Connect with us

ರಾಜಕೀಯ

ಡಾ.ರಾಜ್‍ಕುಮಾರ್ ನೆನಪಾಗುತ್ತಿದ್ದಾರೆ..!

Published

on

ಗೋಕಾಕ್ ಚಳವಳಿಯಲ್ಲಿ ಡಾ.ರಾಜ್ ಕುಮಾರ್

ಡಾ.ರಾಜ್‍ಕುಮಾರ್ ನೆನಪಾಗುತ್ತಿದ್ದಾರೆ. ಅಷ್ಟೇ ಅಲ್ಲ, ಸದ್ಯವನ್ನು ಪ್ರತಿನಿಧಿಸುತ್ತಿರುವ ನಾವು ಅವರು ಸಿನಿಮಾಗಳ ಮೂಲಕ ಕಟ್ಟಿಕೊಟ್ಟ ಆಕೃತಿಗಳೊಂದಿಗೆ ಸಂವಾದ ಏರ್ಪಡಿಸಿಕೊಳ್ಳುವ ಅನಿವಾರ್ಯತೆ ಮನಗಾಣಿಸುವ ಹಾಗೆ ನನ್ನ ಪ್ರಜ್ಞೆಯ ಆವರಣವನ್ನು ಮತ್ತೆ ಮತ್ತೆ ಪ್ರವೇಶಿಸುತ್ತಿದ್ದಾರೆ. ಹಿಂದಿನ ಮಾದರಿಗಳು ಹೀಗೆ ನೆನಪಾಗುತ್ತಲೇ ಇರಬೇಕು. ಇಂಥ ನೆನಪುಗಳೊಂದಿಗಿನ ಯಾನ ಅವುಗಳನ್ನು ಸಮಾಜದಲ್ಲಿ ಅಧಿಕೃತವಾಗಿ ನೆಲೆಗೊಳಿಸಬೇಕು. ಮರೆವಿನ ಕೂಪಕ್ಕೆ ಅವು ತಳ್ಳಲ್ಪಡದ ಹಾಗೆ ಎಲ್ಲ ಕಾಲದ ಪೀಳಿಗೆಗಳಿಗೆ ದಾಟಿಕೊಳ್ಳುತ್ತಿರಬೇಕು. ಕೆಟ್ಟದ್ದು ವಿಜೃಂಭಿಸುವಾಗೆಲ್ಲಾ ಮೌಲಿಕ ಮಾದರಿಗಳ ನೆನಪುಗಳು ಧುಮ್ಮಿಕ್ಕಬೇಕು.

ಆ ಮೂಲಕ ಜನಸಮೂಹ ಹೊಸದಾಗಿ ಆಲೋಚಿಸುವುದಕ್ಕೆ ಪ್ರೇರಣೆಯಾಗಬೇಕು.
ನನ್ನೊಳಗೆ ಈಗ ರೂಪುಗೊಳ್ಳುತ್ತಿರುವ ಈ ಬಗೆಯ ಚಿಂತನೆಯ ವ್ಯಕ್ತಿಗತ ಸಾಧ್ಯತೆಯು ಜನಸಮೂಹದ ಸಾಧ್ಯತೆಯೂ ಆಗಿ ಆದ್ಯತೆ ಪಡೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದೆನ್ನಿಸುತ್ತಿದೆ. ಹಾಗಾಗುತ್ತದಾ? ಉತ್ತರಗಳ ಬದಲು ಸಂಕೀರ್ಣ ಸವಾಲುಗಳೇ ಕಣ್ಣೆದುರು ಬಂದು ನಿಲ್ಲುತ್ತವೆ. ಚಿಂತಿಸುವಿಕೆಯ ವ್ಯಕ್ತಿಗತ ಸಾಮಥ್ರ್ಯ ಜನಸಮೂಹದೊಳಗೂ ಸಮ್ಮಿಳಿತಗೊಂಡು ರೂಪುಗೊಳ್ಳಬಹುದಾದ ವೈಚಾರಿಕ ಸೌಂದರ್ಯವು ದೇಶವನ್ನು ಉನ್ನತಿಯ ಕಡೆಗೆ ಕೊಂಡೊಯ್ಯುತ್ತದೆ. ಆದರೆ, ವಾಸ್ತವ ಹಾಗಿಲ್ಲ. ಇಂಥ ಸಾಧ್ಯತೆಗಳ ಕಡೆಗೆ ಗಮನಹರಿಸದ ಹಾಗೆ ಜನಸಮೂಹದ ಮನಸ್ಥಿತಿಯನ್ನು ಸಂಪೂರ್ಣವಾಗಿ ಜಡಗೊಳಿಸುವ ರೀತಿಯಲ್ಲಿ ನಮ್ಮ ಜನಪ್ರಿಯ ಸಂಸ್ಕøತಿಯ ವಿಕೃತಿಗಳು ದಟ್ಟವಾಗಿವೆ. ಇದರೊಂದಿಗೆ ಅವು ಪ್ರಜಾತಾಂತ್ರಿಕ ವ್ಯವಸ್ಥೆಯ ಜೀವಾಳವೇ ಆಗಿರುವ ಆಯ್ಕೆಯ ಸಂವೈಧಾನಿಕ ಹಕ್ಕಿನ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದ ಹಾಗೆ ತಡೆಯೊಡ್ಡುತ್ತಿವೆ.

