Connect with us

ರಾಜಕೀಯ

ಡಾ.ರಾಜ್‍ಕುಮಾರ್ ನೆನಪಾಗುತ್ತಿದ್ದಾರೆ..!

Published

on

ಗೋಕಾಕ್ ಚಳವಳಿಯಲ್ಲಿ ಡಾ.ರಾಜ್ ಕುಮಾರ್

ಡಾ.ರಾಜ್‍ಕುಮಾರ್ ನೆನಪಾಗುತ್ತಿದ್ದಾರೆ. ಅಷ್ಟೇ ಅಲ್ಲ, ಸದ್ಯವನ್ನು ಪ್ರತಿನಿಧಿಸುತ್ತಿರುವ ನಾವು ಅವರು ಸಿನಿಮಾಗಳ ಮೂಲಕ ಕಟ್ಟಿಕೊಟ್ಟ ಆಕೃತಿಗಳೊಂದಿಗೆ ಸಂವಾದ ಏರ್ಪಡಿಸಿಕೊಳ್ಳುವ ಅನಿವಾರ್ಯತೆ ಮನಗಾಣಿಸುವ ಹಾಗೆ ನನ್ನ ಪ್ರಜ್ಞೆಯ ಆವರಣವನ್ನು ಮತ್ತೆ ಮತ್ತೆ ಪ್ರವೇಶಿಸುತ್ತಿದ್ದಾರೆ. ಹಿಂದಿನ ಮಾದರಿಗಳು ಹೀಗೆ ನೆನಪಾಗುತ್ತಲೇ ಇರಬೇಕು. ಇಂಥ ನೆನಪುಗಳೊಂದಿಗಿನ ಯಾನ ಅವುಗಳನ್ನು ಸಮಾಜದಲ್ಲಿ ಅಧಿಕೃತವಾಗಿ ನೆಲೆಗೊಳಿಸಬೇಕು. ಮರೆವಿನ ಕೂಪಕ್ಕೆ ಅವು ತಳ್ಳಲ್ಪಡದ ಹಾಗೆ ಎಲ್ಲ ಕಾಲದ ಪೀಳಿಗೆಗಳಿಗೆ ದಾಟಿಕೊಳ್ಳುತ್ತಿರಬೇಕು. ಕೆಟ್ಟದ್ದು ವಿಜೃಂಭಿಸುವಾಗೆಲ್ಲಾ ಮೌಲಿಕ ಮಾದರಿಗಳ ನೆನಪುಗಳು ಧುಮ್ಮಿಕ್ಕಬೇಕು.

ಆ ಮೂಲಕ ಜನಸಮೂಹ ಹೊಸದಾಗಿ ಆಲೋಚಿಸುವುದಕ್ಕೆ ಪ್ರೇರಣೆಯಾಗಬೇಕು.
ನನ್ನೊಳಗೆ ಈಗ ರೂಪುಗೊಳ್ಳುತ್ತಿರುವ ಈ ಬಗೆಯ ಚಿಂತನೆಯ ವ್ಯಕ್ತಿಗತ ಸಾಧ್ಯತೆಯು ಜನಸಮೂಹದ ಸಾಧ್ಯತೆಯೂ ಆಗಿ ಆದ್ಯತೆ ಪಡೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದೆನ್ನಿಸುತ್ತಿದೆ. ಹಾಗಾಗುತ್ತದಾ? ಉತ್ತರಗಳ ಬದಲು ಸಂಕೀರ್ಣ ಸವಾಲುಗಳೇ ಕಣ್ಣೆದುರು ಬಂದು ನಿಲ್ಲುತ್ತವೆ. ಚಿಂತಿಸುವಿಕೆಯ ವ್ಯಕ್ತಿಗತ ಸಾಮಥ್ರ್ಯ ಜನಸಮೂಹದೊಳಗೂ ಸಮ್ಮಿಳಿತಗೊಂಡು ರೂಪುಗೊಳ್ಳಬಹುದಾದ ವೈಚಾರಿಕ ಸೌಂದರ್ಯವು ದೇಶವನ್ನು ಉನ್ನತಿಯ ಕಡೆಗೆ ಕೊಂಡೊಯ್ಯುತ್ತದೆ. ಆದರೆ, ವಾಸ್ತವ ಹಾಗಿಲ್ಲ. ಇಂಥ ಸಾಧ್ಯತೆಗಳ ಕಡೆಗೆ ಗಮನಹರಿಸದ ಹಾಗೆ ಜನಸಮೂಹದ ಮನಸ್ಥಿತಿಯನ್ನು ಸಂಪೂರ್ಣವಾಗಿ ಜಡಗೊಳಿಸುವ ರೀತಿಯಲ್ಲಿ ನಮ್ಮ ಜನಪ್ರಿಯ ಸಂಸ್ಕøತಿಯ ವಿಕೃತಿಗಳು ದಟ್ಟವಾಗಿವೆ. ಇದರೊಂದಿಗೆ ಅವು ಪ್ರಜಾತಾಂತ್ರಿಕ ವ್ಯವಸ್ಥೆಯ ಜೀವಾಳವೇ ಆಗಿರುವ ಆಯ್ಕೆಯ ಸಂವೈಧಾನಿಕ ಹಕ್ಕಿನ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದ ಹಾಗೆ ತಡೆಯೊಡ್ಡುತ್ತಿವೆ.

ತಾರೆಯರ ಅಪಕ್ವ ನಿಲುವು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಸಂಸ್ಕøತಿಯನ್ನು ಪ್ರತಿನಿಧಿಸುವ ಖ್ಯಾತನಾಮ ತಾರೆಯರ ನಡೆಯನ್ನು ತಾರ್ಕಿಕವಾಗಿ ವಿಶ್ಲೇಷಿಸಬೇಕಿದೆ. ಒಂದು ಪಕ್ಷದ ಅಥವಾ ಅಭ್ಯರ್ಥಿಯ ಪರ ನಿಂತುಕೊಳ್ಳುವ ಅಪಕ್ವ ನಿಲುವಿನೊಂದಿಗೆ ಕನ್ನಡದ ಜನಪ್ರಿಯ ಸಿನಿಮಾ ನಾಯಕ ನಟರ ನಿಲುವುಗಳು ಸುದ್ದಿಗೆ ಗ್ರಾಸ ಒದಗಿಸಿರುವಾಗ ಡಾ.ರಾಜ್‍ಕುಮಾರ್ ಎಂಬ ಹೆಸರಿನೊಂದಿಗಿನ ನೆನಪಿನ ಬಿಂಬಗಳು ಹೊಸ ಪೀಳಿಗೆಯನ್ನು ಆವರಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಇದು ಅಗತ್ಯ ಮಾತ್ರವಲ್ಲ, ಸಾಂದರ್ಭಿಕ ಅನಿವಾರ್ಯತೆಯೂ ಹೌದು. ಸಾರ್ವಕಾಲಿಕವಾಗಿ ನೆಲೆನಿಲ್ಲುವ ಆಲೋಚನಾಕ್ರಮಗಳನ್ನು ದಾಟಿಸುವುದಕ್ಕೆ ಬೇಕಾದ ಪೂರಕ ವಾತಾವರಣದ ವೇದಿಕೆ ನಿರ್ಮಿಸಿಕೊಳ್ಳುವ ಕಲೆ, ಪ್ರತಿಭೆ ಮತ್ತು ಸಾಮಾಜಿಕ ಅಸ್ಮಿತೆಯ ಅಪೂರ್ವ ಸಂಯೋಜನೆಯ ಪ್ರಯೋಜನ ಜನಸಮೂಹಕ್ಕೆ ದಕ್ಕಬೇಕು. ಇದಕ್ಕೆ ಸಂಬಂಧಿಸಿದಂತೆ ವಿಶಿಷ್ಠವಾದ ಮಾದರಿಗಳನ್ನು ಡಾ.ರಾಜ್‍ಕುಮಾರ್ ಅವರ ಸಾಂಸ್ಕøತಿಕ ನಾಯಕತ್ವದ ಮೂಲಕವೇ ಕಂಡುಕೊಳ್ಳಬೇಕು.

ಡಾ.ರಾಜ್ ಜನಪರ ಕಲಾತ್ಮಕತೆ

ರಾಜ್‍ಕುಮಾರ್ ಅವರು ಏಕೆ ಈ ಕ್ಷಣಕ್ಕೆ ನೆನಪಾಗಬೇಕು ಎಂಬ ಜಿಜ್ಞಾಸೆಗೆ ಪ್ರತಿಯಾಗಿ ಅವರ ಮೌಲಿಕ ಸಿನಿಮಾಗಳ ಪಾತ್ರವೈವಿಧ್ಯತೆ, ಭಾಷಿಕ ಚಳುವಳಿಯೊಂದಿಗೆ ಗುರುತಿಸಿಕೊಳ್ಳುವ ಬದ್ಧತೆ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಜನಸಮೂಹದ ನೆರವಿಗೆ ಧಾವಿಸಿದ ಅವರ ಕಾಳಜಿಯುತ ಮಾದರಿಗಳು ಕಣ್ಣಮುಂದೆ ಬಂದುನಿಲ್ಲುತ್ತವೆ. ಅವರು ಚುನಾವಣೆಗಳ ವೇಳೆ ರಾಜಕೀಯ ಪಕ್ಷಗಳ ಪರ ನಿಲ್ಲಲಿಲ್ಲ. ನಿರ್ದಿಷ್ಟ ಅಭ್ಯರ್ಥಿಯ ಪರ ಮತ ಹಾಕುವಂತೆ ಪ್ರಚಾರಗಳ ರ್ಯಾಲಿಗಳಿಗೆ ಹೋಗಲಿಲ್ಲ. ಸಮಸ್ತ ಕನ್ನಡಿಗರನ್ನು ಅಭಿಮಾನಿ ದೇವರುಗಳನ್ನಾಗಿ ಗ್ರಹಿಸಿದವರು ಅವರು. ಆ ಅಭಿಮಾನವನ್ನು ಅಧಿಕಾರ ರಾಜಕಾರಣಕ್ಕೆ ಗೆಲುವು ತಂದುಕೊಡುವ ಉದ್ದೇಶಕ್ಕೆ ಬಳಸಿಕೊಳ್ಳಲಿಲ್ಲ. ‘ಅವರು ಕರೆದರೆ ಜೊತೆಯಾಗಿ ನಿಲ್ಲುತ್ತೇನೆ’ ಎಂಬ ಆರಾಧನಾ ಭಾವವನ್ನು ಬಹಿರಂಗವಾಗಿ ಪ್ರದರ್ಶಿಸಲಿಲ್ಲ.

ಕನ್ನಡಿಗರ ಹೃದಯದ ಸಾಮ್ರಾಜ್ಯದಲ್ಲಿ ನೆಲೆಸುವ ಅಪ್ಪಟ ಕಲಾತ್ಮಕ ಹಂಬಲ ಅವರನ್ನು ಅಧಿಕಾರ ರಾಜಕಾರಣದ ಹತ್ತಿರ ಹೋಗಲು ಬಿಡಲಿಲ್ಲ. ಅತ್ಯುನ್ನತ ಸ್ಥಾನದ ಆಮಿಷವೊಡ್ಡಿದರೂ ಅದರಿಂದ ಎಚ್ಚರದ ದೂರವನ್ನು ಕಾಯ್ದುಕೊಂಡರು. ಭಾಷಿಕ ಚಳುವಳಿಗಳ ಜೊತಗೆ ಗುರುತಿಸಿಕೊಂಡರು. ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಅವರ ನಡೆಯು ಕನ್ನಡ ಸಿನಿಮಾದ ಪ್ರಭಾವವನ್ನು ವಿಸ್ತರಿಸುವುದಕ್ಕೆ ನೆರವಾಗಿತ್ತು. ಅವರ ಅಭಿನಯದ ಸಿನಿಮಾಗಳು ಜನಪ್ರಿಯ ಸಂಸ್ಕøತಿ ಒಳಗೊಳ್ಳಬಹುದಾದ ಮೌಲಿಕ ಲಕ್ಷಣಗಳನ್ನು ದೃಢೀಕರಿಸಿದವು. ಈ ಹಿನ್ನೆಲೆಯ ಕಾರಣಕ್ಕಾಗಿಯೇ ರಾಜಕಾರಣಕ್ಕಿಂತಲೂ ಕನ್ನಡದ್ದೇ ಆದ ಸಾಮುದಾಯಿಕ ಕಲಾತ್ಮಕ ಪಾತ್ರನಿರ್ವಹಣೆಯ ಕಡೆಗೆ ಅವರು ಹೆಚ್ಚು ಆದ್ಯತೆ ನೀಡಿದರು.

Rajadharma a column by Dr.N k padmanabh

ರಾಜಕಾರಣದ ವಿಚ್ಛಿದ್ರಕಾರಕ ಪ್ರಾಬಲ್ಯ

ಭಾರತದ ಅಧಿಕಾರ ರಾಜಕಾರಣಕ್ಕೆ ವಿಚಿತ್ರ ಬಗೆಯ ವಿಚ್ಛಿದ್ರಕಾರಕ ಪ್ರಾಬಲ್ಯವಿದೆ. ಇದರ ಆಕರ್ಷಣೀಯ ಸ್ವರೂಪವು ಈ ಪ್ರಾಬಲ್ಯದ ಸುಳಿವನ್ನು ಬಿಟ್ಟುಕೊಡುವುದೇ ಇಲ್ಲ. ಇಂಥ ರಾಜಕಾರಣವು ಪ್ರಭಾವೀ ವ್ಯಕ್ತಿತ್ವಗಳಿಂದ ಹಿಡಿದು ಜನಸಾಮಾನ್ಯರನ್ನು ಸದಾ ಆಕರ್ಷಿಸುತ್ತಲೇ ಇರುತ್ತದೆ. ಅದರ ಆಕರ್ಷಣೀಯ ಗುಣದಲ್ಲಿಯೇ ಇರುವ ಮತ್ತೊಂದು ಅಪಾಯಕಾರಿ ಮುಖ ಗೋಚರಿಸದಂತೆ ಅದು ವಿಜೃಂಭಿಸುತ್ತಿರುತ್ತದೆ. ಅಭಿನಯದ ಮೂಲಕ ಜನಜನಿತರಾಗಿ ವ್ಯಾಪಕ ಪ್ರಭಾವ ದಕ್ಕಿಸಿಕೊಂಡವರನ್ನು ಹುಡುಕಿ ಇದು ತನ್ನ ಖೆಡ್ಡಾಕ್ಕೆ ಬೀಳಿಸಿಕೊಳ್ಳುತ್ತದೆ.

ಈ ದೇಶದ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರದ ಮಾರ್ಗ ಹೊಳೆಸುವ ವೈಚಾರಿಕ ಆಕೃತಿಗಳನ್ನು ಸೃಷ್ಟಿಸುವ ಚಿಂತಕರನ್ನು, ಅವರ ನಿಲುವುಗಳನ್ನು ಬಳಸಿಕೊಂಡು ಅಧಿಕಾರ ಹಿಡಿಯುವ ಅಜೆಂಡಾ ಕಾರ್ಯರೂಪಕ್ಕೆ ತರುವುದರ ಕಡೆಗೇ ಅದರ ಗಮನವಿರುತ್ತದೆ. ಇದಕ್ಕೆ ತದ್ವಿರುದ್ಧವಾಗಿರುವ ಯಥಾಸ್ಥಿತಿವಾದಿ ಜನಪ್ರಿಯ ತಾರೆಗಳನ್ನು, ಅವರ ಪ್ರಭಾವವನ್ನೂ ಮತಬೆಳೆಯ ಫಸಲು ತೆಗೆಯುವುದಕ್ಕಾಗಿಯೇ ಬಳಸಿಕೊಳ್ಳುತ್ತಿರುತ್ತದೆ. ಬದಲಾವಣೆಯ ಚಾಲಕ ಶಕ್ತಿಯಾಗಿ ಪ್ರಮುಖ ಪಾತ್ರವಹಿಸುವ ಕಲಾತ್ಮಕ ವಲಯದ ಅಗಾಧತೆಯನ್ನು ಒಡೆದು ತನ್ನ ಅಧಿಕಾರ ಲಾಭದ ಹವಣಿಕೆಗಳಿಗಾಗಿ ಬಳಸಿಕೊಳ್ಳುತ್ತದೆ. ಡಾ.ರಾಜ್‍ಕುಮಾರ್ ಕಲಾತ್ಮಕತೆಯ ಕುರಿತಾದ ಸ್ಪಷ್ಟ ನಿಲುವುಗಳೊಂದಿಗೆ ಇದ್ದುದರಿಂದ ಅಧಿಕಾರ ರಾಜಕಾರಣದ ಆಕರ್ಷಣೆ ಮತ್ತು ಆಮಿಷಗಳಿಗೆ ಒಳಗಾಗಲಿಲ್ಲ.

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಜನಪ್ರಿಯ ನಟ-ನಟಿಯರು ಅಧಿಕಾರ ರಾಜಕಾರಣವನ್ನು ಪ್ರವೇಶಿಸಿ ಯಶಸ್ಸು ಕಂಡ ಉದಾಹರಣೆಗಳಿದ್ದರೂ ರಾಜ್‍ಕುಮಾರ್ ಆ ಹಾದಿ ಅನುಸರಿಸಲಿಲ್ಲ. ಪೌರಾಣಿಕ ಮತ್ತು ಸಾಮಾಜಿಕ ಪಾತ್ರಗಳ ಮುಖೇನ ತೆಲುಗು ಸಮುದಾಯವನ್ನು ಬಹುವಾಗಿ ಪ್ರಭಾವಿಸಿದ್ದ ಎನ್.ಟಿ.ರಾಮರಾವ್ ಅಲ್ಲಿ ಮುಖ್ಯಮಂತ್ರಿಯಾದರು. ಎಂ.ಜಿ.ಆರ್, ಜಯಲಲಿತಾ ತಮಿಳುನಾಡಿನಲ್ಲಿ ಅಧಿಕಾರದ ಉನ್ನತ ಹಂತ ತಲುಪಿದವರು. ಇದೀಗ ರಜನೀಕಾಂತ್ ರಾಜಕೀಯದ ಹಾದಿಗೆ ಆದ್ಯತೆ ನೀಡಿದ್ದಾರೆ. ಕುತೂಹಲದ ಸಂಗತಿ ಎಂದರೆ ಇಡೀ ಕರ್ನಾಟಕದಾದ್ಯಂತ ಪ್ರಭಾವೀಯಾಗಿದ್ದರೂ ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುವ ಹಂಬಲ ರಾಜ್ ಅವರ ಹತ್ತಿರವೂ ಸುಳಿಯಲಿಲ್ಲ ಎಂಬುದು.

ಸಂಯಮಪೂರ್ಣ ಎಚ್ಚರದ ಪ್ರಜ್ಞೆ

ರಾಜ್ ಅವರೊಳಗಿದ್ದ ಅಂಥ ಸಂಯಮಪೂರ್ಣ ಎಚ್ಚರ ಈಗಿನ ನಟರಿಗೆ ಸಾಧ್ಯವಾಗುತ್ತಿಲ್ಲ. ಅಭಿನಯ ಕಲಾತ್ಮಕತೆಯ ಮೂಲಕವೇ ವಿವಿಧ ಬಗೆಗಳಲ್ಲಿ ಜನಸಮೂಹದ ಮೇಲೆ ಪ್ರಭಾವ ಬೀರುವ ಬದ್ಧತೆ ರೂಢಿಸಿಕೊಳ್ಳುವ ಅನಿವಾರ್ಯತೆಯನ್ನು ಕಾಡಿಸಿಕೊಳ್ಳುತ್ತಿಲ್ಲ. ‘ನನಗೆ ಇಂತಿಷ್ಟು ವರ್ಷ ಜನಪ್ರಿಯತೆ ಇರುತ್ತದೆ, ಈ ಅವಧಿಯಲ್ಲಿ ಹಣ ದುಡಿದುಕೊಳ್ಳಬೇಕು’ ಎಂಬ ಆಸೆಯೇ ಈಗಿನ ನಟರನ್ನು ನಿಯಂತ್ರಿಸುತ್ತಿದೆ. ಬೆಂಗಳೂರಿನ ಹೊರಗೆ ಜಿಲ್ಲಾಕೇಂದ್ರಗಳಲ್ಲಿ ಒಳ್ಳೆಯ ಉದ್ದೇಶದೊಂದಿಗೆ ಆಯೋಜಿತವಾಗುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕೆ ಅತಿಹೆಚ್ಚು ಸಂಭಾವನೆ ಬೇಡುವ ಮನಸ್ಥಿತಿ ಇವರೊಳಗಿನ ಕಲಾತ್ಮಕತೆಯನ್ನು ಕೊಲ್ಲುತ್ತಿದೆ.

ಸದಭಿರುಚಿ ಮೂಡಿಸುವ ನಿಜವಾದ ಕಾಳಜಿ ಇದ್ದಿದ್ದರೆ ಇವರು ‘ಒಳ್ಳೆಯ ಸಿನಿಮಾಗಳಿಗೆ ಮಾರ್ಕೆಟ್ ಇಲ್ಲ’ ಎಂಬ ಕೊರಗು ವ್ಯಕ್ತಪಡಿಸುವ ಬದಲು ರಾಜ್ಯದಾದ್ಯಂತ ಅರಿವಿನ ಆಂದೋಲನ ಕೈಗೊಳ್ಳುತ್ತಿದ್ದರು. ಕೆಟ್ಟದ್ದರ ಕಡೆಗೆ ವಾಲಿದ ಅಭಿಮಾನಿ ಸಂಸ್ಕøತಿಯ ಊನಗಳನ್ನು ಸರಿಪಡಿಸಿ ಸದಭಿರುಚಿಯ ಸಿನಿಮಾಗಳಿಗೆ ವ್ಯಾಪಕ ಬೆಂಬಲ ತಂದುಕೊಳ್ಳುವುದರ ಕಡೆಗೆ ಗಮನ ಹರಿಸುತ್ತಿದ್ದರು. ಬೇರೆ ರಾಜ್ಯಗಳಲ್ಲಿ ಕನ್ನಡದ ಸಿನಿಮಾ ನಿರ್ಮಾಣದ ಚಟುವಟಿಕೆಗಳು ನಡೆಯುತ್ತಿದ್ದ ಕಾಲದಲ್ಲಿ ಕನ್ನಡಿಗರಿಗೆ ಹತ್ತಿರವಾಗಿ ಇಲ್ಲಿಯ ಸಿನಿಮಾವನ್ನು ಜನಜನಿತವಾಗಿಸಿದ ರಾಜ್ ಮಾದರಿಯನ್ನು ಮುಂದುವರೆಸುವ ಕಾರ್ಯದಲ್ಲಿ ನಿರತರಾಗುತ್ತಿದ್ದರು.

ರಾಜಕೀಯ ಸಾಮಂಜಸ್ಯದ ಪ್ರಶ್ನೆ

ಹಾಗಾಗುವುದಕ್ಕೆ ಜನಪ್ರಿಯ ಸಂಸ್ಕøತಿಯ ಒಳಗೇ ಇರುವ ವಿಕಾರಗಳು ಅವರನ್ನು ಬಿಡುತ್ತಿಲ್ಲ. ಇದರ ಜೊತೆಗೆ ಅಧಿಕಾರ ರಾಜಕಾರಣದ ಯಥಾಸ್ಥಿತಿವಾದದೊಂದಿಗಿನ ಹುನ್ನಾರದ ಪ್ರಾಬಲ್ಯ ನಟರೊಳಗೂ ಆರಾಧನಾ ಭಾವವನ್ನು ಬಿತ್ತುವಲ್ಲಿ ಯಶಸ್ವಿಯಾಗಿದೆ. ನಟರೊಳಗಿನ ಕಲಾತ್ಮಕತೆಯನ್ನು ಸೋಲಿಸುವ ಅದರ ಕಾರ್ಯಸೂಚಿಗೆ ಹಿಂದೆಂದಿಗಿಂತಲೂ ಈಗ ಹೆಚ್ಚಿನ ಬಲ ಬಂದಿದೆ. ಈ ಕಾರಣಕ್ಕಾಗಿಯೇ ಜನಪ್ರಿಯ ಸಿನಿಮಾ ನಟರು ರಾಜಕೀಯ ರಂಗವನ್ನು ಪ್ರವೇಶಿಸಿ ಆರ್ಥಿಕವಾಗಿ ಬಲಾಢ್ಯರಾಗುವ ಕನಸುಗಳನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಒಂದು ಕ್ಷೇತ್ರ ಪ್ರತಿನಿಧಿಸುವವರೊಬ್ಬರು ರಾಜಕೀಯ ರಂಗವನ್ನು ಪ್ರವೇಶಿಸುವುದರ ಹಿಂದೆ ಪ್ರಾಮಾಣಿಕ ಕಳಕಳಿಗಳ ಆಧಾರವಿರಬೇಕಾಗುತ್ತದೆ. ಅದರ ಬದಲು ಯಥಾಸ್ಥಿತಿವಾದದ ಜೊತೆಗೇ ತಮ್ಮನ್ನು ತಾವು ಪ್ರತಿಷ್ಠಾಪಿಸಿಕೊಳ್ಳುವ ಮನುಷ್ಯಸಹಜ ದೌರ್ಬಲ್ಯ ಪ್ರದರ್ಶಿಸುವುದು ರಾಜಕೀಯ ಸಾಮಂಜಸ್ಯದ ( Politically Correct) ನಡೆ ಎನ್ನಿಸಿಕೊಳ್ಳುವುದಿಲ್ಲ.

ರಾಜಕೀಯ ಪ್ರಬುದ್ಧತೆಯನ್ನು ಅಳವಡಿಸಿಕೊಳ್ಳುವ ಹಂಬಲವೂ ಇಂಥವರೊಂದಿಗೆ ಇರುವುದಿಲ್ಲ.
ರಾಜಕೀಯ ಪ್ರಬುದ್ಧತೆ ಪ್ರದರ್ಶಿಸುವ ಸಾಮಥ್ರ್ಯ ಇದ್ದವರೂ ಸದ್ಯದ ಸುದ್ದಿವಾಹಿನಿಗಳ ಪ್ರಬಲರ ಪರವಾದ ಅಜೆಂಡಾಕ್ಕೆ ಅನುಗುಣವಾದ ವಿಧ್ವಂಸಕ ಪ್ರಯತ್ನಗಳ ಹೊಡೆತಕ್ಕೀಡಾಗಿ ಹಿನ್ನೆಲೆಗೆ ಸರಿದುಬಿಡುತ್ತಾರೆ. ಸುದ್ದಿವಾಹಿನಿಗಳ ಈ ಬಗೆಯ ಪ್ರಹಾರ ಕಲಾವಲಯದವರಲ್ಲಿ ಭಯ ಮೂಡಿಸಿಬಿಡುತ್ತದೆ. ಆಗ ತಮ್ಮ ಜನಪ್ರಿಯತೆಯನ್ನು ಅಧಿಕಾರ ರಾಜಕಾರಣದ ಪಾದಗಳಿಗೆ ಸಮರ್ಪಿಸುವ ಮನೋಧರ್ಮವನ್ನು ಮೂಡಿಸಿಬಿಡುತ್ತದೆ. ಇರುವಷ್ಟು ದಿನ ಚಾಲ್ತಿಯಲ್ಲಿರಬೇಕು ಎಂಬ ಆಸೆ ಚಿಗುರೊಡೆದು ಅವರೊಳಗಿನ ಕಲಾಶಕ್ತಿಯನ್ನು ನಲುಗಿಸಿಬಿಡುತ್ತದೆ.

ಜನಪ್ರಿಯ ಪ್ರತಿಭಾನ್ವಿತರು ಅಧಿಕಾರ ರಾಜಕಾರಣದ ಪ್ರಾಬಲ್ಯವನ್ನು ಅಧಿಕೃತವಾಗಿ ಪ್ರಶ್ನಿಸಬಹುದು ಎಂಬ ಭರವಸೆಯನ್ನು ಕಳೆದ ಸಲ ಲೋಕಸಭೆ ಚುನಾವಣೆಯ ಸಂದರ್ಭ ಮೂಡಿಸಿತ್ತು. ಈ ದೇಶಕ್ಕೆ ಪ್ರಶ್ನಾತೀತ ನಾಯಕ ಇರಬಾರದು, ಪ್ರಶ್ನೆಗಳನ್ನು ಆಲಿಸಿ ಬದಲಾವಣೆಯನ್ನು ನೆಲೆಗೊಳಿಸುವ ಚಿಂತಕ ನಾಯಕ ಬೇಕು ಎಂಬ ಸಂವಾದವನ್ನು ಅಧಿಕೃತವಾಗಿ ದೇಶಾದ್ಯಂತ ಹುಟ್ಟುಹಾಕುವ ಪ್ರಯತ್ನವನ್ನು ಪ್ರಕಾಶ್ ರೈ ನಿರ್ವಹಿಸಿದರು. ಆದರೆ, ಸುದ್ದಿವಾಹಿನಿಗಳ ಜನಪ್ರಿಯ ವರಸೆಗಳು ಈ ಸಂವಾದವನ್ನು ವಿಸ್ತರಿಸುವ ಬದಲು ಮೊಟಕುಗೊಳಿಸಿದವು. ಅದರೊಂದಿಗೆ ಅಧಿಕಾರ ರಾಜಕಾರಣದ ಎಲ್ಲ ಬಗೆಯ ವಿಕೃತಿಗಳ ದಾಳಿ ಹೊಸದಾಗಿ ಆಲೋಚಿಸುವ ಶಕ್ತಿಯನ್ನೇ ಕುಂದಿಸಿತು. ಜನಪ್ರಿಯ ಸುದ್ದಿಯ ಕೇಂದ್ರಗಳು ಮತ್ತು ರಾಜಕಾರಣದ ಸಂಕುಚಿತತೆಯ ಮನಸ್ಥಿತಿಗಳು ಒಟ್ಟಾಗಿ ಇಂಥದ್ದೊಂದು ಸಾಧ್ಯತೆಯನ್ನೇ ಇಲ್ಲವಾಗಿಸುವಲ್ಲಿ ಯಶಸ್ಸು ಕಂಡಿವೆ.

ಕಾಡುತ್ತಿರುವ ರಾಜ್ ಆಕೃತಿಗಳು

ಈ ಹಂತದಲ್ಲಿಯೇ ಮತ್ತೊಂದು ಲೋಕಸಭೆ ಚುನಾವಣೆ ಎದುರಾಗಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣ ಪಕ್ಷಾತೀತವಾಗಿ ವಿವಿಧ ಹಂತಗಳಲ್ಲಿ ಚಾಲ್ತಿಯಲ್ಲಿದೆ. ಸಮಸ್ಯೆಗಳಿಂದ ಇಡೀ ದೇಶ ಜರ್ಝರಿತವಾಗುತ್ತಲೇ ಇದೆ. ಎಲ್ಲ ಕಾಲದಲ್ಲೂ ಸುಧಾರಣೆಯ ಹೆಜ್ಜೆಗಳು ಕಂಡರೂ ಅವುಗಳ ವೇಗವನ್ನು ಹೆಚ್ಚಿಸುವ ದಾರ್ಶನಿಕ ನಾಯಕತ್ವವನ್ನು ಕಂಡುಕೊಳ್ಳುವಲ್ಲಿ ಇಲ್ಲಿಯ ಪ್ರಜಾಸತ್ತಾತ್ಮಕ ಪ್ರಯೋಗಶಾಲೆ ಸೋತಿದೆ. ಭಾರೀ ಬದಲಾವಣೆಯಾಗುತ್ತಿದೆ ಎನ್ನುವ ಭಾವ ಬರುವ ಹಾಗೆ ಜನಪ್ರಿಯ ಮಾಧ್ಯಮಗಳು ಭ್ರಮೆಗಳನ್ನು ಹುಟ್ಟಿಸಿವೆ. ಜನಪ್ರಿಯ ನಟರು ಪಕ್ಷಗಳ ಮತಬೆಳೆ ತೆಗೆಯಲು ಬೇಕಾಗುವ ಸರಕಿನ ಗೊಂಬೆಗಳಾಗಿದ್ದಾರೆ. ಇದನ್ನು ದೃಢಪಡಿಸುವಂತೆ ಖ್ಯಾತ ನಟ ಅಂಬರೀಷ್ ಪತ್ನಿ ಸುಮಲತಾ ಅವರ ಗೆಲುವಿಗೆ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟರು ಬೆಂಬಲವಾಗಿ ನಿಂತಿದ್ದಾರೆ.

ಸ್ಪಷ್ಟವಾಗಿರುವ ಯಾವುದೇ ಬಗೆಯ ರಾಜಕೀಯ ನಿಲುವು ತಳೆಯದೇ ಪ್ರಚಾರದ ಅಖಾಡದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ನಟನೆಗೆ ಮನ್ನಣೆ ನೀಡಿದ ಕನ್ನಡಿಗರಿಗೆ ಪ್ರತಿಯಾಗಿ ಸಾಮಾಜಿಕ ನೆಲೆಯಲ್ಲಿ ಋಣ ತೀರಿಸುವ ಸಮಂಜಸ ರಾಜಕೀಯ ಪ್ರಜ್ಞೆ ನಿರೂಪಿಸುವ ಲಕ್ಷಣಗಳೇನೂ ಕಾಣಿಸುತ್ತಿಲ್ಲ. ಡಾ.ರಾಜ್‍ಕುಮಾರ್ ಸಾಧ್ಯವಾಗಿಸಿಕೊಂಡ ಸಾಂಸ್ಕøತಿಕ ನಾಯಕತ್ವದ ಗುಣಸ್ವಭಾವಗಳೂ ಗೋಚರಿಸುತ್ತಿಲ್ಲ. ಈ ಇಲ್ಲಗಳ ಮಧ್ಯೆಯೇ ‘ರಾಜ್ ಮನೋಧರ್ಮದ’ ಸೃಜನಶೀಲ ಆಕೃತಿಗಳು ಈಗ ಮತ್ತೆ ಮತ್ತೆ ಕಾಡುತ್ತಿವೆ. ಇವು ಕನ್ನಡದ ಜನಪ್ರಿಯ ಸಂಸ್ಕøತಿಯ ಆವರಣದೊಳಗೆ ಮತ್ತೆ ಪ್ರಾಶಸ್ತ್ಯ ಪಡೆಯುತ್ತವೆಯೇ? ಅಂಥದ್ದೊಂದು ಆಶಾವಾದಿ ನಿರೀಕ್ಷೆಯಲ್ಲಿ……

ಡಾ.ಎನ್.ಕೆ. ಪದ್ಮನಾಭ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

Continue Reading

ದಿನದ ಸುದ್ದಿ

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

Published

on

ಮುಖ್ಯಾಂಶಗಳು


ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ

​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ

ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್

ಸುದ್ದಿದಿನ,​ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ಎದುರಿಸುತ್ತಿರುವವರು

ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.

ಕಚೇರಿಯಲ್ಲಿ ತಪಾಸಣೆ

ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.

​ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

Published

on

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್‌ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.

ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್‌ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.

ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.

ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.

ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.

ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.

ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ

ದಾವಣಗೆರೆ ಜಿಲ್ಲೆಯಲ್ಲಿ ಜೂನ್‌ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಮುದ್ರಿಸಿ ಬಿಎಲ್‌ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್‌ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.

ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ

ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.

103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.

ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ

ಜೂನ್‌ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ಕಾರ್ಯದರ್ಶಿ ಮಮತ ಹಸ ಗೌಡರ್‌, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಪಾಲಿಕೆ ಆಯುಕ್ತ ಮಹಾಂತೇಶ್‌ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ24 hours ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ4 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ5 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ1 week ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ2 weeks ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

Trending