Connect with us

ಅಂತರಂಗ

ಲಕ್ಷ್ಮಿನಾರಾಯಣ ಭಟ್ಟರಿಗೊಂದು ಭಾವ ನಮನ

Published

on

  • ನಾಗರಾಜ ಸಿರಿಗೆರೆ,ಕನ್ನಡ ಅದ್ಯಾಪಕರು,ದಾವಣಗೆರೆ

ಮಸ್ಕಾರ ಸರ್,
ತಮಗೆ ನೆನಪಿದೆಯ ಸರ್, ಅದು 90ರ ದಶಕ. ನಮ್ಮೂರಿನಲ್ಲಿ ಮೈಸೂರು ಮಲ್ಲಿಗೆಯ ಕವಿ ನರಸಿಂಹಸ್ವಾಮಿಯವರಿಗೆ ಅಭಿನಂದನಾ ಸಮಾರಂಭ. ಅಭಿನಂದನಾ ಭಾಷಣ ಮಾಡಲು ತಮ್ಮನ್ನು ಆಹ್ವಾನಿಸಲು ಮನೆಗೆ ಬಂದಿದ್ದೆ. ಆಗ ತಮ್ಮ ಮಗನ ಮದುವೆ ಸಂಭ್ರಮದಲ್ಲಿದ್ದೀರಿ. ಹಾಗಾಗಿ ತಾವು ಬಾರದೆ, ಮತ್ತೋರ್ವ ಕವಿ ವ್ಯಾಸರಾಯರನ್ನು ಒಪ್ಪಿಸಿ, ಕಳುಹಿಸಿಕೊಟ್ಟಿದ್ದಿರಿ.

ಅಲ್ಲಿಂದ ನನಗೆ ತಮ್ಮೊಡನೆ ಒಂದಿಷ್ಟು ನೇರವಾದ ಒಡನಾಟ ಬೆಳೆದಿತ್ತು. ಅದಕ್ಕೂ ಮೊದಲು ತಮ್ಮ ಭಾವಗೀತೆಗಳ ಮೂಲಕ, ವಿಶೇಷವಾಗಿ `ಭಾವ ಸಂಗಮ”ದ ಮಾಧುರ್ಯದ ಗುಂಗು ತಲೆತುಂಬಿತ್ತು. ಅಲ್ಲಿರುವ ಮಾಸ್ತಿ, ಕುವೆಂಪು, ಅಡಿಗ, ಡಿವಿಜಿಯವರ ಗೀತೆಗಳು ನನ್ನನ್ನು ಭಾವಪರವಶ ಮಾಡಿದ್ದು ಸುಳ್ಳಲ್ಲ. ಒಂದೊಂದು ಗೀತೆಯೂ ಅಮರ ಮಧುರ. ಆಗಿನ್ನು ನಾನು ಬಿ ಎ ತರಗತಿಯ ವಿದ್ಯಾರ್ಥಿ. ತಾವು ಹೊರತಂದ `ಸಮ್ಮಿಲನ’ ಧ್ವನಿ ಸುರಳಿಯ ಪರಿಚಯ ಪತ್ರಿಕೆಯಲ್ಲಿ ಓದಿದ್ದೆ.

ಅದನ್ನು ಖರೀದಿಸಲು ದಾವಣಗೆರೆಯ ಕ್ಯಾಸೆಟ್ ಅಂಗಡಿಗಳನ್ನೆಲ್ಲ ಸುಡು ಬಿಸಿಲಲ್ಲಿ ತಿರುಗಿದ್ದೆ. ಗಾಂಧಿ ಸರ್ಕಲ್ ಮೂಲೆಯ ಕ್ಯಾಸೆಟ್ ಅಂಗಡಿ ಮಾಲಿಕ ನನ್ನ ಕುತೂಹಲ, ಆಸಕ್ತಿಯನ್ನು ಅರಿತು ಆ ಕ್ಯಾಸೆಟ್ಟನ್ನು ನನಗಾಗಿ ತರಿಸಿಕೊಟ್ಟಿದ್ದ. ಅದರಲ್ಲಿ ಕನ್ನಡದ ಹೆಸರಾಂತ ಹತ್ತು ಜನ ಕವಿಗಳ ಕವಿತಾ ವಾಚನ ಅದ್ಬುತ. ಅದರಲ್ಲಿ ಸ್ವತಃ ಪುತಿನ, ಅಡಿಗ, ನರಸಿಂಹಸ್ವಾಮಿಯವರು ತಮ್ಮ ವೃದ್ಧಾಪ್ಯದಲ್ಲೂ ಒಂದೊಂದು ಕವನವನ್ನು ವಾಚಿಸಿದ್ದರು, ತಾವೂ ಸೇರಿದಂತೆ ಜಿ ಎಸ್ ಎಸ್, ಕಂಬಾರ, ನಿಸಾರ್, ಬಿ ಆರ್ ಎಲ್, ಎಚ್ ಎಸ್ ವಿ, ಸಿದ್ಧಲಿಂಗಯ್ಯನವರ ಎರಡೆರಡು ಕವಿತೆಗಳ ವಾಚನದ ಅಪೂರ್ವ ಸಂಗ್ರಹ ಅದು.

ಆ ಧ್ವನಿ ಸುರಳಿಯನ್ನು ನಾನು ನೂರಾರು ಸಲ ಕೇಳಿ, ಆ ಕವಿತೆಗಳೆಲ್ಲ ಬಾಯಿಪಾಠವಾಗಿದ್ದವು. ನಿಮ್ಮನ್ನು ಭೇಟಿಯಾದಾಗಲೆಲ್ಲ ಇದರ ಮುಂದುವರಿದ ಭಾಗವಾಗಿ, ಬೇಂದ್ರೆ, ಕುವೆಂಪು, ಮಾಸ್ತಿ, ಡಿವಿಜಿ, ರಾಜರತ್ನಂ ಮುಂತಾದ ಹಿರಿಯ ತಲೆಮಾರಿನ ಕವಿಗಳ ಧ್ವನಿ ಸಂಗ್ರಹವನ್ನು ಹೊರತನ್ನಿ ಎಂದು ಒತ್ತಾಯಿಸುತ್ತಿದ್ದೆ. ಈ ದಿಗ್ಗಜರ ಕವನ ವಾಚನದ ಶೈಲಿ ಕೇಳಬೇಕೆಂಬ ಹಂಬಲ. (ಆಗ ಈಗಿನಂತೆ ಗೂಗಲ್ ಯೂಟ್ಯೂಬ್ ಗಳು ಇಲ್ಲದ ಕಾಲ).

ಇದನ್ನೂ ಓದಿ |ಕವಿತೆ | ಬೆಳಕು ಕತ್ತಲ ನಡುವೆ

ಆದರೆ ಈ ದಿಗ್ಗಜರ ಕವಿತೆಗಳ ವಾಚನದ ಧ್ವನಿಮುದ್ರಣದ ಹಕ್ಕುಗಳನ್ನು ಆಕಾಶವಾಣಿಯಿಂದ ಪಡೆಯುವುದು ಅಷ್ಟು ಸುಲಭವಿರಲಿಲ್ಲ. ಆದರೆ ತಾವು ಹೇಳಿದ ತಾಂತ್ರಿಕ ಕಾರಣಗಳಿಗಿಂತಲೂ ವ್ಯಾವಹಾರಿಕ ಕಾರಣಗಳು ಹೆಚ್ಚಾಗಿದ್ದವು. ಧ್ವನಿಸುರಳಿಗಳ ಕಾಲ ಮುಗಿದು ಸಿಡಿಗಳ ಕಾಲ ಬಂದಾಗ ತಮ್ಮನ್ನು ಭೇಟಿ ಮಾಡಿ, `ಸಮ್ಮಿಲನ’ ಕ್ಯಾಸೆಟ್ಟನ್ನು ಸಿಡಿಗೆ ಪರಿವರ್ತಿಸಲು ಕೇಳಿಕೊಂಡೆ. ಈಗಲೂ ತಾಂತ್ರಿಕ ಕಾರಣಗಳಿಗಿಂತಲೂ ವ್ಯಾವಹಾರಿಕ ಕಾರಣಗಳೇ ಇದ್ದವು.

ತಾವು ಸಾಹಿತ್ಯ ಅಕಾಡಮಿ ಸದಸ್ಯರಾದಾಗ ಕವಿಗಳ ಕವನ ವಾಚನದ ಧ್ವನಿ ಸುರಳಿಗಳನ್ನು ಹೊರತರುವ ಯೋಜನೆಯನ್ನು ಪ್ರಸ್ತಾಪಿಸಿದಾಗ ಬಹುಸಂಖ್ಯಾತ ಸದಸ್ಯರು `ಇದೊಂದು ವ್ಯಾವಹಾರಿಕ ಯೋಜನೆ’ ಎಂದು ನಿಮ್ಮನ್ನು ಗೇಲಿ ಮಾಡಿದವರುಂಟು. ಆದರೆ ನಮ್ಮಂತಹ ಕಾವ್ಯ ಕುತೂಹಲಿಗಳಿಗೆ, ಶಾಲೆಯಲ್ಲಿ ಪಾಠ ಮಾಡುವ ಕನ್ನಡ ಮೇಷ್ಟ್ರುಗಳಿಗೆ ಆ ಧ್ವನಿ ಸುರುಳಿಯ ಮಹತ್ವ, ಅದು ಎಷ್ಟು ಉಪಯೋಗ ಎಂಬುದು ಅಕಾಡಮಿಕ್ ಬುದ್ಧಿಜೀವಿಗಳಿಗೆ ತಿಳಿಯದೆ ಹೋಯಿತು. (ಆದರೆ ಇತ್ತೀಚಿನ ದಿನಗಳಲ್ಲಿ ಅಕಾಡಮಿಯಿಂದ ಕವಿಗಳ ಕಾವ್ಯ ವಾಚನದ ಯೋಜನೆ ಜಾರಿಗೆ ಬಂದು, ಒಂದಿಷ್ಟು ಕವಿಗಳ ಸಿಡಿಗಳು ಹೊರಬಂದವು.

ಆದರೆ ಅವು ಜನಪ್ರಿಯವಾಗಲಿಲ್ಲ. ಅದಕ್ಕೆ ಕಾರಣ 20-30 ವರ್ಷಗಳ ಹಿಂದಿನ ಕಾವು ಸಾಹಿತ್ಯಕ ವಾತಾವರಣ ಈಗ ಇಲ್ಲದೆ ಇರುವುದು) ಸರ್ ತಮ್ಮದು ಬಹುಮುಖ ಪ್ರತಿಭೆ. ಆಬಾಲ ವೃದ್ಧರಾದಿಯಾಗಿ ತಮ್ಮ ಸಾಹಿತ್ಯ ಅಚ್ಚುಮೆಚ್ಚು. `ಬಾಳ ಒಳ್ಳೇರು ನಮ್ಮ ಮಿಸ್, ಏನ್ ಕೇಳಿದರೂ ಎಸ್ಸೆಸ್, ನಗ್ತ ನಗ್ತಾ ಮಾತಾಡ್ತಾರೆ, ಸ್ಕೂಲಿಗೆಲ್ಲಾ ಫೇಮಸ್’… ಎಂಬ ಬಾಲಾಭಾಷೆಯ ನರ್ಸರಿ ಮಕ್ಕಳ ಶಿಶುಗೀತೆಯಿಂದ ಹಿಡಿದು ಶೂದ್ರಕನ ಮೃಚ್ಛಕಟಿಕದವರೆಗೆ ತಮ್ಮ ಸಾಹಿತ್ಯದ ಹರವು.

ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷೆ, ಸಾಹಿತ್ಯದಲ್ಲಿ ಅಪಾರ ಒಲವು. ಹಾಗಾಗಿ ಕುಮಾರವ್ಯಾಸ-ಕಾಳಿದಾಸ-ಶರೀಫರಿಂದ ಏಟ್ಸ್, ಇಲಿಯೆಟ್, ಶೇಕ್ಸ್ ಫಿಯರ್ ತನಕ ತಮ್ಮ ಬರಹದ ಜಾಡು. ಕನ್ನಡಿಗರ ಪಾಲಿಗೆ ಅಜ್ಞಾತವಾಸದಲ್ಲಿದ್ದ ಶರೀಫ್ ಸಾಹೇಬರನ್ನು ಮತ್ತು ಅವರ ತತ್ತ್ವಪದಗಳನ್ನು ಮೊದಲ ಸಲ ಹೊರ ಜಗತ್ತಿಗೆ ಪರಿಚಯಿಸಿದ ಕೀರ್ತಿ ತಮ್ಮದು.

ಕನ್ನಡದಲ್ಲಿ ನವ್ಯ ಪರಂಪರೆ ವಿಜೃಂಭಿಸುತ್ತಿದ್ದ ಕಾಲದಲ್ಲಿ ಗೇಯ ಪದ್ಯಗಳನ್ನು ಬರೆದು ಸುಗಮ ಸಂಗೀತ ಲೋಕಕ್ಕೆ ನೀಡಿದ ಕಾಣಿಕೆ ಅನನ್ಯ. `ನಿಂತ ನೀರ ಕಲಕಬೇಡಿ’ , ಎಲ್ಲಿ ಜಾರಿತೋ ಮನವು, ಯಾರು ಜೀವವೆ ಯಾರು ಬಂದವರು, ನಡೆದಿದೆ ಪೂಜಾರತಿ, ಬಾರೆ ನನ್ನ ದೀಪಿಕಾ ಮಧುರ ಕಾವ್ಯ ರೂಪಕ, ಈ ಭಾನುಈ ಚುಕ್ಕಿ ಈ ಹೂವು, ಮಲಗು ಮಲಗೆನ್ನ ಮರಿಯೇ, ಬನ್ನಿ ಭಾವಗಳೆ ಬನ್ನಿ ….. ಹೀಗೆ ಒಂದೇ ಎರಡೇ ನಿಮ್ಮ ಜನಪ್ರಿಯ ಭಾವಗೀತೆಗಳು.

ಬಹಳ ಮುಖ್ಯವಾಗಿ ಹೇಳಲೇಬೇಕಾದ ಸಂಗತಿಯೆಂದರೆ, ತಮ್ಮ `ಸಾಹಿತ್ಯ ರತ್ನ ಸಂಪುಟ’ ಕುರಿತು. ಈ ಸಂಪುಟದಲ್ಲಿರುವ ಮೂವತ್ತೈದಕ್ಕೂ ಹೆಚ್ಚು ಹೊಸಗನ್ನಡ ಸಾಹಿತಿಗಳ ವ್ಯಕ್ತಿಚಿತ್ರಣಗಳ ಶೈಲಿ ಅಪೂರ್ವವಾದುದು. ಸಾಹಿತಿಗಳ ಬಗ್ಗೆ ಸ್ವಾರಸ್ಯಕರವಾದ ಅಪಾರ ಮಾಹಿತಿಗಳನ್ನೊಳಗೊಂಡ ಕೃತಿಕರಂಡ ಇದು.

ಪ್ರತಿ ಸಾಹಿತಿಯ ವ್ಯಕ್ತಿಚಿತ್ರಣದ ಕೊನೆಗೆ ತಾವೇ ಬರೆದ ಅಥವಾ ಇತರೆಯವರು ಬರೆದ ಕವಿತೆಯನ್ನು ದಾಖಲಿಸಿದ್ದೀರಿ. ಆಮೂಲಕ ವ್ಯಕ್ತಿಚಿತ್ರ ಬರಹಕ್ಕೊಂದು ಸುವರ್ಣ ಚೌಕಟ್ಟಿನ ಹೊಸತನವನ್ನು ತೋರಿದ್ದೀರಿ. ಮತ್ತೊಂದು ಸಂಗತಿಯೆಂದರೆ, `ಕನ್ನಡ ಸಾಹಿತ್ಯ ಚರಿತ್ರೆ’ಯನ್ನು ಸಿಡಿ ರೂಪದಲ್ಲಿ ಹೊರತಂದಿರುವುದು. ಇದನ್ನು ಪ್ರಯಾಣ ಮಾಡುವಾಗಲು ಕೇಳುತ್ತಾ, ಕನ್ನಡ ಸಾಹಿತ್ಯದ ಸೊಬಗನ್ನು ಆಸ್ವಾದಿಸಬಹುದು.

ಮರೆತೇ ಹೋಗಿದ್ದ ಇನ್ನಂದು ಸಂಗತಿ: ಹೊಸಗನ್ನಡದ ಮುಂಗೋಳಿ ಎನಿಸಿದ್ದ ಮುದ್ದಣನ ಪತ್ನಿ ಕಮಲಾಬಾಯಿಯವರನ್ನು ತಾವು ಕಂಡಿರುವುದು. ಮುದ್ದಣ-ಮನೋರಮೆ ಕನ್ನಡಿಗರ ಪಾಲಿನ ಅನನ್ಯ ಸರಸ ದಂಪತಿಗಳು. ಆತ ಕ್ಷಯ ರೋಗಕ್ಕೆ ಬಲಿಯಾಗಿ ತನ್ನ 31ನೆಯ ವಯಸ್ಸಿನಲ್ಲಿ (1870-1901) ಇಹಲೋಕ ತ್ಯಜಿಸಿದವನು. ಆದರೆ ಆ ವಯಸ್ಸಿಗೆ ಅಮೂಲ್ಯ ಕಾಣಿಕೆಯನ್ನು ಕನ್ನಡಿಗರಿಗೆ ನೀಡಿರುವುದನ್ನು ಮರೆಯಲಾಗದು. `ಪದ್ಯಂ ವದ್ಯ ಗದ್ಯಂ ಹೃದ್ಯಂ’ ಎಂಬ ನಾಣ್ಣುಡಿ ಕೊಟ್ಟು ಗದ್ಯದ ಆಪ್ತತೆ ಬಗ್ಗೆ ಹೇಳಿದ ಮುದ್ದಣ ಹೊಸ ತಲೆಮಾರಿಗೆ ಕೃತಿಗಳ ಮೂಲಕ ಮಾತ್ರ ಪರಿಚಿತ.

ಆದರೆ ತಾವು ಬಾಲಕರಾಗಿದ್ದಾಗ ಶಿವಮೊಗ್ಗದ ತಮ್ಮ ಮನೆಯ ಹತ್ತಿರ ಮುದ್ದಣನ ಸಂಬಂಧಿಕರ ಮನೆ ಇದ್ದುದರ ಬಗ್ಗೆ ಒಂದು ಲೇಖನದಲ್ಲಿ ಬರೆದಿದ್ದಿರಿ. ಮತ್ತು ಆ ಮನೆಯಲ್ಲಿ ಇದ್ದ ಮುದುಕಿಯನ್ನು ಕುರಿತು ಪ್ರಸ್ತಾಪಿಸಿ, ಆ ಮುದುಕಿಯೇ ಮುದ್ದಣನ ಮಡದಿ ಕಮಲಾಬಾಯಿ ಎಂಬುದನ್ನು ಪತ್ತೆಮಾಡಿ ಉಲ್ಲೇಖಿಸಿದ್ದಿರಿ. ನಿಜಕ್ಕೂ ಇದೊಂದು ಸೋಜಿಗದ ಸಂಗತಿಯಲ್ಲವೇ?

ಹೀಗೆ ತಮ್ಮ ಕನ್ನಡ ಸೇವೆಯ ಬಗ್ಗೆ ಹೇಳುತ್ತಾ ಹೋದರೆ ಪುಟಗಳು ಮೀರಿ ಹೊತ್ತಿಗೆಯಾಗಬಲ್ಲದು. ಅದರೂ ಕೊನೆಯಲ್ಲಿ ಹೇಳಲೇಬೇಕಾದ ಸಂಗತಿ ಎಂದರೆ, ತಮ್ಮ ಅಗಲಿಕೆಯ ಹಿಂದಿನ ದಿನವೆ (ಶುಕ್ರವಾರ, ಮಾರ್ಚ್ ಆರು) ನಾನು ಎಂಟನೆಯ ತರಗತಿ ಮಕ್ಕಳಿಗೆ ತಮ್ಮ ಪರಿಚಯ ಮಾಡಿದ್ದೆ. ತಮ್ಮ `ಸಾಹಿತ್ಯ ರತ್ನ ಸಂಪುಟ’ದಿಂದ ಆಯ್ದ ಡಿವಿಜಿಯವರನ್ನು ಕುರಿತ ` ಸಾರ್ಥಕ ಬದುಕಿನ ಸಾಧಕ’ ಎಂಬ ಪಾಠ ಬೋಧನೆಯ ಸಂದರ್ಭ.

ಹಳ್ಳಿಗಾಡಿನ ಮಕ್ಕಳಿಗೆ ಕವಿಗಳನ್ನು, ಲೇಖಕರನ್ನು ಪರಿಚಯಿಸಬೇಕೆಂದರೆ ಮಕ್ಕಳ ಬೌದ್ಧಿಕ ಮಟ್ಟಕ್ಕೆ ತಕ್ಕಂತೆ ಇರಬೇಕು. ಹಾಗಾಗಿ `ಬಾಳ ಒಳ್ಳೇರು ನಮ್ಮ ಮಿಸ್, ಏನ್ ಕೇಳಿದರೂ ಎಸ್ಸೆಸ್, ನಗ್ತ ನಗ್ತಾ ಮಾತಾಡ್ತಾರೆ, ಸ್ಕೂಲಿಗೆಲ್ಲಾ ಫೇಮಸ್…ಎಂಬ ಶಿಶುಗೀತೆ ಹೇಳಿ, ತಮ್ಮೊಂದಿಗೆ ನಾನು ತೆಗೆಸಿಕೊಂಡಿರುವ ಭಾವಚಿತ್ರವನ್ನು ತೋರಿಸಿದಾಗ ಆ ಮಕ್ಕಳ ಮುಖಗಳಲ್ಲಿ ಅರಳಿದ ಮಂದಹಾಸ ಅವರ್ಣನೀಯ.
ಲಕ್ಷ್ಮಿನಾರಾಯಣ ಭಟ್ ಸರ್, ತಾವು ಒಂದೂವರೆ ವರ್ಷದವರಿದ್ದಾಗಲೇ ತಮ್ಮ ತಂದೆ ತೀರಿದ್ದರು.

ಮುಂದೆ ತಾಯಿಯ ಆಶ್ರಯದಲ್ಲಿ ಬೆಳೆದು, ಮೈಸೂರಿನಲ್ಲಿ ವಾರಾನ್ನದ ವಿದ್ಯಾರ್ಥಿಯಾಗಿ ವಿದ್ಯೆ ಸಂಪಾದಿಸಿದಿರಿ. ಮುಂದೆ ಕನ್ನಡ ಸಾರಸ್ವತ ಲೋಕದಲ್ಲಿ ಮಾಸದ ಹೆಜ್ಜೆ ಗುರುತು ಮೂಡಿಸಿದ ಸಾಧಕರಾಗಿದ್ದೀರಿ. ಯಾರು ಏನೇ ಹೇಳಲಿ, ತಮ್ಮನ್ನು ಕ್ಯಾಸೆಟ್ ಕವಿ ಎಂದು ಗೇಲಿ ಮಾಡಲಿ! ಆದರೆ ತಾವು ಕನ್ನಡಿಗರಿಗೆ ಭಾವಗೀತೆಯ ಗುಂಜಾರವದ ಹುಚ್ಚ್ವನ್ನು ಹಚ್ಚಿಸಿದ್ದು ಮಾತ್ರ ಕರೆ. ಗುರು ಗೋವಿಂದ ಮತ್ತು ಶರೀಫರ ಭಾವೈಕ್ಯದ ತೇರಿಗೆ ಮಿಣೆ ಹಚ್ಚಿ ನಾಡ ತುಂಬ ಎಳೆದಿರಿ. ತಮ್ಮೀ ಕನ್ನಡದ ಕಲಿತನಕೆ ಶರಣು ಶರಣು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ5 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ6 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ6 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending