ದಿನದ ಸುದ್ದಿ
ಜಾತಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ : ಡಾ.ಬಿ.ಆರ್.ಅಂಬೇಡ್ಕರ್ ಈ ಬರಹ ನಿಮಗಾಗಿ

ಸಾಮೂಹಿಕ ಸಂಪ್ರದಾಯ,ಅಧಿಕಾರ ಮತ್ತು ಹಿತಗಳನ್ನು ಮೀರಿ ತನ್ನ ಸ್ವಂತ ಅಭಿಪ್ರಾಯ ಮತ್ತು ನಂಬಿಕೆಗಳನ್ನು ಸ್ವತಂತ್ರವಾಗಿ ಒಬ್ಬ ವ್ಯಕ್ತಿ ಹೇಳತೊಡಗುವುದೇ ಎಲ್ಲಾ ಬಗೆಯ ಸುಧಾರಣೆಗಳ ಆರಂಭ. ಈ ಸುಧಾರಣೆ ಮುಂದುವರಿಯುವುದೋ ಇಲ್ಲವೋ ಎನ್ನುವುದು ಆ ಸಮೂಹ ಆತನಿಗೆ ಒದಗಿಸುವ ಅವಕಾಶವನ್ನು ಅವಲಂಬಿಸುತ್ತದೆ.
ಸಮೂಹ ಅಥವಾ ಸಮಾಜ ತಾಳೆಯಿಂದ ನ್ಯಾಯಬುದ್ದಿಯಿಂದ ಅಹ ವ್ಯಕ್ತಿಗಳನ್ನು ನೋಡಿಕೊಂಡರೆ ಆ ವ್ಯಕ್ತಿಗಳು ತಮ್ಮ ಅಭಿಪ್ರಾಯಗಳನ್ನು ಮುಂದುವರಿಸುತ್ತಾ ಆಗಿ, ಕೊನೆಗೆ ಅವರನ್ನೆಲ್ಲ ಮನವೊಲಿಸಿ ತಮ್ಮ ಹೊಸ ವಿಚಾರಗಳಿಗೆ ಒಪ್ಪಿಸುವುದೂ ಸಾಧ್ಯ . ಸಮೂಹಕ್ಕೆ ಬೇಡವಾದರೆ ಆ ವ್ಯಕ್ತಿಗಳನ್ನು ಹತ್ತಿಕ್ಕಬಹುದು. ಹಾಗಾದಾಗ ಸುಧಾರಣೆಯ ಪ್ರಯತ್ನ ಸತ್ತು ಹೋಗುತ್ತದೆ. ಜಾತಿಯ ಕೈಯಲ್ಲಿ ಬಹಿಷ್ಕಾರವೆಂಬುದೊಂದು ಬಲಿಷ್ಠವಾದ ಹಕ್ಕು ಇದೆ. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ . ಜಾತಿಯ ನಿಯಮಗಳನ್ನು ಮೀರಿದವನಿಗೆ ಕೊಡುವ ತೀವ್ರತರವಾದ ಶಿಕ್ಷೆಯೆಂದರೆ ಈ ಬಹಿಷ್ಕಾರ.
ಬಹಿಷ್ಕೃತ ವ್ಯಕ್ತಿ ತನ್ನ ಜಾತಿಯ ಯಾವನೊಂದಿಗೂ ಸಂಬಂಧವಿಟ್ಟುಕೊಳ್ಳುವಂತಿಲ್ಲ. ಹೀಗೆ ಎಲ್ಲರಿಗೂ ಬೇಡವಾಗಿ ಬದುಕುವುದೆಂದರೆ ಸತ್ತಂತೆಯೇ ಸರಿ . ಈ ಬಹಿಷ್ಕಾರದ ಭಯ ಬಲವಾಗಿರುವುದರಿಂದ ಯಾವ ಹಿಂದೂವಾದರೂ ಜಾತಿ ನಿಯಮಕ್ಕೆ ವಿರೋಧವಾಗಿ ತನ್ನ ಸ್ವಂತ ಅಭಿಪ್ರಾಯಗಳನ್ನು ಹೇಳುವ ಧೈರ್ಯ ಮಾಡಲಾರನು. ಸಮಾಜವನ್ನು ಬಿಟ್ಟು ಮನುಷ್ಯ ಬದುಕಲಾರ. ತಾನು ಹೇಳಿದಂತೆ ಅದು ಕೇಳದಿದ್ದರೆ, ಅದು ಹೇಳಿದಂತೆ ತಾನು ಕೇಳಬೇಕು . ಸಂಪೂರ್ಣವಾಗಿ ಅದಕ್ಕೆ ಶರಣಾಗುವ ಪ್ರಸಂಗ ಬಂದರೂ ಪರವಾಗಿಲ್ಲ . ವ್ಯಕ್ತಿಯ ಈ ದೌರ್ಬಲ್ಯದ ಲಾಭ ಪಡೆದುಕೊಳ್ಳಲು ಜಾತಿ ಯಾವಾಗಲೂ ಸಿದ್ದವಾಗಿರುತ್ತದೆ.
ಸುಧಾರಕನ ಜೀವನವನ್ನೊಂದು ನರಕವಾಗಿಸಬಲ್ಲ ಕುತಂತ್ರ ಜಾತಿಯಿಂದ ನಡೆಯಬಹುದು. ಕುತಂತ್ರ ಒಂದು ಅಪರಾಧವಾಗಿದ್ದ ಪಕ್ಷದಲ್ಲಿ ಧೈರ್ಯಶಾಲಿಯೊಬ್ಬನು ಜಾತಿಗೆ ವಿರೋಧವಾಗಿ ನಿಂತನೆಂದು ಅವನನ್ನು ಬಹಿಷ್ಕರಿಸುವ ಈ ದುಷ್ಪಕೃತ್ಯವನ್ನು ಕಾನೂನು ರೀತಿಯಲ್ಲಿ ಶಿಕ್ಷಾರ್ಹವೆಂದು ಏಕೆ ಪರಿಗಣಿಸಬಾರದೋ ನಾನರಿಯೆ. ಆದರೆ ಕಾನೂನು ಆಯಾ ಜಾತಿಗೆ ಅದರದರ ನಿಯಮಗಳ ಸ್ವಾತಂತ್ರ್ಯವಿತ್ತಿದೆ; ತಪ್ಪಿತಸ್ಥರಿಗೆ ಬಹಿಷ್ಕಾರ ಹಾಕುವ ಸ್ವಾತಂತ್ರ್ಯವನ್ನು ಪ್ರಶ್ನಿಸುವುದಿಲ್ಲ . ಸಂಪ್ರದಾಯಬದ್ದ ಜನರ ಕೈಯಲ್ಲಿ ಜಾತಿ ಒಂದು ಬಲಿಷ್ಟ ಆಯುಧವಾಗಿದ್ದು , ಅದ್ದರಿಂದ ಸುಧಾರಕನನ್ನೂ ಸುಧಾರಣೆಗಳನ್ನೂ ಅದು ನಿರ್ಮೂಲನೆಗೊಳಿಸಬಲ್ಲದು.
-ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು – ಭಾಷಣಗಳು : ಸಂಪುಟ – 1
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