ದಿನದ ಸುದ್ದಿ
ಮರಕ್ಕೆ ಡ್ರಿಪ್ಸ್ ಹಾಕ್ತಾರೆಂದರೆ ನಂಬ್ತೀರಾ?
ಸುದ್ದಿದಿನ ವಿಶೇಷ : ಮನುಷ್ಯರಿಗೆ ಆರೋಗ್ಯ ಸರಿಯಿಲ್ಲೆಂದರೆ ವೈದ್ಯರ ಸಲಹೆಯಂತೆ ಡ್ರಿಪ್ಸ್ ಹಾಕೋದು ಸಹಜ. ಆದರೆ, ಮರಕ್ಕೆ ಡ್ರಿಪ್ಸ್ ಹಾಕ್ತಾರೆಂದರೆ ನಂಬ್ತೀರಾ. ಇದು ನಂಬಲೇ ಬೇಕಾದ ವಿಷಯ..!
ಅದು ತೆಲಂಗಾಣ ರಾಜ್ಯದ ಮಹಬೂಬ್ ನಗರ ಜಿಲ್ಲೆಯ ದಡ್ಡಡವಿ. ಅಲ್ಲಿ ಸಾವಿರಾರು ಬಗೆಯ ಸಸ್ಯ ಸಂಕುಲವೇ ಇದೆ. ಇದರಲ್ಲೊಂದು 700 ವರ್ಷಗಳ ಪುರಾತನ ಆಲದ ಮರವಿದೆ. ಇದಕ್ಕೆ ಗೆದ್ದಲು ಹತ್ತಿದ್ದರಿಂದ ಆನಾರೋಗ್ಯಕ್ಕೆ ಒಳಗಾಗಿ ಅಳಿವಿನಂಚಿಗೆ ತಲುಪಿದೆ. ಇದನ್ನು ಉಳಿಸಿಕೊಳ್ಳಲು ಆ ರಾಜ್ಯದ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ದೇಶದ ಎರಡನೇ ಅತಿದೊಡ್ಡದಾದ ಈ ಆಲದ ಮರವು ಅಂದಾಜು 3 ಎಕರೆಯಲ್ಲಿ ಹರಡಿಕೊಂಡಿದೆ. ಇದು ಮರದ ತುಂಬ ಹರಡಿಕೊಂಡಿದ್ದು, ಅವಸಾನದ ಅಂಚಿಗೆ ಬಂದಿದೆ. ಅರಣ್ಯಾಧಿಕಾರಿಗಳು ಕೂಡಲೇ ಪ್ರವಾಸಿಗರು ವೀಕ್ಷಣೆಗೆ ಬರುವುದನ್ನು ನಿರ್ಬಂಧಿಸಿ ನಾಲ್ಕು ಹಂತದಲ್ಲಿ ಆ ಮರಕ್ಕೆ ಚಿಕಿತ್ಸೆ ನೀಡಲು ಯೋಜನೆ ರೂಪಿಸಿಕೊಂಡರು.
ಬೃಹತ್ ಆಲದ ಮರಕ್ಕೆ ಮಾರ್ಚ್ನಲ್ಲಿ ಚಿಕಿತ್ಸೆ ಆರಂಭವಾಯಿತು. ಮೊದಲು ಆಲದ ಮರದ ಸುತ್ತ ಟ್ರೆಂಚ್ (ತಂತಿ ಬೇಲಿ) ಹಾಕಿದರು. ನಂತರ ತಾಯಿ ಬೇರುಗಳಿಗೆ ಚಿಕಿತ್ಸೆ ನೀಡಿದರು. ಮೆಕಾನಿಕಲ್ ಸಪೋರ್ಟ್ ಮತ್ತು ರೆಂಬೆ, ಕೊಂಬೆಗಳಿಗೆ ಆರೈಕೆ ಮಾಡುವ ಯೋಜನೆ ರೂಪಿಸಿಕೊಂಡರು.
ಮರದ ತಾಯಿ ಬೇರುಗಳಿಗೆ ನಿಯಮಿತವಾಗಿ ಒಂದು ಲೀಟರ್ ನೀರಿನೊಂದಿಗೆ 20 ಎಂಎಲ್ ಕ್ಲೋರಿಪಿರಿಫೊಸ್ ಹಾಯಿಸಲಾಗುತ್ತಿತ್ತು. ರೆಂಬೆ ಕೊಂಬೆಗಳಲ್ಲಿ ಎರಡು ಮೀಟರ್ಗೊಂದರಂತೆ ರಂಧ್ರ ಮಾಡಿ ಡ್ರಿಪ್ ಮೂಲಕ ಔಷಧ ನೀಡಲಾಗುತ್ತಿದೆ. ಅಲ್ಲದೇ ರೆಂಬೆಗಳಿಗೆ ಗೆದ್ದಲು ಹತ್ತದಂತೆ ರಕ್ಷಣೆ ಮಾಡಲು ಆರ್.ಆರ್.ಸಿ ಪಿಲ್ಲರ್ ಹಾಕಲಾಗಿದೆ. ಇದು ಮೆಕಾನಿಕಲ್ ಪ್ರೊಸಿಜರ್ ಆಗಿದೆ. ಈ ರೀತಿ ಮಾಡುತ್ತಿರುವುದರಿಂದ ಬೃಹತ್ ಆಲದ ಮರವು ದಿನದಿಂದ ಚೇತರಿಸಿಕೊಳ್ಳುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


