Connect with us

ಬಹಿರಂಗ

ಮಹಿಳೆಯರ ಹಕ್ಕುಗಳ ರಕ್ಷಕ : ಬಾಬಾಸಾಹೇಬ್ ಡಾ. ಅಂಬೇಡ್ಕರ್

Published

on

  • ರಘೋತ್ತಮ.ಹೊಬ

ಹಿಳೆಯರಿಗೆ ಇಂದು ಭರಪೂರ ಹಕ್ಕುಗಳಿವೆ.ಆಯೋಗವಿದೆ, ದೌರ್ಜನ್ಯಕ್ಕೆ ರಕ್ಷಣೆ ಇದೆ, ಆಸ್ತಿಯಲ್ಲಿ ಪಾಲೂ ಇದೆ. ಆಶ್ಚರ್ಯವೆಂದರೆ ಇದನ್ನೆಲ್ಲ ಭಾರತೀಯ ಮಹಿಳೆಯರಿಗೆ ನೀಡಿದ್ದು? ಅದು ಬಾಬಾಸಾಹೇಬ್ ಅಂಬೇಡ್ಕರರಲ್ಲದೆ ಬೇರಾರು ಅಲ್ಲ. ಈ ದಿಸೆಯಲ್ಲಿ ಈ ದೇಶದ ಪ್ರಥಮ ಕಾನೂನು ಸಚಿವರಾಗಿ ಮಹಿಳೆಯರ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ ಅಂಬೇಡ್ಕರ್ ಅಂದು ರೂಪಿಸಿದ ಮಸೂದೆ ಬಗ್ಗೆ ತಿಳಿಯುವುದಾದರೆ, ಅಂಬೇಡ್ಕರ್‍ರವರು ರಚಿಸಿದ ‘ಹಿಂದೂ ಕೋಡ್ ಬಿಲ್” ಮುಖ್ಯವಾಗಿ 7 ಅಂಶಗಳನ್ನು ಒಳಗೊಂಡಿತ್ತು. ಅವುಗಳೆಂದರೆ

  1. ಆಸ್ತಿಯ ಹಂಚಿಕೆ.
  2. ಆಸ್ತಿಗೆ ವಾರಸುದಾರರನ್ನು ಪಟ್ಟಿಮಾಡುವುದು.
  3. ಜೀವನಾಂಶ.
  4. ಮದುವೆ.
  5. ವಿಚ್ಛೇಧನ.
  6. ದತ್ತು ಸ್ವೀಕಾರ.
  7. ಅಪ್ರಾಪ್ತ ವಯಸ್ಕರ ಮದುವೆ. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.14, ಭಾಗ.1, ಪು. 41)ಖಂಡಿತ, ಈ ಏಳು ಅಂಶಗಳ ಅಂಬೇಡ್ಕರರ ಅಂತಹದ್ದೊಂದು ಪ್ರಯತ್ನಕ್ಕೆ ಪ್ರಮುಖ ಕಾರಣ ಈ ದೇಶದ ಮಹಿಳೆಯರು ಮತ್ತು ಮಕ್ಕಳ ಹಿತಚಿಂತನೆ ಎಂಬುದು ಮತ್ತೆ ಮತ್ತೆ ಇಲ್ಲಿ ಒತ್ತಿಹೇಳಬೇಕಾದ ಅಂಶ.

ಆಸ್ತಿಯಲ್ಲಿ ಮಹಿಳೆಯರಿಗೆ ಪಾಲು

ಮೊದಲಿಗೆ ಅಂಬೇಡ್ಕರರು ಹೇಳುವುದು ಆಸ್ತಿಯ ಹಂಚಿಕೆಯ ಬಗ್ಗೆ. ಆ ಕಾಲದಲ್ಲಿ ಹಿಂದೂಗಳಲ್ಲಿ ಆಸ್ತಿಯ ಹಂಚಿಕೆ ಬಗ್ಗೆ ಎರಡು ವಿಧಾನಗಳಿತ್ತು. ಒಂದನೆಯದು ಮಿತಾಕ್ಷರ, ಎರಡನೆಯದು ದಯಾಭಾಗ. ಇದರಲ್ಲಿ ಹಿಂದೂಗಳು ಪ್ರಮುಖವಾಗಿ ಮಿತಾಕ್ಷರ ಪದ್ಧತಿಯನ್ನು ಅನುಸರಿಸುತ್ತಿದ್ದರು. ಮಿತಾಕ್ಷರದ ಈ ಪದ್ಧತಿಯಲ್ಲಿ ಆಸ್ತಿಯು ವ್ಯಕ್ತಿಯು ಬದುಕಿದ್ದಾಗ ಅದು ಆತನ ಸ್ವಂತ ಆಸ್ತಿಯಾಗಿರುತ್ತಿರಲಿಲ್ಲ. ಬದಲಿಗೆ ಅದು ತಂದೆ, ಮಗ, ಮೊಮ್ಮಗ ಮತ್ತು ಮರಿಮೊಮ್ಮಗ ಹೀಗೆ ನಾಲ್ವರು ಸಮಾನ ಪಾಲುದಾರರಿಗೆ ಸೇರಿರುತ್ತಿತ್ತು.

ತಂದೆ, ಮಗ, ಮೊಮ್ಮಗ, ಮರಿಮೊಮ್ಮಗ ಈ ಸರಣಿಯಲ್ಲಿ ಹೆಣ್ಣು ಮಕ್ಕಳಿಗೆ ಅವಕಾಶವೇ ಇಲ್ಲ ಎಂಬುದನ್ನು ಓದುಗರು ಗಮನಿಸಬೇಕು!. ಆದರೆ ಅಂಬೇಡ್ಕರರು ಮಿತಾಕ್ಷರದ ಈ ಪದ್ಧತಿಯ ಬದಲಿಗೆ ದಯಾಭಾಗ ಪದ್ಧತಿಯನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದರು. ದಯಾಭಾಗ ಈ ಪದ್ಧತಿಯ ಪ್ರಕಾರ ವ್ಯಕ್ತಿಯು ಬದುಕಿದ್ದಾಗ ಆಸ್ತಿಯು ಆತನ ಸ್ವಂತದ್ದಾಗಿದ್ದು ಸತ್ತ ನಂತರ ಅದು ಆತನ ಉತ್ತರಾಧಿಕಾರಿಗೆ ಸೇರುತ್ತಿತ್ತು. ಆ ಉತ್ತರಾಧಿಕಾರಿ ಅದನ್ನು ಮಾರಬಹುದಿತ್ತು, ಕೊಡುಗೆ ಅಥವ ವಿಲ್ ಮೂಲಕ ತನಗೆ ಬೇಕಾದವರಿಗೆ ಕೊಡಬಹುದಿತ್ತು.

