Connect with us

ದಿನದ ಸುದ್ದಿ

ದೇಶದ ಅಭಿವೃದ್ಧಿ ಸಾರ್ವತ್ರಿಕ ಶಿಕ್ಷಣ ಅಗತ್ಯ : ಡಾ.ಪ್ರಕಾಶ್ ಸಿ.ಎಂ

Published

on

ಸುದ್ದಿದಿನ,ಹರಿಹರ:ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಜನರ ವೈಯಕ್ತಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೆಚ್ಚಿಸಲು, ಭಾವನಾತ್ಮಕ ಮತ್ತು ಸಾಮಾಜಿಕ ಬೆಳವಣಿಗೆಯ ಸಮಾನವಾದ ಅವಕಾಶ ಕಲ್ಪಿಸಲು ಸಾರ್ವತ್ರಿಕ ಶಿಕ್ಷಣ ಅಗತ್ಯ ಎಂದು ಚಳ್ಳಕೆರೆಯ ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಸಹಪ್ರಾಧ್ಯಾಪರಾದ ಡಾ.ಪ್ರಕಾಶ್ ಸಿ.ಎಂ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮತ್ತು ಐ.ಕ್ಯೂ.ಎಸ್.ಸಿ ಸಹಯೋಗದಲ್ಲಿ ಕಾಲೇಜಿನಲ್ಲಿ ಜರುಗಿದ ‘ಜಾಗತೀಕರಣ: ಮಹಿಳೆ ಮತ್ತು ಸಾಮಾಜಿಕ ನ್ಯಾಯ’ ಎಂಬ ವಿಶೇಷ ಉಪನ್ಯಾಸ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿಯಾಗದ, ಅಭಿವೃದ್ಧಿಶೀಲ ಮತ್ತು ಅಭಿವೃದ್ಧಿ ಹೊಂದಿದ ದೇಶಗಳ ನಡುವಿನ ಪ್ರಮುಖ ವ್ಯತ್ಯಾಸವೆಂದರೆ ಆಯಾ ದೇಶದ ಜನಸಂಖ್ಯೆಗೆ ಒದಗಿಸಲಾಗುವ ಶಿಕ್ಷಣದ ಮಟ್ಟ ಮತ್ತು ಗುಣಮಟ್ಟವಾಗಿದೆ. ಶಿಕ್ಷಣದ ಹಕ್ಕುನ್ನು ಹಲವಾರು ದೇಶಗಳು ಮೂಲಭೂತ ಮಾನವ ಹಕ್ಕು ಎಂದು ಗುರುತಿಸಿವೆ. ಶಿಕ್ಷಣ ಮತ್ತು ದೇಶದ ಅಭಿವೃದ್ಧಿಯ ನಡುವೆ ನಿರಾಕರಿಸಲಾಗದ ಸಂಬAಧವನ್ನು ಹೊಂದಿದೆ ಎಂದು ಹೇಳಿದರು.

ಲಿಂಗ ತಾರತಮ್ಯ ಎಂದರೆ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಕಾನೂನು ಸಂದರ್ಭಗಳಲ್ಲಿ ಎಲ್ಲಾ ಲಿಂಗಗಳ ವ್ಯಕ್ತಿಗಳನ್ನು ನ್ಯಾಯಯುತವಾಗಿ ಮತ್ತು ಸಮಾನವಾಗಿ ನಡೆಸಿಕೊಳ್ಳದೆ ಇರುವುದು. ಮಹಿಳೆಯರು ತಮ್ಮ ಜೀವನ, ಸುರಕ್ಷತೆ ಮತ್ತು ಯೋಗಕ್ಷೇಮದ ಮೇಲೆ ನೇರವಾಗಿ ಪರಿಣಾಮ ಬೀರುವ ನಿರ್ಧಾರ ತೆಗೆದುಕೊಳ್ಳುವ ಪಾತ್ರಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ ಎಂದು ಡಾ.ಪ್ರಕಾಶ್ ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಮಾತನಾಡಿ, ಉನ್ನತ ಶಿಕ್ಷಣದ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುವವರು ಸಂಶೋಧನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಾಮಾಜಿಕ ವ್ಯವಸ್ಥೆಯಲ್ಲಿ ಪರಿವರ್ತನೆ ತರುವಲ್ಲಿ ಶ್ರಮಿಸಬೇಕು. ಮುಂದಿನ ಪೀಳಿಗೆಯ ಸಂಶೋಧಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಅಧ್ಯಯನಕಾರರಿಗೆ ಸಹಕಾರಿಯಾಗುವಂತ ಶೈಕ್ಷಣಿಕ ಗ್ರಂಥಗಳು ಇನ್ನು ಹೆಚ್ಚು ಹೆಚ್ಚು ಪ್ರಕಟಗೊಳ್ಳಲಿ ಎಂದು ಆಶಿಸಿದರು.

ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಕೆ.ಮಂಜುನಾಥ್, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಎಂ.ಕುಮಾರ್, ಪರಿಸರವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ತಿರುಮಲ.ಎಸ್, ಐ.ಕ್ಯೂ.ಎಸ್.ಸಿ ಸಹಸಂಯೋಜಕರಾದ ಅಬ್ದುಲ್ ಬಷೀರ, ದಾವಣಗೆರೆ ವಿಶ್ವವಿದ್ಯಾಲಯದ ಸಮಾಜಶಾಸ್ತç ವಿಭಾಗದ ಬೋಧನಾ ಸಹಾಯಕರಾದ ಡಾ.ರಾಮಚಂದ್ರಪ್ಪ.ಎಸ್ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ವಿಜಯಕುಮಾರ.ಎಂ.ಕೆ ಪ್ರಾರ್ಥಿಸಿದರು. ಸಮಾಜಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ. ತಿಪ್ಪೇಸ್ವಾಮಿ.ಹೆಚ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಉಪನ್ಯಾಕರಾದ ಡಾ.ತೇಜಸ್ವಿನಿ.ಜೆ.ಎಸ್ ಸ್ವಾಗತಿಸಿದರು. ವಿದ್ಯಾರ್ಥಿನಿ ಕು.ಲತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿನಿ ಕು.ಕವಿತಾ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

Published

on

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ (ಕ್ರ್ಸ್ರೈಸ್)ಗಳಲ್ಲಿನ ಪ್ರಾಂಶುಪಾಲರು ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯ ಇರುವ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಿ ಅರ್ಜಿ ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ವಸತಿ ಶಾಲೆಗಳಲ್ಲಿ (ಕ್ರೈಸ್) ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಶಾಲಾ ಆವರಣದಲ್ಲಿ ವಾಸ್ತವ್ಯವಿರಲು ಸುಸಜ್ಜಿತವಾದ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದ್ದು, ಪ್ರತಿಭಾನ್ವಿತ ಮಕ್ಕಳ ಕಲಿಕೆ ಮತ್ತು ಪಾಲನೆಗೆ ಸರ್ಕಾರ ಅನುಕೂಲ ಮಾಡಿಕೊಡಲಾಗಿದೆ.

ಆದರೆ ಬಹುತೇಕ ವಸತಿ ಶಾಲೆಗಳ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ವಸತಿ ನಿಲಯದ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯವಿರದೆ ಹತ್ತಿರದ ನಗರ ಪ್ರದೇಶಗಳಲ್ಲಿ ವಾಸ್ತöವ್ಯವಿರುವ ಮಾಹಿತಿಯು ಸರ್ಕಾರದ ಗಮನಕ್ಕೆ ಬಂದಿರುವ ಕಾರಣ, ಹಲವಾರು ಬಾರಿ ಸರ್ಕಾರವು ಆದೇಶ ಹೊರಡಿಸಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿಯೇ ವಾಸ್ತವ್ಯವಿದ್ದು, ಮಕ್ಕಳ ಕಲಿಕೆ, ಪಾಲನೆ, ಪೋಷಣೆಗೆ ಒತ್ತು ನೀಡುವಂತೆ ಕಟ್ಟುನಿಟ್ಟಿನ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ಪಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿಗಳು ವಾಸ್ತವ್ಯ ಇರದೆ ಇರುವುದು ಗಮನಕ್ಕೆ ಬಂದ ಕಾರಣ ದಿನಾಂಕ: 05-07-2025 ರಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ತನಿಖೆ ನಡೆಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದರು. ಆದರೆ 3 ತಿಂಗಳು ಕಳೆದರೂ ಈ ಬಗ್ಗೆ ಯಾವುದೇ ತನಿಖೆ ನಡೆಸದೆ ನಿರ್ಲಕ್ಷö್ಯ ತೋರಿದ ಜಂಟಿ ನಿರ್ದೇಶಕ ನಾಗರಾಜ ಕೆ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುತ್ತದೆ ಎಂದು ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ವಸತಿ ಶಾಲಾ ಆವರಣದಲ್ಲಿ ಸುಸಜ್ಜಿತವಾದ ವಸತಿ ಗೃಹಗಳನ್ನು ನಿರ್ಮಾಣ ಮಾಡಿದ್ದರೂ ಬಹುತೇಕ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಹತ್ತಿರದ ನಗರ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿರುತ್ತಾರೆ. ಇದರಿಂದ ಮಕ್ಕಳ ಶಿಕ್ಷಣ, ಪಾಲನೆ ಮತ್ತು ಪೋಷಣೆಗೆ ಅಡಚಣೆಯಾಗುತ್ತಿದೆ.

| ಡಾ.ಕೆ.ಎ.ಓಬಳೇಶ್,ವಕೀಲರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending