Connect with us

ದಿನದ ಸುದ್ದಿ

ಡಾ. ರಾಜ್ ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಿಂದ ವಿದ್ಯಾರ್ಥಿ ವೇತನ ಪರೀಕ್ಷೆ

Published

on

ಸುದ್ದಿದಿನ, ಬೆಂಗಳೂರು : ಡಾ. ರಾಜ್‍ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿಯು ತನ್ನ ಮೂರನೆಯ ಆವೃತ್ತಿಯ ಸ್ಕಾಲರ್ಶಿಪ್ ಪರೀಕ್ಷೆಯನ್ನು ನಡೆಸಲು ಉತ್ಸುಕವಾಗಿದೆ. ಕರ್ನಾಟಕದ ನಾಗರಿಕ ಸೇವಾ ಪರೀಕ್ಷೆ ಆಕಾಂಕ್ಷಿಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುವ ಉದ್ದೇಶದೊಂದಿಗೆ ಈ ಅಕಾಡೆಮಿಯು ಪ್ರಾರಂಭಗೊಂಡಿದೆ. ಇದನ್ನು ಮುಂದುವರಿಸಿಕೊಂಡು ಹೋಗುವ ದಿಶೆಯಲ್ಲಿ ಇದೇ ಮಾರ್ಚ್ 31ರಂದು ಸ್ಕಾಲರ್ಶಿಪ್ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಈ ಪರೀಕ್ಷೆಯು ನಮ್ಮಲ್ಲೆರ ಅಚ್ಚುಮೆಚ್ಚಿನ ಡಾ. ರಾಜ್‍ಕುಮಾರ್‍ರವರ ಆಶಯಗಳನ್ನು ಸಾಕಾರಗೊಳಿಸುವ ಒಂದು ಪ್ರಯತ್ನ. ಪ್ರತಿಭಾವಂತ ಹಾಗು ಆರ್ಥಿಕವಾಗಿ ಹಿಂದುಳಿದವರಿಗೋಸ್ಕರ ಈ ಪರೀಕ್ಷೆಯನ್ನು ಏರ್ಪಡಿಸಲಾಗಿದೆ. ಆದ್ದರಿಂದ ಕರ್ನನಾಟಕ ರಾಜ್ಯದ ಆಕಾಂಕ್ಷಿಗಳು ಇದರ ಸದುಪಯೋಗವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೂಚಿಸಲಾಗಿದೆ.

ಅರ್ಹತೆ

ಪದವಿ ಪೂರೈಸಿರುವ ಹಾಗು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರಿರುತ್ತಾರೆ.

ಸ್ಕಾಲರ್ಶಿಪ್ ಪರೀಕ್ಷೆಯ ಪಠ್ಯಕ್ರಮ

ಸ್ಕಾಲರ್ಶಿಪ್ ಪರೀಕ್ಷೆ ಒಂದು ಸಾಮಾನ್ಯ ಅಧ್ಯಯನ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಪತ್ರಿಕೆ ವಸ್ತು ನಿಷ್ಠ ಮಾದರಿಯಲ್ಲಿ ಇರುತ್ತದೆ.

  • ಪರೀಕ್ಷೆಯ ಅವಧಿ – 2 ಘಂಟೆಗಳು.
  • ಪ್ರಶ್ನೆಗಳ ಸಂಖ್ಯೆ- 100
  • ಪ್ರತಿ ಪ್ರಶ್ನೆಗೆ ಅಂಕಗಳು – 2
  • ಒಟ್ಟು ಅಂಕಗಳು – 200
  • ಪ್ರಶ್ನೆಗಳು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿ ಇರುತ್ತವೆ.

ಪಠ್ಯಕ್ರಮ

  • ಪ್ರಚಲಿತ ವಿದ್ಯಮಾನಗಳು, ಭಾರತೀಯ ಇತಿಹಾಸ, ಭೂಗೋಳ ಶಾಸ್ತ್ರ, ಭಾರತದ ರಾಜಕೀಯ ಮತ್ತು ಸಂವಿಧಾನ, ಅರ್ಥಶಾಸ್ತ್ರ, ‌ವಿಜ್ಞಾನ ಮತ್ತು ಮಾನಸಿಕ ಸಾಮಥ್ಯ೯(10ನೆ ತರಗತಿ ಮಟ್ಟ).
  • ಸೂಚನೆ- ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಆ ಪ್ರಶ್ನೆಗೆ ಮೀಸಲಾದ ಅಂಕಗಳಲ್ಲಿ (1/4) ರಷ್ಟು ಅಂಕಗಳನ್ನು ಕಳೆಯಲಾಗುವುದು.
  • ನಿಮ್ಮ ಪ್ರವೇಶ ಪತ್ರದಲ್ಲಿ ಪರೀಕ್ಷೆ ನಡೆಯುವ ಸ್ಥಳ ಮತ್ತು ಸಮಯವನ್ನು ತಿಳಿಸಲಾಗುವುದು ಮತ್ತು ಪ್ರವೇಶ ಪತ್ರವನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು.

ನೋಂದಾಯಿಸಿಕೊಳ್ಳಲು ಈ ಜಾಲ ತಾಣಕ್ಕೆ ಭೇಟಿ ನೀಡಿ. ಲಿಂಕ್ ಮೇಲೆ ಕ್ಲಿಕ್ ಮಾಡಿ

http://www.drrajkumaracademy.com/

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending