗುವನ್ನು(ಬೌದ್ಧಧರ್ಮ) ಹೊರತೆಗೆದು ಅದರಲ್ಲಿ ತನ್ನ ನೀರನ್ನು(ಬ್ರಾಹ್ಮಣ ತತ್ವಗಳು) ತುಂಬಿ ತನ್ನ ಮಗುವನ್ನು(ಬ್ರಾಹ್ಮಣ ಧರ್ಮವನ್ನು) ಬ್ರಾಹ್ಮಣಧರ್ಮ ಇಟ್ಟಿತು. ಈ ದಿಸೆಯಲ್ಲಿ ಹೇಳುವುದಾದರೆ ಬ್ರಾಹ್ಮಣಧರ್ಮ ತನ್ನ ಆಕ್ರಮಣದಿಂದ ತಾನು ಗಳಿಸಿದ ರಾಜಕೀಯ ಅಧಿಕಾರವನ್ನು ಬೌದ್ಧಧರ್ಮವನ್ನು ನಾಶಗೊಳಿಸಲು ಬಳಸಿಕೊಂಡಿತು ಮತ್ತು ಹಾಗೆ ನಾಶಗೊಳಿಸಿತೂ ಕೂಡ. ಇದಕ್ಕೆ ವ್ಯತಿರಿಕ್ತವಾಗಿ ಇಸ್ಲಾಂ ಧರ್ಮ ಹಿಂದೂ ಧರ್ಮವನ್ನು ಅತಿಕ್ರಮಿಸಲಿಲ್ಲ, ಇಸ್ಲಾಂ ತನ್ನ ಯೋಜನೆಯ ಉದ್ದೇಶವನ್ನು ಪರಿಪೂರ್ಣವಾಗಿ ಕಾರ್ಯರೂಪಕ್ಕೆ ತರಲಿಲ್ಲ. ಆದರೆ ಬ್ರಾಹ್ಮಣಧರ್ಮ ಕಾರ್ಯರೂಪಕ್ಕೆ ತಂದಿತು. ಒಂದು ಧರ್ಮವಾಗಿ ಅದು ಬೌದ್ಧಧರ್ಮವನ್ನು ಹೊಡೆದೋಡಿಸಿ ಅದರ ಜಾಗದಲ್ಲಿ ತನ್ನ ಧರ್ಮವನ್ನು ಪ್ರತಿಷ್ಠಾಪಿಸಿತು.
ಇಂತಹ ಪ್ರತಿಷ್ಠಾಪನೆಯ ಕೆಲಸ ಅದು ಒಂದು ತಿಂಗಳು, ಎರಡು ತಿಂಗಳು ಅಥವಾ ಒಂದು ವರ್ಷ, ಎರಡು ವರ್ಷಗಳೂ ನಡೆದಿದ್ದಲ್ಲ. ಬದಲಿಗೆ ಒಂದು ಸಾವಿರ ವರ್ಷಗಳವರೆಗೆ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವೆ ಇಂತಹ ಸಂಘರ್ಷ ನಡೆದಿದೆ. ಕ್ರಿ.ಪೂ.185ರಲ್ಲಿ ಪುಷ್ಯಮಿತ್ರ ಶುಂಗನಿಂದ ಆರಂಭವಾದ ಇಂತಹ ಸಂಘರ್ಷ ದೇಶದ ಉದ್ದಗಲಕ್ಕೂ [ಯಾಕೆಂದರೆ ಅಶೋಕನ ಕಾಲದಲ್ಲಿ(ಕ್ರಿ.ಪೂ.268-ಕ್ರಿ.ಪೂ.232) ಬೌದ್ಧಧರ್ಮ ಇಡೀ ಭಾರತವನ್ನು ಆಕ್ರಮಿಸಿತ್ತು] ನಡೆದಿದೆ. ದುರಂತವೆಂದರೆ ಬೌದ್ಧಧರ್ಮ ಮತ್ತು ಬ್ರಾಹ್ಮಣಧರ್ಮಗಳ ನಡುವೆ ನಡೆದಿರುವ ಇಂತಹ ಸಂಘರ್ಷ ಅಥವಾ ಮಾರಕ ಕಾಳಗವನ್ನು ಭಾರತದ ಇತಿಹಾಸ ಗಮನಿಸಲೇಹೋಗಿಲ್ಲ, ದಾಖಲಿಸಲೇಹೋಗಿಲ್ಲ. ಈ ದಿಸೆಯಲ್ಲಿ ಇತಿಹಾಸದ ಈ ಮಗ್ಗುಲನ್ನು ಅಂದರೆ ಬ್ರಾಹ್ಮಣಧರ್ಮ ಮತ್ತು ಬೌದ್ಧಧರ್ಮಗಳ ನಡುವಿನ ನಿರಂತರ ಕಾಳಗವನ್ನು ಅಧ್ಯಯನ ಮಾಡದೇ ಅಥವಾ ಆ ದೃಷ್ಟಿಕೋನದಲ್ಲಿ ಭಾರತದ ಇತಿಹಾಸವನ್ನು ನೋಡದೆ ಹೋದರೆ ಭಾರತದ ಈಗಿನ ಸಾಮಾಜಿಕ ಸ್ಥಿತಿಗತಿಯನ್ನು, ಜಾತಿ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಲು ಖಂಡಿತ ಸಾಧ್ಯವಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?
- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!
- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು