ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version