ಮುಂದುವರಿದು ಅಂಬೇಡ್ಕರರು ಹೇಳಿದ್ದು ಆಸ್ತಿಯ ವಾರಸುದಾರಿಕೆ ಅಥವ ವ್ಯಕ್ತಿ ಸತ್ತ ನಂತರ ಆಸ್ತಿ ಯಾರಿಗೆ ಸೇರುತ್ತದೆ ಎಂಬುದನ್ನು. ಅಂದು ಜಾರಿಯಲ್ಲಿದ್ದ ಮಿತಾಕ್ಷರ ಪದ್ಧತಿ ಪ್ರಕಾರ ವ್ಯಕ್ತಿ ಸತ್ತ ನಂತರ ಆತನ ಆಸ್ತಿ ಆತನ ಸಹಜಾತರು ಅಂದರೆ ಅಣ್ಣತಮ್ಮಂದರಿಗಿಂತ ಆತನ ಪಿತೃ ಸಂಬಂಧಿಗಳಿಗೆ ಹೋಗುತ್ತಿತ್ತು. ಅಂದರೆ ತಂದೆಯ ಸಂಬಂಧಿಗಳಿಗೆ ಹೋಗುತ್ತಿತ್ತು. ಆದರೆ ಅಂಬೇಡ್ಕರರು ದಯಾಭಾಗ ಪದ್ಧತಿ ಶಿಫಾರಸು ಮಾಡಲಾಗಿ ಆಸ್ತಿ ಆತನ ರಕ್ತ ಸಂಬಂಧಿಗಳಿಗೇ ಹೋಗುವಂತಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರರು ಆಸ್ತಿಯ ವಾರಸುದಾರಿಕೆಗೆ ಸಂಬಂಧಿಸಿದಂತೆ ಮಹಿಳೆಯರ ಪರವಾಗಿ ಒಂದು ಬದಲಾವಣೆ ತಂದರು. ಅದೆಂದರೆ ಅದುವರೆಗಿನ ನಿಯಮದಲ್ಲಿ ಕೇವಲ ಮಗನಷ್ಟೆ ವಾರಸುದಾರನಾಗಿರುತ್ತಿದ್ದ. ಆದರೆ ಅಂಬೇಡ್ಕರರು ಅಂತಹ ವಾರಸುದಾರಿಕೆಗೆ ಮಗಳು, ವಿಧವೆ, ಈಗಾಗಲೇ ಮರಣ ಹೊಂದಿರುವಂತಹ ಮಗನ ವಿಧವಾ ಪತ್ನಿ ಇವರೆಲ್ಲರನ್ನು ಮಗನಷ್ಟೆ ಸಮಾನ ವಾರಸುದಾರಿಕೆಗೆ ತಂದರು. ಆ ಮೂಲಕ ಹೆಣ್ಣು ಮಕ್ಕಳಿಗೂ ಆಸ್ತಿಯಲ್ಲಿ ಪಾಲು ನೀಡಿದರು.

ಅಂದಹಾಗೆ ಅದು ಅದೆಷ್ಟು ಪಾಲು?

ಅಂದರೆ ತಂದೆಯ ಆಸ್ತಿಯಲ್ಲಿ ಮಗನಿಗೆ ಎಷ್ಟು ಸಿಗುತ್ತದೆಯೋ ಅದರ ಅರ್ಧದಷ್ಟು ಮಗಳಿಗೆ. ಈ ಸಂದರ್ಭದಲ್ಲಿ ಆ ಹೆಣ್ಣು ಮಗಳು ಮದುವೆಯಾಗಿದ್ದರೆ ಅಥವ ಮದುವೆಯಾಗದಿದ್ದರೆ? ಖಂಡಿತ, ಅದ್ಯಾವುದೂ ಅಡ್ಡಿ ಬರದಂತೆ ಮಗನ ಅರ್ಧದಷ್ಟು ಆಕೆ ಪಡೆಯುವಂತಾಯಿತು.

ಆಸ್ತಿಯ ವಾರಸುದಾರಿಕೆ

ಇನ್ನು ಈ ವಾರಸುದಾರಿಕೆಯಲ್ಲಿ, ಮೊದಲು ತಂದೆ ನಂತರ ತಾಯಿ ಎಂದಿತ್ತು. ಆದರೆ ಅಂಬೇಡ್ಕರರು ಮೊದಲು ತಾಯಿ ನಂತರ ತಂದೆ ಎಂದು ಬದಲಿಸಿದರು. ಈ ಸಂದರ್ಭದಲ್ಲಿ ಮಹಿಳೆಯರದೇ ಹೆಸರಿನಲ್ಲಿರುವ ಆಸ್ತಿ ಅಥವ ಸ್ತ್ರೀಧನಕ್ಕೆ ಸಂಬಂಧಿಸಿ ಅನೇಕ ವಾರಸುದಾರಿಕೆಯ ನಿಯಮಗಳಿದ್ದವು. ಅಂಬೇಡ್ಕರರು ಅವೆಲ್ಲವನ್ನು ಒಂದೇ ನಿಯಮದಡಿ ತಂದರು. ಹಾಗೆಯೇ ಹೇಗೆ ತಂದೆಯ ಆಸ್ತಿಯಲ್ಲಿ ಮಗಳಿಗೆ ಅರ್ಧದಷ್ಟು ಎಂದರೋ ಹಾಗೆಯೇ ಸ್ತ್ರೀಧನದಲ್ಲಿ ಮಗನಿಗೂ ಮಗಳ ಅರ್ಧದಷ್ಟು ಎಂದು ಬದಲಾವಣೆ ತಂದರು. ಅದುವರೆವಿಗೆ ಇದ್ದ ನಿಯಮವೆಂದರೆ ಗಂಡ ತೀರಿಹೋದರೆ ಆಸ್ತಿ ಆಕೆಯ ಗಂಡನ ಸಂಬಂಧಿಕರಿಗೆ ಹೋಗುತ್ತಿತ್ತು.

ಆದರೆ ಅಂಬೇಡ್ಕರರು ಅದನ್ನು ಆತನ ವಿಧವಾ ಪತ್ನಿಗಷ್ಟೆ ಎಂಬಂತೆ ಬದಲಾವಣೆ ತಂದರು. ಪತಿಯ ಸಂಬಂಧಿಕರಿಗೆ ಅದರಲ್ಲಿ ಯಾವುದೇ ಪಾಲೂ ಇಲ್ಲವೆಂಬ ನಿಯಮ ರೂಪಿಸಿದರು. ಈ ಸಮಯದಲ್ಲಿ ವರದಕ್ಷಿಣೆ ಬಗ್ಗೆಯೂ ಅಂಬೇಡ್ಕರರು ಒಂದು ನಿಯಮ ತಂದರು. ಅಂದರೆ ಅದನ್ನು ನಿಷೇಧಿಸಿದರು. ಆದರೂ ವರದಕ್ಷಿಣೆ, ಅದು ವಧುವಿನ ಆಸ್ತಿ. ಅದನ್ನು ಆಕೆಯ ಗಂಡನಾಗಲೀ ಆತನ ಸಂಬಂಧಿಕರಾಗಲೀ ಬಳಸುವಂತಿಲ್ಲ. ಬದಲಿಗೆ ಆಕೆಗೆ 18 ವರ್ಷ ತುಂಬಿದ ನಂತರ ಅದು ಆಕೆಯ ವಯಕ್ತಿಕ ಆಸ್ತಿಯಾಗುತ್ತದೆ ಎಂದರು.

ಮಹಿಳೆಯರಿಗೆ ಜೀವನಾಂಶ

ಇನ್ನು ಜೀವನಾಂಶ; ಅದುವರೆಗೆ ಅಕಸ್ಮಾತ್ ಹೆಂಡತಿ ಗಂಡನಿಂದ ದೂರವಾಗಿ ಬದುಕುವಂತಾದರೆ ಆಕೆಗೆ ಜೀವನಾಂಶ ಸಿಗುತ್ತಿರಲಿಲ್ಲ. ಆದರೆ ಅಂಬೇಡ್ಕರರು ಜೀವನಾಂಶ ಸಿಗುವಂತೆ ಮಾಡಿದರು. ಅಲ್ಲದೆ ಅಂತಹ ಜೀವನಾಂಶದ ಸಂದರ್ಭವನ್ನು ಕೂಡ ಅವರು ಮಹಿಳೆಯ ಹಿತದೃಷ್ಟಿಯಿಂದ ಪಟ್ಟಿಮಾಡಿದರು. ಅವುಗಳೆಂದರೆ

  1. ಆತ ಅಸಹನೀಯ ರೋಗದಿಂದ ನರಳುತ್ತಿದ್ದರೆ.
  2. ಆತ ಇನ್ನೊಬ್ಬಳನ್ನು ಇಟ್ಟುಕೊಂಡಿದ್ದರೆ.
  3. ಆತ ಅತಿ ಕ್ರೂರನಾಗಿದ್ದರೆ.
  4. ಆತ ಅವಳನ್ನು ಬಿಟ್ಟು ಎರಡು ವರ್ಷಗಳು ಮೀರಿ ದೂರ ಇದ್ದರೆ.
  5. ಆತ ಬೇರೆ ಯಾವುದಾದರೂ ಧರ್ಮಕ್ಕೆ ಮತಾಂತರ ಹೊಂದಿದ್ದರೆ.ಅಥವಾ ಇನ್ನಾವುದಾದರೂ ನ್ಯಾಯಬದ್ಧ ಕಾರಣಗಳು.
  6. ಒಟ್ಟಾರೆ ಹೀಗೆ ಅಂಬೇಡ್ಕರರು ಮಹಿಳೆಗೆ ಕಾನೂನಾತ್ಮಕವಾಗಿ ಸ್ವಾತಂತ್ರ್ಯ ನೀಡಿದ್ದರು.

ಮದುವೆ ಮತ್ತು ವಿಚ್ಛೇದನದ ಹಕ್ಕು

ಮುಂದುವರೆದು ಮದುವೆ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಅದುವರೆವಿಗೂ ಹಿಂದೂ ಕಾನೂನಿನಲ್ಲಿ ಸಾಕ್ರಮೆಂಟ್ ಅಥವ ಧಾರ್ಮಿಕ ಮದುವೆಗಷ್ಟೆ ಮಾನ್ಯತೆ ಇತ್ತು. ಸಿವಿಲ್ ಮ್ಯಾರೇಜ್ ಅಥವ ನಾಗರಿಕ ಮದುವೆಗೆ ಯಾವುದೇ ಮಾನ್ಯತೆ ಇರಲಿಲ್ಲ. ಹಾಗೆಯೇ ಧಾರ್ಮಿಕ ಮದುವೆಯಲ್ಲಿ ಜಾತಿ, ಉಪಜಾತಿ ನಮೂದಿಸುವುದು ಕಡ್ಡಾಯವಾಗಿತ್ತು. ಆದರೆ ಅಂಬೇಡ್ಕರರು ರೂಪಿಸಿದ ಮದುವೆಯ ಆ ನಿಯಮದಲ್ಲಿ ಜಾತಿ ಮತ್ತು ಉಪಜಾತಿ ಕಡ್ಡಾಯ ನಮೂದಿಸುವುದನ್ನು ಕೈಬಿಟ್ಟರು. ಪ್ರಾಪ್ತ ವಯಸ್ಕರಿದ್ದರೆ ಸಾಕು ಅವರು ಯಾವುದೇ ಜಾತಿ ಉಪಜಾತಿ ಇರಲಿ ಮದುವೆ ಸಿಂಧು ಎಂಬ ನಿಯಮ ರೂಪಿಸಿದರು.

ಅಂದಹಾಗೆ ಅದುವರೆವಿಗೂ ಇದ್ದ ಧಾರ್ಮಿಕ ಮದುವೆ ಪದ್ಧತಿಯಲ್ಲಿ ವಿಚ್ಛೇದನಕ್ಕೆ ಅವಕಾಶ ಇರಲಿಲ್ಲ. ಆದರೆ ಅಂಬೇಡ್ಕರರು ವಿಚ್ಛೇದನಕ್ಕೆ ಅವಕಾಶ ನೀಡಿದರು. ಅದಕ್ಕೆ ಅವರು ಏಳು ಕಾರಣಗಳನ್ನು ನೀಡಿದರು. ಅವುಗಳೆಂದರೆ

  1. ಪತ್ನಿಯನ್ನು ಪರಿತ್ಯಜಿಸಿ ದೂರ ಇರುವುದು.
  2. ಬೇರೆ ಧರ್ಮಕ್ಕೆ ಮತಾಂತರ ಹೊಂದಿರುವುದು.
  3. ಬೇರೊಬ್ಬರನ್ನು ಇಟ್ಟುಕೊಂಡಿರುವುದು.
  4. ಗುಣಪಡಿಸಲಾಗದ ರೋಗದಿಂದ ನರಳುತ್ತಿರುವುದು.
  5. ಕುಷ್ಟರೋಗದಿಂದ ನರಳುತ್ತಿರುವುದು.
  6. ಅಂಟುರೋಗದಿಂದ ನರಳುತ್ತಿರುವುದು.
  7. ಕ್ರೂರತೆ.

ಈ ಸಂದರ್ಭದಲ್ಲಿ ಮಹಿಳೆಯರಿಗೆ ಮದುವೆಯನ್ನೇ ರದ್ದುಗೊಳಿಸಿಕೊಳ್ಳುವ ನಿಯಮ ಕೂಡ ಅಂಬೇಡ್ಕರರು ಸೇರಿಸಿದರು. ಆ ಸಂದರ್ಭಗಳೆಂದರೆ,

  • ನಪುಂಸಕತ್ವ
  • ಸಪಿಂಡ
  • ಮಾನಸಿಕ ಅಸ್ವಸ್ಥತೆ
  • ಪೋಷಕರ ಬಲವಂತ

ಹಾಗೆಯೇ ಅದುವರೆಗೆ ಬಹುಪತ್ನಿತ್ವ ಜಾರಿಯಲ್ಲಿತ್ತು. ಆದರೆ ಅಂಬೇಡ್ಕರರು ಏಕಪತ್ನಿತ್ವ ನಿಯಮವನ್ನು ವಿವಾಹ ಕಾನೂನಿಗೆ ಸೇರಿಸಿದರು.

ಒಟ್ಟಾರೆ ಹೀಗೆ ಮಹಿಳೆಯರ ರಕ್ಷಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಗಳನ್ನೊಳಗೊಂಡ ಮಸೂದೆಯನ್ನು ಅಂಬೇಡ್ಕರರು ರೂಪಿಸಿ ಸಂಸತ್ತಿನಲ್ಲಿ ಮಂಡಿಸಿದರು.

ಪ್ರಶ್ನೆಯೇನೆಂದರೆ ಅದು ಅಂಗೀಕಾರಗೊಂಡಿತೇ? ಖಂಡಿತ, ಆ ಕಥೆ ಹೇಳಿದರೆ ಅದೇ ಒಂದು ಮಹಾಕಾವ್ಯವಾಗುತ್ತದೆ. ಯಾಕೆಂದರೆ ಕರ್ಮಠ ಹಿಂದೂಗಳು ಮಹಿಳೆಯರಿಗೆ ಹಕ್ಕುಗಳನ್ನು ಕೊಡುವ ದಿಸೆಯಲ್ಲಿ ತಮ್ಮ ಧರ್ಮಕ್ಕೆ ಈ ಪರಿಯ ತಿದ್ದುಪಡಿಯನ್ನು ತರುವುದನ್ನು ಅದರಲ್ಲೂ ಅಸ್ಪøಶ್ಯನೊಬ್ಬ ತರುವುದನ್ನು ಸಹಿಸಿಕೊಳ್ಳುತ್ತಾರೆಯೇ? ಖಂಡಿತ ಇಲ್ಲ. ಅಂಬೇಡ್ಕರರ ಈ ಮಸೂದೆಗೆ ಎದುರಾಗಿ ಅವರು ಸ್ಮೃತಿ, ಶೃತಿ ಧರ್ಮಗಳ ಉಲ್ಲೇಖ ಮುಂದಿಡುತ್ತಾರೆ. ಉದಾಹರಣೆಗೆ ಶ್ರೀ ಸರ್ವತೆ ಎಂಬುವವರೊಬ್ಬರು ಹೇಳುತ್ತಾರೆ “ಹಿಂದೂ ಧರ್ಮ ಜಾತಿ ಆಧಾರದ ಮೇಲೆ ನಿಂತಿದೆ. ಒಂದು ವೇಳೆ ಮದುವೆಯೊಂದು ನಡೆಯಿತೆಂದರೆ ಅದು ಪವಿತ್ರ ಎಂದರ್ಥ ಅದನ್ನು ರದ್ದುಗೊಳಿಸಲು ಸಾಧ್ಯವೇ ಇಲ್ಲ.

ಇನ್ನು ಸನಾತನ ವೈದಿಕ ಧರ್ಮದ ಪ್ರಕಾರ ವಿಚ್ಛೇದನವಂತು ಸಾಧ್ಯವೇ ಇಲ್ಲ!”. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.14, ಭಾಗ.2, ಪು.807). ಇನ್ನು ಹೆಣ್ಣುಮಕ್ಕಳಿಗೆ ಆಸ್ತಿಯಲ್ಲಿ ಹಕ್ಕು ನೀಡಿರುವುದರ ಬಗ್ಗೆ ಶ್ರೀ.ಎಂ.ಎ.ಅಯ್ಯಂಗಾರ್‍ರವರು ಹೇಳುವುದು “ಹಿಂದೂ ವಿವಾಹ ಪದ್ಧತಿ, ವಿಚ್ಛೇಧನ ನೀಡದಿರುವುದು, ಹಾಗೆಯೇ ಕುಟುಂಬಕ್ಕೆ ಬಾಧ್ಯಸ್ಥರಲ್ಲದ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ನೀಡದಿರುವುದು, ಇತ್ಯಾದಿ… ಇವೆಲ್ಲ ಈ ದೇಶದ ಜನತೆಯ ನೈತಿಕ ಶಕ್ತಿಯ ಮೂಲಗಳಾಗಿವೆ! ನಾನೊಂದು ಸರಳ ಪ್ರಶ್ನೆ ಕೇಳುತ್ತೇನೆ. ನನ್ನ ಮಗಳು ಮದುವೆಯಾಗುತ್ತಾಳೆ ಎಂದಿಟ್ಟುಕೊಳ್ಳಿ. ಆಗ ನಾನು ನನ್ನ ಅಳಿಯನ ಮನೆಯಲ್ಲಿ ಉಳಿದುಕೊಳ್ಳಬೇಕೋ ಅಥವಾ ನನ್ನ ಮಗನ ಮನೆಯಲ್ಲಿ ಉಳಿದುಕೊಳ್ಳಬೇಕೋ? ಹೇಳಿ, ನೀವೇ ಹೇಳಿ” (ಅದೇ ಕೃತಿ. ಪು.939).

ಖಂಡಿತ, ಹೀಗೆ ಸಾಗುವ ಆ ಚರ್ಚೆ ಮಹಿಳೆಯರಿಗೆ ಹಕ್ಕು ಗಳನ್ನು ನೀಡುವ
ಅಂಬೇಡ್ಕರರ ಆ ಪ್ರಯತ್ನಕ್ಕೆ ನ್ಯಾಯ ದೊರಕಿಸಿಕೊಟ್ಟಿತೆ? ಖಂಡಿತ ಇಲ್ಲ. ಬದಲಿಗೆ ಅಂಬೇಡ್ಕರರು ತಮ್ಮ ಆ ಕಾನೂನು ಮಂತ್ರಿ ಪದವಿಗೇ ರಾಜೀನಾಮೆ ನೀಡುವಂತಹ ಪರಿಸ್ಥಿತಿ ತಂದೊಡ್ಡಿತು ಮತ್ತು ಅಂಬೇಡ್ಕರರು ರಾಜೀನಾಮೆ ನೀಡಿದರು ಕೂಡ! ಆದರೂ ಈ ನಿಟ್ಟಿನಲ್ಲಿ ಅಂತಿಮವಾಗಿ 1955-56 ಸಮಯದಲ್ಲಿ ಅಂಬೇಡ್ಕರರು ರಾಜೀನಾಮೆ ಕೊಟ್ಟ 4 ವರ್ಷಗಳ ನಂತರ ಮಹಿಳೆಯರ ಹಕ್ಕುಗಳ ರಕ್ಷಣೆಯ ಬಾಬಾಸಾಹೇಬರು ರೂಪಿಸಿದ ಆ ಮಸೂದೆ ಅಂಗೀಕಾರವಾಯಿತು.

ಈ ಸಂದರ್ಭದಲ್ಲಿ 2016ರಲ್ಲಿ ಇಡೀ ದೇಶಕ್ಕೆ ನಂ.1 ಎಂಬ ಖ್ಯಾತಿಯೊಡನೆ ಐಎಎಸ್ ಪರೀಕ್ಷೆ ಪಾಸು ಮಾಡಿದ ಟೀನಾ ಡಾಬಿ ಎಂಬ ಶೋಷಿತ ಸಮುದಾಯದ ಹೆಣ್ಣುಮಗಳ ಹೇಳಿಕೆ ಇಲ್ಲಿ ಉಲ್ಲೇಖಾರ್ಹ. ಟೀನಾ ಡಾಬಿ ಹೇಳುತ್ತಾರೆ “ಬಾಬಾಸಾಹೇಬ್ ಅಂಬೇಡ್ಕರರೇ ನನ್ನ ತಾತ ಮತ್ತು ಅವರೇ ನನಗೆ ಸ್ಫೂರ್ತಿ. ಅವರ ಮೀಸಲಾತಿ ನೀತಿ ಮತ್ತು ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವ ‘ಹಿಂದೂ ಸಂಹಿತೆ ಮಸೂದೆ’ಯಿಂದಷ್ಟೆ ನಾನು ಐಎಎಸ್ ಪಾಸು ಮಾಡಲು ಸಾಧ್ಯವಾಯಿತು”. ಖಂಡಿತ, ಟೀನಾ ಡಾಬಿಯವರ ಈ ಹೇಳಿಕೆ ಈ ದೇಶದ ಎಲ್ಲ ಮಹಿಳೆಯರ ಹೇಳಿಕೆಯಾಗಬೇಕಿತ್ತು. ದುರಂತವೆಂದರೆ ಈ ದೇಶದ ಮೇಲ್ವರ್ಗದ ಹೆಣ್ಣುಮಕ್ಕಳಿಗೆ ಅಂಬೇಡ್ಕರ್ ತಮಗೋಸ್ಕರ ಈ ಪರಿ ಹೋರಾಡಿರುವ ಸತ್ಯ ಅರಿವಿಗೆ ಬರುವುದಿಲ್ಲ. ಬದಲಿಗೆ ಯಥಾಪ್ರಕಾರ ಜಾತೀಯತೆಯ ಮನಸ್ಥಿತಿಯಲ್ಲಿ ಅಂಬೇಡ್ಕರರನ್ನು ವಿರೋಧಿಸ ನೋಡುತ್ತಾರೆ! ಈ ನಿಟ್ಟಿನಲ್ಲಿ ಅಂತಹ ಚಾಳಿ ನಿಲ್ಲಲಿ ಈ ದೇಶದ ಪ್ರತಿಯೊಬ್ಬ ಮಹಿಳೆ ಮಹಿಳಾ ದಿನದ ಈ ಶುಭ ದಿನ ಬಾಬಾಸಾಹೇಬ್ ಅಂಬೇಡ್ಕರ್ ರನ್ನು ಗೌರವ ಪೂರ್ವಕವಾಗಿ ಸ್ಮರಿಸಲಿ ಎಂಬುದೇ ಸದ್ಯದ ಕಳಕಳಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending