Connect with us

ದಿನದ ಸುದ್ದಿ

ಡಾ. ಎಂ.ಎಂ. ಕಲ್ಬುರ್ಗಿಯವರು ಮಾಡಿದ ತಪ್ಪಾದರೂ ಏನು..?

Published

on

  • ಆರ್.ರಾಮಕೃಷ್ಣ

ಗಸ್ಟ್, ಸೆಪ್ಟೆಂಬರ್ ತಿಂಗಳುಗಳು ಬಂದರೆ ವೈಚಾರಿಕತೆ, ವೈಜ್ಞಾನಿಕ ಮನೋಭಾವವನ್ನು ಪ್ರತಿಪಾದಿಸುವ ಮನಸ್ಸುಗಳಲ್ಲಿ ಒಂದು ಬಗೆಯ ವಿಷಾದಭಾವ ಆವರಿಸುತ್ತದೆ. ಈ ದಿನಗಳಲ್ಲಿ ಕೆಲವು ವ್ಯಕ್ತಿಗಳನ್ನು ನೆನಪಿಸಿಕೊಳ್ಳದೇ ಇರುವುದು ಸಾಧ್ಯವೇ ಇಲ್ಲ.

ಆಗಸ್ಟ್ 20, 2019 ರಂದು ಹತ್ಯೆಯಾದ ಮಹಾರಾಷ್ಟ್ರದ ಖ್ಯಾತ ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್, ಖ್ಯಾತ ಬರಹಗಾರ, ಸಾಮಾಜಿಕ ಕಾರ್ಯಕರ್ತ ಗೋವಿಂದ ಪನ್ಸಾರೆ, ಆಗಸ್ಟ್ 30, 2015 ರಂದು ಹತ್ಯೆಯಾದ ನಮ್ಮಧೇ ಕರ್ನಾಟಕದ ಘನ ವಿದ್ವಾಂಸ ಡಾ. ಎಂ.ಎಂ. ಕಲ್ಬುರ್ಗಿ, ಸೆಪ್ಟೆಂಬರ್ 5, 2017 ರಂದು ಹತ್ಯೆಯಾದ ಕೋಮು ಸೌಹಾರ್ದ ಚಳುವಳಿಯ ಕಾರ್ಯಕರ್ತೆ, ಪತ್ರಕರ್ತೆ ಗೌರಿ ಲಂಕೇಶ್ ಇವರೇ ಈ ವ್ಯಕ್ತಿಗಳು.

ಈ ನಾಲ್ವರ ಹತ್ಯೆಗಳು ಬಹುತೇಕ ಒಂದೇ ರೀತಿಯಲ್ಲಿ ಆಗಿವೆ. ಸಂಚು ಮಾಡಿ, ಹೊಂಚುಹಾಕಿ ಈ ಚಿಂತಕರ, ಸಾಮಾಜಿಕ ಕಾರ್ಯಕರ್ತರ ದೇಹಗಳಿಗೆ ಗುಂಡು ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಎಲ್ಲ ಹತ್ಯೆಗಳೂ ಬಹುತೇಕ ಒಂದೇ ರೀತಿಯ ಕಾರಣಕ್ಕೇ ಆಗಿವೆ. ಇವರೆಲ್ಲರೂ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ, ಜಾತಿತಾರತಮ್ಯ, ಅಸ್ಪೃಶ್ಯತೆಗಳನ್ನು ವಿರೋಧಿಸುತ್ತಿದ್ದರು. ಕೋಮುದ್ವೇಷವನ್ನು ನಿವಾರಿಸಿ ಸಮಾಜದಲ್ಲಿ ಸೌಹಾರ್ಧತೆಯನ್ನು ಸ್ಥಾಪಿಸಲು ಬಯಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ನಮ್ಮ ಸಮಾಜದಲ್ಲಿ ವೈಚಾರಿಕತೆಯ ಮೇಲೆ, ಚಿಂತಕರು, ವಿಚಾರವಾದಿಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿವೆ. ಅಸಹನೆ ತೀವ್ರವಾಗುತ್ತಿದೆ. ನಿರುದ್ಯೋಗ-ಬಡತನ ಮುಂತಾದ ಸಮಸ್ಯೆಗಳ ಕಾರಣದಿಂದ ಜನಸಾಮಾನ್ಯರಲ್ಲಿರುವ ಹೆಚ್ಚುತ್ತಿರುವ ಅತೃಪ್ತಿ, ಅಸಮಾಧಾನಗನ್ನು ಬಳಸಿಕೊಂಡು ಈ ಸಮಸ್ಯೆಗಳಿಗೆ ತಪ್ಪು ಕಾರಣಗಳನ್ನು ಮೂಲವೆಂದು ತೋರಿಸಿ ಅನ್ಯಮತ ದ್ವೇಷವನ್ನು ಪ್ರಚೋದಿಸಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡಲಾಗುತ್ತಿದೆ.

ಪ್ರಜಾಪ್ರಭುತ್ವದ ಮೂಲ ಅಡಿಪಾಯವಾದ ಮುಕ್ತ ಚಿಂತನೆ, ವೈಚಾರಿಕತೆಯ ಮೇಲೆ ಹಲ್ಲೆಗಳನ್ನು ಪ್ರಚೋದಿಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸೌಹಾರ್ದತೆ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಚಿಂತಕರ ಹತ್ಯೆಗಳು ನಡೆದಿವೆ. ಈ ಮೇಲೆ ಹೇಳಲಾದ ಎಲ್ಲ ಹತ್ಯೆಗಳೂ ಇಂತಹ ವಿಕೃತ ಪ್ರಚೋಧನೆಯ ಪರಿಣಾಮವೇ ಆಗಿವೆ.

ಪತ್ರಿಕೆಗಳು, ದೂರದರ್ಶನ ಚಾನೆಲ್ ಮುಂತಾದವು ಸೇರಿದ ಸಮೂಹ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲಾಗುತ್ತದೆ. ನಮ್ಮ ದೇಶದ ಸುಧೀರ್ಘ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳೆದು ಬಂದ ನಮ್ಮ ದೇಶದ ಪ್ರತ್ರಿಕಾ ರಂಗವು ದೇಶದಲ್ಲಿ ಸಾಮಾಜಿಕ ನ್ಯಾಯದ ಪ್ರತಿಪಾದನೆಯಲ್ಲಿ, ಮೌಢ್ಯ-ಕಂದಾಚಾರಗಳ ವಿರುದ್ಧ ವೈಜ್ಞಾನಿಕ ಮನೋಭಾವನ್ನು ಹರಡುವಲ್ಲಿ, ವೈಚಾರಿಕತೆಯನ್ನು ಬೆಳೆಸುವಲ್ಲಿ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿವೆ.

ಆದರೆ ಇತ್ತೀಚಿನ ವರ್ಷಗಳಲ್ಲಿ ಗಣನೀಯ ಭಾಗದ ಸಮೂಹ ಮಾಧ್ಯಮಗಳ ಧೋರಣೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿದಲ್ಲಿ ಇದೇ ಮಾತನ್ನು ಹೇಳುವುದು ಸಾಧ್ಯವಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ. ಡಾ. ಎಂ.ಎಂ. ಕಲ್ಬುರ್ಗಿಯವರ ಹತ್ಯೆಯಲ್ಲಿ ನಮ್ಮ ಪತಿಕಾ ಮಾಧ್ಯಮವು ಅತ್ಯಂತ ವೈಚಾರಿಕತೆಯನ್ನು, ಮಾಧ್ಯಮ ಪಾಲಿಸಲೇ ಬೇಕಾದ ನೈತಿಕತೆಯನ್ನು ಮರೆತು ಸುದ್ದಿ-ವಿಚಾರಗಳನ್ನು ತಪ್ಪು, ತಪ್ಪಾಗಿ, ವಿಕೃತವಾಗಿ ಬಿಂಬಿಸಿದ್ದು ಒಂದು ಕಾರಣ ಎಂದು ನಾವು ಬಹಳ ವಿಷಾದದಿಂದ ಗಮನಿಸಬೇಕಾಗಿದೆ.

ಕಲ್ಬುರ್ಗಿಯವರ ಹತ್ಯೆಗೆ ಕಾರಣವಾದ ಅಂಶಗಳನ್ನೇ ನಾವು ಒಮ್ಮೆ ಪರಿಶೀಲಿಸೋಣ. ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಭಾಂಗಣದಲ್ಲಿ ಅಖಿಲ ಕರ್ನಾಟಕ ವಿಚಾರವಾದಿಗಳ ವೇದಿಕೆಯು ಸಂಘಟಿಸಿದ್ದ, ವೈಚಾರಿಕತೆಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಕಲ್ಬುರ್ಗಿಯವರು ಡಾ.ಯು.ಆರ್. ಅನಂತ ಮೂರ್ತಿಯವರ ಬರಹದಲ್ಲಿ ಪ್ರಸ್ತಾಪವಾಗಿರುವ ವಿಚಾರವೊಂದನ್ನು ಸಾಂದರ್ಭಿಕವಾಗಿ ಪ್ರಸ್ತಾಪಿಸಿದರು.

`ಬೆತ್ತಲೆ ಫೂಜೆ ಏಕೆ ಕೂಡದು’ ಎಂಬ ಅನಂತಮೂರ್ತಿಯವರ ಪುಸ್ತಕದಲ್ಲಿ `ನನ್ನನ್ನು ಬೆಳಸಿದ ಕರ್ನಾಟಕ’ ಎಂಬ ಲೇಖನವೊಂದಿದೆ. ಅದರಲ್ಲಿ ಸ್ವಾತಂತ್ರ್ಯಪೂರ್ವದ ಆ ಕಾಲಘಟ್ಟದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೆಳೆದ ಆನಂತ ಮೂರ್ತಿಯವರು ತಮ್ಮ ಬಾಲ್ಯಕಾಲದ ಸಾಮಾಜಿಕ ಪರಿಸರವನ್ನು ವಿವರಿಸುತ್ತಾ, ದಟ್ಟ ಸಾಂಪ್ರದಾಯಿಕ ಸಮಾಜದಲ್ಲಿನ ಅನುಭವಗಳು, ಅಂತಹ ಸನ್ನಿವೇಶದಲ್ಲಿ ಶಿವರಾಮ ಕಾರಂತರ ಚೋಮನದುಡಿ, ಕುವೆಂಪು ಅವರ ಸಾಹಿತ್ಯ ಕೃತಿಗಳು, ತಂದೆಯವರು ತರಿಸುತ್ತಿದ್ದ ಮಹಾತ್ಮ ಗಾಂಧಿಯವರ ಸಂಪಾದಕತ್ವದ `ಹರಿಜನ’ ಪತ್ರಿಕೆಯ ಓದು, ಶಾಂತವೇರಿ ಗೋಪಾಲಗೌಡರ ವಿಚಾರಗಳು ಮುಂತಾದ ನಾನಾ ಪ್ರಭಾವಗಳಿಂದ ಹೊಸ ಚಿಂತನೆಗೆ ಮನಸ್ಸನ್ನು ತೆರೆದುಕೊಂಡದ್ದು, ಆ ಕಾಲಘಟ್ಟದಲ್ಲಿ ಹಲವು ಬಗೆಯ ಗೊಂದಲಗಳು ಅವರನ್ನು ಕಾಡಿದ್ದು ಎಲ್ಲವನ್ನು ವಿವರಿಸುತ್ತಾರೆ.

ಕರಾವಳಿಯಿಂದ ಬಂದ ಕಲಾವಿದರ ಯಕ್ಷಗಾನ, ತುಳುವರ ಕೋಲ ಇತ್ಯಾದಿಗಳ ಮೂಲಕ ಪುರಾಣ ಕಥಾನಕಗಳನ್ನು ನೋಡುತ್ತಾ, ಕೇಳುತ್ತಾ ಬೆಳೆಯುತ್ತಿದ್ದ ಕಾಲಘಟ್ಟದಲ್ಲಿ.., ಸುತ್ತ ಮುತ್ತಲ ಮರ, ಕಲ್ಲು, ನದಿ ಎಲ್ಲವೂ ಪವಿತ್ರ ಎಂಬಂತಹ ನಂಬಿಕೆಯಿದ್ದ ಪರಿಸರದಲ್ಲಿ…. ತಮ್ಮನ್ನು ತಾವು `ನಿರ್ ಪುರಾಣೀಕರಿಸಿಕೊಳ್ಳುವ’ ನಿಟ್ಟಿನಲ್ಲಿ, `ಏನಾದರೂ ತೀರಾ ಅಸಹಜವಾದದ್ದನೋ ಮಾಡಿ, ಕಲ್ಲು ಎನ್ನುವುದು ಬರಿ ಕಲ್ಲು- ಮರ ಎಂದರೆ ಮರ ಎಂದು ನನ್ನನ್ನು ನಾನು ನಂಬಿಸಿಕೊಳ್ಳುವುದು ಆಗಬೇಕಿತ್ತು’ ಅದಕ್ಕಾಗಿ, `ಜನರು ಬಹಳ ಪ್ರಭಾವಶಾಲಿ ಎಂದು ನಂಬುತ್ತಿದ್ದ ಮರದಡಿಯ ಭೂತದ ಕಲ್ಲೊಂದರ ಮೇಲೆ ಗುಟ್ಟಾಗಿ ಮೂತ್ರ ಮಾಡಿದೆ.’ ಎಂದು ಬರೆದುಕೊಂಡಿದ್ದಾರೆ. ಆನಂತರ `ಏನು ಶಿಕ್ಷೆ ಕಾದಿದೆಯೋ ಎಂದು ದಿಗಿಲಿನಲ್ಲೇ ಹಲವಾರು ದಿನಕಳೆದೆ’ ಎಂದೂ ಅವರು ಹೇಳಿಕೊಂಡಿದ್ದಾರೆ.

ತಮ್ಮ ಬಾಲ್ಯಕಾಲದಲ್ಲಿ, ಎಲ್ಲರಿಗೂ ಸಹಜವಾದ ಅಪಕ್ವ ಮನಸ್ಥಿತಿಯಲ್ಲಿ…, ಮನಸ್ಸು ವೈಚಾರಿಕತೆಗೆ ತೆರೆದುಕೊಳ್ಳುವ ಕಾಲಘಟ್ಟದಲ್ಲಿನ ಗೊಂದಲದ ಮನಸ್ಥಿತಿಯಲ್ಲಿ ತಾವು ಮಾಡಿದ ಕೆಲಸವೊಂದರ ಬಗೆಗೆ ಅನಂತಮೂರ್ತಿಯವರು ಹೇಳಿಕೊಂಡಿದ್ದಾರೆ. ಲೇಖನದಲ್ಲಿ ಅನಂತಮೂರ್ತಿಯವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿಲ್ಲ. ಅವರು ಸಮರ್ಥಿಸಿಕೊಳ್ಳುವಂಥವರೂ ಅಲ್ಲ.

ಚಳುವಳಿಕಾರರು ತಮ್ಮ ಹಲವಾರು ಪ್ರತಿಭಟನೆಗಳನ್ನು ನಡೆಸುವಾಗ ಸಾಂಕೇತಿಕ ಪ್ರತಿಭಟನೆಯ ಭಾಗವಾಗಿ ಹಲವು ವ್ಯಕ್ತಿಗಳ `ಭೂತದಹನ’ ಮಾಡುವುದು ತುಂಬಾ ಸಾಮಾನ್ಯ. ಆದರೆ ಅನಂತ ಮೂರ್ತಿಯವರು ಇಂತಹ ಸಾಂಕೇತಿಕ ಭೂತದಹನವನ್ನು ಸಹ ವಿರೋಧಿಸುತ್ತಿದ್ದವರು ಎಂಬುದನ್ನು ನಾವು ಗಮನಿಸಬೇಕು. ಇನ್ನೂ ಜನಸಾಮಾನ್ಯರು ಭಕ್ತಿಯಿಂದ ಗೌರವಿಸುವ ದೇವರನ್ನು ಅಪಮಾನಿಸುವುದನ್ನ ಸಮರ್ಥಿಸುವರೇ ? ಸಾರ್ವಜನಿಕ ಸಮಾರಂಭದಲ್ಲಿ ಸಾಂದರ್ಭಿಕವಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕಲ್ಬುರ್ಗಿಯವರೂ ಸಹ ಅನಂತ ಮೂರ್ತಿಯವರ ಈ ಕೆಲಸವನ್ನು ಸಮರ್ಥಿಸಲಿಲ್ಲ ಎಂಬುದನ್ನು ಸಹ ಗಮನಿಸಬೇಕು.

ಆದರೆ ಕೆಲವು ಪತ್ರಿಕೆಗಳಲ್ಲಿ ಸಮಯ, ಸಂದರ್ಭದ ಯಾವ ಹಿನ್ನೆಲೆ ಮುನ್ನೆಲೆಯನ್ನು ಗಮನಕ್ಕೆ ತೆಗೆದುಕೊಳ್ಳದೇ, ಮಾತಿನ ಸರಿಯಾದ ಅರ್ಥವನ್ನು ಬಿಂಬಿಸದೇ, ಅನಂತಮೂರ್ತಿಯವರು ದೇವರ ಮೂರ್ತಿಯ ಮೇಲೆ ಮೂತ್ರ ಮಾಡಿದ್ದಾಗಿ ಬರೆದುಕೊಂಡಿದ್ದಾರೆ ಎಂಬಂತೆ ಮತ್ತು ಕಲ್ಬುರ್ಗಿಯವರು ಅದನ್ನು ಸಮರ್ಥಿಸಿ ಇಂಥ ಪ್ರಯೋಗ ನಡೆಸಲು ಕರೆ ನೀಡಿದ್ದಾರೆ ಎಂಬಂತೆ ಬಿಂಬಿಸಲಾಯಿತು. ಕಲ್ಬುರ್ಗಿಯವರಿಗೆ `ಹಿಂದೂ ವಿರೋಧಿ’ ಎಂಬ ಹಣೆಪಟ್ಟಿ ಹಚ್ಚಲಾಯಿತು.

ನಂತರ ನಡೆದ ದುರಂತ ಈಗ ಎಲ್ಲರಿಗೂ ತಿಳಿದದ್ದು. ಅನಂತ ಮೂರ್ತಿಯವರ ಬರಹ ವಿಚಾರವನ್ನು ನಾವು ಒಪ್ಪಬಹುದು ಅಥವಾ ಒಪ್ಪದೇ ಇರಬಹುದು. ಕಲ್ಬುರ್ಗಿಯವರ ಮಾತು, ವಿಚಾರಗಳನ್ನು ನಾವು ಒಪ್ಪಬಹುದು ಒಪ್ಪದಿರಬಹುದು. ಆದರೆ ಆ ಕಾರಣಕ್ಕಾಗಿ ಒಬ್ಬ ಘನ ವಿದ್ವಾಂಸನ ಕೊಲೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಇದಕ್ಕೆ ಕಾರಣವಾದ ಮಾಧ್ಯಮಗಳ ಪಾತ್ರವನ್ನೂ ಮರೆಯಲಾಗದು.

ಕೊನೆಯಲ್ಲಿ ಒಂದು ವಿಷಯ ಗಮನಿಸಬೇಕು. ಕಲ್ಬುರ್ಗಿಯವರು ನಾಸ್ತಿಕರಾಗಿರಲಿಲ್ಲ. ಅವರು ಆಸ್ತಿಕರಾಗಿದ್ದರು. ದೇವರಲ್ಲಿ ನಂಬಿಕೆ ಇಟ್ಟವರಾಗಿದ್ದರು. ಮತಾಂಧತೆ, ವಿವೇಕ ಹೀನ ದ್ವೇಷ ಒಬ್ಬ ಅಪರೂಪದ ಸಂಶೋಧಕನ ಹತ್ಯೆಗೆ ಕಾರಣವಾಗಿದ್ದು ಮಾತ್ರ ದುರಂತ. ಇಂತಹ ದುರಂತಗಳು ಮತ್ತೆ ಸಂಭವಿಸದಂತಹ ಎಚ್ಚರಿಕೆಯನ್ನು ಎಲ್ಲರೂ ವಹಿಸಬೇಕು. ಭಿನ್ನಾಭಿಪ್ರಾಯಗಳಿದ್ದಲ್ಲಿ ಆರೋಗ್ಯಕರ ಟೀಕೆ-ಸಂವಾದಗಳ ಮೂಲಕ ಅದನ್ನು ಬಗೆಹರಿಸಿಕೊಳ್ಳಲು ಅವಕಾಶ ನೀಡುವ ಪ್ರಜಾಪ್ರಭುತ್ವ ಮೌಲ್ಯಗಳು ಉಳಿಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending