Connect with us

ದಿನದ ಸುದ್ದಿ

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

Published

on

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha Malikarjun) ತಿಳಿಸಿದರು.

ಅವರು ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು (Dr.Prabha Malikarjun) ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಅವರು (Dr.Prabha Malikarjun) ಶ್ಲಾಘಿಸಿದರು.

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ. ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಮಾಡಿದೆ ಎಂದು ಸಂಸದರು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಅವರು ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು (Dr.Prabha Malikarjun) ಮೆಚ್ಚುಗೆ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರೀತಿ ಟಿ.ಎಸ್ ಇವರು ಎರಡು ಗೋಲ್ಡ್ ಮೆಡಲ್ ಪಡೆಯುವ ಮೂಲಕ ಎಂಎ ಜರ್ನಲಿಸಂ ಅಲ್ಲಿ ಪದವಿಧರರಾಗಿದ್ದಾರೆ. ಸುದ್ದಿ ದಿನ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂಭತ್ತು ವರ್ಷಗಳಿಂದ ಪ್ರಿಂಟ್, ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ದೇಶ ವಿದೇಶದ ಸುದ್ದಿಗಳ ಜೊತೆಗೆ ಜಿಲ್ಲಾ, ತಾಲೂಕು, ಗ್ರಾಮೀಣ ಮಟ್ಟದ ಸುದ್ದಿಗಳ ಕುರಿತು ಇವರಿಗೆ ಹೆಚ್ಚಿನ ಆಸಕ್ತಿ ಇದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಹಿಡಿದು ಅಂತಾರಾಷ್ಟ್ರೀಯ ಮಟ್ಟದ ಮಾಹಿತಿಯನ್ನು ಹೆಕ್ಕಿ ತೆಗೆಯುವುದರಲ್ಲಿ ಇವರಿಗೆ ನೈಪುಣ್ಯತೆ ಇದೆ. ಅಪರಾಧ (ಕ್ರೈಮ್) ಲೋಕದ ಬಗ್ಗೆಯೂ ಬರೆಯುತ್ತಿದ್ದಾರೆ. ಕ್ರೀಡಾ ಲೋಕದ ಇಂಟ್ರೆಸ್ಟಿಂಗ್ ಮಾಹಿತಿಯನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ವೈರಲ್ ಸುದ್ದಿಗಳ ಅಸಲೀಯತ್ತು ಕೆದಕುವುದು ಇವರ ನೆಚ್ಚಿನ ಕಾರ್ಯಗಳಲ್ಲಿ ಒಂದು.. ಸುದ್ದಿ ವಿಭಾಗದಲ್ಲಿ ವಿಶ್ವಾಸಾರ್ಹ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಹವ್ಯಾಸಿ ರಂಗಭೂಮಿ ಸ್ಕ್ರಿಪ್ಟ್ ಬರಹಗಾರ್ತಿ, ಪ್ರವಾಸ ಕೈಗೊಳ್ಳುವುದು, ಚಿತ್ರಕಲೆ, ಓದುವುದು, ಅಂಕಣ ಬರವಣಿಗೆ ಹಾಗೂ ವಾಯ್ಸ್ ಓವರ್ ಗಳನ್ನು ಕೊಡುವುದು ಇವರ ಹವ್ಯಾಸ.

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ19 hours ago

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app...

ದಿನದ ಸುದ್ದಿ20 hours ago

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ,...

ದಿನದ ಸುದ್ದಿ2 days ago

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ...

ದಿನದ ಸುದ್ದಿ5 days ago

ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ...

ದಿನದ ಸುದ್ದಿ5 days ago

ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...

ದಿನದ ಸುದ್ದಿ1 week ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ1 week ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ1 week ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ1 week ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ1 week ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

Trending