ತಾರೆಯರ ಅಪಕ್ವ ನಿಲುವು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಸಂಸ್ಕøತಿಯನ್ನು ಪ್ರತಿನಿಧಿಸುವ ಖ್ಯಾತನಾಮ ತಾರೆಯರ ನಡೆಯನ್ನು ತಾರ್ಕಿಕವಾಗಿ ವಿಶ್ಲೇಷಿಸಬೇಕಿದೆ. ಒಂದು ಪಕ್ಷದ ಅಥವಾ ಅಭ್ಯರ್ಥಿಯ ಪರ ನಿಂತುಕೊಳ್ಳುವ ಅಪಕ್ವ ನಿಲುವಿನೊಂದಿಗೆ ಕನ್ನಡದ ಜನಪ್ರಿಯ ಸಿನಿಮಾ ನಾಯಕ ನಟರ ನಿಲುವುಗಳು ಸುದ್ದಿಗೆ ಗ್ರಾಸ ಒದಗಿಸಿರುವಾಗ ಡಾ.ರಾಜ್‍ಕುಮಾರ್ ಎಂಬ ಹೆಸರಿನೊಂದಿಗಿನ ನೆನಪಿನ ಬಿಂಬಗಳು ಹೊಸ ಪೀಳಿಗೆಯನ್ನು ಆವರಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಇದು ಅಗತ್ಯ ಮಾತ್ರವಲ್ಲ, ಸಾಂದರ್ಭಿಕ ಅನಿವಾರ್ಯತೆಯೂ ಹೌದು. ಸಾರ್ವಕಾಲಿಕವಾಗಿ ನೆಲೆನಿಲ್ಲುವ ಆಲೋಚನಾಕ್ರಮಗಳನ್ನು ದಾಟಿಸುವುದಕ್ಕೆ ಬೇಕಾದ ಪೂರಕ ವಾತಾವರಣದ ವೇದಿಕೆ ನಿರ್ಮಿಸಿಕೊಳ್ಳುವ ಕಲೆ, ಪ್ರತಿಭೆ ಮತ್ತು ಸಾಮಾಜಿಕ ಅಸ್ಮಿತೆಯ ಅಪೂರ್ವ ಸಂಯೋಜನೆಯ ಪ್ರಯೋಜನ ಜನಸಮೂಹಕ್ಕೆ ದಕ್ಕಬೇಕು. ಇದಕ್ಕೆ ಸಂಬಂಧಿಸಿದಂತೆ ವಿಶಿಷ್ಠವಾದ ಮಾದರಿಗಳನ್ನು ಡಾ.ರಾಜ್‍ಕುಮಾರ್ ಅವರ ಸಾಂಸ್ಕøತಿಕ ನಾಯಕತ್ವದ ಮೂಲಕವೇ ಕಂಡುಕೊಳ್ಳಬೇಕು.

ಡಾ.ರಾಜ್ ಜನಪರ ಕಲಾತ್ಮಕತೆ

ರಾಜ್‍ಕುಮಾರ್ ಅವರು ಏಕೆ ಈ ಕ್ಷಣಕ್ಕೆ ನೆನಪಾಗಬೇಕು ಎಂಬ ಜಿಜ್ಞಾಸೆಗೆ ಪ್ರತಿಯಾಗಿ ಅವರ ಮೌಲಿಕ ಸಿನಿಮಾಗಳ ಪಾತ್ರವೈವಿಧ್ಯತೆ, ಭಾಷಿಕ ಚಳುವಳಿಯೊಂದಿಗೆ ಗುರುತಿಸಿಕೊಳ್ಳುವ ಬದ್ಧತೆ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಜನಸಮೂಹದ ನೆರವಿಗೆ ಧಾವಿಸಿದ ಅವರ ಕಾಳಜಿಯುತ ಮಾದರಿಗಳು ಕಣ್ಣಮುಂದೆ ಬಂದುನಿಲ್ಲುತ್ತವೆ. ಅವರು ಚುನಾವಣೆಗಳ ವೇಳೆ ರಾಜಕೀಯ ಪಕ್ಷಗಳ ಪರ ನಿಲ್ಲಲಿಲ್ಲ. ನಿರ್ದಿಷ್ಟ ಅಭ್ಯರ್ಥಿಯ ಪರ ಮತ ಹಾಕುವಂತೆ ಪ್ರಚಾರಗಳ ರ್ಯಾಲಿಗಳಿಗೆ ಹೋಗಲಿಲ್ಲ. ಸಮಸ್ತ ಕನ್ನಡಿಗರನ್ನು ಅಭಿಮಾನಿ ದೇವರುಗಳನ್ನಾಗಿ ಗ್ರಹಿಸಿದವರು ಅವರು. ಆ ಅಭಿಮಾನವನ್ನು ಅಧಿಕಾರ ರಾಜಕಾರಣಕ್ಕೆ ಗೆಲುವು ತಂದುಕೊಡುವ ಉದ್ದೇಶಕ್ಕೆ ಬಳಸಿಕೊಳ್ಳಲಿಲ್ಲ. ‘ಅವರು ಕರೆದರೆ ಜೊತೆಯಾಗಿ ನಿಲ್ಲುತ್ತೇನೆ’ ಎಂಬ ಆರಾಧನಾ ಭಾವವನ್ನು ಬಹಿರಂಗವಾಗಿ ಪ್ರದರ್ಶಿಸಲಿಲ್ಲ.

ಕನ್ನಡಿಗರ ಹೃದಯದ ಸಾಮ್ರಾಜ್ಯದಲ್ಲಿ ನೆಲೆಸುವ ಅಪ್ಪಟ ಕಲಾತ್ಮಕ ಹಂಬಲ ಅವರನ್ನು ಅಧಿಕಾರ ರಾಜಕಾರಣದ ಹತ್ತಿರ ಹೋಗಲು ಬಿಡಲಿಲ್ಲ. ಅತ್ಯುನ್ನತ ಸ್ಥಾನದ ಆಮಿಷವೊಡ್ಡಿದರೂ ಅದರಿಂದ ಎಚ್ಚರದ ದೂರವನ್ನು ಕಾಯ್ದುಕೊಂಡರು. ಭಾಷಿಕ ಚಳುವಳಿಗಳ ಜೊತಗೆ ಗುರುತಿಸಿಕೊಂಡರು. ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸುವ ಅವರ ನಡೆಯು ಕನ್ನಡ ಸಿನಿಮಾದ ಪ್ರಭಾವವನ್ನು ವಿಸ್ತರಿಸುವುದಕ್ಕೆ ನೆರವಾಗಿತ್ತು. ಅವರ ಅಭಿನಯದ ಸಿನಿಮಾಗಳು ಜನಪ್ರಿಯ ಸಂಸ್ಕøತಿ ಒಳಗೊಳ್ಳಬಹುದಾದ ಮೌಲಿಕ ಲಕ್ಷಣಗಳನ್ನು ದೃಢೀಕರಿಸಿದವು. ಈ ಹಿನ್ನೆಲೆಯ ಕಾರಣಕ್ಕಾಗಿಯೇ ರಾಜಕಾರಣಕ್ಕಿಂತಲೂ ಕನ್ನಡದ್ದೇ ಆದ ಸಾಮುದಾಯಿಕ ಕಲಾತ್ಮಕ ಪಾತ್ರನಿರ್ವಹಣೆಯ ಕಡೆಗೆ ಅವರು ಹೆಚ್ಚು ಆದ್ಯತೆ ನೀಡಿದರು.

Rajadharma a column by Dr.N k padmanabh

ರಾಜಕಾರಣದ ವಿಚ್ಛಿದ್ರಕಾರಕ ಪ್ರಾಬಲ್ಯ

ಭಾರತದ ಅಧಿಕಾರ ರಾಜಕಾರಣಕ್ಕೆ ವಿಚಿತ್ರ ಬಗೆಯ ವಿಚ್ಛಿದ್ರಕಾರಕ ಪ್ರಾಬಲ್ಯವಿದೆ. ಇದರ ಆಕರ್ಷಣೀಯ ಸ್ವರೂಪವು ಈ ಪ್ರಾಬಲ್ಯದ ಸುಳಿವನ್ನು ಬಿಟ್ಟುಕೊಡುವುದೇ ಇಲ್ಲ. ಇಂಥ ರಾಜಕಾರಣವು ಪ್ರಭಾವೀ ವ್ಯಕ್ತಿತ್ವಗಳಿಂದ ಹಿಡಿದು ಜನಸಾಮಾನ್ಯರನ್ನು ಸದಾ ಆಕರ್ಷಿಸುತ್ತಲೇ ಇರುತ್ತದೆ. ಅದರ ಆಕರ್ಷಣೀಯ ಗುಣದಲ್ಲಿಯೇ ಇರುವ ಮತ್ತೊಂದು ಅಪಾಯಕಾರಿ ಮುಖ ಗೋಚರಿಸದಂತೆ ಅದು ವಿಜೃಂಭಿಸುತ್ತಿರುತ್ತದೆ. ಅಭಿನಯದ ಮೂಲಕ ಜನಜನಿತರಾಗಿ ವ್ಯಾಪಕ ಪ್ರಭಾವ ದಕ್ಕಿಸಿಕೊಂಡವರನ್ನು ಹುಡುಕಿ ಇದು ತನ್ನ ಖೆಡ್ಡಾಕ್ಕೆ ಬೀಳಿಸಿಕೊಳ್ಳುತ್ತದೆ.

ಈ ದೇಶದ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರದ ಮಾರ್ಗ ಹೊಳೆಸುವ ವೈಚಾರಿಕ ಆಕೃತಿಗಳನ್ನು ಸೃಷ್ಟಿಸುವ ಚಿಂತಕರನ್ನು, ಅವರ ನಿಲುವುಗಳನ್ನು ಬಳಸಿಕೊಂಡು ಅಧಿಕಾರ ಹಿಡಿಯುವ ಅಜೆಂಡಾ ಕಾರ್ಯರೂಪಕ್ಕೆ ತರುವುದರ ಕಡೆಗೇ ಅದರ ಗಮನವಿರುತ್ತದೆ. ಇದಕ್ಕೆ ತದ್ವಿರುದ್ಧವಾಗಿರುವ ಯಥಾಸ್ಥಿತಿವಾದಿ ಜನಪ್ರಿಯ ತಾರೆಗಳನ್ನು, ಅವರ ಪ್ರಭಾವವನ್ನೂ ಮತಬೆಳೆಯ ಫಸಲು ತೆಗೆಯುವುದಕ್ಕಾಗಿಯೇ ಬಳಸಿಕೊಳ್ಳುತ್ತಿರುತ್ತದೆ. ಬದಲಾವಣೆಯ ಚಾಲಕ ಶಕ್ತಿಯಾಗಿ ಪ್ರಮುಖ ಪಾತ್ರವಹಿಸುವ ಕಲಾತ್ಮಕ ವಲಯದ ಅಗಾಧತೆಯನ್ನು ಒಡೆದು ತನ್ನ ಅಧಿಕಾರ ಲಾಭದ ಹವಣಿಕೆಗಳಿಗಾಗಿ ಬಳಸಿಕೊಳ್ಳುತ್ತದೆ. ಡಾ.ರಾಜ್‍ಕುಮಾರ್ ಕಲಾತ್ಮಕತೆಯ ಕುರಿತಾದ ಸ್ಪಷ್ಟ ನಿಲುವುಗಳೊಂದಿಗೆ ಇದ್ದುದರಿಂದ ಅಧಿಕಾರ ರಾಜಕಾರಣದ ಆಕರ್ಷಣೆ ಮತ್ತು ಆಮಿಷಗಳಿಗೆ ಒಳಗಾಗಲಿಲ್ಲ.

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಜನಪ್ರಿಯ ನಟ-ನಟಿಯರು ಅಧಿಕಾರ ರಾಜಕಾರಣವನ್ನು ಪ್ರವೇಶಿಸಿ ಯಶಸ್ಸು ಕಂಡ ಉದಾಹರಣೆಗಳಿದ್ದರೂ ರಾಜ್‍ಕುಮಾರ್ ಆ ಹಾದಿ ಅನುಸರಿಸಲಿಲ್ಲ. ಪೌರಾಣಿಕ ಮತ್ತು ಸಾಮಾಜಿಕ ಪಾತ್ರಗಳ ಮುಖೇನ ತೆಲುಗು ಸಮುದಾಯವನ್ನು ಬಹುವಾಗಿ ಪ್ರಭಾವಿಸಿದ್ದ ಎನ್.ಟಿ.ರಾಮರಾವ್ ಅಲ್ಲಿ ಮುಖ್ಯಮಂತ್ರಿಯಾದರು. ಎಂ.ಜಿ.ಆರ್, ಜಯಲಲಿತಾ ತಮಿಳುನಾಡಿನಲ್ಲಿ ಅಧಿಕಾರದ ಉನ್ನತ ಹಂತ ತಲುಪಿದವರು. ಇದೀಗ ರಜನೀಕಾಂತ್ ರಾಜಕೀಯದ ಹಾದಿಗೆ ಆದ್ಯತೆ ನೀಡಿದ್ದಾರೆ. ಕುತೂಹಲದ ಸಂಗತಿ ಎಂದರೆ ಇಡೀ ಕರ್ನಾಟಕದಾದ್ಯಂತ ಪ್ರಭಾವೀಯಾಗಿದ್ದರೂ ಅದನ್ನು ರಾಜಕಾರಣಕ್ಕೆ ಬಳಸಿಕೊಳ್ಳುವ ಹಂಬಲ ರಾಜ್ ಅವರ ಹತ್ತಿರವೂ ಸುಳಿಯಲಿಲ್ಲ ಎಂಬುದು.

ಸಂಯಮಪೂರ್ಣ ಎಚ್ಚರದ ಪ್ರಜ್ಞೆ

ರಾಜ್ ಅವರೊಳಗಿದ್ದ ಅಂಥ ಸಂಯಮಪೂರ್ಣ ಎಚ್ಚರ ಈಗಿನ ನಟರಿಗೆ ಸಾಧ್ಯವಾಗುತ್ತಿಲ್ಲ. ಅಭಿನಯ ಕಲಾತ್ಮಕತೆಯ ಮೂಲಕವೇ ವಿವಿಧ ಬಗೆಗಳಲ್ಲಿ ಜನಸಮೂಹದ ಮೇಲೆ ಪ್ರಭಾವ ಬೀರುವ ಬದ್ಧತೆ ರೂಢಿಸಿಕೊಳ್ಳುವ ಅನಿವಾರ್ಯತೆಯನ್ನು ಕಾಡಿಸಿಕೊಳ್ಳುತ್ತಿಲ್ಲ. ‘ನನಗೆ ಇಂತಿಷ್ಟು ವರ್ಷ ಜನಪ್ರಿಯತೆ ಇರುತ್ತದೆ, ಈ ಅವಧಿಯಲ್ಲಿ ಹಣ ದುಡಿದುಕೊಳ್ಳಬೇಕು’ ಎಂಬ ಆಸೆಯೇ ಈಗಿನ ನಟರನ್ನು ನಿಯಂತ್ರಿಸುತ್ತಿದೆ. ಬೆಂಗಳೂರಿನ ಹೊರಗೆ ಜಿಲ್ಲಾಕೇಂದ್ರಗಳಲ್ಲಿ ಒಳ್ಳೆಯ ಉದ್ದೇಶದೊಂದಿಗೆ ಆಯೋಜಿತವಾಗುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕೆ ಅತಿಹೆಚ್ಚು ಸಂಭಾವನೆ ಬೇಡುವ ಮನಸ್ಥಿತಿ ಇವರೊಳಗಿನ ಕಲಾತ್ಮಕತೆಯನ್ನು ಕೊಲ್ಲುತ್ತಿದೆ.

ಸದಭಿರುಚಿ ಮೂಡಿಸುವ ನಿಜವಾದ ಕಾಳಜಿ ಇದ್ದಿದ್ದರೆ ಇವರು ‘ಒಳ್ಳೆಯ ಸಿನಿಮಾಗಳಿಗೆ ಮಾರ್ಕೆಟ್ ಇಲ್ಲ’ ಎಂಬ ಕೊರಗು ವ್ಯಕ್ತಪಡಿಸುವ ಬದಲು ರಾಜ್ಯದಾದ್ಯಂತ ಅರಿವಿನ ಆಂದೋಲನ ಕೈಗೊಳ್ಳುತ್ತಿದ್ದರು. ಕೆಟ್ಟದ್ದರ ಕಡೆಗೆ ವಾಲಿದ ಅಭಿಮಾನಿ ಸಂಸ್ಕøತಿಯ ಊನಗಳನ್ನು ಸರಿಪಡಿಸಿ ಸದಭಿರುಚಿಯ ಸಿನಿಮಾಗಳಿಗೆ ವ್ಯಾಪಕ ಬೆಂಬಲ ತಂದುಕೊಳ್ಳುವುದರ ಕಡೆಗೆ ಗಮನ ಹರಿಸುತ್ತಿದ್ದರು. ಬೇರೆ ರಾಜ್ಯಗಳಲ್ಲಿ ಕನ್ನಡದ ಸಿನಿಮಾ ನಿರ್ಮಾಣದ ಚಟುವಟಿಕೆಗಳು ನಡೆಯುತ್ತಿದ್ದ ಕಾಲದಲ್ಲಿ ಕನ್ನಡಿಗರಿಗೆ ಹತ್ತಿರವಾಗಿ ಇಲ್ಲಿಯ ಸಿನಿಮಾವನ್ನು ಜನಜನಿತವಾಗಿಸಿದ ರಾಜ್ ಮಾದರಿಯನ್ನು ಮುಂದುವರೆಸುವ ಕಾರ್ಯದಲ್ಲಿ ನಿರತರಾಗುತ್ತಿದ್ದರು.

ರಾಜಕೀಯ ಸಾಮಂಜಸ್ಯದ ಪ್ರಶ್ನೆ

ಹಾಗಾಗುವುದಕ್ಕೆ ಜನಪ್ರಿಯ ಸಂಸ್ಕøತಿಯ ಒಳಗೇ ಇರುವ ವಿಕಾರಗಳು ಅವರನ್ನು ಬಿಡುತ್ತಿಲ್ಲ. ಇದರ ಜೊತೆಗೆ ಅಧಿಕಾರ ರಾಜಕಾರಣದ ಯಥಾಸ್ಥಿತಿವಾದದೊಂದಿಗಿನ ಹುನ್ನಾರದ ಪ್ರಾಬಲ್ಯ ನಟರೊಳಗೂ ಆರಾಧನಾ ಭಾವವನ್ನು ಬಿತ್ತುವಲ್ಲಿ ಯಶಸ್ವಿಯಾಗಿದೆ. ನಟರೊಳಗಿನ ಕಲಾತ್ಮಕತೆಯನ್ನು ಸೋಲಿಸುವ ಅದರ ಕಾರ್ಯಸೂಚಿಗೆ ಹಿಂದೆಂದಿಗಿಂತಲೂ ಈಗ ಹೆಚ್ಚಿನ ಬಲ ಬಂದಿದೆ. ಈ ಕಾರಣಕ್ಕಾಗಿಯೇ ಜನಪ್ರಿಯ ಸಿನಿಮಾ ನಟರು ರಾಜಕೀಯ ರಂಗವನ್ನು ಪ್ರವೇಶಿಸಿ ಆರ್ಥಿಕವಾಗಿ ಬಲಾಢ್ಯರಾಗುವ ಕನಸುಗಳನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಒಂದು ಕ್ಷೇತ್ರ ಪ್ರತಿನಿಧಿಸುವವರೊಬ್ಬರು ರಾಜಕೀಯ ರಂಗವನ್ನು ಪ್ರವೇಶಿಸುವುದರ ಹಿಂದೆ ಪ್ರಾಮಾಣಿಕ ಕಳಕಳಿಗಳ ಆಧಾರವಿರಬೇಕಾಗುತ್ತದೆ. ಅದರ ಬದಲು ಯಥಾಸ್ಥಿತಿವಾದದ ಜೊತೆಗೇ ತಮ್ಮನ್ನು ತಾವು ಪ್ರತಿಷ್ಠಾಪಿಸಿಕೊಳ್ಳುವ ಮನುಷ್ಯಸಹಜ ದೌರ್ಬಲ್ಯ ಪ್ರದರ್ಶಿಸುವುದು ರಾಜಕೀಯ ಸಾಮಂಜಸ್ಯದ ( Politically Correct) ನಡೆ ಎನ್ನಿಸಿಕೊಳ್ಳುವುದಿಲ್ಲ.

ರಾಜಕೀಯ ಪ್ರಬುದ್ಧತೆಯನ್ನು ಅಳವಡಿಸಿಕೊಳ್ಳುವ ಹಂಬಲವೂ ಇಂಥವರೊಂದಿಗೆ ಇರುವುದಿಲ್ಲ.
ರಾಜಕೀಯ ಪ್ರಬುದ್ಧತೆ ಪ್ರದರ್ಶಿಸುವ ಸಾಮಥ್ರ್ಯ ಇದ್ದವರೂ ಸದ್ಯದ ಸುದ್ದಿವಾಹಿನಿಗಳ ಪ್ರಬಲರ ಪರವಾದ ಅಜೆಂಡಾಕ್ಕೆ ಅನುಗುಣವಾದ ವಿಧ್ವಂಸಕ ಪ್ರಯತ್ನಗಳ ಹೊಡೆತಕ್ಕೀಡಾಗಿ ಹಿನ್ನೆಲೆಗೆ ಸರಿದುಬಿಡುತ್ತಾರೆ. ಸುದ್ದಿವಾಹಿನಿಗಳ ಈ ಬಗೆಯ ಪ್ರಹಾರ ಕಲಾವಲಯದವರಲ್ಲಿ ಭಯ ಮೂಡಿಸಿಬಿಡುತ್ತದೆ. ಆಗ ತಮ್ಮ ಜನಪ್ರಿಯತೆಯನ್ನು ಅಧಿಕಾರ ರಾಜಕಾರಣದ ಪಾದಗಳಿಗೆ ಸಮರ್ಪಿಸುವ ಮನೋಧರ್ಮವನ್ನು ಮೂಡಿಸಿಬಿಡುತ್ತದೆ. ಇರುವಷ್ಟು ದಿನ ಚಾಲ್ತಿಯಲ್ಲಿರಬೇಕು ಎಂಬ ಆಸೆ ಚಿಗುರೊಡೆದು ಅವರೊಳಗಿನ ಕಲಾಶಕ್ತಿಯನ್ನು ನಲುಗಿಸಿಬಿಡುತ್ತದೆ.

ಜನಪ್ರಿಯ ಪ್ರತಿಭಾನ್ವಿತರು ಅಧಿಕಾರ ರಾಜಕಾರಣದ ಪ್ರಾಬಲ್ಯವನ್ನು ಅಧಿಕೃತವಾಗಿ ಪ್ರಶ್ನಿಸಬಹುದು ಎಂಬ ಭರವಸೆಯನ್ನು ಕಳೆದ ಸಲ ಲೋಕಸಭೆ ಚುನಾವಣೆಯ ಸಂದರ್ಭ ಮೂಡಿಸಿತ್ತು. ಈ ದೇಶಕ್ಕೆ ಪ್ರಶ್ನಾತೀತ ನಾಯಕ ಇರಬಾರದು, ಪ್ರಶ್ನೆಗಳನ್ನು ಆಲಿಸಿ ಬದಲಾವಣೆಯನ್ನು ನೆಲೆಗೊಳಿಸುವ ಚಿಂತಕ ನಾಯಕ ಬೇಕು ಎಂಬ ಸಂವಾದವನ್ನು ಅಧಿಕೃತವಾಗಿ ದೇಶಾದ್ಯಂತ ಹುಟ್ಟುಹಾಕುವ ಪ್ರಯತ್ನವನ್ನು ಪ್ರಕಾಶ್ ರೈ ನಿರ್ವಹಿಸಿದರು. ಆದರೆ, ಸುದ್ದಿವಾಹಿನಿಗಳ ಜನಪ್ರಿಯ ವರಸೆಗಳು ಈ ಸಂವಾದವನ್ನು ವಿಸ್ತರಿಸುವ ಬದಲು ಮೊಟಕುಗೊಳಿಸಿದವು. ಅದರೊಂದಿಗೆ ಅಧಿಕಾರ ರಾಜಕಾರಣದ ಎಲ್ಲ ಬಗೆಯ ವಿಕೃತಿಗಳ ದಾಳಿ ಹೊಸದಾಗಿ ಆಲೋಚಿಸುವ ಶಕ್ತಿಯನ್ನೇ ಕುಂದಿಸಿತು. ಜನಪ್ರಿಯ ಸುದ್ದಿಯ ಕೇಂದ್ರಗಳು ಮತ್ತು ರಾಜಕಾರಣದ ಸಂಕುಚಿತತೆಯ ಮನಸ್ಥಿತಿಗಳು ಒಟ್ಟಾಗಿ ಇಂಥದ್ದೊಂದು ಸಾಧ್ಯತೆಯನ್ನೇ ಇಲ್ಲವಾಗಿಸುವಲ್ಲಿ ಯಶಸ್ಸು ಕಂಡಿವೆ.

ಕಾಡುತ್ತಿರುವ ರಾಜ್ ಆಕೃತಿಗಳು

ಈ ಹಂತದಲ್ಲಿಯೇ ಮತ್ತೊಂದು ಲೋಕಸಭೆ ಚುನಾವಣೆ ಎದುರಾಗಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣ ಪಕ್ಷಾತೀತವಾಗಿ ವಿವಿಧ ಹಂತಗಳಲ್ಲಿ ಚಾಲ್ತಿಯಲ್ಲಿದೆ. ಸಮಸ್ಯೆಗಳಿಂದ ಇಡೀ ದೇಶ ಜರ್ಝರಿತವಾಗುತ್ತಲೇ ಇದೆ. ಎಲ್ಲ ಕಾಲದಲ್ಲೂ ಸುಧಾರಣೆಯ ಹೆಜ್ಜೆಗಳು ಕಂಡರೂ ಅವುಗಳ ವೇಗವನ್ನು ಹೆಚ್ಚಿಸುವ ದಾರ್ಶನಿಕ ನಾಯಕತ್ವವನ್ನು ಕಂಡುಕೊಳ್ಳುವಲ್ಲಿ ಇಲ್ಲಿಯ ಪ್ರಜಾಸತ್ತಾತ್ಮಕ ಪ್ರಯೋಗಶಾಲೆ ಸೋತಿದೆ. ಭಾರೀ ಬದಲಾವಣೆಯಾಗುತ್ತಿದೆ ಎನ್ನುವ ಭಾವ ಬರುವ ಹಾಗೆ ಜನಪ್ರಿಯ ಮಾಧ್ಯಮಗಳು ಭ್ರಮೆಗಳನ್ನು ಹುಟ್ಟಿಸಿವೆ. ಜನಪ್ರಿಯ ನಟರು ಪಕ್ಷಗಳ ಮತಬೆಳೆ ತೆಗೆಯಲು ಬೇಕಾಗುವ ಸರಕಿನ ಗೊಂಬೆಗಳಾಗಿದ್ದಾರೆ. ಇದನ್ನು ದೃಢಪಡಿಸುವಂತೆ ಖ್ಯಾತ ನಟ ಅಂಬರೀಷ್ ಪತ್ನಿ ಸುಮಲತಾ ಅವರ ಗೆಲುವಿಗೆ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟರು ಬೆಂಬಲವಾಗಿ ನಿಂತಿದ್ದಾರೆ.

ಸ್ಪಷ್ಟವಾಗಿರುವ ಯಾವುದೇ ಬಗೆಯ ರಾಜಕೀಯ ನಿಲುವು ತಳೆಯದೇ ಪ್ರಚಾರದ ಅಖಾಡದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ನಟನೆಗೆ ಮನ್ನಣೆ ನೀಡಿದ ಕನ್ನಡಿಗರಿಗೆ ಪ್ರತಿಯಾಗಿ ಸಾಮಾಜಿಕ ನೆಲೆಯಲ್ಲಿ ಋಣ ತೀರಿಸುವ ಸಮಂಜಸ ರಾಜಕೀಯ ಪ್ರಜ್ಞೆ ನಿರೂಪಿಸುವ ಲಕ್ಷಣಗಳೇನೂ ಕಾಣಿಸುತ್ತಿಲ್ಲ. ಡಾ.ರಾಜ್‍ಕುಮಾರ್ ಸಾಧ್ಯವಾಗಿಸಿಕೊಂಡ ಸಾಂಸ್ಕøತಿಕ ನಾಯಕತ್ವದ ಗುಣಸ್ವಭಾವಗಳೂ ಗೋಚರಿಸುತ್ತಿಲ್ಲ. ಈ ಇಲ್ಲಗಳ ಮಧ್ಯೆಯೇ ‘ರಾಜ್ ಮನೋಧರ್ಮದ’ ಸೃಜನಶೀಲ ಆಕೃತಿಗಳು ಈಗ ಮತ್ತೆ ಮತ್ತೆ ಕಾಡುತ್ತಿವೆ. ಇವು ಕನ್ನಡದ ಜನಪ್ರಿಯ ಸಂಸ್ಕøತಿಯ ಆವರಣದೊಳಗೆ ಮತ್ತೆ ಪ್ರಾಶಸ್ತ್ಯ ಪಡೆಯುತ್ತವೆಯೇ? ಅಂಥದ್ದೊಂದು ಆಶಾವಾದಿ ನಿರೀಕ್ಷೆಯಲ್ಲಿ……

ಡಾ.ಎನ್.ಕೆ. ಪದ್ಮನಾಭ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 week ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 week ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ3 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ3 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending