Connect with us

ದಿನದ ಸುದ್ದಿ

ರೆಡ್‌ಬಸ್‌ನಿಂದ ವರ್ಷಾಂತ್ಯದ ಅಭಿಯಾನಕ್ಕೆ ಚಾಲನೆ; ಅದೃಷ್ಟವಂತ ಗ್ರಾಹಕರು ಒಂದು ಗ್ರಾಂ ಚಿನ್ನ ಗೆಲ್ಲುವ ಅವಕಾಶ

Published

on

  • ವರ್ಷಾಂತ್ಯದ ಈ ಅಭಿಯಾನವು ಒಂದು ಗ್ರಾಂ ಚಿನ್ನ ಗೆಲ್ಲುವ ಅವಕಾಶ ನೀಡಿದೆ.
  • ಚಿನ್ನದ ವಿಜೇತರನ್ನು ಪ್ರತಿನಿತ್ಯ ಪ್ರಕಟಿಸಲಾಗುತ್ತದೆ; ಎಲ್ಲ ಗ್ರಾಹಕರು 50 ರೂ. ನಿಶ್ಚಿತ ಕ್ಯಾಶ್‌ಬ್ಯಾಕ್ ಪಡೆಯುತ್ತಾರೆ.

ಸುದ್ದಿದಿನ,ಬೆಂಗಳೂರು: ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಭಾರತದ ಅತ್ಯಂತ ದೊಡ್ಡ ಆನ್‌ಲೈನ್ ಬಸ್ ಟಿಕೆಟಿಂಗ್ ಪ್ಲಾಟ್‌ಫಾರಂ ರೆಡ್‌ಬಸ್ ತನ್ನ ವರ್ಷಾಂತ್ಯದ ಅಭಿಯಾನವನ್ನು ವಿಶೇಷ ಕೊಡುಗೆಯೊಂದಿಗೆ ಪ್ರಕಟಿಸಿದ್ದು ಇದು ಡಿಸೆಂಬರ್ 20 ರಿಂದ ಜನವರಿ 16,2022ರವರೆಗೆ ಅವರ ಟಿಕೆಟ್‌ಗಳನ್ನು ಬುಕ್ ಮಾಡುವ ಅದೃಷ್ಟವಂತ ಗ್ರಾಹಕರಿಗೆ ಒಂದು ಗ್ರಾಮ್ ಚಿನ್ನ ಗೆಲ್ಲುವ ಅವಕಾಶ ಕಲ್ಪಿಸಿದೆ.

ಈ ಗೋಲ್ಡನ್ ಟಿಕೆಟ್ ಆಫರ್ ಅನ್ನು ಕರ್ನಾಟಕದಲ್ಲಿ ರೆಡ್‌ಬಸ್ ಪ್ಲಾಟ್‌ಫಾರಂನಲ್ಲಿ ಅವರ ಸೀಟುಗಳನ್ನು ಖಾಸಗಿ ಬಸ್‌ಗಳಲ್ಲಿ ಬುಕ್ ಮಾಡುವವರಿಗೆ ನೀಡಲಾಗುತ್ತಿದೆ. ಈ 28 ದಿನಗಳ ಅವಧಿಯಲ್ಲಿ ರೆಡ್‌ಬಸ್‌ನಲ್ಲಿ ಖಾಸಗಿ ಬಸ್ ಆಪರೇಟರ್‌ಗಳೊಂದಿಗೆ ಟಿಕೆಟ್ ಬುಕ್ ಮಾಡುವ ಎಲ್ಲ ಗ್ರಾಹಕರು ಒಂದು ಗ್ರಾಂ ಚಿನ್ನ ಗೆಲ್ಲುವ ಅವಕಾಶ ಪಡೆಯುತ್ತಾರೆ.

ಇದಲ್ಲದೆ ಪ್ರತಿ ಪ್ರಯಾಣಿಕರೂ ಈ ಅವಧಿಯಲ್ಲಿ ಅವರ ರೆಡ್‌ಬಸ್ ವ್ಯಾಲೆಟ್‌ಗಳಲ್ಲಿ 50ರೂ. ಕ್ಯಾಶ್‌ಬ್ಯಾಕ್ ಪಡೆಯುತ್ತಾರೆ. ಈ ಕೊಡುಗೆ ಪಡೆಯಲು ಪ್ರಯಾಣಿಕರು ಅವರ ಬಸ್ ಟಿಕೆಟ್‌ಗಳನ್ನು ರೆಡ್‌ಬಸ್‌ನಲ್ಲಿ ಕಾಯ್ದಿರಿಸುವಾಗ `ಗೋಲ್ಡನ್ ಟಿಕೆಟ್’ ಆಫರ್ ಕೋಡ್ ಅನ್ನು ನಮೂದಿಸಬೇಕು.

ಈ ಅಭಿಯಾನ ಪ್ರಾರಂಭ ಕುರಿತು ರೆಡ್‌ಬಸ್‌ನ ಎಸ್.ವಿ.ಪಿ ಮತ್ತು ಹೆಡ್ ಆಫ್ ಮಾರ್ಕೆಟಿಂಗ್ ಪಲ್ಲವಿ ಛೋಪ್ರಾ, “ವರ್ಷಾಂತ್ಯ ಮತ್ತು ಹೊಸ ವರ್ಷದ ಪ್ರಾರಂಭವು ಪ್ರಯಾಣಿಕರು ಹಾಗೂ ಬಸ್ ಆಪರೇಟರ್‌ಗಳಿಗೆ ಅತ್ಯಂತ ನಿರೀಕ್ಷೆಯ ಅವಧಿಗಳಲ್ಲಿ ಒಂದಾಗಿವೆ.

ಹಬ್ಬದ ಋತುವಿನ ಆರಂಭದಿಂದ ಪ್ರಯಾಣವು ಕ್ರಮೇಣ ಸ್ಥಿರವಾಗಿ ಹೆಚ್ಚಳ ಕಾಣುತ್ತಿದೆ ಮತ್ತು ನಮ್ಮ ಗೋಲ್ಡನ್ ಟಿಕೆಟ್ ಕೊಡುಗೆಯ ಅಭಿಯಾನವು ವಿಶ್ವಾಸ ಮೂಡಿಸುವಲ್ಲಿ ಮತ್ತು ಪ್ರಯಾಣಿಕರನ್ನು ಅತ್ಯಂತ ಅಗತ್ಯವಾದ ವರ್ಷಾಂತ್ಯದ ಬ್ರೇಕ್ ಪಡೆಯುವಲ್ಲಿ ಬಹಳ ದೂರ ಸಾಗಲಿದೆ.

ಅದೃಷ್ಟವಂತ ಗ್ರಾಹಕರಿಗೆ 28 ದಿನಗಳ ಕಾಲ ಪ್ರತಿದಿನವೂ ಒಂದು ಗ್ರಾಂ ಚಿನ್ನವನ್ನು ನೀಡುವ ಮೂಲಕ ಸ್ಮರಣೀಯ ಸಂದರ್ಭವಾಗಿಸಲಿದೆ. ನಾವು ನಮ್ಮ ಗ್ರಾಹಕರಿಗೆ ಅತ್ಯಂತ ಸಂತೋಷದ ಮತ್ತು ಸುರಕ್ಷಿತ ರಜಾದಿನಗಳು ಮತ್ತು ಮಹತ್ತರ ವರ್ಷವನ್ನು ಹಾರೈಸುತ್ತೇವೆ” ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending