ಬಹಿರಂಗ
“ಸುರರು ಮತ್ತು ಅಸುರರು ಇಬ್ಬರೂ ಒಂದೇ ತಂದೆಯ ಮಕ್ಕಳು” : ಬಾಬಾಸಾಹೇಬ್ ಅಂಬೇಡ್ಕರ್
- ರಘೋತ್ತಮ ಹೊ.ಬ
ಬಾಬಾಸಾಹೇಬ್ ಅಂಬೇಡ್ಕರರು ಅಸುರರ ಬಗ್ಗೆ ಏನು ಹೇಳುತ್ತಾರೆ? ಇದನ್ನು ಉಲ್ಲೇಖಿಸುವುದಾದರೆ, ಅಂಬೇಡ್ಕರರು ಹೇಳುತ್ತಾರೆ, “ಅಸುರರು ಮತ್ತು ಸುರರು ಇಬ್ಬರೂ ಆರ್ಯನ್ನರ ರೀತಿಯೇ ಮಾನವ ಜೀವಿಗಳ ಸಮುದಾಯಗಳು. ಹಾಗೆಯೇ ಅಸುರರು ಮತ್ತು ಸುರರು ಇಬ್ಬರೂ ಕಶ್ಯಪ ಎಂಬ ಒಬ್ಬನೇ ಸಾಮಾನ್ಯ ತಂದೆಯ ವಂಶಜರು. ಇದರ ಹಿಂದಿರುವ ಕತೆ ಎಂದರೆ, ದಕ್ಷ ಪ್ರಜಾಪತಿಗೆ 60 ಮಂದಿ ಹೆಣ್ಣು ಮಕ್ಕಳಿದ್ದರು. ಅವರಲ್ಲಿ 13 ಮಂದಿಯನ್ನು ಕಷ್ಯಪನಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಷ್ಯಪನ ಆ 13 ಮಂದಿ ಹೆಂಡತಿಯರಲ್ಲಿ ದಿತಿ ಮತ್ತು ಅದಿತಿ ಕೂಡ ಇಬ್ಬರಾಗಿದ್ದರು. ದಿತಿಗೆ ಹುಟ್ಟಿದ ಮಕ್ಕಳನ್ನು ಅಸುರರು ಎಂದು ಕರೆಯಲಾಗುತ್ತಿತ್ತು. ಅದಿತಿಗೆ ಹುಟ್ಟಿದ ಮಕ್ಕಳನ್ನು ಸುರರು ಅಥವಾ ದೇವಾ(Devas)ರುಗಳು ಎಂದು ಕರೆಯಲಾಗುತ್ತಿತ್ತು. ಅಂದಹಾಗೆ ಈ ಇಬ್ಬರೂ (ಸುರರು ಮತ್ತು ಅಸುರರು) ಈ ಪ್ರಪಂಚದ ಸಾರ್ವಭೌಮತ್ವಕ್ಕಾಗಿ ಬಹಳ ದೀರ್ಘ ಮತ್ತು ರಕ್ತಪಾತದ ಯುದ್ಧ ನಡೆಸಿದರು. ಅನುಮಾನವೇ ಬೇಡ ಇದು ಪುರಾಣ. ಈ ಪುರಾಣವನ್ನು ಇತಿಹಾಸ ಎನ್ನುವುದು ಅತಿಶಯೋಕ್ತಿಯೆನಿಸಿದರೂ ಆಗಲೂ ಇದು ಇತಿಹಾಸವಾಗಿದೆ”. (ಬಾಾಬಾಸಾಹೇಬ್ ಡಾ.ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.3, ಪು.419)
ಅಂಬೇಡ್ಕರರು ಪ್ರಸ್ತಾಪಿಸುವ ಈ ಪುರಾಣ ಕಂ ಇತಿಹಾಸದ ಪ್ರಕಾರ ಅಸುರರು ಮತ್ತು ಸುರರು ಇಬ್ಬರೂ ಒಂದೇ ತಂದೆಯ ಆದರೆ ಇಬ್ಬರು ಬೇರೆ ಬೇರೆ ತಾಯಿಯ ಮಕ್ಕಳು. ಅರ್ಥಾತ್ ಇಬ್ಬರೂ ಅಣ್ಣ ತಮ್ಮಂದಿರು. ಹೀಗಿರುವಾಗ ಇಲ್ಲಿ ಸುರರ ಸ್ವಂತ ಸೋದರರಾದ ಅಸುರರನ್ನು ಶೋಷಿತ ಸಮುದಾಯಗಳು ಆದರ್ಶವಾಗಿ ತೆಗೆದುಕೊಳ್ಳುವುದು ಹೇಗೆ? ಈ ಕಾರಣಕ್ಕಾಗಿ ಈ ಅಸುರರು ಮತ್ತು ಸುರರ ಗೋಜಲಾದರೂ ನಮಗೆ ಏಕೆ? ಸುಮ್ಮನೆ ಗೌತಮ ಬುದ್ಧರ ಬಳಿ ತೆರಳಿದರೆ ಸಾಕಲ್ಲವೇ?
ಸುದ್ದಿದಿನ.ಕಾಂ|ವಾಟ್ಸಾಪ್|9980346243